ad8e1f9a b9e1 4efa aba2 5ccee26e313e

ದಾವಣಗೆರೆ ಯಲ್ಲಿ ಕೋವಿಡ್19 ಪರೀಕ್ಷಾ ಪ್ರಯೋಗಾಲಯ ಆರಂಭ…!

DISTRICT NEWS

ದಾವಣಗೆರೆ, ಮೇ 9, 2020 : ಕೋವಿಡ್-19  ರೋಗದ ವಿರುದ್ಧದ ಹೋರಾಟದಲ್ಲಿ ಸರ್ಕಾರದ ಜೊತೆ ಸಾರ್ವಜನಿಕರು ಕೂಡ ಕೈಜೋಡಿಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ  ನಡೆದ ಪರಾಮರ್ಶೆ  ಸಭೆಯಲ್ಲಿ ಮಾತನಾಡಿದ ಸಚಿವರು, ಇದುವರೆಗೂ ರಾಜ್ಯ ಸರ್ಕಾರ ಅತ್ಯಂತ ಜವಾಬ್ದಾರಿಯುತವಾಗಿ ಕರೋನಾ  ಸೋಂಕನ್ನು ಹಿಮ್ಮೆಟ್ಟಿಸಿದೆ. ಲಾಕ್  ಡೌನ್  ಸಡಿಲಿಕೆ  ಬಳಿಕ ಜನರು ಕೂಡ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಿದೆ ಎಂದರು.

ಇಡೀ ದೇಶದಲ್ಲಿ ಪ್ರಾರಂಭದಲ್ಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದರಿಂದ ರಾಜ್ಯದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಕಣ್ಣಿಗೆ ಕಾಣದ ಈ ವೈರಾಣು ಪ್ರಬಲ ರಾಷ್ಟ್ರಗಳನ್ನು ನಡುಗಿಸಿದೆ .ಆದರೆ ನಮ್ಮ ದೇಶದಲ್ಲಿ ಮತ್ತು ಕರ್ನಾಟಕದಲ್ಲಿ ಕೈಗೊಂಡ ಕ್ರಮಗಳು ಇವತ್ತಿನ ಸಮಾಧಾನಕರ ಪರಿಸ್ಥಿತಿಗೆ ಕಾರಣವಾಗಿದೆ ಎಂದರು. ಸಾರ್ವಜನಿಕರು ರೋಗದ ಬಗ್ಗೆ ಅನಗತ್ಯ ಗೊಂದಲಗಳನ್ನು ಹರಡಿಸುವುದನ್ನು ಅಂತೆ ಕಂತೆಗಳು ನಂಬುವುದನ್ನು ಬಿಡಬೇಕು .ಕಾಲದಿಂದ ಕಾಲಕ್ಕೆ ರಾಜ್ಯ ಸರಕಾರ ಜಾರಿಗೊಳಿಸುವ ಮಾರ್ಗಸೂಚಿಗಳನ್ನು ಚಾಚು ತಪ್ಪದೇ ಅನುಸರಿಸಬೇಕು, ಇಲ್ಲವಾದಲ್ಲಿ ಪರಿಸ್ಥಿತಿ ಬೇರೆ ಬೇರೆ ಸ್ವರೂಪ ಪಡೆಯುವ ಸಾಧ್ಯತೆಗಳಿವೆ ಎಂದು ಸಚಿವ ಸುಧಾಕರ್ ಎಚ್ಚರಿಸಿದ್ದಾರೆ

ರಾಜ್ಯ ಸರ್ಕಾರ ಜನರ ಜೀವ ಮತ್ತು ಜೀವನವನ್ನು ಕಾಪಾಡುವ ನಿಟ್ಟಿನಲ್ಲಿ ಎಚ್ಚರಿಕೆಯಿಂದ ಹೆಜ್ಜೆಗಳನ್ನು ನೀಡುತ್ತಿದೆ. ಜನರು ಕೂಡ ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ಕೆಲವೊಂದು ಎಚ್ಚರಿಕೆ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು .ಶುಚಿತ್ವದ ವಿಚಾರದಲ್ಲಿ ನಿರ್ಲಕ್ಷ್ಯ ತೋರಬಾರದು ಎಂದರು. ಕೊರೋನಾ ರೋಗಕ್ಕೆ ಲಸಿಕೆ ಮತ್ತು ಅಧಿಕೃತ ಚಿಕಿತ್ಸೆ ಲಭ್ಯವಾಗುವ ತನಕ ಕೆಲವು ಬದಲಾವಣೆಗಳ ಜೊತೆಗೆ ಕಟ್ಟಿಕೊಳ್ಳುವುದು ಅನಿವಾರ್ಯ. ಕರೋನ ರೋಗಾಣುವು ಇರುತ್ತದೆ ನಾವು ಇರಬೇಕು ಆದರೆ ಅದರಿಂದ ಅಂತರ ಕಾಯ್ದುಕೊಳ್ಳಬೇಕು ಅದು ಚಲಿಸುವುದಿಲ್ಲ ನಮ್ಮ ಜೊತೆ ಚಲಿಸುತ್ತಿದೆ ಎಂಬುದನ್ನು ಅರಿತುಕೊಳ್ಳಬೇಕು ಎಂದು ಸಚಿವ ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.

