IMG 20260209 WA0004

ಪಾವಗಡ : ಹಿಂದೂ ಸಮಾಜದ ಪರಂಪರೆಯನ್ನು ಉಳಿಸಲು ಎಲ್ಲರೂ ಕೈ ಜೋಡಿಸಬೇಕು….!

  ಹಿಂದೂ ಸಮಾಜದ ಪರಂಪರೆಯನ್ನು ಉಳಿಸಲು ಎಲ್ಲರೂ ಕೈ ಜೋಡಿಸಬೇಕು. ಪಾವಗಡ. ವಿರಾಟ್ ಹಿಂದೂ ಸಮಾಜೋತ್ಸವವು ಜಾತಿ-ಪಂಥಗಳ ಭೇದವಿಲ್ಲದೆ ಹಿಂದೂ ಸಮಾಜವನ್ನು ಒಗ್ಗೂಡಿಸುವ, ಸಂಸ್ಕೃತಿಯ ಜಾಗೃತಿ ಮೂಡಿಸುವ ಭವ್ಯ ಕಾರ್ಯಕ್ರಮವಾಗಿದೆ.ಎಂದು ನಿಡಗಲ್ಲು ವಾಲ್ಮೀಕಿ ಆಶ್ರಮದ ಪೀಠ್ಯಾಧ್ಯಕ್ಷರಾದ ಶ್ರೀ ವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿ ತಿಳಿಸಿದರು. ತಾಲ್ಲೂಕಿನ ಕೆ.ಟಿ .ಹಳ್ಳಿ ಗ್ರಾಮದ ಶ್ರೀರಾಮ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಂಡಿದ್ದ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ನಾವೆಲ್ಲ ಹಿಂದೂಗಳು ನಮ್ಮ ಸಂಪ್ರದಾಯಗಳಿಗೆ ಗೌರವ ನೀಡಿ.ನಮ್ಮ ಪರಂಪರೆಯನ್ನು ಉಳಿಸಬೇಕುಎಂದರು. ಹಿಂದುಗಳೆಲ್ಲಾ […]

Continue Reading
IMG 20260206 WA0004

ಪಾವಗಡ : ಆಂಗ್ಲ ಭಾಷೆಯ ಬಗ್ಗೆ ಪರಿಣತಿ ಇರಲಿ…..!

ಆಂಗ್ಲ ಭಾಷೆಯ ಬಗ್ಗೆ ಪರಿಣತಿ ಇರಲಿ: ಕ್ಷೇತ್ರ ಶಿಕ್ಷಣಾಧಿಕಾರಿ ರೇಣುಕಮ್ಮ. ಪಾವಗಡ: ಸರಕಾರಿ ಶಾಲೆಗಳಲ್ಲಿ ಪ್ರಾಥಮಿಕ ಹಂತದಲ್ಲಿ ಆಂಗ್ಲ ಮಾಧ್ಯಮದ ತರಗತಿಗಳು ಆರಂಭಗೊಳ್ಳುತ್ತಿರುವುದು ಶೈಕ್ಷ ಣಿಕ ರಂಗದಲ್ಲಿ ಹೆಚ್ಚಿನ ಮಹತ್ವ ಪಡೆದಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರೇಣುಕಮ್ಮ ತಿಳಿಸಿದ್ದಾರೆ. ತಾಲ್ಲೂಕಿನ ರಾಜವಂತಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಇಂಗ್ಲೀಷ್ ಭಾಷಾ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆ ಮಾಡಿ ಅವರು ಮಾತನಾಡಿದರು. ಸರ್ಕಾರಿ ಶಾಲಾ ಮಕ್ಕಳು ಸ್ಪರ್ಧಾತ್ಮಕ ಯುಗದಲ್ಲಿ ಇಂಗ್ಲೀಷ್ ಭಾಷೆಯನ್ನು ಕಲಿಯುವುದರ ಮೂಲಕ ಮುಂದಿನ ವಿದ್ಯಾಭ್ಯಾಸ ವನ್ನು […]

