IMG 20201006 122149

ಅಕ್ಟೋಬರ್ 15 ರಿಂದ ಸಿನಿಮಾ ಪ್ರದರ್ಶನ ಶುರು…?

ನವದೆಹಲಿ :- ಕೋರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಬಂದ್ ಅಗಿದ್ದ ಸಿನಿಮಾ ಹಾಲ್, ಮಲ್ಟಿಪ್ಲೆಕ್ಸ್ ಗಳನ್ನು ಅಕ್ಟೋಬರ್‌ 15 ರಿಂದ ಆರಂಭಿಸಲು ಕೇಂದ್ರಸರ್ಕಾರ ಹಲವು ಷರತ್ತು ಗಳೊಂದಿಗೆ ಅನುಮತಿ ನೀಡಿದೆ. ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್  ಮಾತನಾಡಿ ಹಲವು ಷರತ್ತು ಗಳೋಂದಿಗೆ ಸಿನಿಮಾ ಪ್ರದರ್ಶನ ಆರಂಭಿಸಲು ಅನುಮತಿ ನೀಡಲಾಗಿದೆ ಎಂದರು.   ಸಿನಿಮಾ ಹಾಲ್ / ಮಲ್ಟಿಪ್ಲೆಕ್ಸ್  ಗಳ ಅಸನ ಸಾಮರ್ಥ್ಯ ದ ಶೇಕಡ 50 ರಷ್ಟು ಜನರಿಗೆ ಮಾತ್ರ ಪ್ರವೇಶ ನೀಡಬೇಕು.  ಸಾಮಾಜಿಕ ಅಂತರ/ ಮಾಸ್ಕ್ […]

Continue Reading
IMG 20200923 213153

ಕೊರೋನಾ: ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನ…!

ಕೊರೋನಾ: ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನ.. ನವ ದೆಹಲಿ: ಕೊರೊನಾ ಮಹಾಮಾರಿಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನರಾಗಿದ್ದಾರೆ, ನವದೆಹಲಿ ಯ ಏಮ್ಸ್ ಆಸ್ಪತ್ರೆ ಯಲ್ಲಿ‌  ಕೊರೋನಾ ಗೆ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದುಂದ  ಸಂಸದರಾಗಿದ್ದ ನಾಲ್ಕು‌ಬಾರಿ ಆಯ್ಕೆಯಾಗಿದ್ದ ,ಸುರೇಶ್ ಅಂಗಡಿ. ಅವರು ನರೇಂದ್ರ ಮೋದಿಯವರ ಸರ್ಕಾರದಲ್ಲಿ‌ ಮೊದಲಬಾರಿಗೆ  ಕೇಂದ್ರ ರೈಲ್ವೆ ಖಾತೆಯ‌ ರಾಜ್ಯ ಸಚಿವರಾಗಿದ್ದರು. ಸಂಸದರ ನಿಧನಕ್ಕೆ ಪ್ರಧಾನಿಗಳು ಸೇರಿದಂತೆ ದೇಶದ ಗಣ್ಯರು ಸಂತಾಪ ಸೂಚಿಸಿದ್ದಾರೆ. ರಾಜ್ಯ ಬಿಜೆಪಿ […]

Continue Reading
IMG 20200917 WA0050

ದೇಶಾದ್ಯಂತ ಜನೌಷಧಿ ಕೇಂದ್ರಗಳ ವಿಸ್ತರಣೆ : ಡಿವಿಎಸ್

2025 ರ ಮಾರ್ಚ್ ವೇಳೆಗೆ ಜನೌಷಧಿ ಕೇಂದ್ರಗಳ ತೆರೆಯಲು ಸರ್ಕಾರದ ಗುರಿ; ಕೇಂದ್ರ ಸಚಿವ ಶ್ರೀ ಡಿ.ವಿ.ಸದಾನಂದ ಗೌಡ ದೇಶಾದ್ಯಂತ ಎಲ್ಲ ಜಿಲ್ಲೆಗಳಿಗೂ ಜನೌಷಧಿ ಕೇಂದ್ರಗಳ ವಿಸ್ತರಣೆ ಸಕಾಲದಲ್ಲಿ ಔಷಧಗಳ ವಿತರಣೆಗೆ ಪೂರೈಕೆ ಸರಣಿ ಮತ್ತು ಸಾಗಾಣೆ ಸೌಕರ್ಯವೃದ್ಧಿಗೆ ಮಾಹಿತಿ ತಂತ್ರಜ್ಞಾನ ಸಮರ್ಪಕ ಬಳಕೆ ನವದೆಹಲಿ, ಸೆಪ್ಟಂಬರ್ 17: 2025ರ ಮಾರ್ಚ್ ವೇಳೆಗೆ ದೇಶಾದ್ಯಂತ 10 ಸಾವಿರದ 500 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ತೆರೆಯುವ ಮಹತ್ವದ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ರಾಸಾಯನಿಕ ಮತ್ತು ರಸಗೊಬ್ಬರ […]

