IMG 20210524 WA0012

ಪಾವಗಡ: ಕೋವಿಡ್ ಆರೋಗ್ಯ ಕೇಂದ್ರ ಉದ್ಘಾಟನೆ….!

ಕೋವಿಡ್ ಆರೋಗ್ಯ ಕೇಂದ್ರ ಉದ್ಘಾಟನೆ ವೈ.ಎನ್.ಹೊಸಕೋಟೆ : ಕೊರೋನಾ ಸೋಂಕು ಇತ್ತೀಚೆಗೆ ಗ್ರಾಮೀಣ ಪ್ರದೇಶದಲ್ಲಿ ದಟ್ಟವಾಗಿ ಹರಡುತ್ತಿದ್ದು, ಜನತೆ ಹೆಚ್ಚು ಜಾಗೃತರಾಗಿರಬೇಕು ಎಂದು ಶಾಸಕ ವೆಂಕಟರಮಣಪ್ಪ ತಿಳಿಸಿದರು. ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಆರೋಗ್ಯ ಕೇಂದ್ರವನ್ನು ಶನಿವಾರದಂದು ಉದ್ಘಾಟಿಸಿ ಮಾತನಾಡುತ್ತಾ, ಪಟ್ಟಣ ಪ್ರದೇಶಕ್ಕೆ ಕೇಂದ್ರಿಕೃತವಾಗಿದ್ದ ಕೋವಿಡ್ ಸೋಂಕು ತನ್ನ ಎರಡನೆಯ ಅಲೆಯಲ್ಲಿ ಗ್ರಾಮೀಣ ಪ್ರದೇಶಕ್ಕೂ ಪಸರಿಸಿದೆ. ಜನತೆ ನಿರ್ಲಕ್ಷ ವಹಿಸದೆ ಹೆಚ್ಚು ಜಾಗೃತಿ ವಹಿಸಿದರೆ ಮಾತ್ರ ಕೋರೋನಾ ರೋಗದಿಂದ ತಪ್ಪಿಸಿಕೊಳ್ಳಬಹುದು. ಗ್ರಾಮದಲ್ಲಿ ಕೋವಿಡ್ ಆರೋಗ್ಯ ಕೇಂದ್ರದಲ್ಲಿ […]

Continue Reading
0d5f950e 23f9 46af 8a06 a2499b62eeb2

ಪಾವಗಡ: ಪೋಲೀಸರಿಗೆ ವಿಶೇಷ ಕಿಟ್ ವಿತರಣೆ….!

ಪಾವಗಡ ತಾಲ್ಲೂಕಿನ ಅರಸೀಕೆರೆ ವೈ ಎನ್ ಹೊಸಕೋಟೆ ಹೋಬಳಿಯ ಪೋಲಿಸ್ ಠಾಣೆಯ ಎಲ್ಲಾ ಸಿಬ್ಬಂದಿಗೆ ನಮ್ಮ ಟ್ರಸ್ಟಿನ ವತಿಯಿಂದ ವಿಶೇಷ ಕಿಟ್ ವಿತರಣೆ ಸಮಗ್ರ ಸೇವಾ ಅಭಿವೃದ್ಧಿ ಟ್ರಸ್ಟ್ ನ ತಾಲ್ಲೂಕಿನ ಕೋವಿಡ್ 19 ವಾರಿಯರ್ಸ್ ಗೆ ಮಾರ್ಗದರ್ಶಕರಾದ ಎಸ್.ಆರ್. ರಾಘವೇಂದ್ರ (ಪೊಲೀಸ್ ಇನ್ಸ್ಪೆಕ್ಟರ್ ಬೆಂಗಳೂರು) ಅವರ ಸಲಹೆಯಂತೆ ಪೊಲೀಸ್ ಇಲಾಖೆ ಎಲ್ಲಾ ಸಿಬ್ಬಂದಿಗೆ ಪೌಷ್ಟಿಕ ಪಾನೀಯ, ಮಾಸ್ಕ್, ಸ್ಯಾನಿಟೈಸರ್, ಸಾಬೂನು ಇಎ ಸಾಮಗ್ರಿಗಳುಳ್ಳ ಕಿಟ್ ಅನ್ನು ಗೌರವಯುತವಾಗಿ ವಿತರಿಸಲಾಯಿತು. ಪಾವಗಡ ಸಮಗ್ರ ಸೇವಾ ಅಭಿವೃದ್ಧಿ ಟ್ರಸ್ಟ್ […]

Continue Reading
dcc7b263 df07 4372 bddf 2dcf68311c19

ಕೊರೊನಾ : ಇನ್ನು ಎರಡು ವಾರ ಲಾಕ್ ಡೌನ್ ವಿಸ್ತರಣೆ…!

