IMG 20211228 WA0007

ನವಭಾರತ ನಿರ್ಮಾಣದಲ್ಲಿ ಯುವಕರ ಪಾತ್ರ ಬಹುಮುಖ್ಯ”

“ನವಭಾರತ ನಿರ್ಮಾಣದಲ್ಲಿ ಯುವಕರ ಪಾತ್ರ ಬಹುಮುಖ್ಯ” ಬೆಂಗಳೂರು ಡಿಸೆಂಬರ್ 27: ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಾದ ಮೇಕ್ ಇನ್ ಇಂಡಿಯಾ, ಡಿಜಿಟಲ್ ಇಂಡಿಯಾ, ಸ್ಟಾರ್ಟ್‌ಅಪ್ ಮತ್ತು ಸ್ಟ್ಯಾಂಡ್ ಅಪ್ ಇವುಗಳ ಸಂಯೋಜಿತ ಬಳಕೆಯಿಂದ ಬಲಿಷ್ಠ ಭಾರತವನ್ನು ರಚಿಸಬಹುದು ಮತ್ತು ಈ ಮೂಲಕ ಜನರಿಗೆ ಉದ್ಯೋಗಾವಕಾಶಗಳನ್ನು ಒದಗಿಸಬಹುದು ಎಂದು ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ಬೆಂಗಳೂರಿನ ವೈಟ್ ಫೀಲ್ಟ್ ನಲ್ಲಿರುವ ಮ್ಯಾರಿಯಟ್ ಹೋಟೆಲ್ ನಲ್ಲಿ ಜೂನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಇಂಡಿಯಾ ಆಯೋಜಿಸಿದ್ದ […]

Continue Reading
IMG 20211227 WA0010

ಕೋವಿಡ್‍ನಿಂದ ಅನಾಥರಾದ ಮಕ್ಕಳ ಆರೋಗ್ಯ ಮತ್ತು ಶಿಕ್ಷಣ ಸರ್ಕಾರದ ಜವಾಬ್ದಾರಿ…!

ಕೋವಿಡ್‍ನಿಂದ ಅನಾಥರಾದ ಮಕ್ಕಳ ಆರೋಗ್ಯ ಮತ್ತು ಶಿಕ್ಷಣ ಸರ್ಕಾರದ ಜವಾಬ್ದಾರಿ : ಸಿಎಂ ಬೆಂಗಳೂರು, ಡಿಸೆಂಬರ್ 27 : ಕೋವಿಡ್‍ನಿಂದ ತಂದೆತಾಯಿಯನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳಿಗೆ ಆರೋಗ್ಯ ಮತ್ತು ಶಿಕ್ಷಣದ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳಲಿದೆ ಎಂದು ತಿಳಿಸಿದರು. ಅವರು ಇಂದು ಕಂದಾಯ ಇಲಾಖೆಯ ರಾಜ್ಯ ವಿಪತ್ತು ನಿರ್ವಹಣೆಯ ವತಿಯಿಂದ ನ್ಯಾಪನಲ್ ಕಾಲೇಜು ಮೈದಾನದಲ್ಲಿ ಕೋವಿಡ್ನಿಂದ ಮೃತಪಟ್ಟ ವ್ಯಕ್ತಿಯ ಬಿಪಿಎಲ್ ಕುಟುಂಬಕ್ಕೆ ಪರಿಹಾರ ಚೆಕ್ ವಿತರಿಸಿ ಮಾತನಾಡಿದರು. ಮೃತಪಟ್ಟ ವ್ಯಕ್ತಿಯ ಬಿಪಿಎಲ್ ಕುಟುಂಬ ಸದಸ್ಯರಿಗೆ 1 ಲಕ್ಷ ರೂ. […]

