IMG 20200815 191725

Modi: ಪ್ರತಿಯೊಬ್ಬ ಭಾರತೀಯನಿಗೂ ಹೆಲ್ತ್ ಕಾರ್ಡ್…!

  74ನೇ ಸ್ವಾತಂತ್ರ್ಯ ದಿನ – ಕೆಂಪುಕೋಟೆಯ ವೇದಿಕೆಯಿಂದ ದೇಶವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ ಭಾಷಣದ ಮುಖ್ಯಾಂಶಗಳು: ನನ್ನ ಪ್ರೀತಿಯ ದೇಶವಾಸಿಗಳೇ, ಈ ಮಹೋನ್ನತ ಸಂದರ್ಭದಲ್ಲಿ, ನಿಮ್ಮಲ್ಲರಿಗೂ ಶುಭಾಶಯಗಳು ಮತ್ತು ಅಭಿನಂದನೆಗಳು. ಕೊರೊನಾದ ಈ ಅಸಾಮಾನ್ಯವಾದ ಸಮಯದಲ್ಲಿ, ಕೊರೊನಾ ಯೋಧರು “ಸೇವಾ ಪರಮೋ ಧರ್ಮ’ ಎಂಬ ಮಂತ್ರದೊಂದಿಗೆ ಜೀವಿಸುತ್ತಿದ್ದಾರೆ. ನಮ್ಮ ವೈದ್ಯರು, ದಾದಿಯರು, ಅರೆ ವೈದ್ಯಕೀಯ ಸಿಬ್ಬಂದಿ, ಆಂಬುಲೆನ್ಸ್ ಸಿಬ್ಬಂದಿ, ನೈರ್ಮಲ್ಯ ಕಾರ್ಯಕರ್ತರು, ಪೊಲೀಸರು, ಸೇವಾ ಸಿಬ್ಬಂದಿ ಮತ್ತು ಹಲವು ಜನರು ದಿನವಿಡೀ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಪ್ರಾಕೃತಿಕ ವಿಪತ್ತುಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಆಗಿರುವ ಪ್ರಾಣಹಾನಿ ಬಗ್ಗೆ ದುಃಖ ವ್ಯಕ್ತಪಡಿಸಿದ ಅವರು, ಅಗತ್ಯವಿರುವ ಈ ಸಮಯದಲ್ಲಿ ದೇಶವಾಸಿಗಳಿಗೆ ಸಂಪೂರ್ಣ ಬೆಂಬಲ ನೀಡುವ ಭರವಸೆ ನೀಡಿದರು. ಭಾರತದ ಸ್ವಾತಂತ್ರ್ಯ ಹೋರಾಟ ಇಡೀ ಜಗತ್ತಿಗೆ ಸ್ಫೂರ್ತಿ ನೀಡಿದೆ. ವಿಸ್ತರಣಾವಾದದ ಕಲ್ಪನೆಯು ಕೆಲವು ದೇಶಗಳನ್ನು ಗುಲಾಮರನ್ನಾಗಿ ಮಾಡಿತು. ಭೀಕರ ಯುದ್ಧಗಳ ನಡುವೆಯೂ ಭಾರತ ತನ್ನ ಸ್ವಾತಂತ್ರ್ಯ ಚಳವಳಿಯನ್ನು ಕ್ಷೀಣಿಸಲು ಬಿಡಲಿಲ್ಲ. ಕೋವಿಡ್ ಸಾಂಕ್ರಾಮಿಕದ ನಡುವೆಯೂ, 130 ಕೋಟಿ ಭಾರತೀಯರು ಸ್ವಾವಲಂಬಿಗಳಾಗಬೇಕೆಂಬ ಸಂಕಲ್ಪವನ್ನು ಕೈಗೊಂಡರು, ಮತ್ತು ‘ಆತ್ಮನಿರ್ಭರ ಭಾರತ್’ ಎಂಬುದು ಭಾರತದ ಮನಸ್ಸಿನಲ್ಲಿ ಮೂಡಿದೆ. ಈ ಕನಸು ಸಂಕಲ್ಪವಾಗಿ ಬದಲಾಗುತ್ತಿದೆ. 130 ಕೋಟಿ ಭಾರತೀಯರಿಗೆ ಆತ್ಮನಿರ್ಭರ ಭಾರತ್ ಇಂದು ‘ಮಂತ್ರ’ವಾಗಿ ಮಾರ್ಪಟ್ಟಿದೆ. ನನ್ನ ದೇಶವಾಸಿಗಳ ಸಾಮರ್ಥ್ಯ, ವಿಶ್ವಾಸ ಮತ್ತು ದಕ್ಷತೆಯ ಬಗ್ಗೆ ನನಗೆ ವಿಶ್ವಾಸವಿದೆ. ಒಮ್ಮೆ ನಾವು ಏನನ್ನಾದರೂ ಮಾಡಲು ನಿರ್ಧರಿಸಿದರೆ, ನಾವು ಆ ಗುರಿಯನ್ನು ಸಾಧಿಸುವವರೆಗೆ ವಿರಮಿಸುವುದಿಲ್ಲ. ಇಂದು, ಇಡೀ ಜಗತ್ತು ಪರಸ್ಪರ ಸಂಪರ್ಕಿತವಾಗಿದೆ ಮತ್ತು ಪರಸ್ಪರ ಅವಲಂಬಿತವೂ ಆಗಿದೆ. ಜಾಗತಿಕ ಆರ್ಥಿಕತೆಯಲ್ಲಿ ಭಾರತಕ್ಕೆ ಪ್ರಮುಖ ಪಾತ್ರ ವಹಿಸುವ ಸಮಯ ಇದಾಗಿದೆ. ಇದಕ್ಕಾಗಿ ಭಾರತ ಸ್ವಾವಲಂಬಿಯಾಗಬೇಕು. ಕೃಷಿ, ಬಾಹ್ಯಾಕಾಶದಿಂದ ಆರೋಗ್ಯ ಆರೈಕೆಯವರೆಗೆ ಭಾರತವು ಸ್ವಾವಲಂಬಿ ಭಾರತ ನಿರ್ಮಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಬಾಹ್ಯಾಕಾಶ ಕ್ಷೇತ್ರವನ್ನು ಮುಕ್ತಗೊಳಿಸುವಂತಹ ಕ್ರಮಗಳು ನಮ್ಮ ಯುವಕರಿಗೆ ಅನೇಕ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ ಮತ್ತು ಅವರ ಕೌಶಲ್ಯ ಮತ್ತು ಸಾಮರ್ಥ್ಯವನ್ನು ಹೆಚ್ಚಿಸಲು ಹೆಚ್ಚಿನ ಅವಕಾಶಗಳನ್ನು ಒದಗಿಸುತ್ತದೆ ಎಂಬ ವಿಶ್ವಾಸ ನನಗಿದೆ. ಕೆಲವೇ ತಿಂಗಳುಗಳ ಹಿಂದೆ ನಾವು ಎನ್ -95 ಮಾಸ್ಕ್ ಗಳು, ಪಿಪಿಇ ಕಿಟ್ ಗಳು ಮತ್ತು ವೆಂಟಿಲೇಟರ್ ಗಳನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳುತ್ತಿದ್ದೆವು. ಈಗ ನಾವು ಸಾಂಕ್ರಾಮಿಕದ ಸಮಯದಲ್ಲಿ ಎನ್.05 ಮಾಸ್ಕ್ ಗಳು, ಪಿಪಿಇ ಕಿಟ್ ಗಳು ಮತ್ತು ವೆಂಟಿಲೇಟರ್ ಗಳನ್ನು ತಯಾರಿಸುವುದಷ್ಟೇ ಅಲ್ಲ ಅದನ್ನು ವಿಶ್ವಾದ್ಯಂತ ರಫ್ತು ಸಹ ಮಾಡುತ್ತಿದ್ದೇವೆ. ‘ಮೇಕ್ ಇನ್ ಇಂಡಿಯಾ’ ಜೊತೆಗೆ, ನಾವು ‘ಮೇಕ್ ಫಾರ್ ವರ್ಲ್ಡ್’ ಎಂಬ ಮಂತ್ರವನ್ನೂ ಅಳವಡಿಸಿಕೊಳ್ಳಬೇಕು. 110 ಲಕ್ಷ ಕೋಟಿ ರೂ.ಗಳ ರಾಷ್ಟ್ರೀಯ ಮೂಲಸೌಕರ್ಯ ಪೈಪ್‌ ಲೈನ್ ಯೋಜನೆ ನಮ್ಮ ಒಟ್ಟಾರೆ ಮೂಲಸೌಕರ್ಯ ಯೋಜನೆಗಳಿಗೆ ಉತ್ತೇಜನ ನೀಡುತ್ತದೆ. ನಾವು ಈಗ ಬಹು-ಮಾದರಿ ಸಂಪರ್ಕ ಮೂಲಸೌಕರ್ಯಗಳತ್ತ ಗಮನ ಹರಿಸುತ್ತಿದ್ದೇವೆ. ನಾವು ಇನ್ನು ಮುಂದೆ ಹಗೇವಿನಲ್ಲಿ ಕೆಲಸ ಮಾಡಲು ಸಾಧ್ಯವಿಲ್ಲ; ನಾವು ಸಮಗ್ರ ಮತ್ತು ಅಂತರ್ಗತ ಮೂಲಸೌಕರ್ಯಗಳತ್ತ ಗಮನ ಹರಿಸಬೇಕಾಗಿದೆ. ವಿವಿಧ ವಲಯಗಳ ಸುಮಾರು 7,000 ಯೋಜನೆಗಳನ್ನು ಸಹ ಗುರುತಿಸಲಾಗಿದೆ. ಇದು ಮೂಲಸೌಕರ್ಯ ಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನೇ ಮಾಡಲಾದೆ. […]