Continue Reading
IMG 20200907 213759

ಹೊಸ ಶಿಕ್ಷಣ ನೀತಿ: 21 ನೇ ಶತಮಾನದ ಭಾರತದ ಸಾಮಾಜಿಕ, ಆರ್ಥಿಕ ಸ್ವರೂಪಕ್ಕೆ ಹೊಸ ದಿಕ್ಕು….!

ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ರಾಜ್ಯಪಾಲರುಗಳ ಸಮಾವೇಶ ಉದ್ದೇಶಿಸಿ ಪ್ರಧಾನಿ ಭಾಷಣ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ರಾಜ್ಯಪಾಲರುಗಳ ಸಮಾವೇಶ ಉದ್ದೇಶಿಸಿ ಭಾಷಣ ಮಾಡಿದರು. ವಿವಿಧ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗೌರ್ನರ್ ಗಳು ಮತ್ತು ಎಲ್ಲ ರಾಜ್ಯಗಳ ವಿಶ್ವವಿದ್ಯಾಲಯಗಳ ಕುಲಪತಿಗಳು ಭಾಗಿಯಾಗಿದ್ದರು. ಭಾರತದ ರಾಷ್ಟ್ರಪತಿಯವರ ಉಪಸ್ಥಿತಿ ಸಮಾವೇಶಕ್ಕೆ ಮೆರಗು ನೀಡಿದೆ. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ದೇಶದ ಆಶೋತ್ತರಗಳನ್ನು ಈಡೇರಿಸಲು ಶಿಕ್ಷಣ ನೀತಿ ಮತ್ತು ಶಿಕ್ಷಣ ವ್ಯವಸ್ಥೆ ಮಹತ್ವದ ಸಾಧನಗಳು ಎಂದು ಹೇಳಿದರು. ಶಿಕ್ಷಣದ ಜವಾಬ್ದಾರಿ ಕೇಂದ್ರ, ರಾಜ್ಯ ಮತ್ತು ಸ್ಥಳೀಯ ಮಟ್ಟದ ಆಡಳಿತದ ಮೇಲಿದ್ದರೂ, ನೀತಿ ನಿರೂಪಣೆಯಲ್ಲಿ ಅವರ ಹಸ್ತಕ್ಷೇಪ ಕನಿಷ್ಠವಾಗಿರಬೇಕು ಎಂದು ಪ್ರಧಾನಿ ಹೇಳಿದರು. ಹೆಚ್ಚು ಹೆಚ್ಚು ಶಿಕ್ಷಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಯೋಜನೆಯಲ್ಲಿ ತೊಡಗಿಸಿಕೊಂಡಾಗ ಶಿಕ್ಷಣ ನೀತಿಯ ಪ್ರಸ್ತುತತೆ ಮತ್ತು ಸಮಗ್ರತೆ ಹೆಚ್ಚಾಗುತ್ತದೆ ಎಂದು ಹೇಳಿದರು. ನಗರ ಮತ್ತು ಹಳ್ಳಿಗಳಲ್ಲಿ ವಾಸಿಸುವ ಲಕ್ಷಾಂತರ ಜನರು ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಂದ ಪ್ರತಿಕ್ರಿಯೆ ಪಡೆದ ನಂತರವೇ ಹೊಸ ಶಿಕ್ಷಣ ನೀತಿಯನ್ನು ರೂಪಿಸಲಾಗಿದೆ ಎಂದು ಅವರು ತಿಳಿಸಿದರು. ಈಗ ಶಿಕ್ಷಕರು ಮತ್ತು ಶಿಕ್ಷಣ ತಜ್ಞರು ಸೇರಿದಂತೆ ಎಲ್ಲರೂ ನೀತಿಯನ್ನು ಪಡೆದುಕೊಂಡಿದ್ದಾರೆ ಎಂದು ಅವರು ಹೇಳಿದರು. ನೀತಿಯನ್ನು ಸಾರ್ವತ್ರಿಕವಾಗಿ ಅಂಗೀಕರಿಸಲಾಗುತ್ತಿದೆ ಮತ್ತು ಹಿಂದಿನ ಶಿಕ್ಷಣ ನೀತಿಯಲ್ಲಿಯೇ ಸುಧಾರಣೆಗಳನ್ನು ಪರಿಚಯಿಸಬೇಕಾಗಿತ್ತೆಂಬ ಭಾವನೆ ಮೂಡಿದೆ ಎಂದು ಪ್ರಧಾನಿ ಹೇಳಿದರು. ನೀತಿಯ ಬಗ್ಗೆ ಆರೋಗ್ಯಪೂರ್ಣ ಚರ್ಚೆ ನಡೆಯುತ್ತಿದೆ ಮತ್ತು ಎನ್‌.ಇ.