  ಎರಡು ವಾರ ಲಾಕ್ ಡೌನ್ ವಿಸ್ತರಣೆ  ಮಾಡಿ‌ ಸರ್ಕಾರ ಆದೇಶ ಹೊರಡಿಸಿದೆ. ಲಾಕ್ಡೌನ್ ವಿಸ್ತರಣೆಯಿಂದ ಕೋವಿಡ್ ನಿಯಂತ್ರಣ ಸಾಧ್ಯ ಸಾವು ನೋವುಗಳ ಸಂಖ್ಯೆ ಕಡಿಮೆ ಮಾಡಲು ಸಾಧ್ಯ. ಹಾವೇರಿ :- ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮತ್ತೆ ಎರಡು ವಾರಗಳ ಕಾಲ ರಾಜ್ಯದಲ್ಲಿನ ಲಾಕ್ಡೌನ್ ವಿಸ್ತರಣೆ ಮಾಡಿರುವುದರಿಂದ ಕೋವಿಡ್ ನಿಯಂತ್ರಣ ಮಾಡಲು ಸಹಕಾರಿಯಾಗುತ್ತದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಹಾವೇರಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, […]

Continue Reading
c3689038 f9d9 4fe7 ad4b 10b7f18c6061

ಬ್ಲಾಕ್‌ ಫಂಗಸ್‌ ಬಗ್ಗೆ ಆತಂಕ ಬೇಡ

ಹೆಚ್ಚಿನ ಪ್ರಮಾಣದ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ ದಾವಣಗೆರೆ ಜಿಲ್ಲೆ ಕೋವಿಡ್‌ ನಿಯಂತ್ರಣ ಪರಿಶೀಲನಾ ಸಭೆ ದಾವಣಗೆರೆ : ರಾಜ್ಯದ ಕೆಲವೆಡೆ ಕಾಣಿಸಿಕೊಂಡಿರುವ ಬ್ಲಾಕ್‌ ಫಂಗಸ್‌ ರೋಗದ ಬಗ್ಗೆ ಕೆಲವರು ವದಂತಿಗಳನ್ನು ಹರಡಿಸುತ್ತಿದ್ದು ಈ ಬಗ್ಗೆ ಜನತೆ ಭಯ ಭೀತರಾಗುವ ಅಗತ್ಯವಿಲ್ಲ. ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಹೇಳಿದ್ದಾರೆ. ಇದೊಂದು ಶಿಲೀಂದ್ರದಿಂದ ಉಂಟಾಗುವ ರೋಗ. ಇದಕ್ಕೆ ಅನೇಕ ಕಾರಣಗಳಿವೆ. ಅತಿಯಾದ […]

Continue Reading
IMG 20210521 WA0016

ತುಮಕೂರು : ಕೋವಿಡ್ ಬಾಧಿತ ಅನಾಥ ಮಕ್ಕಳ ಪಾಲನೆ ಗೆ: ಅರ್ಜಿ ಆಹ್ವಾನ

ಕೋವಿಡ್ ಬಾಧಿತ ಅನಾಥ ಮಕ್ಕಳ ಪಾಲನೆ: ಆಸಕ್ತ ಪೋಷಕರಿಂದ ಅರ್ಜಿ ಆಹ್ವಾನತುಮಕೂರು(ಕವಾ)ಮೇ21: ಕೋವಿಡ್-19ರ 2ನೇ ಅಲೆಯ ಹಿನ್ನೆಲೆಯಲ್ಲಿ ಕೆಲವು ಕುಟುಂಬಗಳಲ್ಲಿ ಮಕ್ಕಳ ತಂದೆ-ತಾಯಿಗಳಿಬ್ಬರು ಕೋವಿಡ್-19 ಸೋಂಕಿಗೆ ಒಳಗಾಗಿ ಮರಣ ಹೊಂದುವ ಸಂದರ್ಭಗಳು ಎದುರಾಗಬಹುದಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಯಾವುದಾದರೂ ಕುಟುಂಬದಲ್ಲಿ ತಂದೆ-ತಾಯಿಗಳಿಬ್ಬರು ಕೋವಿಡ್ ಸೋಂಕಿಗೆ ಒಳಗಾಗಿ ಮರಣ ಹೊಂದಿ ಮಕ್ಕಳನ್ನು ಮನೆಯಲ್ಲಿ ನೋಡಿಕೊಳ್ಳಲು ಯಾರೂ ಇಲ್ಲದಂತಹ ಪರಿಸ್ಥಿತಿ ಒದಗಿಬಂದಲ್ಲಿ ಅಂತಹ ಮಕ್ಕಳನ್ನು ಪಾಲನೆ ಮಾಡುವ ಆಸಕ್ತ ಪೋಷಕರಿಂದ ಅರ್ಜಿ ಆಹ್ವಾನಿಸಲಾಗಿದೆ.ಕೋವಿಡ್ ಬಾಧಿತ 0-6 ವರ್ಷದೊಳಗಿನ ಹಾಗೂ […]

Continue Reading
21 5 21 Medicine distribution scaled

ಪಾವಗಡ: ಉಚಿತವಾಗಿ ಔಷಧಿಗಳ ಕಿಟ್‍ ವಿತರಣೆ…!