Continue Reading
IMG 20211227 WA0019

ಹವಾಮಾನ ಆಧಾರಿತ ಕೃಷಿಯ ಸಮಗ್ರ ಅಭಿವೃದ್ಧಿಗೆ ಚಿಂತನೆ…

ಹವಾಮಾನ ಆಧಾರಿತ ಕೃಷಿಯ ಸಮಗ್ರ ಅಭಿವೃದ್ಧಿಗೆ ಚಿಂತನೆ : ಸಿಎಂ ಬೆಂಗಳೂರು, ಡಿಸೆಂಬರ್ 27 : ಹವಾಮಾನ ಆಧಾರಿತ ಕೃಷಿಯ ಸಮಗ್ರ ಅಭಿವೃದ್ಧಿಗೆ ಚಿಂತನೆ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಕರ್ನಾಟಕ ಪ್ರದೇಶ ಕೃಷಿಕ ಸಮಾಜನ ಕೃಷಿ ಭವನದ 2 ನೇ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ಕರ್ನಾಟಕದಲ್ಲಿ ಹವಾಮಾನ ಆಧಾರಿತ ಹತ್ತು ಕೃಷಿ ವಲಯಗಳು ಇವೆ. ವರ್ಷಪೂರ್ತಿ ಒಂದಿಲ್ಲೊಂದು ಬೆಳೆ ತೆಗೆಯುವ ಹವಾಮಾನ ನಮ್ಮ ರಾಜ್ಯದಲ್ಲಿದೆ. ಹವಾಮಾನ ಆಧಾರಿತ ಕೃಷಿಯ […]

Continue Reading
IMG 20211227 WA0007

ಬಿಜೆಪಿ ಸರಕಾರ ಬಂದ ಮೇಲೆ ಕನ್ನಡಿಗರ ಮೇಲೆ ದಬ್ಬಾಳಿಕೆ….!

ಕನ್ನಡಿಗರಿಗೆ ಅನ್ಯಾಯ; ಕೇಂದ್ರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ಬಿಜೆಪಿ ಸರಕಾರ ಬಂದ ಮೇಲೆ ಕನ್ನಡಿಗರ ಮೇಲೆ ದಬ್ಬಾಳಿಕೆ ಹೆಚ್ಚಿದೆ ಎಂದು ಟೀಕಾಪ್ರಹಾರ ಬಿಡದಿ: ಕೇಂದ್ರದಲ್ಲಿ ಬಿಜೆಪಿ ಸರಕಾರ ಬಂದ ಮೇಲೆ ಕನ್ನಡ ಮತ್ತು ಕನ್ನಡಿಗರ ಮೇಲೆ ಹೆಚ್ಚು ದಬ್ಬಾಳಿಕೆ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು. ಬಿಡದಿಯಲ್ಲಿ ಇಂದು ಪುರಸಭೆ ಚುನಾವಣೆಯಲ್ಲಿ ಮತದಾನ ಮಾಡಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ರಾಷ್ಟೀಯ ಪರಿಕ್ಷಾ ಸಂಸ್ಥೆ ಭಾನುವಾರ ನಡೆಸಿರುವ ಯುಜಿಸಿ – […]

Continue Reading
IMG 20211226 WA0007

ಕೊರೊನಾ: ರಾಜ್ಯದಲ್ಲಿ 10 ದಿನ ನೈಟ್ ಕರ್ಪ್ಯೂ ಜಾರಿ….

ರಾಜ್ಯದಲ್ಲಿ   10 ದಿನ ಕರ್ಪ್ಯೂ ಜಾರಿ ಜಾರಿ… ಬೆಂಗಳೂರು : ಕೊರೊನಾ ಹೊಸ ಒಮ್ರಿಕಾನ್  ವೈರಸ್ ಪ್ರಕರಣಗಳು ದೇಶದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುಂಜಾಗ್ರತಾ ಕ್ರಮವಾಗಿ 10 ದಿನ ನೈಟ್ ಕರ್ಪ್ ಜಾರಿಗೊಳಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ರಾಜ್ಯದ ಕೋವಿಡ್ ಸ್ಥಿತಿಗತಿ ಕುರಿತು ಸಭೆ ನಡೆಸಿದರು. ಹೊಸ ವರ್ಷಾಚರಣೆ ಬರುತ್ತಿರುವುದರಿಂದ ಜನರು ಹೆಚ್ಚಾಗಿ ಸೇರುವುದರಿಂದ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಜ್ಞರು ತಿಳಿಸಿದರು ಎನ್ನಲಾಗಿದೆ. ನಂತರ ಆರೋಗ್ಯ ಸಚಿವ ಸುಧಾಕರ್ […]

Continue Reading
IMG 20211119 WA0042

ಕರ್ನಾಟಕ ಬಂದ್ ನಿಂದ ಕನ್ನಡಿಗರಿಗೇ ಕಷ್ಟ….!