Continue Reading
IMG 20200811 215333

ಕೊರೋನಾ: ರಾಜ್ಯಗಳ ಜೊತೆ ಮೋದಿ ಮಾತು…!

*ಕೋವಿಡ್19 ನಿರ್ವಹಣೆ ಕುರಿತಂತೆ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ವೀಡಿಯೋ ಕಾನ್ಫರೆನ್ಸ್; ರಾಜ್ಯದ ಪರಿಸ್ಥಿತಿ ವಿವರಿಸಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್* *ವೈದ್ಯ ವಿದ್ಯಾರ್ಥಿಗಳ ಕಡ್ಡಾಯ ಸೇವೆ ಸಲ್ಲಿಕೆಗೆ ಕ್ರಮ ಕೈಗೊಳ್ಳಲು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ* *ಬೆಂಗಳೂರು, ಆಗಸ್ಟ್ 11, ಮಂಗಳವಾರ* ಕೋವಿಡ್ 19 ನಿರ್ವಹಣೆ ಕುರಿತು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ವೀಡಿಯೋ ಕಾನ್ಫರೆನ್ಸ್ ನಡೆಸಿದರು. ಮಂಗಳವಾರ ನಡೆದ ವೀಡಿಯೋ […]

Continue Reading
Ee1LB 2XkAAA4qj

Air Indid Air craft crash: ಕೇರಳದಲ್ಲಿ ಏರ್‌ ಇಂಡಿಯಾ ವಿಮಾನ ಅಪಘಾತ

 Air Indid Air craft crash : ಕೇರಳದಲ್ಲಿ ಏರ್‌ ಇಂಡಿಯಾ ವಿಮಾನ ವಿಮಾನ ಅಪಘಾತ,ಪೈಲೆಟ್‌ ಸೇರಿದಂತೆ 1 0 ಜನ ಮೃತ ಪಟ್ಟಿದ್ದಾರೆ ಎಂಬ ಮಾಹಿತಿ ಸದ್ಯ ಲಭ್ಯವಾಗುತ್ತಿದೆ.. ಸರ್ಕಾರ ಇನ್ನು ಖಚಿತ ಪಡಿಸಬೇಕಿದೆ. ಕೇರಳ ಮುಖ್ಯಮಂತ್ರಿ ಜೊತೆ ಪ್ರಧಾನಿ ಮೋದಿ ಮಾತುಕತೆ.   ಕೇರಳಾದ ಕೋಜಿಕೋಡ್‌  (Dubai-Kozhikode Air India flight (IX-1344)) ವಿಮಾನ ನಿಲ್ದಾಣದ ರನ್‌ ವೇ ನಲ್ಲಿ ಲ್ಯಾಂಡಿಂಗ್‌ ವೇಳೆ ನೆಲಕ್ಕೆ ಅಪ್ಪಳಿಸಿ ಅಪಘಾತ ಕ್ಕೆ ಸಂಭವಿಸಿದೆ  ಎನ್ನಲಾಗುತ್ತಿದೆ. ವಿಮಾನದಲ್ಲಿ ೫ ಜನ  […]

Continue Reading
EepGO9iUMAAKX Q

ಅಯೋಧ್ಯೆಯಲ್ಲಿ ‘ಶ್ರೀ ರಾಮ ಜನ್ಮಭೂಮಿ ಮಂದಿರ’ದ ಭೂಮಿ ಪೂಜೆ ನೆರವೆರಿಸಿದ ಮೋದಿ

‘ಶ್ರೀ ರಾಮ ಜನ್ಮಭೂಮಿ ಮಂದಿರ‘ ಭೂಮಿ ಪೂಜೆ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ ಪರಸ್ಪರ ಪ್ರೀತಿ ಮತ್ತು ಭ್ರಾತೃತ್ವದ ಅಡಿಪಾಯದ ಮೇಲೆ ಮಂದಿರ ನಿರ್ಮಿಸಬೇಕು ನಾವು ‘ಸಬ್ಕಾ ಸಾಥ್’ ಮೂಲಕ ‘ಸಬ್ಕಾ ವಿಶ್ವಾಸ್’ಗಳಿಸಿ ‘ಸಬ್ಕಾ ವಿಕಾಸ್’ ಸಾಧಿಸಬೇಕಾಗಿದೆ ರಾಮ ಮಂದಿರ, ನಮ್ಮ ಸಂಸ್ಕೃತಿ, ಚಿರಂತನ ನಂಬಿಕೆ, ರಾಷ್ಟ್ರೀಯ ಮನೋಭಾವ ಮತ್ತು ಸಾಮೂಹಿಕ ಇಚ್ಛಾಶಕ್ತಿಯ ಆಧುನಿಕ ಸಂಕೇತವಾಗಲಿದ್ದು, ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ ಮಂದಿರ ನಿರ್ಮಾಣ ಈ ಪ್ರದೇಶದ ಆರ್ಥಿಕತೆಯಲ್ಲಿ ಬದಲಾವಣೆ ತರಲಿದೆ ರಾಮ ಮಂದಿರದ ಕನಸು ನನಸಾಗಲು […]

