IMG 20210612 WA0014

Congress: ನಿಮ್ಮ ಜೇಬು ತುಂಬಿದರೆ ಸಾಕೆ? ಬಡವರ ಸ್ಥಿತಿ ಏನಾಗಬೇಕು?

POLATICAL STATE

*ನಿಮ್ಮ ಜೇಬು ತುಂಬಿದರೆ ಸಾಕೆ? ಬಡವರ ಸ್ಥಿತಿ ಏನಾಗಬೇಕು?; ಸರ್ಕಾರಕ್ಕೆ ಡಿಕೆಶಿ  ಪ್ರಶ್ನೆ

ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಎಲ್ಲದಕ್ಕೂ ಕ್ಯೂ: ಡಿ.ಕೆಶಿ

ಹಿರಿಯೂರು/ಬೆಂಗಳೂರು :- ಸರ್ಕಾರದ ಬೊಕ್ಕಸ ತುಂಬಿದರೆ ಸಾಕೇ..? ಬಡವರು, ಜನಸಾಮಾನ್ಯರು ಜೀವನ ನಡೆಸುವುದು ಹೇಗೆ? ಅವರ ಪರಿಸ್ಥಿತಿ ಏನಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಇಂಧನ ತೈಲ ಬೆಲೆ ಏರಿಕೆ ಖಂಡಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಐದು ದಿನಗಳ ಕಾಲ ರಾಜ್ಯಾದ್ಯಂತ ಹಮ್ಮಿಕೊಂಡಿರುವ ‘100 ನಾಟ್ ಔಟ್’ ಆಂದೋಲನ ಭಾಗವಾಗಿ ಶಿವಕುಮಾರ್ ಅವರು ಚಿತ್ರದುರ್ಗದ ಹಿರಿಯೂರು ತಾಲೂಕು ಕೇಂದ್ರದಲ್ಲಿ ಶನಿವಾರ ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಈ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಅವರು ಸರ್ಕಾರದ ವಿರುದ್ಧ ಹರಿಹಾಯ್ದಿದ್ದು ಹೀಗೆ:

‘ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಮಾಡುತ್ತಿರುವ ಐದು ದಿನಗಳ ಪ್ರತಿಭಟನಾ ಆಂದೋಲನ ಭಾಗವಾಗಿ ಹಿರಿಯೂರು ತಾಲೂಕು ಕೇಂದ್ರಕ್ಕೆ ಇಂದು ಆಗಮಿಸಿದ್ದೇನೆ.

ನಿನ್ನೆ ರಾಜ್ಯ ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಮಾಡಿದ್ದು, ಇಂದು ತಾಲೂಕು ಕೇಂದ್ರಗಳಲ್ಲಿ, ನಾಳೆ ಹೋಬಳಿ ಹಾಗೂ ಜಿಲ್ಲಾ ಪಂಚಾಯಿತಿ ಕೇಂದ್ರಗಳಲ್ಲಿ, ನಾಡಿದ್ದು ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ, ಉಳಿದ ಕೇಂದ್ರಗಳಲ್ಲಿ 15ರಂದು ಪ್ರತಿಭಟನೆ ಮಾಡುತ್ತೇವೆ.

ಐದು ದಿನ ಐದು ಸಾವಿರ ಪೆಟ್ರೋಲ್ ಬಂಕ್ ಗಳಲ್ಲಿ ಪ್ರತಿಭಟನೆ ಮಾಡುತ್ತಿದ್ದೇವೆ. ಇದು ಒಬ್ಬರ ಕಾರ್ಯಕ್ರಮ ಅಲ್ಲ. ಕಾಂಗ್ರೆಸ್ ಕಾರ್ಯಕ್ರಮ ಅಲ್ಲ. ಇದು ಜನತಾದಳ, ಬಿಜೆಪಿ ಹಾಗೂ ಎಲ್ಲ ಜನರ ಕಾರ್ಯಕ್ರಮ.IMG 20210612 WA0015

*ಬಿಜೆಪಿಯವರೇ ಕಲಿಸಿದ ಪಾಠವಿದು*

ಬಿಜೆಪಿಯವರು ಈ ಹಿಂದೆ ಇದೇ ಕೆಲಸ ಮಾಡಿದ್ದರಲ್ಲ.., ಅವರು ಪ್ರತಿಭಟನೆ ಮಾಡಿದ್ದನ್ನು ನಾವು ಈಗ ಮುಂದುವರಿಸುತ್ತಿದ್ದೇವೆ. ಅವರು ಪೆಟ್ರೋಲ್ ಬೆಲೆ ₹52 ತಲುಪಿದಾಗ ದೊಡ್ಡ ಹೋರಾಟ ಮಾಡಿದ್ದರು. ಈಗ ₹100 ಆಗಿದೆ.

