IMG 20210611 WA0010

Congress: 100 ನಾಟೌಟ್, ಪೆಟ್ರೋಲ್ ಪಿಕ್‌ಪಾಕೆಟ್ ಪ್ರತಿಭಟನೆ….!

POLATICAL STATE

ಕೇಂದ್ರ ಸರಕಾರ ನಿರಂತರ ಪೆಟ್ರೋಲ್, ಡೀಸೆಲ್‌ ಬೆಲೆ ಏರಿಸುತ್ತಿರುವುದನ್ನು ಖಂಡಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪ್ರದೇಶ ಕಾಂಗ್ರೆಸ್ ಬೆಂಗಳೂರಿನ ಶಿವಾನಂದ ವೃತ್ತದ ಬಳಿ ರೆಡ್ಡಿ ಪೆಟ್ರೋಲ್ ಬಂಕ್ ಸಮೀಪ 100 ನಾಟೌಟ್, ಪೆಟ್ರೋಲ್ ಪಿಕ್‌ಪಾಕೆಟ್ ಪ್ರತಿಭಟನೆ ನಡೆಸಿತು. ಮಾಜಿ ಸಚಿವರಾದ ಆರ್.ವಿ. ದೇಶಪಾಂಡೆ, ದಿನೇಶ್ ಗುಂಡೂರಾವ್ ಮತ್ತಿತರರು ಪಾಲ್ಗೊಂಡರು. ಈ ಪ್ರತಿಭಟನೆಯೂ ಇಂದಿನಿಂದ ಹಂತ-ಹಂತವಾಗಿ ರಾಜ್ಯಾದ್ಯಂತ ಐದು ದಿನಗಳ ಕಾಲ ನಡೆಯಲಿದೆ.

ಇದಕ್ಕೆ ಮೊದಲು ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತಿತರ ನಾಯಕರು ಮಾತನಾಡಿ, ಕೇಂದ್ರ ಸರಕಾರದ ಜನವಿರೋಧಿ ನೀತಿಯನ್ನು ಖಂಡಿಸಿದರು. ಕಾಂಗ್ರೆಸ್ ಕಾರ್ಯಕರ್ತರು ನೆಹರೂ ವೃತ್ತದ ಸುತ್ತ ನಿಂತು, ತಟ್ಟೆ ಬಾರಿಸುವ ಮೂಲಕ ಕೇಂದ್ರ ಸರಕಾರದ ಪೆಟ್ರೋಲ್ ದರ ಏರಿಕೆ ನೀತಿಯನ್ನು ಸಾಂಕೇತಿಕವಾಗಿ ಅಣಕಿಸಿದರು.

IMG 20210611 WA0005
ಪೋಲಿಸರು ಬಂಧಿಸಿ ಕರೆದೊಯ್ಯುತ್ತಿರುವುದು

ಪ್ರತಿಭಟನಾನಿರತ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ಆರ್.ವಿ. ದೇಶಪಾಂಡೆ, ದಿನೇಶ್ ಗುಂಡೂರಾವ್, ಅಶೋಕ ಪಟ್ಟಣ, ಪ್ರಕಾಶ್ ರಾಥೋಡ್, ವಿ.ಆರ್. ಸುದರ್ಶನ್, ಶೇಖರ್ ಅವರನ್ನು ಹೈಗ್ರೌಂಡ್ಸ್ ಪೊಲೀಸರು ಬಂಧಿಸಿ, ಕರೆದೊಯ್ದರು.