Continue Reading
EemCeyDVAAQDq V

ಅಯೋಧ್ಯೆ ಶ್ರೀ ರಾಮ ಮಂದಿರ ಭೂಮಿ ಪೂಜೆ ನೇರ ಪ್ರಸಾರ 12 :30 – ಸಪ್ತಸ್ವರ ದಲ್ಲಿ ವೀಕ್ಷಿಸಿ

ಇಂದು ಅಯೋದ್ಯೆಯಲ್ಲಿ  ಶ್ರೀ ರಾಮಮಂದಿರ ಭೂಮಿ ಪೂಜೆ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ 12: 30 ಕ್ಕೆ ಯವರು ನೆರವೇರಿಸಲಿದ್ದು   ಕಾರ್ಯಕ್ರಮವನ್ನು ಎಲ್ಲರೂ ಮನೆಯಲ್ಲಿಯೇ ಕುಳಿತು ನೇರ ಪ್ರಸಾರವನ್ನು ವೀಕ್ಷಿಸಿ….

Continue Reading
IMG 20200728 220025

Modi : ಮೋದಿ ಸರ್ಕಾರದ ವಿರುದ್ಧ ದೇಶವ್ಯಾಪಿ ಪ್ರತಿಭಟನೆ….!

   ಮೋದಿ ಸರ್ಕಾರದ ವಿರುದ್ಧ ದೇಶವ್ಯಾಪಿ ಪ್ರತಿಭಟನೆ….! ಆಗಸ್ಟ್  20ರಿಂದ 26  ರ ವರೆಗೆ ಮೋದಿ ಸರಕಾರದ ಜನ-ವಿರೋಧಿ ನಡೆಗಳ ವಿರುದ್ಧ ದೇಶವ್ಯಾಪಿ ಪ್ರತಿಭಟನಾ ವಾರಾಚರಣೆ ಮಾಡಲು ನಿರ್ಧಾರ. ಕಾರ್ಮಿಕರು, ರೈತರು, ಕೃಷಿಕೂಲಿಕಾರರ ಆಗಸ್ಟ್ 9 ಪ್ರತಿಭಟನೆಗೆ ಬೆಂಬಲ- ಸಿಪಿಐ(ಎಂ) ಕೇಂದ್ರ ಸಮಿತಿ ಕರೆ ದೇಶದಲ್ಲಿ ಕೊವಿಡ್‍-19 ಬಾಧಿತರ ಸಂಖ್ಯೆ ತೀವ್ರವಾಗಿ ಏರುತ್ತಿರುವಾಗ ಅದನ್ನು ಎದುರಿಸುವ ಗಂಭೀರ ಪ್ರಯತ್ನಗಳನ್ನು ನಡೆಸದ ಮೋದಿ ಸರಕಾರ, ಅದಕ್ಕೆ ಬದಲಾಗಿ ಒಂದೆಡೆಯಲ್ಲಿ ದೇಶದ ಸಂಪತ್ತನ್ನು, ಈ ಏಳು ದಶಕಗಳಲ್ಲಿ ದೇಶ ಕಟ್ಟಿ […]

