IMG 20241022 WA0021

ಪಾವಗಡ: ಅರಸೀಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷರ ಅವಿರೋಧ ಆಯ್ಕೆ.

ಗ್ರಾಮ ಪಂಚಾಯತಿ ಅಧ್ಯಕ್ಷರ ಅವಿರೋಧ ಆಯ್ಕೆ. ಪಾವಗಡ : ತಾಲ್ಲೂಕಿನ ಅರಸೀಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಜಂಗಮರಹಳ್ಳಿ ಗ್ರಾಮದ ಗೋಪಾಲಕೃಷ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದಿನ ಅಧ್ಯಕ್ಷರಾದ ನಾಗರಾಜು ರವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಗೋಪಾಲಕೃಷ್ಣ ರವರು ಮಾತ್ರ ನಾಮ ಪತ್ರ ಸಲ್ಲಿಸಿದ್ದು. ಬೇರೆ ನಾಮಪತ್ರಗಳು ಸಲ್ಲಿಕೆಯಾಗದ ಕಾರಣ ತಹಶೀಲ್ದಾರ್ ವರದರಾಜು ರವರು ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಿ ಅವಿರೋಧ ಆಯ್ಕೆ ಪ್ರಕಟಿಸಿ ಗೋಪಾಲಕೃಷ್ಣ ಅವರಿಗೆ ಅಧಿಕಾರ ವಹಿಸಿಕೊಟ್ಟರು. ಅರಸೀಕೆರೆ ಗ್ರಾಮ ಪಂಚಾಯಿತಿಯಲ್ಲಿ […]

Continue Reading
IMG 20241022 WA0023

ಪಾವಗಡ : ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲು ಎಲ್ಲರ ಸಹಕಾರ ಅಗತ್ಯ……!

ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲು ಎಲ್ಲರ ಸಹಕಾರ ಅಗತ್ಯ. ತಹಶೀಲ್ದಾರ್ ವರದರಾಜು. ಪಾವಗಡ : ಗಡಿನಾಡ ಪ್ರದೇಶವಾಗಿರುವ ಪಾವಗಡ ತಾಲ್ಲೂಕಿನಲ್ಲಿ ಈ ಬಾರಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲು ಎಲ್ಲರ ಸಹಕಾರ ಅತ್ಯಗತ್ಯ ಎಂದು ತಹಶೀಲ್ದಾರ್ ವರದರಾಜು ತಳಿಸಿದರು. ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ರಾಜ್ಯೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಸಲ್ಲಿಸಿದ ಗಣ್ಯರನ್ನು ಗುರುತಿಸಿ ತಾಲ್ಲೂಕು ರಾಜ್ಯೋತ್ಸವ ಪ್ರಶಸ್ತಿ ನೀಡಲು ತೀರ್ಮಾನಿಸಲಾಯಿತು ಪ್ರಶಸ್ತಿಗೆ ಅರ್ಜಿ ಸಲ್ಲಿಸುವರು ದಿನಾಂಕ […]

Continue Reading
DSC3626 scaled

ತುಮಕೂರು : ಭ್ರಷ್ಟಾಚಾರವನ್ನು  ಬುಡಸಮೇತ ಕಿತ್ತೊಗೆಯಲು ಬದ್ದ – ಲೋಕಾಯುಕ್ತ

ರಾಜ್ಯದಲ್ಲೇ ಅತೀ ಹೆಚ್ಚು ದೂರುಗಳ ಜಿಲ್ಲೆ ತುಮಕೂರು ಭ್ರಷ್ಟಾಚಾರವನ್ನು  ಬುಡಸಮೇತ ಕಿತ್ತೊಗೆಯಲು ಲೋಕಾಯುಕ್ತ ಬದ್ದ  ಭ್ರಷ್ಟಾಚಾರ ನರ್ಮೂಲನೆಗೆ ಪ್ರಜಾಪ್ರಭುತ್ವದ ನಾಲ್ಕು ಅಂಗಗಳು ಬಲಗೊಳ್ಳಬೇಕು ತುಮಕೂರು (ಕ.ವಾ.) ಅ.20: ಪ್ರಜಾ ಪ್ರಭುತ್ವದ ಬಹುದೊಡ್ಡ ಪಿಡುಗಾಗಿರುವ =  ಬುಡ ಭ್ರಷ್ಟಾಚಾರವನ್ನುಸಮೇತ ಕಿತ್ತೊಗೆಯಲು ಲೋಕಾಯುಕ್ತ ಸಂಸ್ಥೆ ಸದಾ ಬದ್ಧವಾಗಿದೆ ಎಂದು ಉಪ ಲೋಕಾಯುಕ್ತ ಬಿ. ವೀರಪ್ಪ ಹೇಳಿದರು. ನಗರದ ಪರಿವೀಕ್ಷಣಾ ಮಂದಿರದಲ್ಲಿ ಭಾನುವಾರ ಮಾಧ್ಯಮ ಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ  3 ದಿನಗಳ ಕಾಲ […]

