IMG 20210713 WA0015

ಪಾವಗಡ: ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷರಿಗೆ ಸನ್ಮಾನ

DISTRICT NEWS ತುಮಕೂರು

ಪಾವಗಡ. ತುಮಕೂರು ಜಿಲ್ಲಾ  ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಷಾಬಾಬು ಗೆ ಸನ್ಮಾನ ಕಾರ್ಯಕ್ರಮ. ಪಟ್ಟಣದ ನಿರೀಕ್ಷಣಾ ಮಂದಿರದಲ್ಲಿ ಪಾವಗಡ ತಾಲ್ಲೂಕು ಅಲ್ಪಸಂಖ್ಯಾತರ ಘಟಕದಿಂದ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಪುರಸಭೆ ಸದಸ್ಯ ಮಹಮ್ಮದ್ ಇಮ್ರಾನ್ ನಾನು ಪಕ್ಷದ ಸಿದ್ಧಾಂತದ ಮೇಲೆ‌ ನಂಬಿಕೆ ಇಟ್ಟಿರುವವನು. ಪಕ್ಷ ನಿಷ್ಠೆ, ಬದ್ಧತೆ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೇನೆ. ಇದನ್ನು ನೋಡಿಯೇ ಪಕ್ಷದ ನಾಯಕರು ನನ್ನಗೆ ಪುರಸಭೆ ಸದಸ್ಯ ಟಿಕೆಟ್ ನೀಡಿದರೆ ನಾನು ಕೂಡ ಪುರಸಭೆ ಚುನಾವಣೆಯಲ್ಲಿ ಜಯಗಳಿಸಿದ್ದೇನೆ ಕಾಂಗ್ರೆಸ್ ಪಕ್ಷ ಬಹುದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ ಎಂದರೆ ಅದಕ್ಕೆ ಕಾರ್ಯಕರ್ತರ ಶಕ್ತಿಯೇ ಕಾರಣ.

ಸಾಮಾನ್ಯ ಕಾರ್ಯಕರ್ತರಿಗೂ ಉನ್ನತ ಹುದ್ದೆ ನೀಡುವ ಏಕೈಕ ಪಕ್ಷ ಯಾವುದಾದರೂ ಇದ್ದರೆ ಅದು ಕೇವಲ ಕಾಂಗ್ರೆಸ್ ಮಾತ್ರ’ ಪಕ್ಷದ ಸಂಘಟನೆಗಾಗಿ ನಿಷ್ಠೆಯಿಂದ ದುಡಿದ ಪ್ರತಿಯೊಬ್ಬ ಕಾರ್ಯಕರ್ತರ ಶ್ರಮ ವಿಫಲವಾಗಲು ನಮ್ಮ ನಾಯಕರು ಬಿಡುವುದಿಲ್ಲ’ ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ತುಮಕೂರು ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಷಾಬಾಬು ಮಾತನಾಡಿ ಮಾಜಿ ಸಚಿವರು ಹಾಗೂ ಶಾಸಕರಾದ ವೆಂಕಟರಮಣಪ್ಪ, ಮತ್ತು ಪಾವಗಡ ಬ್ಲಾಕ್ ಕಾಂಗ್ರೆಸ್ ಗ್ರಾಮಾಂತರ ಅಧ್ಯಕ್ಷ ಹಾಗೂ ಜಿ.ಪಂ.ಸದಸ್ಯರಾದ ಹೆಚ್.ವಿ.ವೆಂಕಟೇಶ್ ಅವರ ಶಿಫಾರಸಿನ ಮೇರೆಗೆ ತುಮಕೂರು ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ನೇಮಿಸಿದ್ದಾರೆ ಪಕ್ಷಕ್ಕೆ ಪ್ರಾಮಾಣಿಕತೆ ನಿಷ್ಠೆ ಇದ್ದರೆ ಅವರಿಗೆ ಬೆಲೆ ಸಿಗುತ್ತದೆ. ಅಧಿಕಾರ ಮುಖ್ಯವಲ್ಲಪಕ್ಷ ಮುಖ್ಯ ಎಂದು ನಡೆದವರಿಗೆ ಕಾಂಗ್ರೆಸ್‌ ಪಕ್ಷದಲ್ಲಿಮಾನ್ಯತೆ ಇದೆ ಸರ್ವರನ್ನು ಸಮಾನತೆಯಿಂದ ಕಾಣುವ ಕಾಂಗ್ರೆಸ್‌ ಪಕ್ಷ ಭವಿಷ್ಯದಲ್ಲಿಮತ್ತೆ ಅಧಿಕಾರಕ್ಕೆ ಬರಲು ಎಲ್ಲರೂ ಶ್ರಮಿಸಬೇಕು ಎಂದರು

ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಮುಖಂಡರಾದ. ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಮಹಮ್ಮದ್ ಫಜುಲ್ಲುಲಾ ಸಾಬ್ .ಆರ್ ಟಿ ಖಾನ್. ತಾಲ್ಲೂಕು ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಆರ್ ಕೆ ನಿಸಾರ್. . ಪಟ್ಟಣ ಅಲ್ಪಸಂಖ್ಯಾತರ ಅಧ್ಯಕ್ಷ ರಿಜ್ವಾನ್. ರೋಷನ್. ಅಲಿ. ಮಾತಿನ್ . ವಾಜೀದ್. ಟಿಪ್ಪು. ತಾಜೀಲ್. ರಸೂಲ್. ಬಿ ಎಸ್ಪಿ. ಮಂಜುನಾಥ್ ಹಾಗೂ ಇನ್ನೂ ಮುಂತಾದವರು ಉಪಸ್ಥಿತರಿದ್ದರು

ವರದಿ: ಬುಲೆಟ್ ವೀರಸೇನಯಾದವ್