IMG 20250128 WA0018 scaled

Karnataka : ಸಮೀಕ್ಷೆ ವರದಿ ಬಗ್ಗೆ ಪೂರಕ ಮಾಹಿತಿ ಒದಗಿಸಲು ಸೂಚನೆ….!

ಸಮೀಕ್ಷೆ ವರದಿ ಬಗ್ಗೆ ಪೂರಕ ಮಾಹಿತಿ ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ ಮೇ 2 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಬೆಂಗಳೂರು, ಏಪ್ರಿಲ್ 17: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ರ ದತ್ತಾಂಶಗಳ ಅಧ್ಯಯನ ವರದಿಯನ್ನು ರಾಜ್ಯ ಸಚಿವ ಸಂಪುಟ ಸುದೀರ್ಘವಾಗಿ ಚರ್ಚೆ ನಡೆಸಿದ್ದು, ಈ ಬಗ್ಗೆ ಮತ್ತಷ್ಟು ಪೂರಕ ಮಾಹಿತಿ ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು ಹಾಗೂ ಸಂಸದೀಯ ವ್ಯವಹಾರಗಳು, ಶಾಸನ […]

Continue Reading
Rathayathre 2 scaled

Karnataka : “ಅನುಭವ ಮಂಟಪ-ಬಸವಾದಿ ಶರಣರ ವೈಭವ” ರಥಯಾತ್ರೆಗೆಚಾಲನೆ….!

“ಅನುಭವ ಮಂಟಪ-ಬಸವಾದಿ ಶರಣರ ವೈಭವ” ರಥಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಚಾಲನೆ ಬೆಂಗಳೂರು, ಏಪ್ರಿಲ್ 17 (ಕರ್ನಾಟಕ ವಾರ್ತೆ): ಕರ್ನಾಟಕ ಸಾಂಸ್ಕøತಿಕ ನಾಯಕರಾದ ವಿಶ್ವಗುರು ಬಸವಣ್ಣನವರ ಬದುಕು, ವಚನ ಸಾಹಿತ್ಯ, ಸಂದೇಶ ಮತ್ತು ಚಿಂತನೆಗಳನ್ನು ನಾಡಿನಾದ್ಯಂತ ಪರಿಚಯಿಸುವ ಉದ್ದೇಶದಿಂದ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ಏಪ್ರಿಲ್ 29 ಮತ್ತು 30 ರಂದು ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿ ಹಮ್ಮಿಕೊಳ್ಳಲಾಗಿರುವ  “ಅನುಭವ ಮಂಟಪ-ಬಸವಾದಿ ಶರಣರ ವೈಭವ” ಕಾರ್ಯಕ್ರಮದ ಸಂಬಂಧ ಇಂದು ವಿಧಾನಸೌಧದ ಮುಂಭಾಗದಲ್ಲಿ ರಥಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು […]

Continue Reading
Aiming for Pot Hole Free Karnataka Using Ecofix mix 1

ಕರ್ನಾಟಕದಲ್ಲಿ ಗುಂಡಿ ಮುಕ್ತ ರಸ್ತೆಗಳ ನಿರ್ವಹಣೆ : ಎಕೋಫಿಕ್ಸ್ ಬಳಕೆ

ಕರ್ನಾಟಕದಲ್ಲಿ ಗುಂಡಿ ಮುಕ್ತ ರಸ್ತೆಗಳ ನಿರ್ವಹಣೆ ಗುರಿ – ಎಕೋಫಿಕ್ಸ್ ಎಂಬ ರೆಡಿಮಿಕ್ಸ್ ಪದಾರ್ಥ ಬಳಕೆ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಟ್ರೈ ಪಾರ್ಟಿ ಒಡಂಬಡಿಕೆಗೆ ಸಹಿ ಬೆಂಗಳೂರು, ಏಪ್ರಿಲ್ 17, (ಕರ್ನಾಟಕ ವಾರ್ತೆ) : ಸರ್ಕಾರವು ಕರ್ನಾಟಕ ರಾಜ್ಯವನ್ನು ಗುಂಡಿ ಮುಕ್ತ ರಸ್ತೆಗಳನ್ನಾಗಿಸುವ ಉದ್ದೇಶವನ್ನು ಹೊಂದಿದೆ. ಕಬ್ಬಿಣದ ಉತ್ಪಾದನೆಯಲ್ಲಿ ಬರುವ Slag  ಅನ್ನು ಉಪಯೋಗಿಸಿ, ತೇವಾಂಶವಿರುವ ರಸ್ತೆಗಳಲ್ಲಿಯು ಸಹ, ಹೆಚ್ಚಿನ ಕಾರ್ಮಿಕರ ಅವಶ್ಯಕತೆಯಿಲ್ಲದೆ ಕಡಿಮೆ ಸಮಯದಲ್ಲಿ ಗುಂಡಿ ಮುಚ್ಚಲು ಸಾಧ್ಯವಾಗುವಂತೆ ಎಕೋಫಿಕ್ಸ್ ಎಂಬ ರೆಡಿಮಿಕ್ಸ್ ಪದಾರ್ಥವನ್ನು ಬಳಸಿಕೊಂಡು ರಸ್ತೆಯ […]

