IMG 20240817 WA0039

ಪಾವಗಡ : ವಿದ್ಯುತ್ ಸ್ಪರ್ಶಿಸಿ ಇಬ್ಬರು ಯುವಕರ ಸಾವು….!

ವಿದ್ಯುತ್ ಸ್ಪರ್ಶಿಸಿ ಒಂದೇ ಕುಟುಂಬದ ಇಬ್ಬರು ಯುವಕರ ಸಾವು. ಪಾವಗಡ : ವಿದ್ಯುತ್ ಸ್ಪರ್ಶಿಸಿ ಒಂದೇ ಕುಟುಂಬದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ ತಾಲ್ಲೂಕಿನ ಟಿ ಎನ್ ಬೆಟ್ಟದ ಹೊರವಲಯದಲ್ಲಿ ನಡೆದಿದೆ. ಟಿ ಎನ್ ಬೆಟ್ಟದ ಅನಿಲ್ ಕುಮಾರ್ (29) ಮತ್ತು ಪುಟ್ಟರಾಜು (35) ಮೃತ ಯುವಕರು. ಟಿ ಎನ್ ಬೆಟ್ಟದ ಸರ್ವೇ ನಂಬರ್ 293 ರ ಮೂರು ಎಕರೆ ಜಮೀನಿನಲ್ಲಿ ಶೇಂಗಾ ಭಿತ್ತನೆ ಮಾಡಿದ್ದು ಕಾಡು ಪ್ರಾಣಿಗಳ ಕಾವಲಿಗೆ ಎಂದು ಪ್ರತಿದಿನ ರಾತ್ರಿ […]

Continue Reading
IMG 20240814 WA0002

ಪಾವಗಡ : ಪ್ರತಿಯೊಬ್ಬರೂ ಪ್ರಶ್ನೆ ಮಾಡುವುದನ್ನು ಕಲಿಯಬೇಕು….!

ಪ್ರತಿಯೊಬ್ಬರೂ ಪ್ರಶ್ನೆ ಮಾಡುವುದನ್ನು ಕಲಿಯಬೇಕು. ಡಾ. ನಾಗಲಕ್ಷ್ಮಿ ಚೌದರಿ ಪಾವಗಡ : ಅಧಿಕಾರಿಗಳು ಸಾರ್ವಜನಿಕರ ಕೆಲಸಗಳನ್ನು ಮಾಡದೆ ಇದ್ದಾಗ ಸಾರ್ವಜನಿಕರು ಅಧಿಕಾರಿಗಳನ್ನು ಪ್ರಶ್ನೆ ಮಾಡುವಂತಹ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾಕ್ಟರ್ ನಾಗಲಕ್ಷ್ಮಿ ಚೌದರಿ ತಿಳಿಸಿದರು. ತಾಲ್ಲೂಕಿನ ಸಿ.ಕೆ. ಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಮಂಗಳವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ […]

Continue Reading
IMG 20240809 WA0000

ಪಾವಗಡ: ಬೆಳಗೆ ಬೆಳೆ ವಿಮೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಪ್ರಕಟ…!

ಶೇಂಗಾ ಬೆಳಗೆ ಬೆಳೆ ವಿಮೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಪ್ರಕಟಣೆ ಪಾವಗಡ : ಶೇಂಗಾ ಬೆಳೆಗೆ ಬೆಳೆ ವಿಮೆ ಅರ್ಜಿ ಸಲ್ಲಿಸಲು 15/8/.2024 ಗುರುವಾರ ಕೊನೆಯ ದಿನಾಂಕ ವಾಗಿರುತ್ತದೆ ಎಂದು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರಾದ ಅಜಯ್ ಕುಮಾರ್ ಆರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಕೃತಿ ವಿಕೋಪ ಹಾಗೂ ಕೀಟ, ರೋಗಭಾದೆಯಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಭದ್ರತೆ ಒದಗಿಸುವ ಉದ್ದೇಶದಿಂದ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ […]

Continue Reading
IMG 20240730 WA0002

ಪಾವಗಡ : ನೀರಾವರಿ ಯೋಜನೆಗಳಿಗೆ ಮೊದಲ ಆದ್ಯತೆ….!