Continue Reading
e154c1e4 0a23 4372 a61c ff7fa605c407 1

ಕೋವಿಡ್ 19: ವಿರುದ್ಧ ಲಸಿಕೆ ಯೋಜನೆ ಪರಿಶೀಲಿಸಿದ : ಮೋದಿ

ಪ್ರಧಾನಿಯವರ ಅಧ್ಯಕ್ಷತೆಯಲ್ಲಿ ಕೋವಿಡ್-19 ವಿರುದ್ಧ ಲಸಿಕೆ ಯೋಜನೆ ಮತ್ತು ಸಿದ್ಧತೆಗಳ ಪರಿಶೀಲನಾ ಸಭೆ ರಾಷ್ಟ್ರೀಯ ಪ್ರಯತ್ನದ ಅಡಿಪಾಯ ರೂಪಿಸುವ ನಾಲ್ಕು ಮಾರ್ಗದರ್ಶಿ ಸೂತ್ರಗಳನ್ನು ಪಟ್ಟಿ ಮಾಡಿದ ಪ್ರಧಾನಿ ಕೋವಿಡ್-19 ವಿರುದ್ಧ ಲಸಿಕೆಯ ಯೋಜನೆ ಮತ್ತು ಸಿದ್ಧತೆಗಳು ಹಾಗೂ ಲಸಿಕೆ ಲಭ್ಯತೆಯ ಬಗ್ಗೆ ಪರಿಶೀಲಿಸಲು ಪ್ರಧಾನಿ ಶ್ರೀ ನರೇಂದ್ರ ಮೋದಿ ಇಂದು ಉನ್ನತ ಮಟ್ಟದ ಸಭೆಯನ್ನು ನಡೆಸಿದರು. ಭಾರತದ ಅಪಾರ ಮತ್ತು ವೈವಿಧ್ಯಮಯ ಜನಸಂಖ್ಯೆಗೆ ಲಸಿಕೆ ಹಾಗು ವೈದ್ಯಕೀಯ ಪೂರೈಕೆ ಸರಪಳಿಗಳ ನಿರ್ವಹಣೆ, ಅಪಾಯದಲ್ಲಿರುವ ಜನಸಂಖ್ಯೆಗೆ ಆದ್ಯತೆ, ಈ ಪ್ರಕ್ರಿಯೆಯಲ್ಲಿ ತೊಡಗಿರುವ ವಿವಿಧ ಏಜೆನ್ಸಿಗಳ ನಡುವಿನ ಸಮನ್ವಯ ಮತ್ತು ಈ ರಾಷ್ಟ್ರೀಯ ಪ್ರಯತ್ನದಲ್ಲಿ ಖಾಸಗಿ ವಲಯ ಮತ್ತು ನಾಗರಿಕ ಸಮಾಜದ ಪಾತ್ರ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಪ್ರಧಾನಿಯವರು ಗಮನಿಸಿದರು. ಈ ರಾಷ್ಟ್ರೀಯ ಪ್ರಯತ್ನದ ಅಡಿಪಾಯವನ್ನು ರೂಪಿಸುವ ನಾಲ್ಕು ಮಾರ್ಗದರ್ಶಿ ಸೂತ್ರಗಳನ್ನು ಪ್ರಧಾನಿಯವರು ವಿವರಿಸಿದರು: ಮೊದಲನೆಯದಾಗಿ, ಹೆಚ್ಚು ಅಪಾಯ ಇರುವ ಗುಂಪುಗಳನ್ನು ಗುರುತಿಸಿ ಶೀಘ್ರ ಲಸಿಕೆ ಹಾಕಲು ಆದ್ಯತೆ ನೀಡಬೇಕು, ಉದಾಹರಣೆಗೆ ವೈದ್ಯರು, ದಾದಿಯರು, ಆರೋಗ್ಯ ಕಾರ್ಯಕರ್ತರು, ವೈದ್ಯಕೀಯೇತರ ಮುಂಚೂಣಿ ಕೋರೊನಾ ಯೋಧರು ಮತ್ತು ದುರ್ಬಲ ಸಾಮಾನ್ಯ ಜನರು; ಎರಡನೆಯದಾಗಿ, “ಎಲ್ಲರಿಗೂ, ಎಲ್ಲೆಡೆಯೂ” ಲಸಿಕೆ ಹಾಕಬೇಕು. ಅಂದರೆ ಲಸಿಕೆ ಪಡೆಯಲು ಯಾವುದೇ ನಿವಾಸ ಸಂಬಂಧಿತ ನಿರ್ಬಂಧಗಳನ್ನು ವಿಧಿಸಬಾರದು; ಮೂರನೆಯದಾಗಿ, ಆ ಲಸಿಕೆಯು ಕೈಗೆಟುಕುವಂತಿರಬೇಕು ಮತ್ತು ಸಾರ್ವತ್ರಿಕವಾಗಿರಬೇಕು – ಯಾವುದೇ ವ್ಯಕ್ತಿಯನ್ನೂ ಬಿಡಬಾರದು; ನಾಲ್ಕನೆಯದಾಗಿ, ಉತ್ಪಾದನೆಯಿಂದ ಲಸಿಕೆ ಹಾಕುವವರೆಗೆ ಸಂಪೂರ್ಣ ಪ್ರಕ್ರಿಯೆಯನ್ನು ತಂತ್ರಜ್ಞಾನದ ಬಳಕೆಯೊಂದಿಗೆ ನೈಜ ಸಮಯದ ಮೇಲ್ವಿಚಾರಣೆಯೊಂದಿಗೆ ನಡೆಸಬೇಕು ಮತ್ತು ಬೆಂಬಲಿಸಬೇಕು. ಎಲ್ಲರಿಗೂ ಹೆಚ್ಚು ಪರಿಣಾಮಕಾರಿಯಾಗಿ ಮತ್ತು ಸಮಯೋಚಿತವಾಗಿ ಲಸಿಕೆ ಹಾಕುವ ರಾಷ್ಟ್ರೀಯ ಪ್ರಯತ್ನದ ಬೆನ್ನೆಲುಬಾಗಿ ಲಭ್ಯವಿರುವ ತಂತ್ರಜ್ಞಾನದ ಆಯ್ಕೆಗಳನ್ನು ಮೌಲ್ಯಮಾಪನ ಮಾಡುವಂತೆ ಪ್ರಧಾನಿಯವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಇಷ್ಟು ದೊಡ್ಡ ಪ್ರಮಾಣದಲ್ಲಿ ಲಸಿಕೆ ಹಾಕುವ ಬಗ್ಗೆ ವಿವರವಾದ ಯೋಜನೆಯನ್ನು ಕೂಡಲೇ ಕೈಗೊಳ್ಳಬೇಕು ಎಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ನಿರ್ದೇಶನ ನೀಡಿದರು. ಲಸಿಕೆ ಅಭಿವೃದ್ಧಿ ಪ್ರಯತ್ನಗಳ ಪ್ರಸ್ತುತ ಪರಿಸ್ಥಿತಿಯನ್ನು ಸಹ ಸಭೆಯಲ್ಲಿ ಪರಿಶೀಲಿಸಲಾಯಿತು. ಕೋವಿಡ್ -19 ವಿರುದ್ಧದ ಲಸಿಕೆಯ ಪ್ರಯತ್ನಗಳಲ್ಲಿ ಸಕ್ರಿಯ ಪಾತ್ರ ವಹಿಸುವ ಭಾರತದ ಬದ್ಧತೆಯನ್ನು ಪ್ರಧಾನಿವರು ಪ್ರಮುಖವಾಗಿ ಒತ್ತಿ ಹೇಳಿದರು.

Continue Reading
Application CHINA

ಚೀನಾದ 59 ಆಪ್ ಗಳ ಬ್ಯಾನ್ ಮಾಡಿದ ಕೇಂದ್ರ…!

ಚೀನಾ ದ 59 ಆಪ್ ಗಳನ್ನು ಬ್ಯಾನ್ ಮಾಡಿ ದ ಕೇಂದ್ರ ನವ ದೆಹಲಿ: – ಚೀನಾ ದ 59 ಆಫ್ ಬ್ಯಾನ್ ಮಾಡಿ ಕೇಂದ್ರ ಸರ್ಕಾರ ಆದೇಶಿಸಿದೆ. ಕುತಂತ್ರಿ ಚೀನಾ ಕ್ಕೆ ಸರಿಯಾದ ಬುದ್ದಿ ಕಲಿಸಿದೆ ಮೋದಿ ಸರ್ಕಾರ ಯಾವ ಯಾವ  App ಬ್ಯಾನ್  ಆಗಿದೆ ಇಲ್ಲಿದೆ ವಿವರ….