*ಕರ್ನಾಟಕ ಬಂದ್ ನಿಂದ ಕನ್ನಡಿಗರಿಗೇ ಕಷ್ಟ; ಬದಲಿಗೆ ಕಾನೂನಾತ್ಮಕವಾಗಿ ಎಂಇಎಸ್ ನಿಷೇಧ ಮಾಡಿ* *ಸರಕಾರಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯ* ನಿಷೇಧ ಮಾಡಿದ ಮೇಲೆ ಕೋರ್ಟ್ ಗೆ ಹೋಗಿ ತಡೆ ತರುವಂತೆ ಆಗಬಾರದು ಬೆಳಗಾವಿ ವಿಧಾನ ಕಲಾಪ ವ್ಯರ್ಥವಾಗಿದೆ ಎಂದರು ದಳಪತಿ ಚನ್ನಪಟ್ಟಣ: ಬೆಳಗಾವಿಯಲ್ಲಿ ಪುಂಡಾಟಿಕೆ ನಡೆಸಿದ ಎಂಇಎಸ್ ಸಂಘಟನೆಯನ್ನು ಕಾನೂನು ವ್ಯಾಪ್ತಿಯಲ್ಲಿ ಕ್ರಮ ಜರುಗಿಸಿ ನಿಷೇಧ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದರು. ಇಂದಿಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಡಿಸೆಂಬರ್ 31ಕ್ಕೆ ಕರ್ನಾಟಕ […]

Continue Reading
IMG 20211224 WA0021

ರೋಗಗಳಿಂದ ಮುಕ್ತರಾಗಲು ವಾರ್ಷಿಕ ಆರೋಗ್ಯ ತಪಾಸಣೆ ನಿರ್ಣಯ ಮಾಡಿ…!

ರೋಗಗಳಿಂದ ಮುಕ್ತರಾಗಲು ವಾರ್ಷಿಕ ಆರೋಗ್ಯ ತಪಾಸಣೆ ನಿರ್ಣಯ ಮಾಡಿ: ನ್ಯೂರಾ ವೈದ್ಯರ ಸಲಹೆ ಬೆಂಗಳೂರು, ಡಿಸೆಂಬರ್ 24, 2021: ಪ್ರತಿ ವರ್ಷ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದರಿಂದ ಒಬ್ಬರ ಜೀವನಕ್ಕೆ ಹೆಚ್ಚುವರಿ ವರ್ಷಗಳನ್ನು ಸೇರಿಸುವ ಕಡಿಮೆ-ವೆಚ್ಚದ ಮಾರ್ಗವಾಗಿದೆ. ಏಕೆಂದರೆ, ಇದು ಆರಂಭಿಕ ಹಂತಗಳಲ್ಲಿ ಅನೇಕ ಮಾರಣಾಂತಿಕ ಕಾಯಿಲೆಗಳನ್ನು ಪತ್ತೆ ಮಾಡಲು ನೆರವಾಗುತ್ತದೆ ಮತ್ತು ಧನಾತ್ಮಕವಾದ ಫಲಿತಾಂಶದ ಸಾಧ್ಯತೆಗಳ ಅವಕಾಶಗಳೊಂದಿಗೆ ವ್ಯಕ್ತಿಗೆ ತ್ವರಿತ ಚಿಕಿತ್ಸೆಯನ್ನು ಪಡೆಯುವಲ್ಲಿ ಮಾರ್ಗವನ್ನು ಹುಡುಕಿಕೊಡುತ್ತದೆ. ರೋಗವು ಮಧ್ಯಮ ಅಥವಾ ಕೊನೆಯ ಹಂತಗಳಿಗೆ ಮುಂದುವರಿದಾಗ ಆರಂಭಿಕ ರೋಗನಿರ್ಣಯವು […]

Continue Reading
IMG 20211224 WA0008

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾದ ಬೆಳಗಾವಿ ಅಧಿವೇಶನ….!

*ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾದ ಬೆಳಗಾವಿ ಅಧಿವೇಶನ : ಸಿಎಂ* ಬೆಳಗಾವಿ, ಡಿಸೆಂಬರ್ 24 :ಉತ್ತರ ಕರ್ನಾಟಕದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡುವ ಮೂಲಕ ಬೆಳಗಾವಿ ಅಧಿವೇಶನವನ್ನು ಸಾರ್ಥಕಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಸುವರ್ಣಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಹಲವಾರು ಜ್ವಲಂತ ಸಮಸ್ಯೆಗಳಿಗೆ ಉತ್ತರ ದೊರೆತಿದೆ. ಉತ್ತರ ಕರ್ನಾಟಕದ ನೀರಾವರಿ ಕ್ಷೇತ್ರದ ಅಭಿವೃದ್ಧಿ ಬದ್ಧವಾಗಿದೆ ಎಂದು ಸರ್ಕಾರದ ನಿರೂಪಿಸಿದೆ. ಈ ನಿಟ್ಟಿನಲ್ಲಿ. ಉತ್ತರ ಕರ್ನಾಟಕದ ಭಾಗಕ್ಕೆ […]

Continue Reading
IMG 20211224 WA0019

ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ಆಗ್ರಹ…!

*ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ವಿಶೇಷ ಅನುದಾನ ನೀಡಿ, ವಿಧಾನ ಪರಿಷತ್ ಅಧಿವೇಶನದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ ಶಾಸಕ ಚಿದಾನಂದ ಗೌಡ.* ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದ ಮೇಲ್ಮನೆಯಲ್ಲಿ *ಮಾನ್ಯ ಜನಪ್ರಿಯ ವಿಧಾನ ಪರಿಷತ್ ಶಾಸಕರಾದ ಶ್ರೀ ಚಿದಾನಂದ್ ಎಂ ಗೌಡ* ರವರು ಮಾತನಾಡಿ ರಾಜ್ಯದ ಸರ್ಕಾರಿ ಶಾಲೆಗಳನ್ನು ಅಭಿವೃದ್ದಿ ಪಡಿಸಬೇಕಿದೆ, ಗ್ರಾಮೀಣ ಪ್ರದೇಶಗಳಲ್ಲಿನ ಶಾಲೆಗಳ ಕಟ್ಟಡಗಳು ತುಂಬಾ ಅದಗೆಟ್ಟಿದು ದುರಸ್ತಿ ಮಾಡಬೇಕೆದೆ ಆದ್ದರಿಂದ ಅವುಗಳ ಅಭಿವೃದ್ಧಿಗಾಗಿ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ *ವಿಧಾನ ಪರಿಷತ್ ಅಧಿವೇಶನದಲ್ಲಿ ಸನ್ಮಾನ್ಯ […]

Continue Reading
Screenshot 2021 12 24 20 00 07 678 com.google.android.apps .photos

ಕಾಂಗ್ರೆಸ್ ಪಕ್ಷದ್ದು ಮೇಕೆದಾಟು ಯಾತ್ರೆಯಲ್ಲ, ಮತಯಾತ್ರೆ….!

ಮೇಲ್ಮನೆಯಲ್ಲಿಯೂ ಮತಾಂತರ ನಿಷೇಧ ಕಾಯ್ದೆಗೆ ವಿರೋಧ ಮಾಡುತ್ತೇವೆ: ಹೆಚ್.ಡಿ.ಕುಮಾರಸ್ವಾಮಿ ಜೆಡಿಎಸ್ ನಿಲುವಿನಲ್ಲಿ ಬದಲಾವಣೆ ಪ್ರಶ್ನೆ ಇಲ್ಲ *ಕಾಂಗ್ರೆಸ್ ಪಕ್ಷದ್ದು ಮೇಕೆದಾಟು ಯಾತ್ರೆಯಲ್ಲ, ಮತಯಾತ್ರೆ!* ಯಾತ್ರೆಗೆ ಮುನ್ನ ಕಾಂಗ್ರೆಸ್ಸಿಗರು ನೀರಾವರಿಗೆ ಗೌಡರು ಕೊಟ್ಟ ಕೊಡುಗೆ ತಿಳಿದುಕೊಳ್ಳಲಿ ಬಿಡದಿ: ಮತಾಂತರ ನಿಷೇಧ ಕಾಯ್ದೆ ವಿರೋಧಿಸುವ ಜೆಡಿಎಸ್ ಪಕ್ಷದ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದರು. ಬಿಡದಿ ಪಟ್ಟಣ ಪಂಚಾಯತಿ ಚುನಾವಣೆ ಸಂಬಂಧ ಇಂದು ಭೈರವನ ದೊಡ್ಡಿ (ವಾರ್ಡ್ ನಂಬರ್ 18)ಯಲ್ಲಿ ಪ್ರಚಾರ […]

Continue Reading