ನೀರಾವರಿ ಯೋಜನೆಗಳಿಗೆ ಮೊದಲ ಆದ್ಯತೆ. ಲೋಕಸಭಾ ಸದಸ್ಯ ಗೋವಿಂದ ಕಾರಜೋಳ ಪಾವಗಡ: ಮಳೆಯ ಮೇಲೆ ಅವಲಂಬಿತವಾಗಿರುವ ಪಾವಗಡ ತಾಲ್ಲೂಕಿಗೆ ನೀರಾವರಿ ಅತ್ಯವಶ್ಯಕ ವೆಂದು ರೈತರಿಗೆ ಅನುಕೂಲವಾಗುವ ರೀತಿ ನೀರಾವರಿ ಯೋಜನೆಗಳನ್ನು ಕೈಗೊಳ್ಳಲಾಗುವುದು ಎಂದು ಲೋಕಸಭಾ ಸದಸ್ಯ ಗೋವಿಂದ ಕಾರಜೋಳ ತಿಳಿಸಿದರು. ಪಟ್ಟಣದಲ್ಲಿ ಸೋಮವಾರ ಜೆಡಿಎಸ್ ಮತ್ತು ಬಿಜೆಪಿ ತಾಲ್ಲೂಕು ಘಟಕ ಆಯೋಜಿಸಿದ್ದ ಅಭಿನಂದನೆ, ಕೃತಜ್ಞತಾ ಸಮಾರಂಭದಲ್ಲಿ ಅವರು ಮಾತನಾಡಿದರು. ಶೀಘ್ರದಲ್ಲಿಯೇ ನೀರಾವರಿ ಯೋಜನೆಗಳ ಕಾಮಗಾರಿ ವೇಗ ಹೆಚ್ಚಿಸುವಂತೆ ಸಂಬಂಧಿಸಿದ ಸಚಿವರು, ಅಧಿಕಾರಿಗಳೊಂದಿಗೆ ಚರ್ಚಿಸಿ ಅನುಕೂಲ ಮಾಡಿಕೊಡಲಾಗುವುದು ಎಂದರು. […]

Continue Reading
IMG 20240723 WA0234

ಪಾವಗಡ : ಅನಧಿಕೃತ ಶಾಲೆಯ ಮೇಲೆ ಕ್ಷೇತ್ರ ಶಿಕ್ಷಣಾಧಿಕಾರಿ ದಾಳಿ….!

ಅನಧಿಕೃತ ಶಾಲೆಯ ಮೇಲೆ ಕ್ಷೇತ್ರ ಶಿಕ್ಷಣಾಧಿಕಾರಿ ದಾಳಿ. ಶಾಲೆ ಮುಚ್ಚುವಂತೆ ಆದೇಶ. ​ಪಾವಗಡ : ಕರ್ನಾಟಕ ಶಿಕ್ಷಣ ಕಾಯಿದೆ 1983 ಸೆಕ್ಷನ್ 30 ಮತ್ತು 31 ಮತ್ತು ಕರ್ನಾಟಕ ಶಿಕ್ಷಣ ಸಂಸ್ಥೆಗಳ 2018 ಅನ್ವಯ ಯಾವುದೇ ಶಾಲೆಯು ಇಲಾಖೆಯಿಂದ ನೋಂದಣಿ, ಅನುಮತಿ ಪಡೆದು ನಂತರ ಶಾಲೆ ಪ್ರಾರಂಭಿಸಬೇಕು ಎಂಬ ನಿಯಮವಿದ್ದರೂ ಸಹ ಪಟ್ಟಣದ ಪರಿ ಏಂಜಲ್ಸ್ ಪೂರ್ವ ಪ್ರಾಥಮಿಕ ಶಾಲೆಯು ಶಿಕ್ಷಣ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ ಶಾಲೆಯನ್ನು ಪ್ರಾರಂಭಿಸಿರುವುದು ಬೆಳಕಿಗೆ ಬಂದಿದೆ. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ […]

Continue Reading
IMG 20240723 WA0001

ಪಾವಗಡ: ತಾಲ್ಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ….!