Continue Reading
IMG 20250410 WA0016

Karnataka : ಕೆರೆ-ಕಟ್ಟೆ ಒತ್ತುವರಿ ತೆರವುಗೊಳಿಸಿ : ಸರ್ವೇ ಕಾರ್ಯ ಪೂರ್ಣ ಮಾಡಲು ಸೂಚನೆ….!

*ಪೋಡಿ ಮುಕ್ತ ಗ್ರಾಮಗಳಾಗಬೇಕು. ಸರ್ವೇ ಕಾರ್ಯ ಪೂರ್ಣಗೊಳ್ಳಬೇಕು: ಸಿ.ಎಂ ಕರೆ* *ಎಲ್ಲಾ ಗ್ರಾಮಗಳು ಪೋಡಿಮುಕ್ತ ಆಗಬೇಕು* *ಕೆರೆ-ಕಟ್ಟೆ ಒತ್ತುವರಿ ತೆರವುಗೊಳಿಸಿ : ಸರ್ವೇ ಕಾರ್ಯ ಪೂರ್ಣ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ* ಬೆಂಗಳೂರು, ಏಪ್ರಿಲ್ 10, (ಕರ್ನಾಟಕ ವಾರ್ತೆ):ಕಂ ದಾಯ ಇಲಾಖೆ ಸರ್ಕಾರಕ್ಕೆ ಮಾತೃ ಇಲಾಖೆ ಇದ್ದಂತೆ. ಎಲ್ಲಾ ಗ್ರಾಮಗಳು ಪೋಡಿಮುಕ್ತ ಗ್ರಾಮಗಳಾಗಬೇಕು. ಕೂಡಲೇ ಸರ್ವೇ ಕಾರ್ಯ ಪೂರ್ಣಗೊಳ್ಳಬೇಕು. ಕೆರೆ-ಕಟ್ಟೆ ಒತ್ತುವರಿ ತೆರವುಗೊಳಿಸಲು ಕೂಡಲೇ ಕ್ರಮವಹಿಸಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಇಂದು ವಿಧಾನಸೌಧದ […]

Continue Reading
IMG 20250407 WA0001

JD (S) : ರಾಜ್ಯದಲ್ಲಿ ಕೆಲಸ ಮಾಡಲು ನನಗೆ ಬಿಡುತ್ತಿಲ್ಲ, ಇನ್ನು ಕೈಗಾರಿಕೆಗಳು ಎಲ್ಲಿಂದ ಬರಲು ಸಾಧ್ಯ?

*ರಾಜ್ಯ ಸರಕಾರದಿಂದ ರಾಜಕೀಯ ಅಸೂಯೆ* *ಹೆಜ್ಜೆ ಹೆಜ್ಜೆಗೂ ಅಡ್ಡಿಪಡಿಸುತ್ತಿದೆ ಎಂದು ಹೆಚ್.ಡಿ. ಕುಮಾರಸ್ವಾಮಿ ಬೇಸರ* *ರಾಜ್ಯದಲ್ಲಿ ಕೆಲಸ ಮಾಡಲು ನನಗೆ ಬಿಡುತ್ತಿಲ್ಲ, ಇನ್ನು ಕೈಗಾರಿಕೆಗಳು ಎಲ್ಲಿಂದ ಬರಲು ಸಾಧ್ಯ?* *ಕುದುರೆಮುಖ ಕಾರ್ಖಾನೆ ಪುನಶ್ಚೇತನಕ್ಕೆ ಅಡ್ಡಿಪಡಿಸಿದ ಕಾಂಗ್ರೆಸ್ ಸರಕಾರ* *ಮಳವಳ್ಳಿ/ಮಂಡ್ಯ:* ರಾಜಕೀಯ ಅಸೂಯೆಯಿಂದ ರಾಜ್ಯ ಕಾಂಗ್ರೆಸ್ ಸರಕಾರ ಹೆಜ್ಜೆ ಹೆಜ್ಜೆಗೂ ನನಗೆ ಅಡ್ಡಿಪಡಿಸುತ್ತಿದೆ. ರಾಜ್ಯದಲ್ಲಿ ಕೆಲಸ ಮಾಡಲು ನನಗೆ ಬಿಡುತ್ತಿಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದರು. […]

Continue Reading
IMG 20250406 WA0020 scaled

BJP : ಬೆಲೆ ಏರಿಕೆ, ಹದಗೆಟ್ಟ ಕಾನೂನು ಸುವ್ಯವಸ್ಥೆ ವಿರುದ್ಧ ಹೋರಾಟ…..!

