IMG 20211117 WA0008

ಹೊಸ ಡಿಜಿಟಲ್ ತಂತ್ರಜ್ಞಾನ ಹಾಗೂ ಆವಿಷ್ಕಾರಗಳಿಂದ ದೇಶದ ಅಭಿವೃದ್ಧಿ ಸಾಧ್ಯ-ಎಂ. ವೆಂಕಯ್ಯನಾಯ್ಡು

ಹೊಸ ಡಿಜಿಟಲ್ ತಂತ್ರಜ್ಞಾನ ಹಾಗೂ ಆವಿಷ್ಕಾರಗಳಿಂದ ದೇಶದ ಅಭಿವೃದ್ಧಿ ಸಾಧ್ಯ-ಎಂ. ವೆಂಕಯ್ಯನಾಯ್ಡು ಬೆಂಗಳೂರು, ನವೆಂಬರ್ 17 (ಕರ್ನಾಟಕ ವಾರ್ತೆ) : ಹೊಸ ಡಿಜಿಟಲ್ ತಂತ್ರಜ್ಞಾನ ಹಾಗೂ ಆವಿಷ್ಕಾರಗಳನ್ನು ವಿನಿಮಯ ಮಾಡಿಕೊಂಡಾಗ ದೇಶದ ಬೆಳವಣಿಗೆಯಾಗುತ್ತದೆ ಇದರಿಂದ ಜೀವನಮಟ್ಟ ಸುಧಾರಿಸಿ  ಜ್ಞಾನ ಆಧಾರಿತ ಸಮಾಜದ ಸೃಷ್ಠಿಯಾಗುತ್ತದೆ ಎಂದು ಭಾರತದ ಉಪರಾಷ್ಟ್ರಪತಿಗಳಾದ ಎಂ.ವೆಂಕಯ್ಯನಾಯ್ಡು ಅವರು ತಿಳಿಸಿದರು. ಅವರು ಇಂದು ಖಾಸಗಿ ಹೋಟೆಲ್‍ನಲ್ಲಿ ಹಮ್ಮಿಕೊಳ್ಳಲಾದ 3 ದಿನಗಳ ಬೆಂಗಳೂರು ಟೆಕ್ ಸಮ್ಮಿಟ್-2021ರ 24ನೇ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡುತ್ತಾ, ಕೃಷಿ ಕ್ಷೇತ್ರದಲ್ಲಿ ಹೊಸ ಪ್ರಯೋಗಗಳು […]

Continue Reading
IMG 20211117 WA0002

ಬೆಳೆ ಪರಿಹಾರ ನೀಡಲು ಶೀಘ್ರ ಕ್ರಮ….!

*ಬೆಳೆ ಪರಿಹಾರ ನೀಡಲು ಶೀಘ್ರ ಕ್ರಮ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ* ಬೆಂಗಳೂರು, ಅಕ್ಟೋಬರ್ 17: ಬೆಳೆ ಹಾನಿ ಸಮೀಕ್ಷೆ ನಡೆಸಲಾಗುತ್ತಿದ್ದು, ಬೆಳೆ ಪರಿಹಾರ ನೀಡಲು ಶೀಘ್ರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರು ಟೆಕ್ ಸಮ್ಮಿಟ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಬೆಳೆ ಹಾನಿಯನ್ನು ಸಮೀಕ್ಷೆ ಮಾಡಲಾಗುತ್ತಿದ್ದು, ಬೆಳೆ ಹಾನಿಯಿಂದ ತರಕಾರಿ ಮುಂತಾದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುವ ಬಗ್ಗೆ ಕಣ್ಣಿರಿಸಲಾಗಿದ್ದು, ಭತ್ತದ ಹಾಗೂ ಇತರೆ ಧಾನ್ಯಗಳ […]

Continue Reading
20211116 222848

ಯುವರತ್ನ’ನಿಗೆ ಮರಣೋತ್ತರ ‘ಕರ್ನಾಟಕ ರತ್ನ ಪ್ರಶಸ್ತಿ’

