27a456a4 2b21 47d9 b689 5ec06692d8bb

ರೈತ ಮುಖಂಡರೊಂದಿಗೆ ಮುಖ್ಯಮಂತ್ರಿ ಸಭೆ,ಅನ್ನದಾತರಿಗೆ ಭರವಸೆ ನೀಡಿದ ಬಿಎಸ್ ವೈ..!

STATE

ಬೆಂಗಳೂರು ಮೇ ೭:- ಕೋವಿಡ್‌ ೧೯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ರೈತರಿಗೆ ಉಂಟಾಗಿರುವ ಸಮಸ್ಯೆಗಳ ಕುರಿತು ರೈತ ಮುಖಂಡರ ಜೊತೆ  ಗೃಹ ಕಚೇರಿ ಕೃಷ್ಣದಲ್ಲಿ  ಚರ್ಚಿಸಿದರು.

ಕೃಷಿ ಕ್ಷೇತ್ರದ ಸಮಸ್ಯೆಗಳನ್ನು ಆಲಿಸಿದ ಮುಖ್ಯಮಂತ್ರಿಗಳು  ಸರ್ಕಾರದ ಇತಿಮಿತಿಯಲ್ಲಿ  ರೈತರಿಗೆ  ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು. ರೈತರಿಗೆ ಎಲ್ಲಾ ರೀತಿಯಲ್ಲೂ ಬೆಂಬಲ ನೀಡಲಾಗುವುದು ಮತ್ತು ಶೀಘ್ರದಲ್ಲೇ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಲಾಗುವುದು ಎಂದರು.