Continue Reading
20241019 203558

ತುಗುಡುಗು-ಸಿಡಿಲು ಸಹಿತ ಮಳೆ : ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ…..!

ಗುಡುಗು-ಸಿಡಿಲು ಸಹಿತ ಮಳೆ : ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ- ಜಿಲ್ಲಾಧಿಕಾರಿ ತುಮಕೂರು (ಕ.ವಾ.) ಅ.19: ಭಾರತೀಯ ಹವಾಮಾನ ಇಲಾಖೆ ವರದಿಯನ್ವಯ ಗುಡುಗು-ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುಂದಿನ 3 ದಿನಗಳ ಕಾಲ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಮುಂಜಾಗ್ರತೆ ವಹಿಸಲು ಅಧಿಕಾರಿ ಸಿಬ್ಬಂದಿಗೆ ಸೂಚನೆ :- ಭಾರಿ ಮಳೆಯಿಂದ ಉಂಟಾಗಬಹುದಾದ ಪ್ರವಾಹದಿಂದ ಯಾವುದೇ ಜನ-ಜಾನುವಾರುಗಳ ಜೀವಹಾನಿಯಾಗದಂತೆ ಜಿಲ್ಲಾ/ತಾಲ್ಲೂಕು/ಗ್ರಾಮ ಮಟ್ಟದ ಅಧಿಕಾರಿ/ಸಿಬ್ಬಂದಿಗಳು ಕೇಂದ್ರಸ್ಥಾನದಲ್ಲಿದ್ದುಕೊಂಡು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. […]

Continue Reading
DSC3155

ತುಮಕೂರು : ಕಾನೂನು ಬಾಹಿರವಾಗಿ ಖಾತೆ ಮಾಡಿ ಕೊಟ್ಟಿರುವ ದೂರುಗಳ ಮಹಾಪೂರ,,,!

ಸುಳ್ಳು ದಾಖಲೆ ಸೃಷ್ಟಿ : ಉಪಲೋಕಾಯುಕ್ತರ ಪ್ರಶ್ನೆಗೆ ತಡವರಿಸಿದ ಪಿಡಿಓ ಕಾನೂನು ಬಾಹಿರವಾಗಿ ಖಾತೆ ಮಾಡಿ ಕೊಟ್ಟಿರುವ ದೂರುಗಳ ಮಹಾಪೂರ…! ಸಕಾರಣವಿಲ್ಲದೆ ಸಾರ್ವಜನಿಕರನ್ನು ಸರ್ಕಾರಿ ಕಚೇರಿಗೆ ಅಲೆದಾಡಿಸಬಾರದು…! ತುಮಕೂರು  ಅ.19: ಜಿಲ್ಲೆಯ ಕುಣಿಗಲ್ ತಾಲ್ಲೂಕು ಹುಲಿಯೂರು ದುರ್ಗ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಆರ್. ವಿನಾಯಕ ಅವರು ಸುಳ್ಳು ದಾಖಲೆ ಸೃಷ್ಟಿಸಿ ವಂಚಿಸಿದ್ದಾರೆ ಎಂಬ ಸಾರ್ವಜನಿಕರ ಆರೋಪಕ್ಕೆ ಸಂಬಂಧಿಸಿದಂತೆ ಉಪ ಲೋಕಾಯುಕ್ತ ಗೌರವಾನ್ವಿತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ವಿನಾಯಕ ಅವರನ್ನು ಪ್ರಶ್ನಿಸಿದಾಗ ಸರಿಯಾದ ರೀತಿಯಲ್ಲಿ ದಾಖಲೆ ನೀಡದೆ […]

Continue Reading
IMG 20241018 WA0018

ತುಮಕೂರು : ಶಿಖರ ಬಸವ ಜಾತ್ರೆಯ ನಿಡುಗಲ್ಲು ದುರ್ಗ…!