ಪಿ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವುದು ಮಾತ್ರವೇ ಅಲ್ಲದೆ 21 ನೇ ಶತಮಾನದ ಭಾರತದ ಸಾಮಾಜಿಕ ಮತ್ತು ಆರ್ಥಿಕ ಸ್ವರೂಪಕ್ಕೆ ಹೊಸ ದಿಕ್ಕು ನೀಡುತ್ತಿರುವುದರಿಂದ ಇದು ಅಗತ್ಯವಾಗಿದೆ ಎಂದು ಅವರು ಶ್ಲಾಘಿಸಿದರು. ಈ ನೀತಿಯು ಭಾರತವನ್ನು ಸ್ವಾವಲಂಬಿ ಅಥವಾ ಆತ್ಮನಿರ್ಭರ ಮಾಡುವ ಗುರಿ ಹೊಂದಿದೆ ಎಂದು ಅವರು ಹೇಳಿದರು. ಈ ನೀತಿ ಯುವಕರನ್ನು ತ್ವರಿತವಾಗಿ ಬದಲಾಗುತ್ತಿರುವ ಸನ್ನಿವೇಶದಲ್ಲಿ ಭವಿಷ್ಯಕ್ಕೆ ಸಜ್ಜುಗೊಳಿಸುವ ಗುರಿ ಹೊಂದಿದೆ ಎಂದು ಪ್ರಧಾನಮಂತ್ರಿ ತಿಳಿಸಿದರು. ದೇಶದ ಯುವಜನರನ್ನು ಭವಿಷ್ಯದ ಅವಶ್ಯಕತೆಗಳಾದ ಜ್ಞಾನ ಮತ್ತು ಕೌಶಲ ಎರಡರಲ್ಲೂ ಸಜ್ಜುಗೊಳಿಸುವ ನಿಟ್ಟಿನಲ್ಲಿ ಈ ನೀತಿಯನ್ನು ವಿನ್ಯಾಸಗೊಳಿಸಲಾಗಿದೆ ಎಂದರು. ಹೊಸ ಶಿಕ್ಷಣ ನೀತಿಯು ಓದುವುದಕ್ಕಿಂತ ಹೆಚ್ಚಾಗಿ ಕಲಿಕೆಯ ಮೇಲೆ ಗಮನ ಹರಿಸುತ್ತದೆ ಮತ್ತು ಪಠ್ಯಕ್ರಮವನ್ನು ಮೀರಿ ವಿಮರ್ಶಾತ್ಮಕ ಚಿಂತನೆಗೆ ಒತ್ತು ನೀಡುತ್ತದೆ ಎಂದು ಅವರು ಹೇಳಿದರು. ಪ್ರಕ್ರಿಯೆಗಿಂತ ಭಾವೋದ್ರೇಕಕ್ಕೆ, ಪ್ರಾಯೋಗಿಕತೆ ಮತ್ತು ಕಾರ್ಯಕ್ಷಮತೆಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಅವರು ಹೇಳಿದರು. ಹೊಸ ಶಿಕ್ಷಣ ನೀತಿಯು ಕಲಿಕೆಯ ಫಲಶ್ರುತಿ ಮತ್ತು ಶಿಕ್ಷಕರ ತರಬೇತಿ ಮತ್ತು ಪ್ರತಿ ವಿದ್ಯಾರ್ಥಿಯ ಸಬಲೀಕರಣದತ್ತ ಕೇಂದ್ರೀಕರಿಸುತ್ತದೆ ಎಂದು ಅವರು ಹೇಳಿದರು. ಹೊಸ ಶಿಕ್ಷಣ ನೀತಿ ಭಾರತವನ್ನು 21ನೇ ಶತಮಾನದ ಆರ್ಥಿಕ ಅರಿವಿನ ರಾಷ್ಟ್ರವಾಗಿ ಮಾಡುವ ಗುರಿ ಹೊಂದಿದೆ. ಹೊಸ ಶಿಕ್ಷಣ ನೀತಿ ಕಡಲಾಚೆಯ ಅಗ್ರ ಅಂತರಾಷ್ಟ್ರೀಯ ವಿಶ್ವವಿದ್ಯಾಲಯಗಳ ಕ್ಯಾಂಪಸ್ ಭಾರತದಲ್ಲಿ ನೆಲೆಗೊಳ್ಳುವುದಕ್ಕೆ ಅವಕಾಶ ಕಲ್ಪಿಸಿ ಪ್ರತಿಭಾ ಫಲಾಯನ ತಡೆಯಲಿದೆ. ಹೊಸ ನೀತಿಯ ಕಾರ್ಯಾನುಷ್ಠಾನದ ಕುರಿತು ದೇಶದಲ್ಲಿ ಈಗ ಪ್ರಯತ್ನ ನಡೆದಿದೆ ಎಂದು ಪ್ರಧಾನಿ ಹೇಳಿದರು. ಎಲ್ಲಾ ಆತಂಕಗಳನ್ನು ಪರಿಹರಿಸಲು ಎಲ್ಲಾ ಭಾಧ್ಯಸ್ಥರ ಸಲಹೆಗಳನ್ನು ಮುಕ್ತ ಮನಸ್ಸಿನಿಂದ ಆಲಿಸಲಾಗುತ್ತಿದೆ ಎಂದು ಅವರು ಹೇಳಿದರು. ಈ ಶಿಕ್ಷಣ ನೀತಿಯು ಸರ್ಕಾರದ ಶಿಕ್ಷಣ ನೀತಿಯಲ್ಲ ಆದರೆ ದೇಶದ ಶಿಕ್ಷಣ ನೀತಿಯಾಗಿದೆ ಎಂದು ಹೇಳಿದರು. ರಾಷ್ಟ್ರೀಯ […]