Continue Reading
DSC 0379

ತುಮಕೂರು : ತಾಲೂಕುವಾರು ಕಂಟ್ರೋಲ್ ರೂಮ್ ಸ್ಥಾಪನೆಗೆ ಡಿಸಿ ಸೂಚನೆ

ತಾಲೂಕುವಾರು ಕಂಟ್ರೋಲ್ ರೂಮ್ ಸ್ಥಾಪನೆಗೆ ಡಿಸಿ ಸೂಚನೆ ತುಮಕೂರು(ಕ.ವಾ.)ಫೆ.3: ಜಿಲ್ಲೆಯ ಜನರು ಎದುರಿಸುತ್ತಿರುವ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಉದ್ದೇಶದಿಂದ ತಾಲೂಕುವಾರು ಕಂಟ್ರೋಲ್ ರೂಮ್‍ಗಳನ್ನು ಸ್ಥಾಪಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿ, ಜನಸಾಮಾನ್ಯರ ದೂರುಗಳು ಮತ್ತು ತುರ್ತು ಸಮಸ್ಯೆಗಳಿಗೆ ತಕ್ಷಣ ಪರಿಹಾರ ಒದಗಿಸುವ ವ್ಯವಸ್ಥೆ ಅಗತ್ಯವಿದೆ ಎಂದು ಹೇಳಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಎಲ್ಲ […]

Continue Reading
DSC00598

ತುಮಕೂರು :ಅನಿಶ್ಚಿತತೆಯ ಯುಗದಲ್ಲಿ ಶ್ರೀಗಳ ಜೀವನ ನೈತಿಕ ದಿಕ್ಕನ್ನು ಸೂಚಿಸುವ ನಂದಾದೀಪ…..!

ಅನಿಶ್ಚಿತತೆಯ ಯುಗದಲ್ಲಿ ಶ್ರೀಗಳ ಜೀವನ ನೈತಿಕ ದಿಕ್ಕನ್ನು ಸೂಚಿಸುವ ನಂದಾದೀಪ: ಉಪ ರಾಷ್ಟ್ರಪತಿ ರಾಧಾಕೃಷ್ಣನ್ ಬಣ್ಣನೆ ತುಮಕೂರು(ಕ.ವಾ.) ಜ.21: ಅನಿಶ್ಚಿತತೆ, ವಿಭಜನೆ ಮತ್ತು ಅಶಾಂತಿಯನ್ನು ಸೃಷ್ಟಿಸುತ್ತಿರುವ ಈ ಯುಗದಲ್ಲಿ ಸಿದ್ಧಗಂಗೆಯ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿಯವರ ಜೀವನ ನೈತಿಕ ದಿಕ್ಕನ್ನು ಸೂಚಿಸುವ ಪ್ರಜ್ವಲಿಸುವ ನಂದಾದೀಪವಾಗಿದೆ ಎಂದು ಭಾರತದ ಉಪ ರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಹೇಳಿದ್ದಾರೆ. ಬುಧವಾರ ಸಿದ್ದಗಂಗೆ ಮಠದಲ್ಲಿ ನಡೆದ ಶ್ರೀ ಶಿವಕುಮಾರ ಸ್ವಾಮೀಜಿಯವರ 7ನೇ ಪುಣ್ಯಸಂಸ್ಮರಣೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶ್ರೀ ಶಿವಕುಮಾರ ಸ್ವಾಮೀಜಿಯವರು ಲಿಂಗೈಕ್ಯರಾಗಿ […]

Continue Reading
IMG 20260117 WA0009

ಪಾವಗಡ : ಬೈಕ್, ಟಿಪ್ಪರ್ ನಡುವೆ ಡಿಕ್ಕಿ ಓರ್ವ ಸಾವು ಮತ್ತೊಬ್ಬರಿಗೆ ಗಂಭೀರ ಗಾಯ….!

ಬೈಕ್, ಟಿಪ್ಪರ್ ನಡುವೆ ಡಿಕ್ಕಿ ಓರ್ವ ಸಾವು ಮತ್ತೊಬ್ಬರಿಗೆ ಗಂಭೀರ ಗಾಯ. ಪಾವಗಡ: ಬೈಕ್ ಮತ್ತು ಟಿಪ್ಪರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ವ್ಯಕ್ತಿಯೋರ್ವ ಮೃತಪಟ್ಟಿದ್ದು, ಮತ್ತೊಬ್ಬ ವ್ಯಕ್ತಿ ತೀವ್ರವಾಗಿ ಗಾಯಗೊಂಡ ಘಟನೆ ಶನಿವಾರ ಬೆಳಗ್ಗೆ ತಾಲೂಕಿನ ರಾಜವಂತಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಪಟ್ಟಣದ ಕನುಮನ ಕೆರೆಯ ವಾಸಿ ಅಂಬರೀಶ್ (22) ಮೃತ ವ್ಯಕ್ತಿ. ಮತ್ತೊಬ್ಬ ವ್ಯಕ್ತಿ ಭಾಸ್ಕರ್ ಗೆ ಗಂಭೀರ ಗಾಯಗಳಾಗಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ತೆರಳಿಸಿದ್ದಾರೆ ಎಂದು ತಿಳಿದುಬಂದಿದೆ. ಅಂಬರೀಶ್ ಮತ್ತು ಭಾಸ್ಕರ್ […]