*ಶಿಖರ ಬಸವ ಜಾತ್ರೆಯ ನಿಡುಗಲ್ಲು ದುರ್ಗ* “ ಹಕ್ಕಿ ಹಾರದ ಕೋಟೆ * ಪಕ್ಷಿ ತೂರದ ಕೋಟೆ * ರಕ್ಕಸ ಕೋಟೆ * ರಣಕೋಟೆ ನಿಡುಗಲ್ಲು” ಎಂದು ಖ್ಯಾತಿಯನ್ನು ಪಡೆದಿದ್ದ ದಕ್ಷಿಣದ ಹಂಪೆ ನಿಡಗಲ್ಲು ದುರ್ಗ, ಪಾವಗಡ : ತುಮಕೂರು ಜಿಲ್ಲೆಯ ಪ್ರಮುಖ ಐತಿಹಾಸಿಕ ಕೇಂದ್ರಗಳಲ್ಲಿ ಒಂದಾಗಿದ್ದು, ಪಾವಗಡ ತಾಲ್ಲೂಕಿನ ಪ್ರಮುಖ ಆಕರ್ಷಣೆಯಾಗಿದೆ. ಈ ದುರ್ಗವು ಗತಕಾಲದ ಐತಿಹಾಸಿಕ, ಸಾಂಸ್ಕೃತಿಕ, ಸಾಮಾಜಿಕ, ಧಾರ್ಮಿಕ ವಿಚಾರಗಳನ್ನು ಭವಿಷ್ಯದ ಜನತೆಗೆ ತಿಳಿಸಿಕೊಡುವ ಸ್ಮಾರಕ ಕ್ಷೇತ್ರವಾಗಿ ಉಳಿದಿದೆ. ಪ್ರತಿ ವರ್ಷ ಶ್ರಾವಣದ […]

Continue Reading
IMG 20241015 WA0005

ಪಾವಗಡ : ಚೆಂಡು ಹೂವಿನ ಬೆಳೆ ಹೆಚ್ಚು ಲಾಭದಾಯಕ….!

ಚೆಂಡು ಹೂವಿನ ಬೆಳೆ ಹೆಚ್ಚು ಲಾಭದಾಯಕ . ತುಷಾರ್ ಕಾಂತಿ ಬೆಹೇರಾ. ಪಾವಗಡ : ಕೃಷಿ ಅಭಿವೃದ್ಧಿಗಾಗಿ ಐ.ಐ.ಎಚ್. ರ್ ಮತ್ತು ಐ.ಸಿ.ಎ .ಆರ್ ಸಂಸ್ಥೆ ಗಳು ಅನೇಕ ರೀತಿಯ ತಳಿಗಳನ್ನು ರೂಪಿಸಿದೆಯೆಂದು ಬೆಂಗಳೂರಿನ ಐ. ಐ. ಹೆಚ್. ರ್ ಮತ್ತು ಐ.ಸಿ.ಎ. ಆರ್ ನ ನಿರ್ದೇಶಕರಾದ ತುಷಾರ್ ಕಾಂತಿ ಬೆಹಾರ್ ತಿಳಿಸಿದರು. ತಾಲ್ಲೂಕಿನ ನೀಲಮ್ಮನಹಳ್ಳಿ ಗ್ರಾಮದಲ್ಲಿ ಏರ್ಪಡಿಸಿದ್ದ ಚೆಂಡು ಹೂವಿನ ಹೈಬ್ರಿಡ್ ತಳಿಯ ಕ್ಷೇತ್ರೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೃಷಿಯಲ್ಲಿ ಬೆಳೆ ವೈವಿಧ್ಯತೆ ಅತಿ […]

Continue Reading
IMG 20240929 WA0001 scaled

ಪಾವಗಡ : ಜೂಜಾಟ ಅಡ್ಡೆ ಮೇಲೆ ಪೊಲೀಸರ ದಾಳಿ, 32 ಜನರ ಬಂಧನ….!