Continue Reading
IMG 20200907 WA0080

ನೂತನ ಶಿಕ್ಷಣ ನೀತಿಯೂ ಇಡೀ ದೇಶಕ್ಕೆ ಹೊಸ ದಿಕ್ಸೂಚಿ….!

ನೂತನ  ಶಿಕ್ಷಣ ನೀತಿಯೂ ಇಡೀ ದೇಶಕ್ಕೆ ಹೊಸ ದಿಕ್ಸೂಚಿ ನೂತನ ಶಿಕ್ಷಣ ನೀತಿ ಜಾರಿಯಿಂದ ಜ್ಞಾನ ಆರ್ಥಿಕತೆಯಲ್ಲಿ ಭಾರತಕ್ಕೆ ಅಗ್ರಸ್ಥಾನ: ಪ್ರಧಾನಿ ನಿರೀಕ್ಷೆ ರಾಜ್ಯಪಾಲರ ಜತೆ ನಮ್ಮೇಳನದಲ್ಲಿ ಭಾಗಿಯಾಗಿದ್ದ ಡಿಸಿಎಂ ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿಯಿಂದ 21ನೇ ಶತಮಾನದಲ್ಲಿ ಭಾರತವು ʼಜ್ಞಾನ ಆರ್ಥಿಕತೆʼಯಲ್ಲಿ ಜಗತ್ತಿನಲ್ಲಿಯೇ ಮುಂಚೂಣಿ ರಾಷ್ಟ್ರವಾಗಿ ಹೊರಹೊಮ್ಮಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳೀದರು. ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ಹಿನ್ನೆಲೆಯಲ್ಲಿ ಸೋಮವಾರ ನವದೆಹಲಿಯಿಂದಲೇ ದೇಶದ ಎಲ್ಲ ರಾಜ್ಯಪಾಲರು ಮತ್ತು ಶಿಕ್ಷಣ […]