*‘ಯುವರತ್ನ’ನಿಗೆ ಮರಣೋತ್ತರ ‘ಕರ್ನಾಟಕ ರತ್ನ ಪ್ರಶಸ್ತಿ’ : ಸಿಎಂ ಘೋಷಣೆ* ಪುನೀತ್ ಚಾರಿತ್ರ್ಯವೇ ಒಂದು ಚರಿತ್ರೆ – ಬಸವರಾಜ ಬೊಮ್ಮಾಯಿ ಬೆಂಗಳೂರು, ನವೆಂಬರ್ 16 : ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ ಪ್ರಶಸ್ತಿ’ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದರು. ಅವರು ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ‘ಪುನೀತ್ ನಮನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಪುನೀತ್ ರಾಜ್‌ಕುಮಾರ್‌ರವರಿಗೆ ಮರಣೋತ್ತರ ‘ಕರ್ನಾಟಕ ರತ್ನ ಪ್ರಶಸ್ತಿ’ ಘೋಷಣೆ […]

Continue Reading
IMG 20211115 WA0025

ನದಿಗಳ ಜೋಡಣೆ: ರಾಜ್ಯಗಳಿಗೆ ನೀರು ಹಂಚಿಕೆ ನಂತರ ಡಿಪಿಆರ್- ರಾಜ್ಯದ ಮನವಿ ಪರಿಗಣಿಸಲು ಅಮಿತ್ ಷಾ ಸೂಚನೆ

ನದಿಗಳ ಜೋಡಣೆ: ರಾಜ್ಯಗಳಿಗೆ ನೀರು ಹಂಚಿಕೆ ನಂತರ ಡಿಪಿಆರ್- ರಾಜ್ಯದ ಮನವಿ ಪರಿಗಣಿಸಲು ಅಮಿತ್ ಷಾ ಸೂಚನೆ ಬೆಂಗಳೂರು, ನವೆಂಬರ್ 15- ಗೋದಾವರಿ, ಕೃಷ್ಣಾ, ಕಾವೇರಿ ಮತ್ತು ಪಾಲಾರ್ ನದಿ ಜೋಡಣೆ ಡಿಪಿಆರ್ ಸಿದ್ಧ ಪಡಿಸುವ ಮುನ್ನ ರಾಜ್ಯಗಳ ನೀರಿನ ಹಂಚಿಕೆ ಆಗಬೇಕೆಂದು ರಾಜ್ಯ ಸಲ್ಲಿಸಿರುವ ಅಹವಾಲು ಪರಿಗಣಿಸಿ, ಮುಂದುವರೆಯುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೇಂದ್ರ ಜಲಶಕ್ತಿ ಮಂತ್ರಾಲಯಕ್ಕೆ ಸೂಚನೆ ನೀಡಿದ್ದಾರೆ. ನವೆಂಬರ್ 14ರಂದು ತಿರುಪತಿಯಲ್ಲಿ ನಡೆದ ದಕ್ಷಿಣ ವಲಯ ಪರಿಷತ್ ಸಭೆಯಲ್ಲಿ […]

Continue Reading
IMG 20211114 WA0000

ಬಿಟ್ ಕಾಯಿನ್: ಭಾಗಿಯಾಗಿರುವವರನ್ನು ಬಲಿಹಾಕಲಾಗುವುದು….!

*ಬಿಟ್ ಕಾಯಿನ್:* *ಭಾಗಿಯಾಗಿರುವವರನ್ನು ಬಲಿಹಾಕಲಾಗುವುದು: ಸಿಎಂ ಬಸವರಾಜ ಬೊಮ್ಮಾಯಿ* ಬೆಂಗಳೂರು, ನವೆಂಬರ್ 14: ಬಿಟ್ ಕಾಯಿನ್ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಮುಲಾಜಿಲ್ಲದೇ ಬಲಿ ಹಾಕಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಈ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಯಾವುದೇ ಮುಲಾಜಿಲ್ಲದೆ ಕ್ರಮಜರುಗಿಸಲಾಗುವುದು. ನಮ್ಮ ಸರ್ಕಾರ ಈ ವಿಚಾರದಲ್ಲಿ ಬಹಳ ಮುಕ್ತವಾಗಿದೆ. ಈ ಪ್ರಕರಣವನ್ನು ಬಯಲಿಗೆಳೆದವರೇ […]