ಕೆಲ ಚುನಾಯಿತ ಪ್ರತಿನಿಧಿಗಳೂ ಸೇರಿದಂತೆ ಸಾರ್ವಜನಿಕರಲ್ಲಿ ರೋಗದ ಬಗ್ಗೆ ತಪ್ಪು ಕಲ್ಪನೆಯಿದೆ. ಸೋಂಕಿತರನ್ನು ಮತ್ತು ಅವರ ಕುಟುಂಬ ಸದಸ್ಯರನ್ನು ಕಳಂಕಿತರಂತೆ ನೋಡುವ ಮನೋಭಾವ ಬಿಡಬೇಕು. ಈ ಬಗ್ಗೆ ಭಯ ಪಡುವ ಅಗತ್ಯವಿಲ್ಲ ಇತರೆ ರೋಗಗಳಂತೆ ಇದು ಒಂದು ರೋಗಾಣು ಅಷ್ಟೆ ಸೋಂಕು ತಗುಲಿದ ಶೇಕಡ ಎಂಬತ್ತಕ್ಕೂ ಹೆಚ್ಚು ಮಂದಿ ಗುಣಮುಖರಾಗಿ ಮನೆಗೆ ಹಿಂತಿರುಗಿದ್ದಾರೆ ಸಾರ್ಸ್ ರೋಗಕ್ಕಿಂತ ಕರೋನಾ ಸೋಂಕಿತರ ಮರಣ ಪ್ರಮಾಣ ಕಡಿಮೆ ಇದೆ. ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಜನಪ್ರತಿನಿಧಿಗಳು ಪಾಲ್ಗೊಳ್ಳಬೇಕು ಇದಕ್ಕಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ 104 ಸಹಾಯವಾಣಿಯ ಸೌಲಭ್ಯ ಪಡೆದುಕೊಳ್ಳಬೇಕು ಕೇಂದ್ರ ಸರ್ಕಾರ ರೂಪಿಸಿರುವ “ಆರೋಗ್ಯ ಸೇತು” ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಬೇಕು ಆ ಮೂಲಕ ಹೆಚ್ಚಿನ ಮಾಹಿತಿ ಲಭ್ಯವಿರುತ್ತದೆ ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.

ಇದಕ್ಕೂ ಮೊದಲು ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ಶಾಸಕರು ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ತಮ್ಮ ಅಭಿಪ್ರಾಯಗಳನ್ನು ಸಭೆಯಲ್ಲಿ ಹಂಚಿಕೊಂಡರು. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್, ಸಂಸದ ಜಿಎಂ ಸಿದ್ದೇಶ್ವರ್, ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಜಿಲ್ಲೆಯ ಎಲ್ಲ ಶಾಸಕರು, ಹಿರಿಯ ಅಧಿಕಾರಿಗಳು, ಜಿಲ್ಲಾ ಪಂಚಾಯಿತಿ ಅಧ್ಯಕ್ಷರು, ನಗರ ಪಾಲಿಕೆ ಮೇಯರ್ ಹಾಗೂ ಇತರ ಸಿಬ್ಬಂದಿ ಹಾಜರಿದ್ದರು.

84e54070 268f 43e2 b3d4 115fcd5efbb1

ದಾವಣಗೆರೆ ಜಿಲ್ಲೆ ಜಾಗ್ರತೆ ವಹಿಸುವುದು ಅತ್ಯಗತ್ಯ – ಜಿಲ್ಲೆಯ ಮೊದಲ ಕೋವಿಡ್19 ಟೆಸ್ಟಿಂಗ್ ಲ್ಯಾಬ್ ಉದ್ಘಾಟನೆ

ಈ ಹಿಂದೆ ಹಸಿರು ವಲಯದಲ್ಲಿದ್ದ ದಾವಣಗೆರೆ ಜಿಲ್ಲೆ ಇದೀಗ ಕೆಂಪು ವಲಯಕ್ಕೆ ಸೇರ್ಪಡೆಯಾಗಿದೆ. ಜಿಲ್ಲಾ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆ ಎಂದು ಇವತ್ತಿನಿಂದಲೇ ಅಧಿ ಸೂಚಿಸಲಾಗುತ್ತಿದೆ. ಕರೋನಾ ಯೇತರ ಚಿಕಿತ್ಸೆಗೆ ಬೇರೆ ಆಸ್ಪತ್ರೆಯಲ್ಲಿ ವ್ಯವಸ್ಥೆ ಮಾಡಲು ಸಚಿವ ಸುಧಾಕರ್ ನೀಡಿದ್ದಾರೆ

ಇಂದು ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಜಿಲ್ಲೆಯ ಮೊದಲ ಟೆಸ್ಟಿಂಗ್ ಲಾಬ್ ನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಉದ್ಘಾಟಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್, ಸಂಸದ ಜಿ.ಎಂ.ಸಿದ್ದೇಶ್ವರ್, ಶಾಸಕ ಶ್ಯಾಮನೂರು ಶಿವಶಂಕರಪ್ಪ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಸುಧಾಕರ್, ಇನ್ನೆರಡು ದಿನದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲೂ ಟೆಸ್ಟಿಂಗ್ ಲ್ಯಾಬ್ ಕಾರ್ಯಾರಂಭಿಸಲಿದೆ ಎಂದು ಪ್ರಕಟಿಸಿದ್ದಾರೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆಗಳನ್ನು ನಡೆಸಿ ಕ್ವಾರಂಟೈನ್ ಪ್ರದೇಶದ ಎಲ್ಲ ನಾಗರಿಕರ ತಪಾಸಣೆ ಕಾರ್ಯವನ್ನು ಮುಗಿಸಬೇಕು ಎಂದು ಸಲಹೆ ನೀಡಿದ ಸಚಿವರು   ಟೆಸ್ಟಿಂಗ್ ಸಂಬಂಧ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.