IMG 20200529 WA0119

ಬೆಂಗಳೂರಿನಲ್ಲಿ ವರುಣನ ಆರ್ಭಟ…!

DISTRICT NEWS ಬಿಬಿಎಂಪಿ

ಬೆಂಗಳೂರು ಮೇ 29 ;- ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ.ಶುಕ್ರವಾರ ಸಂಜೆ 5 ಗಂಟೆಗೆ ಪ್ರಾರಂಭವಾದ ಮಳೆ  ಎಡೆಬಿಡದೆ ಸುರಿಯುತ್ತಿದೆ.

IMG 20200529 WA0112

ನಗರದ ರಾಜಾಜಿನಗರ, ಮಲ್ಲೇಶ್ವರ, ವಿಜಯನಗರ,ನಾಗರಭಾವಿ ಗಳ ಮಳೆಯ ಆರ್ಭಟ ಜೋರಾಗಿದೆ. ಹಲವೆಡೆ ಮರಗಳು ಧರೆ ಗೆ ಉರುಳಿವೆ.

 

ಬಿಬಿಎಂಪಿ ಅಯುಕ್ತ ಅನಿಲ್ ಕಮಾರ್ ಅವರು  ಮಳೆ ಅನಾಹುತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

IMG 20200529 WA0120

ಆಯುಕ್ತರು ಹಾಗೂ ವಿಶೇಷ ಆಯುಕ್ತರು(ಆಸ್ತಿಗಳು) ಶ್ರೀ ಜಿ.ಮಂಜುನಾಥ್ ರವರು ಇಂದು ನಗರದಲ್ಲಿ ಸುರಿದ ಮಳೆಯಿಂದಾಗಿ ಅನಾಹುತದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೊದಲಿಗೆ ಲಿ ಮೇರೇಡಿಯನ್ ಜಂಕ್ಷನ್, ವಿಂಡ್ಸರ್ ಮ್ಯಾನರ್ ಜಂಕ್ಷನ್, ಕಾವೇರಿ ಜಂಕ್ಷನ್, ಶೇಷಾದ್ರಿ ಪುರಂ, ಒಕಳಿಪುರಂ, ಡಾ. ರಾಜ್ ಕುಮಾರ್ ರಸ್ತೆ, ಸುಬ್ರಹ್ಮಣ್ಯ ನಗರ ಹಾಗೂ ಇನ್ನಿತರ ಸ್ಥಳಗಳಿಗೆ ಖುದ್ದು ಭೇಟಿ ನೀಡಿ ಅಧಿಕಾರಿ/ಸಿಬ್ಬಂದಿಗಳಿಗೆ ಕಾರ್ಯಾಚರಣೆಗೆ ಮಾರ್ಗದರ್ಶನ ನೀಡಿ ಪ್ರೇರೇಪಣೆ ನೀಡುತ್ತಿದ್ದಾರೆ.*