IMG 20210806 WA0021

ಶ್ರೀ ಸಿದ್ಧಗಂಗಾ ಮಠಕ್ಕೆ ಮುಖ್ಯಮಂತ್ರಿಗಳ ಭೇಟಿ….!

DISTRICT NEWS ತುಮಕೂರು

ತುಮಕೂರು: ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ಇಂದು ತುಮಕೂರಿನ ಶ್ರೀ ಸಿದ್ಧಗಂಗಾ ಮಠಕ್ಕೆ ಭೇಟಿ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ಆಶೀರ್ವಾದ ಪಡೆದರು.

ಮಠದ ಆವರಣದಲ್ಲಿನ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮಿಗಳ ಗದ್ದುಗೆ ಸ್ಥಳಕ್ಕೆ ಭೇಟಿ ನಮನ ಸಲ್ಲಿಸಿದರು. ನಂತರ ಶ್ರೀ ಸಿದ್ದಲಿಂಗ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಮಂತ್ರ ಘೋಷದೊಂದಿಗೆ ಶ್ರೀಗಳು ಮುಖ್ಯಮಂತ್ರಿಗಳಿಗೆ ಶುಭಾಶೀರ್ವಾದ ಮಾಡಿದರು.IMG 20210806 WA0024

ಗಈ ಹಿಂದೆ ಬಸವರಾಜ ಬೊಮ್ಮಾಯಿ ಅವರು ಮಠಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ತೆಗೆಯಲಾಗಿದ್ದ ಭಾವಚಿತ್ರವನ್ನೇ ನೆನಪಿನ ಕಾಣಿಕೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ವಿ ಸೋಮಣ್ಣ, ಮುರುಗೇಶ್ ನಿರಾಣಿ, ಜೆ ಸಿ ಮಾಧುಸ್ವಾಮಿ, ಬಿ ಸಿ ನಾಗೇಶ, ಸಂಸದ ಜಿ ಎಸ್ ಬಸವರಾಜ, ಶಾಸಕರಾದ ಮಹಾಂತೇಶ್ ಕವಟಗಿಮಠ, ಜ್ಯೋತಿ ಗಣೇಶ, ರಾಜೇಶಗೌಡ, ಮಾಜಿ ಸಚಿವರಾದ ರೇಣುಕಾಚಾರ್ಯ, ಸೊಗಡು ಶಿವಣ್ಣ ಮತ್ತು ಇತರರು ಉಪಸ್ಥಿತರಿದ್ದರು.