Continue Reading
IMG 20260116 WA0047

ಪಾವಗಡ : ಆಂಬುಲೆನ್ಸ್ ಇಲ್ಲದೆ ವ್ಯಕ್ತಿ ಸಾವು…!

ವೈ.ಎನ್.ಹೊಸಕೋಟೆ ಸಮುದಾಯ ಆರೋಗ್ಯ ಕೇಂದ್ರ :   ಆಂಬುಲೆನ್ಸ್ ಇಲ್ಲದೆ  ವ್ಯಕ್ತಿ ಸಾವು. ಸಮುದಾಯ ಆರೋಗ್ಯ ಕೇಂದ್ರ ನಿರ್ಮಾಣ ಕ್ಕೆ ಜಮೀನು ನೀಡಿದ ಕುಟುಂಬಕ್ಕೆ ಬಂತು ದುರಂತ : ಪಾವಗಡ : ತಾಲ್ಲೂಕಿನ ವೈ.ಎನ್. ಹೊಸಕೋಟೆಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸರಿಯಾದ ವ್ಯವಸ್ಥೆ ಇಲ್ಲದೆ ಶುಕ್ರವಾರರಂದು ಮಧ್ಯಾಹ್ನ 12 ಗಂಟೆಗೆ ಒಬ್ಬ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ. ಎರಡು ಮೂರು ದಿನ ಹಿಂದೆ ಪಾವಗಡ ತಾಲ್ಲೂಕು ವ್ಯಾಪ್ತಿಯ ಬರುವ ಲಿಂಗದಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಘಟನೆ ಮಾಸುವ ಮುನ್ನವೆ […]

Continue Reading
CM photo 9 scaled

ತುಮಕೂರು : ಕರ್ನಾಟಕ ಕ್ರೀಡಾಕೂಟಕ್ಕೆ ವರ್ಣರಂಜಿತ ಅದ್ದೂರಿ ಚಾಲನೆ…..!

ಕರ್ನಾಟಕ ಕ್ರೀಡಾಕೂಟಕ್ಕೆ ವರ್ಣರಂಜಿತ ಅದ್ದೂರಿ ಚಾಲನೆ…..! ಜಿಲ್ಲೆಯಲ್ಲಿ ಕ್ರೀಡಾ ಅಭಿವೃದ್ಧಿಗೆ 6 ಕೋಟಿ ಅನುದಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ತುಮಕೂರು(ಕ.ವಾ)ಜ.16: ತುಮಕೂರಿನಲ್ಲಿ ಜನವರಿ 16 ರಿಂದ 22ರವರೆಗೆ ನಡೆಯಲಿರುವ ಹಿರಿಯ ಒಲಿಂಪಿಕ್ಸ್ ಎಂದು ಕರೆಯಲಾಗುವ ಕರ್ನಾಟಕ ಕ್ರೀಡಾಕೂಟ 2025-26ಕ್ಕೆ ವರ್ಣರಂಜಿತ ಅದ್ದೂರಿ ಚಾಲನೆ ನೀಡಲಾಯಿತು. ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಹಾಕಿ ಕ್ರೀಡಾಂಗಣ ಹಾಗೂ ಈಜು ಕೊಳ ನಿರ್ಮಾಣ ಸೇರಿದಂತೆ ಕ್ರೀಡಾ ಅಭಿವೃದ್ಧಿಗೆ 6 ಕೋಟಿ ರೂ. ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ. ಯುವ ಸಬಲೀಕರಣ […]

Continue Reading
IMG 20260107 WA0074 scaled

ಪಾವಗಡ : ಪ್ರಾರ್ಥಮಿಕ ಶಾಲಾ ಶಿಕ್ಷಣಕ್ಕೆ ಹೆಚ್ಚು ಒತ್ತನ್ನು ನೀಡಬೇಕು…!

