images 15

ರೈತ: ಎಂಎಸ್‌ಪಿ ರಕ್ಷಣೆ ಕಾನೂನು ತಕ್ಷಣ ಜಾರಿಗೆ ಆಗ್ರಹ …!

Genaral STATE

ಎಂಎಸ್‌ಪಿ ರಕ್ಷಣೆ ಕಾನೂನು ತಕ್ಷಣ ಜಾರಿಗೆ ಆಗ್ರಹ ….

ವಿದ್ಯುತ್ ದರ ಹೆಚ್ಚಳಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ತೀವ್ರ ಖಂಡನೆ

ಬೆAಗಳೂರು, ಜೂ 10, ಮುಂಗಾರು ಬೆಳೆಗಳಿಗೆ ಕೇಂದ್ರ ಸರ್ಕಾರ 2021-22 ನೇ ಸಾಲಿನ ಪರಿಷ್ಕöÈತ ಬೆಂಬಲ ಬೆಲೆ – ಎಂಎಸ್‌ಪಿ ಯನ್ನು 14 ಬೆಳೆಗಳಿಗೆ ಪರಿಷ್ಕರಿಸಿದ್ದು, ಇದು ನ್ಯಾಯಯುತವಾಗಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಆರೋಪಿಸಿದ್ದಾರೆ.

ಈಗಾಗಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದಾಗಿ ಟ್ರಾಕ್ಟರ್ ಉಳುಮೆ ವೆಚ್ಚ ಹೆಚ್ಚಾಗಿದೆ. ರೈತರು ಎಷ್ಟು ಡೀಸೆಲ್ ಬಳಸುವರು, ಬೆಲೆ ಏರಿಕೆಯಿಂದಾಗಿ ಆದ ಹೆಚ್ಚುವರಿ ಹೊರೆ ಎಷ್ಟು ಎಂಬುದನ್ನು ಪರಿಗಣಿಸಿ ಬೆಂಬಲ ಬೆಲೆ ಹೆಚ್ಚಳ ಮಾಡಿಲ್ಲ. ವಿದ್ಯುತ್ ದರ ಏರಿಕೆ ಒಂದೆಡೆಯಾದರೆ, ಮತ್ತೊಂದೆಡೆ ನಾಮಕಾವಸ್ಥೆ ಬೆಂಬಲ ಬೆಲೆ ಹೆಚ್ಚಳ ಮಾಡಿ ಮಹದುಪಕಾರ ಮಾಡಿದಂತೆ ಬಿಂಬಿಸಲಾಗುತ್ತಿದೆ ಎಂದು ಅವರು ವಿವರಿಸಿದ್ದಾರೆ.