Continue Reading
Congress 1

Congress: ಸಾರಥಿ ಯಾರು…? ಕೈ ನಲ್ಲಿ ಕಚ್ಚಾಟ……

 ʻ ಕೈ ʼ ಸಾರಥಿ ಯಾರು…?  ʻ ಕೈ ʼ ನಲ್ಲಿ ಕಚ್ಚಾಟ…… ಕಾಂಗ್ರೆಸ್‌ ಪಕ್ಷದಲ್ಲಿ ಗಾಂಧಿ ಕುಟುಂಬದ ನಾಯಕತ್ವ ಪ್ರಶ್ನಿಸುತ್ತಿರುವುದು ದುರದೃಷ್ಟಕರ – ಸಿದ್ದರಾಮಯ್ಯ ಗಾಂಧಿ ಕುಟುಂಬಕ್ಕೆ ನನ್ನ ನಿಷ್ಟೆ – ಡಿಕೆಶಿ ಬೆಂಗಳೂರು : –   ಎಐಸಿಸಿ ಅಧ್ಯಕ್ಷಸ್ಥಾನಕ್ಕೆ   ಪಕ್ಷದೊಳಗೆ ಆಂತರಿಕ ಕಿತ್ತಾಟ ಶುರುವಾಗಿದೆ ಗಾಂಧಿ ಕುಟುಂಬದ ನಾಯಕತ್ವ ಪ್ರಶ್ನೆ ಮಾಡುವ ಅಂತ ತಲುಪಿದೆ. ಕಳೆದ ಲೊಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯವಾಗಿ ಸೋತ ಬಳಿಕ ಎಐಸಿಸಿ ಅಧ್ಯಕ್ಷರಾಗಿದ್ದ ರಾಹುಲ್‌ ಗಾಂಧಿ ಅವರು ಆ ಸ್ಥಾನಕ್ಕೆ […]

Continue Reading
C202005113496

NRA:ರಾಷ್ಟ್ರೀಯ ನೇಮಕಾತಿ ಸಂಸ್ಥೆ ಸ್ಥಾಪನೆಗೆ ಕೇಂದ್ರ ಅನುಮೋದನೆ..

ಕೇಂದ್ರ ಸರ್ಕಾರದ ಉದ್ಯೋಗ ನೇಮಕಾತಿ ಪ್ರಕ್ರಿಯೆಯಲ್ಲಿ ಸುಧಾರಣೆಗೆ ದಾರಿ ಮಾಡಿಕೊಟ್ಟಿದೆ ಎನ್ಆರ್ಎ: ಸಿಬ್ಬಂದಿ ಆಯ್ಕೆ ಆಯೋಗ (ಎಸ್ಎಸ್ಸಿ), ರೈಲ್ವೆ ನೇಮಕಾತಿ ಮಂಡಳಿಗಳು (ಆರ್ಆರ್ಬಿ) ಮತ್ತು ಬ್ಯಾಂಕಿಂಗ್ ಸಿಬ್ಬಂದಿ ಸೇವಾ ಸಂಸ್ಥೆ (ಐಬಿಪಿಎಸ್) ಗಳ ಮೊದಲ ಹಂತದ ಪರೀಕ್ಷೆಯನ್ನು ಒಳಗೊಳ್ಳುವ ಬಹು-ಏಜೆನ್ಸಿ ಸಂಸ್ಥೆ ಎಸ್ಎಸ್ಸಿ, ಆರ್ಆರ್ಬಿ ಮತ್ತು ಐಬಿಪಿಎಸ್ಗೆ ಮೊದಲ ಹಂತದಲ್ಲಿ ಅಭ್ಯರ್ಥಿಗಳಿಗೆ ಸಾಮಾನ್ಯ ಅರ್ಹತಾ ಪರೀಕ್ಷೆ (ಸಿಇಟಿ)   ಸಿಇಟಿ: ಕಂಪ್ಯೂಟರ್ ಆಧಾರಿತ ಆನ್ಲೈನ್ ಸಾಮಾನ್ಯ ಅರ್ಹತಾ ಪರೀಕ್ಷೆ (ಸಿಇಟಿ) ಪದವೀಧರ, ಹೈಯರ್ ಸೆಕೆಂಡರಿ (12 ನೇ […]

Continue Reading
IMG 20200817 201158

ಖ್ಯಾತ ಗಾಯಕ ಪಂಡಿತ್ ಜಸರಾಜ್ ವಿಧಿವಶ..