ತಾಲ್ಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮಾಜಿ ಶಾಸಕ ತಿಮ್ಮರಾಯಪ್ಪ. ಪಾವಗಡ : ಕಾನೂನನ್ನು ಪಾಲಿಸಬೇಕಾದ ಪೊಲೀಸರೇ ಕಾನೂನನ್ನು ಉಲ್ಲಂಘಿಸುವುದು ಎಷ್ಟರಮಟ್ಟಿಗೆ ಸರಿ ಎಂದು ಮಾಜಿ ಶಾಸಕ ತಿಮ್ಮರಾಯಪ್ಪ ಪ್ರಶ್ನಿಸಿ ತಾಲ್ಲೂಕಿನ ಪೊಲೀಸ್ ವ್ಯವಸ್ಥೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ಎಸ್ ಎಸ್ ಕೆ ರಂಗಮಂದಿರದಲ್ಲಿ ತಾಲ್ಲೂಕು ಜೆಡಿಎಸ್ ಘಟಕದ ವತಿಯಿಂದ ಪೊಲೀಸರ ದೌರ್ಜನ್ಯದ ವಿರುದ್ಧವಾಗಿ ಹಮ್ಮಿಕೊಂಡಿದ್ದ ಪ್ರತಿಭಟನೆ ಉದ್ದೇಶಿಸಿ ಅವರು ಮಾತನಾಡಿದರು. ಪಾವಗಡ ತಾಲೂಕಿನಲ್ಲಿ 4 ಪೊಲೀಸ್ ಠಾಣೆಗಳಿದ್ದು, ಪೊಲೀಸ್ ಇಲಾಖೆ ರಾಜಕೀಯ ಹಸ್ತಕ್ಷೇಪದಿಂದ ಜೆಡಿಎಸ್ ಕಾರ್ಯಕರ್ತರು […]

Continue Reading
1705643692571 scaled

ಪಾವಗಡ : ಸರ್ಕಾರದ ಆಸ್ತಿಯ ಭಕ್ಷಕರಿಗೆ – ರಕ್ಷಕರಾದ ತಹಸಿಲ್ದಾರ್‌…!

ಸರ್ಕಾರದ ಅಧಿಕಾರಿಗಳಿಗೆ ಬೇಡವಾದ ಸರ್ಕಾರದ ಆಸ್ತಿ. ಸರ್ಕಾರದ ಸಂಬಳ ರಿಯಲ್‌ ಎಸ್ಟೇಟ್‌ ಮಾಫಿಯಾ ಗೆ ಕೆಲಸ…? ಸರ್ಕಾರದ ಆಸ್ತಿಯ ಭಕ್ಷಕರಿಗೆ ರಕ್ಷಕರಾದ ತಹಸಿಲ್ದಾರ್‌ ಪಾವಗಡ ತಾಲ್ಲೂಕಿನ ವೈ ಎನ್‌ ಹೊಸಕೋಟೆ ಹೋಬಳಿ ಯ ಸರ್ವೇ ನಂಬರ್‌ 249 ಮತ್ತು 250 ರ  ಕೋಟೇಶ್ವರ ಸ್ವಾಮಿ ದೇವಸ್ಥಾನದ ಜಮೀನು ಕಾನೂನು ಬಾಹಿರವಾಗಿ ರಿಯೆಸ್ಟೇಟ್‌ ಮಾಫಿಯಾ ದ ಟಿ.ವಿ ವೆಂಕಟೇಶ್‌, ಎನ್‌ ಆರ್‌ ಅಶ್ವಥ್‌ ಕುಮಾರ್‌ ಮತ್ತು ಇತರರ ಹೆಸರಿಗೆ ಭೂದಾಖಲೆಗಳನ್ನು ಬದಲಾಯಿಸಿಕೊಂಡಿದ್ದಾರೆ.ಈ ಎರಡು ಸರ್ವೇ ನಂಬರ್‌ ಜಮೀನುಗಳ ಭೂದಾಖಲೆಗಳನ್ನು […]

Continue Reading
IMG20240719160510 scaled

Tumkur : ಮಕ್ಕಳು ಕಲಿಕೆಯಲ್ಲಿ ಹಿಂದುಳಿದರೆ ಶಿಕ್ಷಕರೇ ನೇರ ಹೊಣೆ…!