*ಕಾಂಗ್ರೆಸ್‌ ಸರ್ಕಾರದ ವಿರುದ್ಧ ಜನಾಕ್ರೋಶ ಹೋರಾಟ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ* *ಬೆಲೆ ಏರಿಕೆ, ಹದಗೆಟ್ಟ ಕಾನೂನು ಸುವ್ಯವಸ್ಥೆ, ಸ್ವಜನಪಕ್ಷಪಾತ, ತುಷ್ಟೀಕರಣ ವಿರುದ್ಧ ಹೋರಾಟ* *ಬೆಂಗಳೂರು, ಏಪ್ರಿಲ್‌ 6* : ಕಾಂಗ್ರೆಸ್‌ ಸರ್ಕಾರ ಮಾಡುತ್ತಿರುವ ಅನ್ಯಾಯ, ಹದಗೆಟ್ಟ ಕಾನೂನು ಸುವ್ಯವಸ್ಥೆ, ಸ್ವಜನಪಕ್ಷಪಾತ, ತುಷ್ಟೀಕರಣ ಮೊದಲಾದವುಗಳನ್ನು ವಿರೋಧಿಸಿ ಜನಾಕ್ರೋಶ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಜನಾಕ್ರೋಶ ಪ್ರವಾಸ ಮಾಡಲಾಗುತ್ತಿದೆ. […]

Continue Reading
IMG 20250406 WA0014

Karnataka : ವಿಧಾನಸೌಧದ ನೂತನ ನಿತ್ಯ ದೀಪಾಲಂಕಾರ ಲೋಕಾರ್ಪಣೆ….!

ಸರ್ಕಾರದ ಕೆಲಸ ದೇವರ ಕೆಲಸ ಎನ್ನುವ ಮಾತು ಸಾರ್ಥಕಗೊಳಿಸುವ ಕೆಲಸ ನಮ್ಮಿಂದ ಆಗಬೇಕು: ಸಿ.ಎಂ.ಸಿದ್ದರಾಮಯ್ಯ* *ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ ನಮ್ಮನ್ನು ವಿಧಾನಸೌಧಕ್ಕೆ ಆರಿಸಿ ಕಳುಹಿಸಿದ್ದಾರೆ: ಸಿಎಂ* *ವಿಧಾನಸೌಧ ನಿರ್ಮಾಣದ ಉದ್ದೇಶ ಈಡೇರಿಸಲು ಶ್ರಮಿಸೋಣ: ಸಿಎಂ‌ ಕರೆ* ಬೆಂಗಳೂರು ಏ 6: ಸರ್ಕಾರದ ಕೆಲಸ ದೇವರ ಕೆಲಸ ಎನ್ನುವ ಮಾತು ಸಾರ್ಥಕಗೊಳಿಸುವ ಕೆಲಸ ನಮ್ಮಿಂದ ಆಗಬೇಕು. ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ ನಮ್ಮನ್ನು ವಿಧಾನಸೌಧಕ್ಕೆ ಆರಿಸಿ […]

Continue Reading
IMG 20250327 173058 scaled

ಪಾವಗಡ : ಕೋಟೇಶ್ವರ ನ ʻಆಸ್ತಿʼ ಉಳಿಸಿ ಸ್ವಾಮಿ….!

ಶಿವಪ್ಪ ನ ಆಸ್ತಿ ಉಳಿಸುವ ಭರವಸೆ ಕೊಟ್ಟ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ…! ಹೈಕೋರ್ಟ್‌ ಆದೇಶ ಉಲ್ಲಂಘಿಸಿ  ಖಾಸಗಿ ವ್ಯಕ್ತಿಗಳಿಗೆ ಭೂಪರಿವರ್ತನೆ ಮಾಡಿದ ಶುಭಕಲ್ಯಾಣ್ ಭೂ ಕಳ್ಳರ ನೆರವಿಗೆ ಜಿಲ್ಲಾಡಳಿತ…. ಕಂದಾಯ ಸಚಿವರ ಕಚೇರಿಯಿಂದ ತನಿಖೆಗೆ ಆದೇಶ ಮೈಸೂರಿನ ಮೂಡ ಹಗರಣ ದ ರೀತಿ ವೈ ಎನ್‌ ಹೊಸಕೋಟೆ ಕೋಟೇಶ್ವರ ದೇವಸ್ಥಾನಕ್ಕೆ ಸೇರಿದ ಜಮೀನು  ಕಾನೂನು ಬಾಹಿರವಾಗಿ ವಹಿವಾಟು ಗಳು ನಡೆದಿವೆ.  ಜೊತೆಗೆ ಈ ಜಮೀನನ್ನು ಇಬ್ಬರು ಖಾಸಗಿ ವ್ಯಕ್ತಿಗಳ ಹೆಸರಿಗೆ ಭೂ ಪರಿವರ್ತನೆ ಮಾಡಿದ್ದಾರೆ  ಇತ್ತೀಚೆಗೆ […]