Continue Reading
C202006183524

ಬಲಿಷ್ಠ ಗಣಿಗಾರಿಕೆ ಮತ್ತು ಖನಿಜ ಕ್ಷೇತ್ರದಿಂದ ಸ್ವಾವಲಂಬನೆ: ಮೋದಿ

ಕಲ್ಲಿದ್ದಲು ವಾಣಿಜ್ಯ ಗಣಿಗಾರಿಕೆ ಹರಾಜು ಪ್ರಕ್ರಿಯೆಗೆ ಪ್ರಧಾನಿ ಚಾಲನೆ ಸ್ಪರ್ಧಾತ್ಮಕ, ಬಂಡವಾಳ, ಪಾಲ್ಗೊಳ್ಳುವಿಕೆ ಮತ್ತು ತಂತ್ರಜ್ಞಾನಕ್ಕಾಗಿ ಕಲ್ಲಿದ್ದಲು ಮತ್ತು ಗಣಿಗಾರಿಕೆ ಕ್ಷೇತ್ರಗಳು ಸಂಪೂರ್ಣ ಮುಕ್ತ: ಪ್ರಧಾನಿ ಕಲ್ಲಿದ್ದಲು ವಲಯದ ಸುಧಾರಣೆಗಳು ಪೂರ್ವ ಮತ್ತು ಮಧ್ಯ ಭಾರತವನ್ನು, ಬುಡಕಟ್ಟು ಪ್ರದೇಶವನ್ನುಅಭಿವೃದ್ಧಿಯ ಆಧಾರ ಸ್ತಂಭಗಳಾಗಿ   ಪರಿವರ್ತನೆ.  ಬಲಿಷ್ಠ ಗಣಿಗಾರಿಕೆ ಮತ್ತು ಖನಿಜ ಕ್ಷೇತ್ರದಿಂದ ಸ್ವಾವಲಂಬನೆ: ಪ್ರಧಾನಿ ನರೇಂದ್ರ ಮೋದಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 41 ಕಲ್ಲಿದ್ದಲು ಘಟಕಗಳ ವಾಣಿಜ್ಯ ಗಣಿಗಾರಿಕೆಯ ಹರಾಜು ಪ್ರಕ್ರಿಯೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಆತ್ಮ ನಿರ್ಭರ ಭಾರತ ಅಭಿಯಾನದ ಅಡಿಯಲ್ಲಿ ಭಾರತ ಸರ್ಕಾರ ಘೋಷಿಸಿದ ಸರಣಿ ಪ್ರಕಟಣೆಗಳ ಭಾಗವಾಗಿತ್ತು. ಈ ಕಲ್ಲಿದ್ದಲು ಗಣಿಗಳ ಹರಾಜು ಪ್ರಕ್ರಿಯೆಯನ್ನು ಕಲ್ಲಿದ್ದಲು ಸಚಿವಾಲಯವು ಎಫ್‌ಐಸಿಸಿಐ ಸಹಯೋಗದೊಂದಿಗೆ ಪ್ರಾರಂಭಿಸಿದೆ. ಕಲ್ಲಿದ್ದಲು ಗಣಿಗಳ ಹಂಚಿಕೆಗಾಗಿ ಎರಡು ಹಂತದ ಎಲೆಕ್ಟ್ರಾನಿಕ್ ಹರಾಜು ಪ್ರಕ್ರಿಯೆಯನ್ನು ಅಳವಡಿಸಿಕೊಳ್ಳಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿ, ಭಾರತವು ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಹೊರಬರುತ್ತದೆ ಮತ್ತು ರಾಷ್ಟ್ರವು ಈ ಬಿಕ್ಕಟ್ಟನ್ನು ಒಂದು ಅವಕಾಶವಾಗಿ ಪರಿವರ್ತಿಸುತ್ತದೆ. ಈ ಬಿಕ್ಕಟ್ಟು ಭಾರತಕ್ಕೆ ಸ್ವಾವಲಂಬಿಯಾಗುವ ಪಾಠವನ್ನು ಕಲಿಸಿದೆ ಎಂದರು. ಆತ್ಮ ನಿರ್ಭರ ಭಾರತ ಎಂದರೆ ಆಮದಿನ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವುದು ಮತ್ತು ಆಮದಿನ ಮೇಲಿನ ವಿದೇಶಿ ಕರೆನ್ಸಿಯನ್ನು ಉಳಿಸುವುದಾಗಿದೆ ಎಂದು ಅವರು ಹೇಳಿದರು. ಭಾರತವು ದೇಶೀಯವಾಗಿ ಸಂಪನ್ಮೂಲಗಳನ್ನು ಅಭಿವೃದ್ಧಿಪಡಿಸುತ್ತದೆ, ಇದರಿಂದಾಗಿ ದೇಶವು ಆಮದನ್ನು ಅವಲಂಬಿಸಬೇಕಾಗುವುದಿಲ್ಲ. ಇದರರ್ಥ ನಾವು ಈಗ ಆಮದು ಮಾಡಿಕೊಳ್ಳುವ ಸರಕುಗಳ ಅತಿದೊಡ್ಡ ರಫ್ತುದಾರರಾಗುತ್ತೇವೆ ಎಂದರು. ಇದನ್ನು ಸಾಧಿಸಲು, ನಿರ್ದಿಷ್ಟ ವಲಯದಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡಲು ಪ್ರತಿಯೊಂದು ವಲಯ, ಪ್ರತಿ ಉತ್ಪನ್ನ, ಪ್ರತಿ ಸೇವೆಯನ್ನು ಗಮನದಲ್ಲಿಟ್ಟುಕೊಂಡು ಸಮಗ್ರವಾಗಿ ಕೆಲಸ ಮಾಡಬೇಕು ಎಂದು ಪ್ರಧಾನಿ ಹೇಳಿದರು. ಇಂದು ಇಟ್ಟಿರುವ ಪ್ರಮುಖ ಹೆಜ್ಜೆಯು ಭಾರತವನ್ನು ಇಂಧನ ಕ್ಷೇತ್ರದಲ್ಲಿ ಸ್ವಾವಲಂಬಿಯನ್ನಾಗಿ ಮಾಡುತ್ತದೆ ಎಂದು ಅವರು ಹೇಳಿದರು. ಇದು ಕಲ್ಲಿದ್ದಲು ಗಣಿಗಾರಿಕೆ ಕ್ಷೇತ್ರಕ್ಕೆ ಸಂಬಂಧಿಸಿದ ಸುಧಾರಣೆಗಳ ಅನುಷ್ಠಾನವನ್ನು ಮಾತ್ರವಲ್ಲದೆ ಯುವಜನರಿಗೆ ಲಕ್ಷಾಂತರ ಉದ್ಯೋಗಾವಕಾಶಗಳನ್ನೂ ಸೃಷ್ಟಿಸುತ್ತದೆ ಎಂದರು. ಇಂದು ನಾವು ವಾಣಿಜ್ಯ ಕಲ್ಲಿದ್ದಲು ಗಣಿಗಾರಿಕೆಯ ಹರಾಜನ್ನು ಪ್ರಾರಂಭಿಸುವುದರೊಂದಿಗೆ, ಕಲ್ಲಿದ್ದಲು ಕ್ಷೇತ್ರವನ್ನು ದಶಕಗಳ ಲಾಕ್‌ಡೌನ್‌ನಿಂದ ಮುಕ್ತಗೊಳಿಸುತ್ತಿದ್ದೇವೆ ಎಂದು ಅವರು ಹೇಳಿದರು. ವಿಶ್ವದಲ್ಲಿಯೇ ನಾಲ್ಕನೇ ಅತಿದೊಡ್ಡ ಕಲ್ಲಿದ್ದಲು ಸಂಪತ್ತು ಹೊಂದಿರುವ ಮತ್ತು ಎರಡನೇ ಅತಿದೊಡ್ಡ ಉತ್ಪಾದಕ ರಾಷ್ಟ್ರವಾಗಿರುವ ಭಾರತವು ಎರಡನೇ ಅತಿದೊಡ್ಡ ಕಲ್ಲಿದ್ದಲು ಆಮದುದಾರನೂ ಆಗಿರುವ ವ್ಯಂಗ್ಯದ ಬಗ್ಗೆ ಅವರು ಒತ್ತಿ ಹೇಳಿದರು. ಈ ಪರಿಸ್ಥಿತಿ ದಶಕಗಳಿಂದಲೂ ಇದೆ ಮತ್ತು ಕಲ್ಲಿದ್ದಲು ವಲಯವನ್ನು ಸ್ವಂತಕ್ಕೆ ಹಾಗೂ ಸ್ವಂತಕ್ಕಲ್ಲದ ಉಪಯೋಗಗಳ ಗಣಿಗಳ ಜಾಲರಿಯಲ್ಲಿ ಸಿಕ್ಕಿಸಲಾಗಿದೆ ಎಂದು ಅವರು ಹೇಳಿದರು. ಈ ಕ್ಷೇತ್ರವನ್ನು ಸ್ಪರ್ಧೆಯಿಂದ ಹೊರಗಿಟ್ಟಿರುವುದು