ಖ್ಯಾತ ಗಾಯಕ ಪದ್ಮವಿಭೂಷಣ, ಪಂಡಿತ್  ಜಸರಾಜ್  ನಿಧನ. ವಿಶ್ವವಿಖ್ಯಾತ ಭಾರತೀಯ ಶಾಸ್ತ್ರೀಯ ಸಂಗೀತ ಗಾಯಕ ಪಂಡಿತ್ ಜಸ್ ರಾಜ್ ಅಮೆರಿಕದ ನ್ಯೂ ಜರ್ಸಿ ಯಲ್ಲಿ ಇಂದು  ವಿಧಿವಶರಾದರು.ಈ ವರ್ಷದ ಜನವರಿಗೆ 90 ವರ್ಷ ತುಂಬಿತ್ತು.14 ನೇ ವಯಸ್ಸಿನಲ್ಲೇ ಗಾಯಕರಾಗಿ ತರಬೇತಿ ಆರಂಭಿಸಿದ್ದರು. ಇವರ ನಿಧನದಿಂದ  ಭಾರತೀಯ ಸಂಗೀತ ಲೋಕ ಬಡವಾಗಿದೆ. ತಮ್ಮ 80 ವರ್ಷಗಳ ಕಲಾಸೇವೆಯಲ್ಲಿ ಅಸಂಖ್ಯಾತ ಅಭಿಮಾನಿ ಬಳಗವನ್ನು ಗಳಿಸಿದ್ದ ಅವರು ಹಲವಾರು ಗಾಯಕರಿಗೆ ಮಾರ್ಗದರ್ಶಕರಾಗಿದ್ದರು. ಪಂಡಿತ್ ಜಸ್ ರಾಜ್ ಪಂಡಿತ್ ಜಸ್ ರಾಜ್ ರವರು […]

Continue Reading
IMG 20200817 WA0061

ರಾಷ್ಟ್ರೀಯ ಜಲ ನೀತಿ ರೂಪಿಸಲು ಮನವಿ…!

ರಾಷ್ಟ್ರೀಯ ಜಲ ನೀತಿ ರೂಪಿಸಲು ಮನವಿ…! ಅತಿವೃಷ್ಟಿಯನ್ನು ತಡೆಯಲು ನದಿಗಳ ಜೋಡಣೆ ಸಹಕಾರಿ… ನವದೆಹಲಿ : ರಾಷ್ಟ್ರೀಯ ಜಲ ನೀತಿಯನ್ನು ರೂಪಿಸುವುದು ಮತ್ತು ಅತಿವೃಷ್ಟಿಯನ್ನು ತಡೆಯಲು ನದಿಗಳ ಜೋಡಣೆ ಮಾಡುವ ಯೋಜನೆ ರೂಪಿಸುವ ದೃಷ್ಟಿಯಿಂದ ಪಕ್ಷವು ನಿರ್ದಿಷ್ಟ ಕಾರ್ಯಕ್ರಮ ರೂಪಿಸಬೇಕೆಂದು ರಾಜ್ಯದ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ಅವರು ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷರಾದ *ಶ್ರೀ ಜಗತ್ ಪ್ರಕಾಶ್ ನಡ್ಡಾ* ಅವರಿಗೆ ಮನವಿ ಮಾಡಿದರು. ನವದೆಹಲಿಯ ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆದ ಈ ಭೇಟಿಯ […]

Continue Reading
IMG 20200815 204943

ಅಂತರರಾಷ್ಟ್ರೀಯ ಕ್ರಿಕೆಟ್‌ ಗೆ ದೋನಿ ವಿದಾಯ

  ಅಂತರರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ದೋನಿ…. ಭಾರತೀಯ ಕ್ರಿಕೆಟ್ ತಂಡದ ಖ್ಯಾತ ಕ್ರಿಕೆಟ್ ಆಟಗಾರ ಮಹೇಂದ್ರ ಸಿಂಗ್ ದೋನಿ ಇಂದು ಅಂತರರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ್ದಾರೆ. ತಮ್ಮ Instagram ಖಾತೆಯಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ವನ್ನು ಪ್ರಕಟಿಸಿದ್ದಾರೆ. ಎರಡು ಬಾರಿ ವಿಶ್ವಕಪ್ ಗೆದ್ದಿದ್ದ ದೋನಿ, 2004 ರಲ್ಲಿ ಭಾರತ ಕ್ರಿಕೆಟ್ ತಂಡಕ್ಕೆ ಪಾದಾರ್ಪಣೆ ಮಾಡಿದ್ದರು, ಬಾಂಗ್ಲಾದೇಶದ ವಿರುದ್ಧ ಮೊದಲು ಬ್ಯಾಟ್ ಬೀಸಿದ್ದ   ಈ ಆಟಗಾರ ಭಾರತೀಯ ಕ್ರಿಕೆಟ್ ಪ್ರೇಮಿಗಳಿಗೆ ಸಿಕ್ಸರ್ ವೀರ […]

Continue Reading