ಕ್ವಾರಂಟೈನ್‍ನಲ್ಲಿರಬೇಕಾದ ವ್ಯಕ್ತಿಗಳಿ ಗೆ ವೈದ್ಯರ ಸಲಹೆ ಮೇರೆಗೆ ಉಚಿತ ಔಷಧಿ ವಿತರಣೆ ಪಾವಗಡ: – ನೂತನವಾಗಿ ಪತ್ತೆಯಾದ ಕೋವಿಡ್ ಸೋಂಕು ತಗುಲಿದ ವ್ಯಕ್ತಿಯು ಮನೆಯಲ್ಲಿಯೇ ಔಷಧೋಪಚಾರವನ್ನು ಪಡೆಯುವಂತಹ (Home Quarantine) ವ್ಯಕ್ತಿಗಳಿಗೆ ಶ್ರೀರಾಮಕೃಷ್ಣ ಸೇವಾಶ್ರಮ ಮತ್ತು ಇನ್ಫೋಸಿಸ್ ಫೌಂಡೇಷನ್ ಸಹಕಾರದೊಂದಿಗೆ ಉಚಿತವಾಗಿ ಔಷಧಿಗಳ ಕಿಟ್‍ನ್ನು ನೀಡಲಾಗುತ್ತದೆ. ಈ ಔಷಧಿಗಳ ಕಿಟ್‍ಗಳನ್ನು ಖರೀದಿಸಿ ಬಡ ರೋಗಿಗಳಿಗೆ ಉಚಿತವಾಗಿ ವಿತರಿಸಲು ನಮ್ಮ ಸಂಸ್ಥೆ ಮುಂದೆ ಬಂದಿದೆ ಎಂದು ಪೂಜ್ಯ ಸ್ವಾಮಿ ಜಪಾನಂದಜಿ ರವರು ವಿವರಿಸಿದ್ದಾರೆ. ಈ ಯೋಜನೆಯ ಮೂಲಕ ಹೋಂ […]

Continue Reading
IMG 20210521 WA0015

ತುಮಕೂರು : ಕೊರೋನಾ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ

ಕೊರೋನಾ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ* ಕೋವಿಡ್-19 ಕರ್ತವ್ಯಕ್ಕೆ ನಿಯೋಜಿಸಲಾದ ಶಿಕ್ಷಕರು, ಸರ್ಕಾರಿ ಸಾರಿಗೆ ಸಿಬ್ಬಂದಿ, ಆಟೋ ಮತ್ತು ಕ್ಯಾಬ್ ಚಾಲಕರು ತುಮಕೂರು(ಕವಾ)ಮೇ.21: ಕೊರೋನಾ ವೈರಸ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ 18-44 ವರ್ಷದ ಒಳಗಿನ ಮುಂಚೂಣಿ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ ನೀಡುವ ಸಲುವಾಗಿ ಮಂಚೂಣಿ ಕಾರ್ಯಕರ್ತರ ಇಲಾಖಾ ಮುಖ್ಯಸ್ಥರೊಂದಿಗೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಸಭೆ ನಡೆಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಸಭೆ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿಗಳು ಕೋವಿಡ್ ನಿಗ್ರಹಕ್ಕೆ ಮಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಯಕರ್ತರ ಇಲಾಖೆ ಮುಖ್ಯಸ್ಥರು ನೋಡಲ್ ಅಧಿಕಾರಿಗಳಾಗಿ ಕಾರ್ಯ […]

Continue Reading
IMG 20210520 WA0023

ತುಮಕೂರು: ಮೂರನೇ ಅಲೆ ನಿಯಂತ್ರಣಕ್ಕೆ ಸಿದ್ಧತೆ….!

ತುಮಕೂರು ಜಿಲ್ಲೆಯ ಕೋವಿಡ್‌ ಪರಿಸ್ಥಿತಿ ಪರಾಮರ್ಶಿಸಿದ ಸಚಿವ ಸುಧಾಕರ್‌ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿರುವುದು ಸಮಾಧಾನಕರ ಅಂಶ ಮೂರನೇ ಅಲೆ ನಿಯಂತ್ರಣಕ್ಕೆ ಸಿದ್ಧತೆ ಅರಂಭಿಸಲು ಜಿಲ್ಲಾಡಳಿತಕ್ಕೆ ತಾಕೀತು ತುಮಕೂರು : ಜಿಲ್ಲೆಯಲ್ಲಿ ಕೋವಿಡ್‌ ಪರಿಸ್ಥಿತಿ ನಿಯಂತ್ರಣಕ್ಕೆ ಬರುವ ಲಕ್ಷಣಗಳು ಗೋಚರಿಸಿದ್ದು ಮೂರನೇ ಅಲೆಯನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಈಗಿನಿಂದಲೇ ಸಿದ್ಧತೆಗಳನ್ನು ಆರಂಭಿಸುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಅವರು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ತುಮಕೂರು ಜಿಲ್ಲೆಯ ಕೋವಿಡ್‌ ಪರಿಸ್ಥಿತಿಯನ್ನು […]