ಮತ್ತು ಪಾರದರ್ಶಕತೆ ಇಲ್ಲದಿರುವುದು ದೊಡ್ಡ ಸಮಸ್ಯೆಯಾಗಿದೆ. ಇದರಿಂದಾಗಿ, ಕಲ್ಲಿದ್ದಲು ಕ್ಷೇತ್ರಕ್ಕೆ ಹೂಡಿಕೆಯ ಕೊರತೆಯಿದೆ ಮತ್ತು ಅದರ ದಕ್ಷತೆಯೂ ಪ್ರಶ್ನಾರ್ಹವಾಗಿದೆ ಎಂದು ಅವರು ಹೇಳಿದರು. ಕಲ್ಲಿದ್ದಲು ಕ್ಷೇತ್ರಕ್ಕೆ ಉತ್ತೇಜನ ನೀಡಲು 2014 ರಲ್ಲಿ ಕಲ್ಲಿದ್ದಲು ಲಿಂಕೇಜ್ ಪರಿಚಯಿಸಲಾಯಿತು ಎಂದು ಪ್ರಧಾನಿ ಹೇಳಿದರು. ಹೆಚ್ಚಿನ ಸ್ಪರ್ಧೆ, ಹೂಡಿಕೆ, ಭಾಗವಹಿಸುವಿಕೆ ಮತ್ತು ತಂತ್ರಜ್ಞಾನಕ್ಕಾಗಿ ಕಲ್ಲಿದ್ದಲು ಮತ್ತು ಗಣಿಗಾರಿಕೆ ಕ್ಷೇತ್ರವನ್ನು ಸಂಪೂರ್ಣವಾಗಿ ಮುಕ್ತಗೊಳಿಸಲು ಭಾರತ ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಅವರು ಹೇಳಿದರು. ಖಾಸಗಿ ಗಣಿಗಾರಿಕೆ ಕ್ಷೇತ್ರದಲ್ಲಿ ಹೊಸಬರು ಹಣಕಾಸಿನ ಸಮಸ್ಯೆಯನ್ನು ಎದುರಿಸದಂತೆ ನೋಡಿಕೊಳ್ಳಲಾಗಿದೆ ಎಂದು ಅವರು ಹೇಳಿದರು. ಬಲವಾದ ಗಣಿಗಾರಿಕೆ ಮತ್ತು ಖನಿಜ ವಲಯವಿಲ್ಲದೆ ಸ್ವಾವಲಂಬನೆ ಸಾಧ್ಯವಿಲ್ಲ. ಏಕೆಂದರೆ ಇವೆರಡೂ ನಮ್ಮ ಆರ್ಥಿಕತೆಯ ಪ್ರಮುಖ ಆಧಾರ ಸ್ತಂಭಗಳಾಗಿವೆ ಎಂದು ಅವರು ಒತ್ತಿ ಹೇಳಿದರು. ಈ ಸುಧಾರಣೆಗಳ ನಂತರ ಕಲ್ಲಿದ್ದಲು ಉತ್ಪಾದನೆ ಮತ್ತು ಇಡೀ ಕಲ್ಲಿದ್ದಲು ವಲಯವು ಸ್ವಾವಲಂಬಿಯಾಗಲಿದೆ ಎಂದು ಪ್ರಧಾನಿ ಹೇಳಿದರು. ಈಗ ಕಲ್ಲಿದ್ದಲು ಮಾರುಕಟ್ಟೆಯನ್ನು ಮುಕ್ತಗೊಳಿಸಲಾಗಿದೆ, ಆದ್ದರಿಂದ, ಯಾವುದೇ ವಲಯವು ಅವರ ಅಗತ್ಯಗಳಿಗೆ ಅನುಗುಣವಾಗಿ ಕಲ್ಲಿದ್ದಲನ್ನು ಖರೀದಿಸಬಹುದು. ಈ ಸುಧಾರಣೆಗಳಿಂದ ಕಲ್ಲಿದ್ದಲು ಕ್ಷೇತ್ರಕ್ಕೆ ಮಾತ್ರವಲ್ಲದೆ ಉಕ್ಕು, ಅಲ್ಯೂಮಿನಿಯಂ, ರಸಗೊಬ್ಬರ ಮತ್ತು ಸಿಮೆಂಟ್‌ನಂತಹ ಇತರ ಕ್ಷೇತ್ರಗಳಿಗೂ ಪ್ರಯೋಜನವಾಗುತ್ತವೆ. ಇದು ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸಲು ಸಹ ಸಹಾಯ ಮಾಡುತ್ತದೆ ಎಂದು ಪ್ರಧಾನಿ ತಿಳಿಸಿದರು. ಕಬ್ಬಿಣ, ಬಾಕ್ಸೈಟ್ ಮತ್ತಿತರ ಖನಿಜಗಳು ಕಲ್ಲಿದ್ದಲು ನಿಕ್ಷೇಪಕ್ಕೆ ಬಹಳ ಹತ್ತಿರದಲ್ಲಿರುವುದರಿಂದ ಖನಿಜ ಕ್ಷೇತ್ರದಲ್ಲಿನ ಸುಧಾರಣೆಗಳು ಕಲ್ಲಿದ್ದಲು ಗಣಿಗಾರಿಕೆ ಸುಧಾರಣೆಯಿಂದ ಬಲವನ್ನು ಪಡೆದಿವೆ ಎಂದು ಪ್ರಧಾನಿ ಹೇಳಿದರು. ವಾಣಿಜ್ಯ ಕಲ್ಲಿದ್ದಲು ಗಣಿಗಾರಿಕೆಗಾಗಿ ಇಂದು ಹರಾಜಿನ ಆರಂಭವು ಎಲ್ಲಾ ಪಾಲುದಾರ ಕೈಗಾರಿಕೆಗಳಿಗೂ ಗೆಲುವಿನ ಸನ್ನಿವೇಶವಾಗಿದೆ ಎಂದು ಅವರು ಹೇಳಿದರು. ರಾಜ್ಯ ಸರ್ಕಾರಗಳಿಗೆ ಹೆಚ್ಚಿನ ಆದಾಯ ಸಿಗಲಿದೆ. ದೇಶದಲ್ಲಿ ಬೃಹತ್ ಉದ್ಯೋಗ ದೊರೆಯಲಿದೆ. ಇದು ಪ್ರತಿ ವಲಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ ಎಂದರು. ಕಲ್ಲಿದ್ದಲು ಕ್ಷೆತ್ರದಲ್ಲಿ ಸುಧಾರಣೆಗಳನ್ನು ಜಾರಿಗೆ ತರುವಾಗ, ಪರಿಸರ ಸಂರಕ್ಷಣೆಯ ಭಾರತದ ಬದ್ಧತೆಯು ದುರ್ಬಲಗೊಳ್ಳುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲಾಗಿದೆ ಎಂದು ಪ್ರಧಾನಿ ಹೇಳಿದರು. “ಕಲ್ಲಿದ್ದಲಿನಿಂದ ಅನಿಲವನ್ನು ತಯಾರಿಸಲು ಇತ್ತೀಚಿನ ತಂತ್ರಜ್ಞಾನವನ್ನು ಪರಿಚಯಿಸಬಹುದು ಮತ್ತು ಕಲ್ಲಿದ್ದಲಿನ ಅನಿಲೀಕರಣದಂತಹ ಕ್ರಮಗಳೊಂದಿಗೆ ಪರಿಸರವನ್ನು ಸಂರಕ್ಷಿಸಲಾಗುವುದು. ಕಲ್ಲಿದ್ದಲು ಅನಿಲವನ್ನು ಸಾರಿಗೆ ಮತ್ತು ಅಡುಗೆಯಲ್ಲಿ ಬಳಸಲಾಗುವುದು ಮತ್ತು ಇದು ಯೂರಿಯಾ ಮತ್ತು ಉಕ್ಕು ಉತ್ಪಾದನಾ ಕೈಗಾರಿಕೆಗಳನ್ನು ಉತ್ತೇಜಿಸುತ್ತದೆ.” ಎಂದು ಅವರು ಹೇಳಿದರು. 