Continue Reading
IMG 20250328 113219 scaled

Karmataka : ವಂಡರ್ ಲಾ ದಲ್ಲಿ ಹೊಸ ವಂಡರ್ ಅನಾವರಣ…!

ಬೆಂಗಳೂರು ‌: ವಂಡರ್ ಲಾ ಬೆಂಗಳೂರು, ಭಾರತದ ಅತಿದೊಡ್ಡ ಎಲ್ಇಡಿ ಆಧಾರಿತ ಇಮ್ಮರ್ಸಿವ್ ಸ್ಕ್ರೀನ್ ಸ್ಪೇಸ್ ಥಿಯೇಟರ್ ‘ಮಿಷನ್ ಇಂಟರ್ ಸ್ಟೆಲ್ಲಾರ್’ ಅನ್ನು ಅನಾವರಣಗೊಳಿಸಿದೆಸುಮಾರು 35 ಕೋಟಿ ರೂ.ಗಳ ಹೂಡಿಕೆಯೊಂದಿಗೆ, ವಂಡರ್ ಲಾ ಯುಎಸ್ ಮತ್ತು ಯುರೋಪಿನ ಪ್ರಮುಖ ಥೀಮ್ ಪಾರ್ಕ್ ವಿನ್ಯಾಸ ಕಂಪನಿಗಳೊಂದಿಗೆ ಈ ಸುಧಾರಿತ ಬಾಹ್ಯಾಕಾಶ-ವಿಷಯದ ಆಕರ್ಷಣೆಯನ್ನು ರಚಿಸಲು ಸಹಕರಿಸಿದೆ, ಇದು ಮನರಂಜನೆಯ ಭವಿಷ್ಯದಲ್ಲಿ ದಿಟ್ಟ ಹೆಜ್ಜೆಯನ್ನು ಸೂಚಿಸುತ್ತದೆ ಭಾರತದ ಅತಿದೊಡ್ಡ ಮನರಂಜನಾ ಪಾರ್ಕ್ ಸರಪಳಿಯಾದ ವಂಡರ್ ಲಾ ಹಾಲಿಡೇಸ್ ಲಿಮಿಟೆಡ್, ಮುಂದಿನ ಪೀಳಿಗೆಯ […]

Continue Reading
IMG 20250324 WA0009

Karnataka : ಒಕ್ಕೂಟಗಳ ಹಾಲಿನ ದರ ಏರಿಕೆಯ ಒತ್ತಡಕ್ಕೆ ಮಣಿಯದ ಸಿಎಂ….!

*ಹಾಲು ಒಕ್ಕೂಟಗಳು ಇರುವುದು ರೈತರಿಗೆ ಅನುಕೂಲ ಮಾಡುವುದಕ್ಕೆ ಮಾತ್ರ, ಲಾಭ ಮಾಡುವುದಕ್ಕಲ್ಲ: ಸಿ.ಎಂ.ಸಿದ್ದರಾಮಯ್ಯ ಖಡಕ್ ನುಡಿ* *ಒಕ್ಕೂಟಗಳ ದರ ಏರಿಕೆಯ ಒತ್ತಡಕ್ಕೆ ಮಣಿಯದ ಸಿಎಂ. ಸಚಿವ ಸಂಪುಟಕ್ಕೆ ವಿಷಯ ರವಾನೆ* *ಹೆಚ್ಚಳದ ಹಣ ಸಂಪೂರ್ಣವಾಗಿ ರೈತರಿಗೆ ವರ್ಗಾಯಿಸಲೇಬೇಕು ಎನ್ನುವ ನಿಲುವಿಗೆ ಅಂಟಿಕೊಂಡ ಸಿಎಂ* *ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ಬಳಿಕ ದರ ಹೆಚ್ಚಳದ ಬಗ್ಗೆ ತೀರ್ಮಾನ: ಸಭೆ ನಿರ್ಣಯ* ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತದ ಅಧ್ಯಕ್ಷರು ಮತ್ತು ಜಿಲ್ಲಾ ಹಾಲು […]

Continue Reading