Continue Reading
IMG 20210520 WA0017

ಪಾವಗಡ: ಜಾಡಮಾಲಿ ಕಾರ್ಮಿಕರಿಗೆ ಆಹಾರ ಸಾಮಗ್ರಿಗಳ ವಿತರಣೆ…!

ಪಾವಗಡ. ಗ್ರಾಮೀಣ ಭಾಗದ ಜಾಡಮಾಲಿ ಕಾರ್ಮಿಕರಿಗೆ ಆಹಾರ ಸಾಮಗ್ರಿಗಳ ವಿತರಣೆ”ತಮಟೆ ಗ್ರಾಮೀಣ ಸಬಲೀಕರಣ ಕೇಂದ್ರ (ರಿ) ಹಾಗೂ ಸಫಾಯಿ ಕರ್ಮಚಾರಿ ಕಾವಲು ಸಮಿತಿ – ಕರ್ನಾಟಕದ ಸಂಯುಕ್ತ ಆಶ್ರಯದಲ್ಲಿ ಇಂದು ಬೆಳಿಗ್ಗೆ ಪಾವಗಡ ತಮಟೆ ಕಛೇರಿಯ ಆವರಣದಲ್ಲಿ ಗ್ರಾಮೀಣ ಭಾಗದ ಸ್ವಚ್ಚತಾಗಾರರಿಗೆ ಆಹಾರದ ದಿನಸಿ ಕಿಟ್ ಗಳನ್ನು ವಿತರಿಸಲಾಯಿತು, ತಮಟೆ ಸಂಸ್ಥೆಯು ತುಮಕೂರು ಜಿಲ್ಲೆಯಾದ್ಯಂತ ಇರುವ ಮ್ಯಾನುಯಲ್ ಸ್ಕಾವೆಂಜರ್ಸ್ ಗಳು, ಸ್ಯಾನಿಟರಿ ವರ್ಕರ್ಸ್ ಹಾಗೂ ಜಾಡಮಾಲಿ ಕಾರ್ಮಿಕರ ಆರೋಗ್ಯ, ಶಿಕ್ಷಣ, ಹಾಗೂ ಅವರ ಅಭಿವೃದ್ದಿಗಾಗಿ ಸುಮಾರು 15 […]

Continue Reading
IMG 20210520 WA0013

ಪಾವಗಡ: ನೊಂದವರ ನೆರವಿಗೆ ಬಂದ ಟ್ರಸ್ಟ್….!

ಪಾವಗಡ : ತಾಲ್ಲೂಕಿನ ಸಮಗ್ರ ಅಭಿವೃದ್ಧಿ ಹಾಗೂ ನೊಂದವರ ನೆರವಿಗೆ ಸದಾ ಧಾವಿಸುವುದೇ ನಮ್ಮ ಟ್ರಸ್ಟಿನ ಮೂಲ ಉದ್ದೇಶ ಎಂದು ತಾಲ್ಲೂಕು ಸಮಗ್ರ ಸೇವಾ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷರಾದ ಬಿಕೆ ಮುನಿಸ್ವಾಮಿಯವರು ತಿಳಿಸಿದರು. ನಗರದ ಪ್ರಮುಖ ವಿದ್ಯಾ ಸಂಸ್ಥೆಗಳಲ್ಲಿ ಒಂದಾದ ಶಾರದಾ ವಿದ್ಯಾಪೀಠದಲ್ಲಿ ನಮ್ಮ ತಾಲೂಕು ಸಮಗ್ರ ಸೇವಾ ಅಭಿವೃದ್ಧಿ ಟ್ರಸ್ಟಿನ ಅಧ್ಯಕ್ಷರಾದ ಬಿಕೆ ಮುನಿಸ್ವಾಮಿಯವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ, ನಮ್ಮ ಟ್ರಸ್ಟಿನ ಮೂಲ ಉದ್ದೇಶವೇ ತಾಲೂಕಿನ ಸರ್ವತೋಮುಖ ಅಭಿವೃದ್ಧಿ‌. ಯಾವುದೇ ಫಲಾಪೇಕ್ಷೆ ಇಲ್ಲದೆ ಸೇವಾಮನೋಭಾವದಿಂದ ಎಲ್ಲರೂ […]

Continue Reading