Continue Reading
IMG 20211113 WA0010

JD(S) – ಕಾರ್ಯಶೈಲಿ ಬದಲಿಸಿಕೊಳ್ಳಿ; ಮುಖಂಡರಿಗೆ ಒಗ್ಗಟ್ಟು ಮತ್ತು ಸಂಘಟನೆ ಪಾಠ ಮಾಡಿದ- ಹೆಚ್ ಡಿ ಕೆ

ಕಾರ್ಯಶೈಲಿ ಬದಲಿಸಿಕೊಳ್ಳಿ; ಮುಖಂಡರಿಗೆ ಒಗ್ಗಟ್ಟು ಮತ್ತು ಸಂಘಟನೆ ಪಾಠ ಮಾಡಿದ ಹೆಚ್.ಡಿ.ಕುಮಾರಸ್ವಾಮಿ ಜನತಾ ಸಂಗಮದಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಸಭೆ ***** ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಲು ಎಲ್ಲ ಹಂತದ ನಾಯಕರೂ ತಮ್ಮ ಕಾರ್ಯಶೈಲಿ ಬದಲಿಸಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಮುಖಂಡರಿಗೆ ಖಡಕ್ಕಾಗಿ ಸೂಚಿಸಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಜನತಾ ಪರ್ವ 1.O ಎರಡನೇ ಹಂತದ ಕಾರ್ಯಗಾರ ‘ಜನತಾ ಸಂಗಮ’ದ ಆರನೇ ದಿನ […]

Continue Reading
Screenshot 2021 11 12 09 27 49 019 com.miui .videoplayer

ದೆಹಲಿ ಪ್ರವಾಸ ಯಶಸ್ವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…..!

ದೆಹಲಿ ಪ್ರವಾಸ ಯಶಸ್ವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು, ನವೆಂಬರ್ 11-ತಮ್ಮ ಎರಡು ದಿನಗಳ ದೆಹಲಿ ಪ್ರವಾಸ ಯಶಸ್ವಿಯಾಗಿದೆ. ವಿಶೇಷವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗಿನ ಭೇಟಿ, ಮುಂಬರುವ ದಿನಗಳಲ್ಲಿ ಇನ್ನಷ್ಟು ಜನಪರ ಕಾರ್ಯ ಕೈಗೊಳ್ಳುವ ವಿಶ್ವಾಸ ಮೂಡಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ತಮ್ಮ ಎರಡು ದಿನಗಳ ದೆಹಲಿ ಪ್ರವಾಸದಿಂದ ಹಿಂದಿರುಗಿದ ನಂತರ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರಧಾನಮಂತ್ರಿಯವರು ಕಳೆದ ನೂರು ದಿನಗಳಲ್ಲಿ ಕೈಗೊಂಡ ನಿರ್ಣಯಗಳು, ಕಾರ್ಯಕ್ರಮಗಳ ಬಗ್ಗೆ […]

Continue Reading
IMG 20211111 WA0048

ಬಿಟ್ ಕಾಯಿನ್ ವಿಚಾರದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ನಿಷ್ಠೆ, ದಿಟ್ಟತನದಿಂದ ಕೆಲಸ ಮಾಡಿ ಬೊಮ್ಮಾಯಿ ನಾಯಕತ್ವಕ್ಕೆ ಮೋದಿ ಸಮರ್ಥನೆ….!