ಪ್ರಾರ್ಥಮಿಕ ಶಾಲಾ ಶಿಕ್ಷಣಕ್ಕೆ ಹೆಚ್ಚು ಒತ್ತನ್ನು ನೀಡಬೇಕು.ಉಪ ನಿರ್ದೇಶಕ ವಿ. ಮಾಧವರಡ್ಡಿ. ಪಾವಗಡ: ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಹೆಚ್ಚಿಸಲು ಅನುಷ್ಠಾನಾಧಿಕಾರಿಗಳು ಕಾಲ ಕಾಲಕ್ಕೆ ಶಾಲೆಗಳಿಗೆ ಭೇಟಿ ನೀಡಬೇಕೆಂದು. ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಉಪ ನಿರ್ದೇಶಕ ವಿ. ಮಾಧವರಡ್ಡಿ ತಿಳಿಸಿದರು. ತಾಲ್ಲೂಕಿನ ದೊಡ್ಡಹಳ್ಳಿಯ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಜಿಲ್ಲಾ ಮಟ್ಟದ ಶೈಕ್ಷಣಿಕ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ […]

Continue Reading
IMG 20260107 WA0075

ಪಾವಗಡ : ಬಡವರ ಪಾಲಿನ ಆಶಾಕಿರಣ ಮುಖ್ಯಮಂತ್ರಿ ಸಿದ್ದರಾಮಯ್ಯ….!

ಬಡವರ ಪಾಲಿನ ಆಶಾಕಿರಣ ಮುಖ್ಯಮಂತ್ರಿ ಸಿದ್ದರಾಮಯ್ಯ. ಮಾಜಿ ಸಚಿವ ವೆಂಕಟರಮಣಪ್ಪ. ಪಾವಗಡ: ದೀರ್ಘಾವಧಿಯ ಕಾಲ ರಾಜ್ಯದ ಚುಕ್ಕಾಣಿ ಹಿಡಿಯುವ ಮೂಲಕ ಮಾಜಿ ಮುಖ್ಯಮಂತ್ರಿ ದೇವರಾಜು ಅರಸ್ ರವರ ದಾಖಲೆ ಮುರಿದು ಇತಿಹಾಸ ಸೃಷ್ಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಮಾಜಿ ಸಚಿವ ವೆಂಕಟರಮಣಪ್ಪ ತಿಳಿಸಿದರು. ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಅಭಿಮಾನಿ ಬಳಗದ ಸಂಯುಕ್ತಾಶ್ರಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಬಡವ, ಹಿಂದುಳಿದ ವರ್ಗದವರ, ದೀನದಲಿತರ ಬಗ್ಗೆ ಹೆಚ್ಚಿನ […]

Continue Reading
IMG 20260103 WA0026

ಪಾವಗಡ : ಜನರ ಆರೋಗ್ಯವನ್ನು ಸುಧಾರಿಸುವಲ್ಲಿ ಆರೋಗ್ಯ ಶಿಬಿರಗಳ ಪಾತ್ರ ಮಹತ್ವವಾದುದು…..!

ಜನರ ಆರೋಗ್ಯವನ್ನು ಸುಧಾರಿಸುವಲ್ಲಿ ಆರೋಗ್ಯ ಶಿಬಿರಗಳ ಪಾತ್ರ ಮಹತ್ವವಾದುದು.ಶಾಸಕ ಹೆಚ್. ವಿ ವೆಂಕಟೇಶ್. ಪಾವಗಡ: ಗ್ರಾಮೀಣ ಮತ್ತು ಪಟ್ಟಣ ಪ್ರದೇಶಗಳಲ್ಲಿನ ಜನರ ಆರೋಗ್ಯವನ್ನು ಸುಧಾರಿಸಲು. ಆರೋಗ್ಯ ಶಿಬಿರಗಳ ಅವಶ್ಯಕತೆ ಹೆಚ್ಚಿದೆ ಎಂದು . ಶಾಸಕ ಹೆಚ್. ವಿ ವೆಂಕಟೇಶ್ ತಿಳಿಸಿದರು . ಆರೋಗ್ಯ ಶಿಬಿರಗಳಿಂದ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಜನರ ಆರೋಗ್ಯವನ್ನು ಸುಧಾರಿಸಲು ಮತ್ತು ರೋಗಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಸಹಾಯವಾಗಲಿದೆ ಎಂದರು. ಕೆಲ ಖಾಸಗಿ ಆಸ್ಪತ್ರೆಗಳು ಜನರಿಗೆ ಸೇವೆ ಮಾಡುವ ಬದಲು ರಕ್ತ ಹೀರುತ್ತಿರುವುದು […]

Continue Reading