2030 ರ ವೇಳೆಗೆ ಸುಮಾರು 100 ಮಿಲಿಯನ್ ಟನ್ ಕಲ್ಲಿದ್ದಲನ್ನು ಅನಿಲೀಕರಣಗೊಳಿಸುವ ಗುರಿಯನ್ನು ಸರ್ಕಾರ ಹೊಂದಿದೆ ಮತ್ತು ಈ ಉದ್ದೇಶಕ್ಕಾಗಿ ನಾಲ್ಕು ಯೋಜನೆಗಳನ್ನು ಗುರುತಿಸಲಾಗಿದೆ. ಇದಕ್ಕಾಗಿ ಸುಮಾರು 20 ಸಾವಿರ ಕೋಟಿ ರೂಪಾಯಿಗಳನ್ನು ಹೂಡಿಕೆ ಮಾಡಲಾಗುವುದು ಎಂದು ಪ್ರಧಾನಿ ಹೇಳಿದರು. ಈ ಕಲ್ಲಿದ್ದಲು ಕ್ಷೇತ್ರದ ಸುಧಾರಣೆಗಳು ಪೂರ್ವ ಮತ್ತು ಮಧ್ಯ ಭಾರತವನ್ನು, ನಮ್ಮ ಬುಡಕಟ್ಟು ಪ್ರದೇಶವನ್ನು, ಅಭಿವೃದ್ಧಿಯ ಆಧಾರ ಸ್ತಂಭಗಳನ್ನಾಗಿ ಮಾಡುತ್ತದೆ ಎಂದು ಪ್ರಧಾನಿ ಹೇಳಿದರು. ಈ ಪ್ರದೇಶಗಳು ಹೆಚ್ಚಿನ ಸಂಖ್ಯೆಯ ಮಹತ್ವಾಕಾಂಕ್ಷಿ ಜಿಲ್ಲೆಗಳನ್ನು ಹೊಂದಿವೆ ಮತ್ತು ಇವು ಅಪೇಕ್ಷಿತ ಮಟ್ಟದ ಪ್ರಗತಿ ಮತ್ತು ಸಮೃದ್ಧಿಯನ್ನು ಕಾಣಲು ಸಾಧ್ಯವಾಗಿಲ್ಲ ಎಂದು ಅವರು ಹೇಳಿದರು. ದೇಶದ 16 ಮಹತ್ವಾಕಾಂಕ್ಷಿ ಜಿಲ್ಲೆಗಳಲ್ಲಿ ಅಪಾರ ಪ್ರಮಾಣದ ಕಲ್ಲಿದ್ದಲು ಸಂಗ್ರಹವಿದೆ. ಆದರೆ ಈ ಪ್ರದೇಶಗಳ ಜನರಿಗೆ ಇದರ ಸಾಕಷ್ಟು ಲಾಭ ದೊರೆತಿಲ್ಲ. ಈ ಸ್ಥಳಗಳಿಂದ ಜನರು ಉದ್ಯೋಗಕ್ಕಾಗಿ ದೂರದ ನಗರಗಳಿಗೆ ವಲಸೆ ಹೋಗಬೇಕಾಗುತ್ತದೆ ಎಮದು ಅವರು ಹೇಳಿದರು. ವಾಣಿಜ್ಯ ಗಣಿಗಾರಿಕೆಯ ಬಗ್ಗೆ ಕೈಗೊಂಡ ಕ್ರಮಗಳಿಂದಾಗಿ ಸ್ಥಳೀಯ ಜನರಿಗೆ ತಮ್ಮ ಮನೆಗಳ ಬಳಿಯೇ ಉದ್ಯೋಗ ನೀಡುವ ಮೂಲಕ ಪೂರ್ವ ಮತ್ತು ಮಧ್ಯ ಭಾರತಕ್ಕೆ ಬಹಳ ಸಹಾಯಕವಾಗುತ್ತವೆ ಎಂದು ಪ್ರಧಾನಿ ಹೇಳಿದರು. ಕಲ್ಲಿದ್ದಲು ಹೊರತೆಗೆಯುವಿಕೆ ಮತ್ತು ಸಾರಿಗೆಗಾಗಿ ಮೂಲಸೌಕರ್ಯಗಳನ್ನು ಸೃಷ್ಟಿಸಲು 50 ಸಾವಿರ ಕೋಟಿ ರೂಪಾಯಿಗಳನ್ನು ಖರ್ಚು ಮಾಡುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ, ಇದು ಉದ್ಯೋಗಾವಕಾಶಗಳನ್ನು ಸಹ ಸೃಷ್ಟಿಸುತ್ತದೆ ಎಂದು ಅವರು ಹೇಳಿದರು. ಬುಡಕಟ್ಟು ಜನಾಂಗದವರ ಜೀವನವನ್ನು ಸುಗಮಗೊಳಿಸುವಲ್ಲಿ ಕಲ್ಲಿದ್ದಲು ಕ್ಷೇತ್ರದ ಸುಧಾರಣೆಗಳು ಮತ್ತು ಹೂಡಿಕೆಯು ದೊಡ್ಡ ಪಾತ್ರ ವಹಿಸುತ್ತದೆ ಎಂದು ಪ್ರಧಾನಿ ಹೇಳಿದರು. ಕಲ್ಲಿದ್ದಲು ಉತ್ಪಾದನೆಯ ಮೂಲಕ ಬರುವ ಹೆಚ್ಚುವರಿ ಆದಾಯವನ್ನು ಈ ಪ್ರದೇಶದ ಸಾರ್ವಜನಿಕ ಕಲ್ಯಾಣ ಯೋಜನೆಗಳಿಗೆ ಬಳಸಲಾಗುತ್ತದೆ. ಈ ಪ್ರದೇಶದ ಜಿಲ್ಲೆಗಳು ಖನಿಜ ನಿಧಿಯಿಂದ ಸಹಾಯ ಪಡೆಯುವುದು ಮುಂದುವರೆಯುತ್ತದೆ, ಇದರಿಂದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಗತ್ಯ ಸೌಲಭ್ಯಗಳ ಅಭಿವೃದ್ಧಿಗೆ ಪ್ರಮುಖ ಭಾಗವನ್ನು ಬಳಸಿಕೊಳ್ಳಲಾಗುವುದು ಎಂದು ಅವರು ಹೇಳಿದರು. ಆರ್ಥಿಕ ಚಟುವಟಿಕೆಗಳು ವೇಗವಾಗಿ ಸಹಜ ಸ್ಥಿತಿಗೆ ಮರಳುತ್ತಿರುವ ಸಮಯದಲ್ಲಿ ಈ ಹರಾಜು ಪ್ರಕ್ರಿಯೆ ನಡೆಯುತ್ತಿದೆ ಎಂದು ಪ್ರಧಾನಿ ಹೇಳಿದರು. ಬಳಕೆ ಮತ್ತು ಬೇಡಿಕೆಯು ಕೋವಿಡ್ -19 ಕ್ಕಿಂತ ಮೊದಲಿನ ಮಟ್ಟವನ್ನು ವೇಗವಾಗಿ ತಲುಪುತ್ತಿದೆ. ವಿದ್ಯುತ್ ಬಳಕೆ, ಪೆಟ್ರೋಲಿಯಂ ಉತ್ಪನ್ನಗಳ ಬೇಡಿಕೆ, ಇ ವೇ ಬಿಲ್‌ಗಳು, ಟೋಲ್ ಸಂಗ್ರಹ, ರೈಲ್ವೆ ಸರಕು ಸಾಗಣೆ, ಡಿಜಿಟಲ್ ಚಿಲ್ಲರೆ ವಹಿವಾಟು ಮುಂತಾದವು ಕೋವಿಡ್ ಪೂರ್ವ ಮಟ್ಟವನ್ನು ವೇಗವಾಗಿ ತಲುಪುತ್ತಿವೆ ಎಂದರು. ಗ್ರಾಮೀಣ ಆರ್ಥಿಕತೆಯೂ ಸುಧಾರಿಸುತ್ತಿದೆ ಎಂದು ಅವರು ಹೇಳಿದರು. ಈ ವರ್ಷ ಖಾರಿಫ್ ಕೃಷಿ ಬೆಳೆ ಪ್ರದೇಶ ಮತ್ತು ಗೋಧಿ ಸಂಗ್ರಹವೂ ಹೆಚ್ಚಾಗಿದೆ ಎಂದು ಅವರು ಹೇಳಿದರು. ಇದರರ್ಥ ಹೆಚ್ಚಿನ ಹಣ ರೈತರ ಜೇಬಿಗೆ ಹೋಗಿದೆ. ಈ ಎಲ್ಲಾ ಸೂಚಕಗಳು ಭಾರತದ ಆರ್ಥಿಕತೆಯು ಮತ್ತೆ ಪುಟಿದೇಳಲು ಮತ್ತು ಮುಂದೆ ಸಾಗಲು ಸಿದ್ಧವಾಗಿದೆ ಎಂಬುದನ್ನು ಸೂಚಿಸುತ್ತವೆ ಎಂದರು. ಈ ಹಿಂದೆ ಭಾರತವು ಈಗಿರುವುದಕ್ಕಿಂತ ದೊಡ್ಡ ಬಿಕ್ಕಟ್ಟುಗಳಿಂದ ಹೊರಬಂದಿದ್ದು, ಈ ಬಿಕ್ಕಟ್ಟಿನಿಂದಲೂ ಹೊರಬರಲಿದೆ ಎಂದು ಪ್ರಧಾನಿ ವಿಶ್ವಾಸ ವ್ಯಕ್ತಪಡಿಸಿದರು. ಭಾರತವು ಸ್ವಾವಲಂಬಿಯಾಗುತ್ತದೆ. ಭಾರತದ ಯಶಸ್ಸು ಮತ್ತು ಬೆಳವಣಿಗೆ ನಿಶ್ಚಿತ ಎಂದು ಪ್ರಧಾನಿ ವಿಶ್ವಾಸ ವ್ಯಕ್ತಪಡಿಸಿದರು. ಕೆಲವು ವಾರಗಳ ಹಿಂದೆಯಷ್ಟೇ ಎನ್ -95 ಮುಖಗವಸುಗಳು, ಕೊರೊನಾ ಪರೀಕ್ಷಾ ಕಿಟ್‌ಗಳು, ಪಿಪಿಇ ಮತ್ತು ವೆಂಟಿಲೇಟರ್‌ಗಳ ಹೇಗೆ ಆಮದಿನ ಮೂಲಕ ಪೂರೈಕೆಯಾಗುತ್ತಿದ್ದವು ಎಂಬುದನ್ನು ಅವರು ಉಲ್ಲೇಖಿಸಿದರು. ಶೀಘ್ರದಲ್ಲೇ ನಾವು ವೈದ್ಯಕೀಯ ಉತ್ಪನ್ನಗಳ ಪ್ರಮುಖ ರಫ್ತುದಾರರಾಗುತ್ತೇವೆ ಎಂಬ ವಿಶ್ವಾಸವನ್ನೂ ಅವರು ವ್ಯಕ್ತಪಡಿಸಿದರು. ನಾವು ಸ್ವಾವಲಂಬಿಗಳಾಗಲು ತಮ್ಮ ನಂಬಿಕೆ ಮತ್ತು ಸ್ಥೈರ್ಯವನ್ನು ಉಳಿಸಿಕೊಳ್ಳಬೇಕು ಎಂದು ಅವರು ಜನರಿಗೆ ಮನವಿ ಮಾಡಿದರು.