  ಜೂಜಾಟ ಅಡ್ಡೆ ಮೇಲೆ ಪೊಲೀಸರ ದಾಳಿ, 32 ಜನರ ಬಂಧನ. ಪಾವಗಡ: ಪಾವಗಡ ಪಟ್ಟಣ ಠಾಣೆಯ ಪೊಲೀಸರು ಜೂಜು ಅಡ್ಡೆ ಮೇಲೆ ದಾಳಿ ಮಾಡಿ 32 ಜನ ಜೂಜು ಕೋರರನ್ನು ಬಂಧಿಸಿ ನಗದನ್ನು ವಶಪಡಿಸಿಕೊಂಡಿರುವ ಘಟನೆ ತಾಲ್ಲೂಕಿನ ಗುಮ್ಮಘಟ್ಟ ಗ್ರಾಮದ ಆಂಧ್ರ ಗಡಿಯಲ್ಲಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ವಿ ಅಶೋಕ್ ರವರ ಮಾರ್ಗದರ್ಶನದಲ್ಲಿ ತುಮಕೂರು ಪಿ ಎಸ್ ಐ ಪ್ರಸನ್ನ ಕುಮಾರ್ ಮತ್ತು ಪಾವಗಡ ಠಾಣೆಯ ಸಿಪಿಐ […]

Continue Reading
IMG 20240922 WA0006 scaled

ಪಾವಗಡ :ನ್ಯಾಯದಗುಂಟೆ ಪಂಚಾಯಿತಿ ಉಪಾಧ್ಯಕ್ಷರ ಆಯ್ಕೆ…!

ನ್ಯಾಯದಗುಂಟೆ ಪಂಚಾಯಿತಿಯ ಉಪಾಧ್ಯಕ್ಷರಾಗಿ ರಾಧಮ್ಮ ಅವಿರೋಧವಾಗಿ ಆಯ್ಕೆ. ಪಾವಗಡ : ತಾಲ್ಲೂಕಿನ ನ್ಯಾಯದಗುಂಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರ ಸ್ಥಾನಕ್ಕೆ ಶನಿವಾರ ನಡೆದ ಚುನಾವಣೆಯಲ್ಲಿ ರಾಧಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಿಂದಿನ ಉಪಾಧ್ಯಕ್ಷರಾದ ಪರಮೇಶ್ವರ್ ನವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಶನಿವಾರ ಚುನಾವಣೆ ನಡೆದು ಉಪಾಧ್ಯಕ್ಷ ಸ್ಥಾನಕ್ಕೆ ರಾಧಮ್ಮ ಶಿವಪ್ಪ ಮಾತ್ರ ನಾಮ ಪತ್ರ ಸಲ್ಲಿಸಿದ್ದು, ಚುನಾವಣಾ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ತಹಶೀಲ್ದಾರ್ ವರದರಾಜ ರವರು ರಾಧಮ್ಮ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು. ಈ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು […]

Continue Reading
IMG 20240918 WA0035

ಪಾವಗಡ : ಅಂಬುಲೆನ್ಸ್ ವ್ಯವಸ್ಥೆಯಿಲ್ಲದೆ ಮೃತ ದೇಹವನ್ನು ಬೈಕ್ ನಲ್ಲಿ ಕೊಂಡೊಯ್ದ ಕುಟುಂಬಸ್ಥರು….!

ವೈ ಎನ್. ಹೊಸಕೋಟೆ : ಸರ್ಕಾರಿ ಆಸ್ಪತ್ರೆ ಯ ದುಸ್ಥಿತಿ ಅಂಬುಲೆನ್ಸ್ ವ್ಯವಸ್ಥೆಯಿಲ್ಲದೆ ಮೃತ ದೇಹವನ್ನು ಬೈಕ್ ನಲ್ಲಿ ಕೊಂಡೊಯ್ದ ಕುಟುಂಬಸ್ಥರು. ಪಾವಗಡ:- ಮೃತ ವ್ಯಕ್ತಿಯ ಮೃತ ದೇಹ ಸಾಗಿಸಲು ಸೂಕ್ತವಾದ ಆಂಬುಲೆನ್ಸ್ ವ್ಯವಸ್ಥೆ ಇಲ್ಲದೆ ಕುಟುಂಬಸ್ಥರು ಮೃತ ವ್ಯಕ್ತಿಯ ಶವವನ್ನು ದ್ವಿಚಕ್ರವಾಹನದಲ್ಲಿ ಕೊಂಡೊಯ್ದ ಹೃದಯ ವಿದ್ರಾಯಕ ಘಟನೆ ತಾಲ್ಲೂಕಿನ ವೈ ಎನ್ ಹೊಸಕೋಟೆಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬುಧವಾರ ನಡೆದಿದೆ. ತಾಲ್ಲೂಕಿನ ದಳವಾಯಿ ಹಳ್ಳಿ ಗ್ರಾಮದ ಹೊನ್ನೂರಪ್ಪ (80) ವಯೋ ಸಹಜ ಕಾಯಿಲೆಯಿಂದ ವೈ ಎನ್ […]

Continue Reading