ಪೆಟ್ರೋಲ್ ಮೇಲೆ ₹62 ತೆರಿಗೆ ವಿಧಿಸಲಾಗಿದೆ. ಇದೊಂದೇ ವರ್ಷ ತಿಂಗಳಿಗೆ ಸರಾಸರಿ 18 ಬಾರಿಯಂತೆ ಬೆಲೆ ಹೆಚ್ಚಿಸಲಾಗಿದೆ. ಆ ಮೂಲಕ ಇಂಧನ ತೈಲ ಬೆಲೆಯಲ್ಲಿ ಶತಕ ಬಾರಿಸಿದೆ. ಇದಕ್ಕಾಗಿ ಹಲವೆಡೆ ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ. ಕೆಲವೆಡೆ ತಮಟೆ, ಜಾಗಟೆ ಹೊಡೆದು ಪ್ರತಿಭಟನೆ ಮಾಡುತ್ತಿದ್ದಾರೆ. ಬಿಜೆಪಿಯವರೇ ಇದನ್ನೆಲ್ಲ ನಮಗೆ ಹೇಳಿಕೊಟ್ಟರು.IMG 20210612 WA0021

ಪೆಟ್ರೋಲ್ ಡೀಸೆಲ್ ಬೆಲೆ ಇಷ್ಟು ಬಾರಿ ಹೆಚ್ಚಳ ಮಾಡಿದ್ದೀರಲ್ಲಾ.., ರೈತರ ಬೆಂಬಲ ಬೆಲೆ ಎಷ್ಟು ಬಾರಿ ಹೆಚ್ಚಿಸಿದ್ದೀರಿ? ರೈತನ ಎಲ್ಲ ಬೆಳೆಯ ಬೆಲೆಯನ್ನು ಎಷ್ಟು ಬಾರಿ ಹೆಚ್ಚಿಸಿದ್ದೀರಿ? ದಿನಗೂಲಿ, ಖಾಸಗಿ ಕಾರ್ಮಿಕರು, ನೌಕರರು, ನರೇಗಾ ಕಾರ್ಮಿಕರ ವೇತನ ಎಷ್ಟು ಬಾರೀ ಹೆಚ್ಚಿಸಿದ್ದೀರಿ? ಎಂದು ಯಡಿಯೂರಪ್ಪ ಹಾಗೂ ಮೋದಿ ಅವರನ್ನು ಕೇಳಲು ಬಯಸುತ್ತೇನೆ.

*ಎಲ್ಲ ಸೇರಿ ಸರಕಾರ ಕಿತ್ತೊಗೆಯಬೇಕು*

ನಿಮ್ಮ ಜೇಬು ಮಾತ್ರ ತುಂಬಬೇಕಾ? ಬಡವರು ಏನು ಮಾಡಬೇಕು? ಇದಕ್ಕಾಗಿ ನಾವು ಹೋರಾಟ ಮಾಡುತ್ತಿದ್ದೇವೆ. ಬಿಜೆಪಿ, ದಳದವರು ಹಾಗೂ ಜನ ಸಾಮಾನ್ಯರು ಎಲ್ಲ ಸೇರಿ ಈ ಸರ್ಕಾರ ಕಿತ್ತೊಗೆಯಬೇಕು. ಹೀಗಾಗಿ ದೇಶದ ಉದ್ದಗಲಕ್ಕೂ ಈ ಪ್ರತಿಭಟನೆ ಮಾಡಲಾಗುತ್ತಿದೆ.