Continue Reading
H2020060188616

ಭಾರತ ಐದು ವರ್ಷಗಳೊಳಗೆ ಎಲೆಕ್ಟ್ರಿಕ್ ವಾಹನಗಳ ಹಬ್‌ ಹಾಗಲಿದೆ…!

ಭಾರತ ಐದು ವರ್ಷಗಳೊಳಗೆ ಎಲೆಕ್ಟ್ರಿಕ್ ವಾಹನಗಳ ತಯಾರಿಕಾ ತಾಣವಾಗಲಿದೆ : ಕೇಂದ್ರ ರಸ್ತೆ ಸಾರಿಗೆ ಸಚಿವ ಶ್ರೀ ನಿತಿನ್ ಗಡ್ಕರಿ ನವದೆಹಲಿ :- ಭಾರತ ಮುಂದಿನ ಐದು ವರ್ಷಗಳೊಳಗೆ ಎಲೆಕ್ಟ್ರಿಕ್ ವಾಹನಗಳ ತಯಾರಿಕಾ ತಾಣವಾಗಲಿದೆ ಎಂಬ ವಿಶ್ವಾಸವನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಹಾಗೂ ಎಂ.ಎಸ್.ಎಂ.ಇ. ಸಚಿವ ಶ್ರೀ ನಿತಿನ್ ಗಡ್ಕರಿ ವ್ಯಕ್ತಪಡಿಸಿದ್ದಾರೆ. ಎಲ್ಲ ಸಾಧ್ಯ ರಿಯಾಯಿತಿಗಳನ್ನೂ ಈ ವಲಯಕ್ಕೆ ನೀಡುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ ಮತ್ತು ಎಲೆಕ್ಟ್ರಿಕ್ ವಾಹನಗಳ ಮೇಲಿನ ಜಿಎಸ್ಟಿಯನ್ನು ಶೇ.12ಕ್ಕೆ ಇಳಿಸಿದೆ […]

Continue Reading