ಬಸವರಾಜ ಬೊಮ್ಮಾಯಿಗೆ ಮೋದಿ ಅಭಯ ಬಿಟ್ ಕಾಯಿನ್ ವಿಚಾರದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ನಿಷ್ಠೆ, ದಿಟ್ಟತನದಿಂದ ಕೆಲಸ ಮಾಡಿ ಬೊಮ್ಮಾಯಿ ನಾಯಕತ್ವಕ್ಕೆ ಮೋದಿ ಸಮರ್ಥನೆ ಮಾತು ನವದೆಹಲಿ:ಬಿಟ್-ಕಾಯಿನ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಯ ನೀಡಿದ್ದಾರೆ. ಬಿಟ್ ಕಾಯಿನ್ ವಿಚಾರವಾಗಿ ತಲೆಕೆಡಿಸಿಕೊಳ್ಳದೆ ಜನಪರ ಕೆಲಸ ಮಾಡಿ ಎಂದು ಹೇಳುವ ಮೂಲಕ ಬೊಮ್ಮಾಯಿ ಅವರ ನಾಯಕತ್ವವನ್ನು ಸಮರ್ಥಿಸಿದ್ದಾರೆ. ನವದೆಹಲಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ನೂರು […]

Continue Reading
IMG 20211110 WA0028

ಜನಸಾಮಾನ್ಯರ ಮುಖ್ಯಮಂತ್ರಿ….!

ಜನಸಾಮಾನ್ಯರ ಮುಖ್ಯಮಂತ್ರಿ ನವ ದೆಹಲಿ:  ರಾಜ್ಯದ ಜನತೆ ನನ್ನನ್ನು ಒಬ್ಬ ಜನಸಾಮಾನ್ಯರ ಮುಖ್ಯಮಂತ್ರಿ ಎಂದು ಸ್ಮರಿಸಲು ಬಯಸುವುದಾಗಿ ತಿಳಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಕಟ್ಟಕಡೆಯ ವ್ಯಕ್ತಿಯನ್ನು ಮುಖ್ಯವಾಹಿನಿಗೆ ತಂದವನು ಎಂದು ಜನ ಗುರುತಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ ಎಂದರು. ರಾಜ್ಯದ ಜನ ಫಲಾನುಭವಿ ಗಳಿಗಿಂತ ಪಾಲುದಾರರಾಗಬೇಕು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನವದೆಹಲಿಯಲ್ಲಿ ಟೈಮ್ಸ್ ನೌವ್ ಸಮಿಟ್ ನಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಕರ್ನಾಟಕವನ್ನು ಹೇಗೆ ಮುನ್ನಡೆಸಲು ಬಯಸುವಿರಿ ಎಂಬ ಪ್ರಶ್ನೆಗೆ ಮುಖ್ಯಮಂತ್ರಿಗಳು ನೀಡಿದ ಪ್ರತಿಕ್ರಿಯೆ […]

Continue Reading
IMG 20211110 WA0020

ಮುಂದಿನ ಶೈಕ್ಷಣಿಕ ವರ್ಷದಿಂದ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಜಾರಿಗೆ ಪ್ರಯತ್ನ….!

ಜ್ಞಾನ, ವಿಜ್ಞಾನ ಮತ್ತು ಸಂಸ್ಕೃತಿ, ಸಂಸ್ಕಾರ ಒಳಗೊಂಡ ಸಮಗ್ರ ಶಿಕ್ಷಣ ಅಗತ್ಯವಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಜಾರಿಗೆ ಪ್ರಯತ್ನ: ಬಿ.ಸಿ. ನಾಗೇಶ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು. ಬೆಂಗಳೂರು: ನವೆಂಬರ್ 10, 2021.ಜ್ಞಾನ, ವಿಜ್ಞಾನ, ಕೌಶಲ್ಯದ ಜೊತೆಗೆ ಮಾನವೀಯ ಮೌಲ್ಯಗಳು, ಸಂಸ್ಕೃತಿ, ಮತ್ತು ಸಂಸ್ಕಾರವನ್ನು ನೀಡುವ ಸಮಗ್ರ ಶಿಕ್ಷಣದ ಅಗತ್ಯವಿದೆ. ಅದನ್ನು ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಪೂರೈಸುತ್ತದೆ ಎನ್ನುವ ಸಂಪೂರ್ಣ ವಿಶ್ವಾಸವಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಬಿ.ಸಿ […]

Continue Reading