ನಮ್ಮ ಕಾರ್ಯಕ್ರಮವನ್ನು ನಮ್ಮ ನಾಯಕರು ಜೂಮ್ ಮೂಲಕ ಪರಿಶೀಲಿಸುತ್ತಿದ್ದಾರೆ. ಅವರಿಗೆ ಜವಾಬ್ದಾರಿ ನೀಡಿದ್ದೇವೆ. ಹೀಗೆ ಮುಂದಿನ ದಿನಗಳಲ್ಲೂ ಜನರ ಸಮಸ್ಯೆಗಳಿಗೆ ನಾವು ಧ್ವನಿಯಾಗುತ್ತೇವೆ. ಅದಕ್ಕೆ ಬೇಕಾದ ಕಾರ್ಯಕ್ರಮ ರೂಪಿಸುತ್ತೇವೆ.IMG 20210612 WA0011

*ಹೆಣ ಸುಡಲು ಕ್ಯೂ..*

ರಾಜ್ಯದಲ್ಲಿ ಹೆಣ ಸುಡಲು ಕ್ಯೂ ನಿಲ್ಲಬೇಕಾದ ಸ್ಥಿತಿ ನಿರ್ಮಾಣವಾಯ್ತಲ್ಲ, ಬೆಡ್ ಪಡೆಯಲು, ಆಂಬುಲೆನ್ಸ್ ಸೇವೆಗೆ, ಔಷಧಿ, ಲಸಿಕೆಗೂ ಕ್ಯೂ ಆಯ್ತಲ್ಲ.. ಅವರ ಆಡಳಿತಕ್ಕೆ ಇಸಕ್ಕಿಂಥ ಬೇರೆ ಸಾಕ್ಷಿ ಬೇಕೇ? ಔಷಧಿ, ಹಾಸಿಗೆ, ಲಸಿಕೆ ಎಲ್ಲದರಲ್ಲೂ ಹಣ ಮಾಡುತ್ತಿದ್ದಾರೆ. ಅವರೇ ಕಾಯಿಲೆ ತಂದವರು. ಈಗ ಏನು ಮಾಡಿದ್ದಾರೆ? ಜನ ಈ ಸರ್ಕಾರಕ್ಕೆ ಉಗಿಯುತ್ತಿದ್ದಾರೆ.

ಸರ್ಕಾರದ ನಾಯಕತ್ವ ಬದಲಾವಣೆ ವಿಚಾರವಾಗಿ ಯಾವ ಸಿನಿಮಾ ತೋರಿಸುತ್ತಾರೋ ನಾವು ನೋಡುತ್ತೇವೆ.’

*ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಎಲ್ಲದಕ್ಕೂ ಕ್ಯೂ: ಡಿ.ಕೆ. ಶಿವಕುಮಾರ್ ತರಾಟೆ*

‘ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಆಸ್ಪತೆಯಲ್ಲಿ ಹಾಸಿಗೆ, ಚಿಕಿತ್ಸೆ, ಆಕ್ಸಿಜನ್, ಔಷಧಿ, ಕೊನೆಗೆ ಶವ ಸಂಸ್ಕಾರ ಸೇರಿ ಎಲ್ಲದಕ್ಕೂ ಜನ ಕ್ಯೂ ನಿಲ್ಲುವಂತೆ ಮಾಡಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಬಡವರಿಗೆ ಆಹಾರ ಕಿಟ್ ಹಾಗೂ ಆರ್ಥಿಕ ನೆರವು ವಿತರಣೆ ಕಾರ್ಯಕ್ರಮದಲ್ಲಿ ಶನಿವಾರ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಿಷ್ಟು:IMG 20210612 WA0019

‘ದೇಶದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಪ್ರತಿಯೊಂದು ವಿಚಾರಕ್ಕೂ ನಿಮ್ಮನ್ನೆಲ್ಲ ಕ್ಯೂ ನಿಲ್ಲಿಸಿದರಲ್ಲಾ ಅಂತಾಸಂಕಟವಾಗುತ್ತಿದೆ. ನೋಟು ರದ್ದು ಮಾಡಿ, ನಿಮ್ಮ ದುಡ್ಡು ನೀವು ತೆಗೆದುಕೊಳ್ಳಲು ಕ್ಯೂ ನಿಲ್ಲಿಸಿ ಸಾಯಿಸಿದರು. ನಂತರ ಆಧಾರ್ ಜೋಡಣೆ ವಿಚಾರವಾಗಿ ಮತ್ತೆ ಬ್ಯಾಂಕ್ ಮುಂದೆ ಕ್ಯೂ ನಿಲ್ಲಿಸಿದರು.