ಮಕ್ಕಳು ಕಲಿಕೆಯಲ್ಲಿ ಹಿಂದುಳಿದರೆ ಶಿಕ್ಷಕರೇ ನೇರ ಹೊಣೆ : ತುಳಸಿ ಮದ್ದಿನೇನಿ ತುಮಕೂರು(ಕ.ವಾ.)ಜು.19: ಮಕ್ಕಳ ಕಲಿಕೆ ಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಅನೇಕ ಯೋಜನೆಗಳನ್ನು ಕೈಗೊಂಡಿದ್ದು, ಅಧಿಕಾರಿಗಳು ಮಕ್ಕಳಿಗೆ ಸವಲತ್ತುಗಳನ್ನು ನೀಡುವುದರೊಂದಿಗೆ ಮೌಲ್ಯಯುತ ಶಿಕ್ಷಣ ನೀಡಬೇಕು. ಮಕ್ಕಳು ಕಲಿಕೆಯಲ್ಲಿ ಹಿಂದುಳಿದರೆ ಶಿಕ್ಷಕರನ್ನೇ ನೇರ ಹೊಣೆ ಮಾಡಿ ಅವರ ವೇತನ ಬಡ್ತಿಯನ್ನು ಕಡಿತಗೊಳಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಕಳೆದ ಜುಲೈ 8 ಹಾಗೂ 9ರಂದು ನಡೆದ […]

Continue Reading
IMG 20240713 WA0009 scaled

ಪಾವಗಡ: ರೈಲು ಬಂತು ರೈಲು….?

ಡಿಸೆಂಬರ್ 30 2026ರ ಒಳಗೆ ರಾಯದುರ್ಗ ತುಮಕೂರು ಮಾರ್ಗದಲ್ಲಿ ರೈಲು ಸಂಚರಿಸುವುದು ಖಚಿತ. ಕೇಂದ್ರ ಸಚಿವ ಸೋಮಣ್ಣ. ಪಾವಗಡ : ಕರ್ನಾಟಕ ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿದ್ದ ಯೋಜನೆಗಳನ್ನು ತಕ್ಷಣವೇ ಕೈಗೆತ್ತುಕೊಳ್ಳುವಂತೆ ಪ್ರಧಾನಿ ಮೋದಿ ತಿಳಿಸಿದ್ದಾರೆ ಎಂದು ಕೇಂದ್ರ ಸಚಿವ ಸೋಮಣ್ಣ ತಿಳಿಸಿದರು. ಪಟ್ಟಣದ ಹೊರವಲಯದಲ್ಲಿ ನಡೆಯುತ್ತಿದ್ದ ರೈಲ್ವೆ ಕಾಮಗಾರಿಯನ್ನು ಪರಿಶೀಲಿಸಿ ಅವರು ಮಾತನಾಡಿದರು. ಈಗಾಗಲೇ ರಾಯದುರ್ಗ ತುಮಕೂರು, ಮತ್ತು ತುಮಕೂರು,ಚಿತ್ರದುರ್ಗ,ದಾವಣಗೆರೆ ರೈಲ್ವೆ ಕಾಮಗಾರಿಗಳಿಗಾಗಿ 700 ಕೋಟಿಗಳನ್ನು ನೀಡಲಾಗಿದೆ ಎಂದು 300 ಕೋಟಿಗೂ ಹೆಚ್ಚು ಹಣವನ್ನು ವಿದ್ಯುದ್ಧೀಕರಣ ಗಾಗಿ […]

Continue Reading
DSC4719 scaled

ತುಮಕೂರು : ನಗರ ಪ್ರದೇಶಗಳಿಗೆ ಸರಿಸಮಾನವಾಗಿ ಗ್ರಾಮೀಣ ಪ್ರದೇಶಗಳನ್ನು ಅಭಿವೃದ್ಧಿಪಡಿಸಬೇಕು….!

ನಗರ ಪ್ರದೇಶಗಳಿಗೆ ಸರಿಸಮಾನವಾಗಿ ಗ್ರಾಮೀಣ ಪ್ರದೇಶಗಳನ್ನು ಅಭಿವೃದ್ಧಿಪಡಿಸಬೇಕು : ಡಾ: ಜಿ. ಪರಮೇಶ್ವರ್ ತುಮಕೂರು(ಕ.ವಾ.)ಜು.11: ಗ್ರಾಮೀಣ ಪ್ರದೇಶಗಳನ್ನು ನಗರ ಪ್ರದೇಶಗಳಿಗೆ ಸರಿಸಮಾನವಾಗಿ ಅಭಿವೃದ್ಧಿಪಡಿಸಿದಾಗ ಮಾತ್ರ ಗಾಂಧೀಜಿ ಅವರ ಗ್ರಾಮ ಸ್ವರಾಜ್ಯದ ಕನಸು ನನಸಾಗುತ್ತದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಹೊರವಲಯದ ಹೆಗ್ಗೆರೆ ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಗುರುವಾರ ನಡೆದ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳಿಗಾಗಿ ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು […]

Continue Reading