IMG 20210610 190301

ಬೆಂಬಲ ಬೆಲೆ ರಕ್ಷಣೆಗೆ ಕಾನೂನಿನ ಅಗತ್ಯವಿದೆ, ಇಲ್ಲವಾದಲ್ಲಿ ಈ ಬೆಂಬಲ ಬೆಲೆ ಅವೈಜ್ಞಾನಿಕವಾಗಿ ನಿಗದಿಯಾಗುತ್ತಲೇ ಸಾಗಲಿದೆ ಎಂದು ಅವರು ಹೇಳಿದ್ದಾರೆ. ಇದರ ರಕ್ಷಣೆಗಾಗಿ ಪಂಜಾಬ್ ರಾಜ್ಯದಲ್ಲಿ ಎಂಎಸ್‌ಪಿ ದರಕ್ಕಿಂತ ಕಡಿಮೆ ದರಕ್ಕೆ ಖರೀದಿ ಮಾಡಿದರೆ ಅದು ಶಿಕ್ಷಾರ್ಹ ಅಪರಾಧ ಎಂಬ ಕಾನೂನಿದ್ದು, ಇಂತಹ ನಿಯಮ ದೇಶವ್ಯಾಪಿಯಾಗಿರಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಹಾಲಿಗೆ ನೀಡುತ್ತಿದ್ದ ದರ ಕಡಿಮೆ ಮಾಡಲಾಗಿದೆ. ಅಂತೆಯೇ ಅಗತ್ಯ ಪ್ರಮಾಣದ ಖರೀದಿಯೂ ಆಗುತ್ತಿಲ್ಲ. ಹೂವು, ಹಣ್ಣು, ತರಕಾರಿ ಖರೀದಿಯೂ ಹೆಚ್ಚಾಗಿಲ್ಲದ ಕಾರಣ ರೈತರಿಗೆ ಈ ಬೆಂಬಲ ಬೆಲೆ ಏರಿಕೆ ಏನೇನೂ ಸಾಲದು. ಕೇಂದ್ರ ಸರ್ಕಾರ ಕೂಡಲೆ ಅಗತ್ಯ ವಸ್ತುಗಳ ಬೆಲೆ ಏರಿಕೆ ತಡೆಗೆ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.
ಒಟ್ಟಿನಲ್ಲಿ ಕೇಂದ್ರ ಸರ್ಕಾರ ಬೆಲೆ ಏರಿಕೆಯ ಹೊರೆ ಹೊರಿಸಿ, ಇದೀಗ ವಿದ್ಯುತ್ ದರ ಏರಿಕೆಯ ಶಾಕ್ ಕೊಟ್ಟು ಮತ್ತೊಂದೆಡೆ ಅತ್ಯಲ್ಪ ಪ್ರಮಾಣದ ಬೆಂಬಲ ಬೆಲೆ ಹೆಚ್ಚಳ ಮಾಡಿ ರೈತರ ಮೂಗಿಗೆ ತುಪ್ಪ ಸವರಿದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಆಕ್ರೋಶ ಹೊರಹಾಕಿದ್ದಾರೆ.

ವಿದ್ಯುತ್ ದರ ಹೆಚ್ಚಳಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ತೀವ್ರ ಖಂಡನೆ
ರಾಜ್ಯ ಸರ್ಕಾರ ವಿದ್ಯುತ್ ಬಿಲ್ ಪ್ರತಿ ಯೂನಿಟ್‌ಗೆ 30 ಪೈಸೆ ಹೆಚ್ಚಿಸಿದೆ. “ಕೊರೊನಾ ಲಾಕ್‌ಡೌನ್ ಕಾಲದಲ್ಲಿ ಜನರಿಗೆ ಸರಿಯಾಗಿ ಉದ್ಯೋಗವಿಲ್ಲ. ದುಡಿಮೆ ಇಲ್ಲದೇ ಊಟಕ್ಕೆ ಸಹ ತೊಂದರೆಯಾಗಿದೆ. ಇಂತಹ ಸಮಯದಲ್ಲಿ ದರ ಹೆಚ್ಚಿಸಿರುವುದು ಸರಿಯಲ್ಲ ಎಂದು ಅವರು ದರ ಏರಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ಲಾಕ್‌ಡೌನ್ ನಿಂದ ಚೇತರಿಸಿಕೊಳ್ಳಲು ಬಿಡದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿದ್ಯುತ್ ದರ, ಅಗತ್ಯ ವಸ್ತುಗಳ ಬೆಲೆ ಏರಿಕೆ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ಆಸ್ತಿ ತೆರಿಗೆ ಹೆಚ್ಚಿಸಿದ್ದು ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಹ ಸ್ಥಿತಿ ಎದುರಾಗಿದೆ ಎಂದಿದ್ದಾರೆ.

ವಿದ್ಯುತ್ ಸರಬರಾಜು ಕಂಪನಿಗಳು ನಷ್ಟದಲ್ಲಿವೆ ಎಂದು ಹೇಳುವ ಸರ್ಕಾರ ಕೇಂದ್ರದಿAದ ವಿದ್ಯುತ್ ಖರೀದಿ, ಆದಾನಿ ಕಂಪನಿಯಿAದ ವಿದ್ಯುತ್ ಖರೀದಿಯನ್ನು ನಿಲ್ಲಿಸಿಲ್ಲ. ಮೊದಲು ದುಬಾರಿ ಬೆಲೆಗೆ ಖರೀದಿ ನಿಲ್ಲಿಸಿ ವಿದ್ಯುತ್ ಇಳಿಸಿ ಪರಿಷ್ಕರಣೆ ಮಾಡಲಿ ಎಂದು ಅವರು ಆಗ್ರಹಿಸಿದ್ದಾರೆ.