ದೇಶಕ್ಕೆ ಮಹಾಮಾರಿ ಕರೆತಂದು, ಆಸ್ಪತ್ರೆ ಮುಂದೆ ಕ್ಯೂ, ಆಂಬುಲೆನ್ಸ್ ಗೂ ಕ್ಯೂ, ಔಷಧಿಗೂ ಕ್ಯೂ, ಆಕ್ಸಿಜನ್ ಗೂ ಕ್ಯೂ, ಕೊನೆಗೆ ಶವ ಸಂಸ್ಕಾರಕ್ಕೂ ಕ್ಯೂ ನಿಲ್ಲಿಸಿದರು.

ಈಗ ಆಹಾರ ಕಿಟ್ ಕೊಡಲು ನಾವು ನಿಮ್ಮನ್ನು ಕ್ಯೂ ನಿಲ್ಲಿಸಿದ್ದೇವೆ. ಇದು ಸರ್ಕಾರದ ಆಹಾರ ಕಿಟ್ ಅಲ್ಲ, ಕಾಂಗ್ರೆಸ್ ನಾಯಕರು ತಮ್ಮ ಶ್ರಮದಿಂದ ಸಂಪಾದಿಸಿದ ಸ್ವಂತ ಹಣದಲ್ಲಿ ನೀಡುತ್ತಿರುವ ಕಿಟ್. ಬೆಂಗಳೂರಿನಿಂದ ದಿಲ್ಲಿವರೆಗೆ ದೇಶದಲ್ಲಿ ನೀವು ಬದಲಾವಣೆ ತರಬೇಕು.

ಚುನಾವಣೆ ಕಾರಣಕ್ಕೆ ನಾವು ಇಲ್ಲಿಗೆ ಬಂದು ಈ ಕಾರ್ಯಕ್ರಮ ಮಾಡುತ್ತಿಲ್ಲ. ದೇಶದೆಲ್ಲೆಡೆ ಜನ ಸಂಕಟದಲ್ಲಿದ್ದು, ಅವರಿಗೆ ಸಹಾಯ ಮಾಡಲು ನಾವು ಈ ಇಲ್ಲಿಗೆ ಬಂದಿದ್ದೇವೆ. ನಾವು ಮಾಡುವ ಸಹಾಯದಿಂದ ನಿಮ್ಮ ಜೀವನ ಉದ್ದಾರವಾಗುತ್ತದೆ ಎಂದು ಹೇಳುತ್ತಿಲ್ಲ. ಆದರೆ ಕಷ್ಟದಲ್ಲಿರುವ ಜನರ ಭಾರವನ್ನು ಸ್ವಲ್ಪ ಮಟ್ಟಿಗಾದರೂ ಕಡಿಮೆ ಮಾಡಲು ಪ್ರಯತ್ನ ಮಾಡುತ್ತಿದ್ದೇವೆ.

ಬಡವರು, ಮಧ್ಯಮ ವರ್ಗದವರು ತಮ್ಮ ಬಳಿ ಇದ್ದ ಅಲ್ಪಸ್ವಲ್ಪ ಚಿನ್ನ ಅಡವಿಟ್ಟು ಜೀವನ ಮಾಡಲು ಮುಂದಾಗಿದ್ದಾರೆ. ಅನೇಕರು ಉದ್ಯೋಗ ಕಳೆದುಕೊಂಡರು. ಉದ್ಯೋಗ ಕೊಡುತ್ತೇವೆ ಎಂದವರು ವಿದ್ಯಾವಂತರಿಗೆ ಪಕೋಡಾ ಮಾರಲು ಹೇಳಿದರು. ಪಕೋಡಾ ಮಾಡುವ ಅಡುಗೆ ಎಣ್ಣೆ ಬೆಲೆಯನ್ನು ₹200ಕ್ಕೆ ಹೆಚ್ಚಿಸಿದ್ದಾರೆ. ಇಡೀ ದೇಶದ ಜನರನ್ನು ಬಡತನಕ್ಕೆ ನೂಕಿದ್ದಾರೆ.

ದೇಶದಲ್ಲಿ ಪೆಟ್ರೋಲ್ ಮೂಲಬೆಲೆ ₹35, ಅದಕ್ಕೆ ತೆರಿಗೆ ₹65. ನೆರೆ ರಾಷ್ಟ್ರಗಳಲ್ಲಿ ಅರ್ಧದಷ್ಟಿದ್ದರೂ ನಮ್ಮಲ್ಲಿ ಮಾತ್ರ ಬೆಲೆ ಹೆಚ್ಚುತ್ತಲೇ ಇದೆ. ಈ ಸರ್ಕಾರ ದಿನಾ ಜನರ ಜೇಬು ಪಿಕ್ ಪಾಕೆಟ್ ಮಾಡುತ್ತಿದೆ.IMG 20210612 WA0020

*ಆರ್ಥಿಕ ನೆರವು:*

ನಮ್ಮ ನಾಯಕರು ತಮ್ಮ ಸ್ವಂತ ಹಣದಲ್ಲಿ ನಿಮಗೆ ಸಹಾಯ ಮಾಡಲು ಮುಂದಾಗಿದ್ದಾರೆ. ನಮ್ಮ ನಾಯಕರೆಲ್ಲರೂ ಹಣ ಸೇರಿಸಿ ಈ ಕ್ಷೇತ್ರದ ಬಡ ಕುಟುಂಬಗಳಿಗೆ ತಲಾ ₹1 ಸಾವಿರ ನೀಡುತ್ತಿದ್ದಾರೆ. ಅವರಿಗೆ ಶಕ್ತಿ ತುಂಬಲು ನಾನಿಲ್ಲಿಗೆ ಬಂದಿದ್ದೇನೆ.

ಈ ಹಣ ನಿಮ್ಮ ಎಲ್ಲಾ ಸಮಸ್ಯೆ ಬಗೆಹರಿಸದೆ ಇರಬಹುದು. ಆದರೆ ಕಷ್ಟಕಾಲದಲ್ಲಿ ನಿಮ್ಮ ಜತೆ ನಿಲ್ಲಲು ನಮ್ಮ ನಾಯಕರು ಮುಂದೆ ಬಂದಿದ್ದಾರೆ. ಅನೇಕರಿಗೆ ಊಟಕ್ಕೆ, ಔಷಧಿಗೆ ಹಣವಿರುವುದಿಲ್ಲ. ಹೀಗಾಗಿ ನಿಮ್ಮ ಕಷ್ಟಕ್ಕೆ ಸ್ಪಂದಿಸಲು ಈ ಹೆಜ್ಜೆ ಇಟ್ಟಿದ್ದಾರೆ. ಆ ಮೂಲಕ ನಿಮ್ಮ ಋಣ ತೀರಿಸುವ ಸಣ್ಣ ಪ್ರಯತ್ನ ಮಾಡುತ್ತಿದ್ದಾರೆ.

ಕಳೆದ ಬಾರಿ ಹಾಲು ಕೇಳಿದವರಿಗೆ ಐಪಿಸಿ ಸೆಕ್ಷನ್ 307 ರ ಅಡಿ ಪ್ರಕರಣ ದಾಖಲಿಸಿದ್ದಾರೆ. ಇಲ್ಲಿನ ಬಿಜೆಪಿ ನಾಯಕರು ಪೊಲೀಸರನ್ನು ಬಳಸಿಕೊಂಡು ಮೂರ್ನಾಲ್ಕು ಕೇಸ್ ಹಾಕಿಸಿದ್ದಾರೆ ಎಂದು ಒಬ್ಬರು ಹೆಣ್ಣು ಮಗಳು ಹೇಳುತ್ತಿದ್ದರು. ಆ ರೀತಿ ನಿಮಗೆ ಯಾರಾದರೂ ಯಾವುದೇ ತೊಂದರೆ ಕೊಟ್ಟರೆ ನಮ್ಮನ್ನು ಭೇಟಿ ಮಾಡಿ. ನಿಮ್ಮ ರಕ್ಷಣೆಗೆ ಕಾಂಗ್ರೆಸ್ ಸದಾ ನಿಲ್ಲಲಿದೆ.

ಮುಂದಿನ ದಿನಗಳಲ್ಲಿ ಕಾರ್ಪೊರೇಷನ್ ಚುನಾವಣೆ ಬರುತ್ತಿದೆ, ವಿಧಾನಸಭೆ ಚುನಾವಣೆಯೂ ಬರಲಿದೆ. ನೀವು ಬಿಜೆಪಿಯವರಿಗೆ ಬುದ್ದಿ ಕಲಿಸಬೇಕು. ನಾವು ನಿಮ್ಮ ಜತೆ ಇರುತ್ತೇವೆ.