IMG 20210826 WA0031

15ನೇ ಹಣಕಾಸು ಆಯೋಗದ ಅನುದಾನ ಹಂಚಿಕೆ ಹೆಚ್ಚಿಸಲು ಮನವಿ…!

NATIONAL National - ಕನ್ನಡ

ಕೇಂದ್ರ ಹಣಕಾಸು ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ: ಜಿ.ಎಸ್.ಟಿ. ಪರಿಹಾರ ವಿಸ್ತರಣೆ ಹಾಗೂ 15ನೇ ಹಣಕಾಸು ಆಯೋಗದ ಅನುದಾನ ಹಂಚಿಕೆ ಹೆಚ್ಚಿಸಲು ಮನವಿ

ಬೆಂಗಳೂರು, ಆಗಸ್ಟ್ 26- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಕೇಂದ್ರ ಸರ್ಕಾರದಿಂದ ಜಿ.ಎಸ್.ಟಿ. ಪರಿಹಾರವನ್ನು ಇನ್ನೂ ಮೂರು ವರ್ಷಗಳಿಗೆ ಮುಂದುವರೆಸುವಂತೆ ಹಾಗೂ 15ನೇ ಹಣಕಾಸು ಆಯೋಗದ ಅನುದಾನ ಹಂಚಿಕೆ ಹೆಚ್ಚಿಸುವಂತೆ ಮನವಿ ಮಾಡಿದರು.
ಕೋವಿಡ್ ಸಾಂಕ್ರಾಮಿಕ ದಿಂದಾಗಿ ರಾಜ್ಯಗಳ ತೆರಿಗೆ ಸಂಗ್ರಹ ಕಡಿಮೆಯಾಗಿದ್ದು, ಸಾಮಾನ್ಯ ಸ್ಥಿತಿಗೆ ಬರಲು ಕೆಲವು ವರ್ಷಗಳೇ ಬೇಕಾಗಬಹುದು. ಕಳೆದ ವರ್ಷ ಜಿ ಎಸ್ ಟಿ ಪರಿಹಾರ ಸಾಲ ಒದಗಿಸಲಾಗಿತ್ತು. ಈ ವರ್ಷವೂ ಈ ಸೌಲಭ್ಯ ವಿಸ್ತರಿಸಲಾಗಿದೆ. ಆದರೆ ರಾಜ್ಯಗಳ ಹಣಕಾಸು ಸ್ಥಿತಿ ಸುಧಾರಿಸುವ ವರೆಗೆ ಕೇಂದ್ರದ ನೆರವು ಅತಿ ಅಗತ್ಯವಾಗಿದ್ದು ಮೂರು ವರ್ಷಗಳ ಅವಧಿಗೆ ಜಿ.ಎಸ್. ಟಿ. ಪರಿಹಾರ ವಿಸ್ತರಿಸುವಂತೆ ಮನವಿ ಮಾಡಿದರು.

IMG 20210826 WA0001
15 ನೆ ಹಣಕಾಸು ಆಯೋಗ:
15ನೆ ಹಣಕಾಸು ಆಯೋಗವು 2021 ರಿಂದ 2026 ರ ಅವಧಿಗೆ ರಾಜ್ಯಗಳಿಗೆ ತೆರಿಗೆ ಹಂಚಿಕೆಗೆ ಮಾಡಿದ ಶಿಫಾರಸಿನ ಅನ್ವಯ ರಾಜ್ಯದ ಹಂಚಿಕೆ 14 ನೆ ಹಣಕಾಸು ಆಯೋಗ ಶಿಫಾರಸು ಮಾಡಿದ ಶೇ. 4.71 ರಿಂದ ಶೇ. 3.647 ಕ್ಕೆ ಇಳಿಕೆಯಾಗಿದೆ. ಇದರಿಂದ ಅನುದಾನ ಹಂಚಿಕೆಯಲ್ಲಿ ತೀವ್ರ ಇಳಿಕೆಯಾಗಿದೆ.
ಅನುದಾನ ಹಂಚಿಕೆ ಕುರಿತ ಮಾನದಂಡಗಳನ್ನು ಬದಲಿಸುವಂತೆ ರಾಜ್ಯ ಸರ್ಕಾರವು 15ನೇ ಹಣಕಾಸು ಆಯೋಗಕ್ಕೆ ಈಗಾಗಲೇ ಮನವಿ ಸಲ್ಲಿಸಿದ್ದು ರಾಜ್ಯದ ಮನವಿಯನ್ನು ಆಯೋಗವು ಪರಿಗಣಿಸಿಲ್ಲ. ಇದರಿಂದಾಗಿ ದಕ್ಷಿಣದ ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಮೇಲೆ ತೀವ್ರ ಪರಿಣಾಮ ಬೀರಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.
15ನೇ ಹಣಕಾಸು ಆಯೋಗವು ತನ್ನ ಶಿಫಾ ರಸಿನಲ್ಲಿ ರಾಜ್ಯ ನಿರ್ದಿಷ್ಟ ಅನುದಾನದಡಿ ರಾಜ್ಯಕ್ಕೆ ಬೆಂಗಳೂರಿನ ಜಲಮೂಲಗಳು ಹಾಗೂ ಪೇರಿಫೆರಲ್ ರಿಂಗ್ ರಸ್ತೆಗೆ 6000 ಕೋಟಿ ರೂ. ನಿಗದಿ ಪಡಿಸಿದೆ. ಆದರೆ ಭಾರತ ಸರ್ಕಾರದ ಎಕ್ಸಪ್ಲೆನೇಟರಿ ಮೆಮೊರಂಡಂ ನಲ್ಲಿ ಹಣಕಾಸು ಆಯೋಗ ಈ ಶಿಫಾರಸನ್ನು ಪ್ರಸ್ತಾಪಿಸಿಲ್ಲ. ಇದರಿಂದ ಮೊದಲೇ ತೆರಿಗೆ ಹಂಚಿಕೆಯಲ್ಲಿ ಇಳಿಕೆಯಾಗಿರುವ ರಾಜ್ಯಕ್ಕೆ ಇನ್ನಷ್ಟು ಹಿನ್ನಡೆಯಾಗಲಿದೆ ಎಂದು ವಿತ್ತ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.

IMG 20210826 WA0032

ಮಾಹಿತಿ ತಂತ್ರಜ್ಞಾನ ಹಾಗೂ ಸ್ಟಾರ್ಟ್ ಅಪ್ ರಾಜಧಾನಿ ಎನಿಸಿಕೊಂಡಿರುವ ಬೆಂಗಳೂರು ದೇಶದ ಆರ್ಥಿಕತೆಗೆ ಗಣನೀಯ ಕೊಡುಗೆ ನೀಡುತ್ತಿದೆ. ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಯಿಂದ ಹೆಚ್ಚಿನ ಹೂಡಿಕೆ ಆಕರ್ಷಿಸಲು ಸಾಧ್ಯವಾಗುವುದು. ಆದ್ದರಿಂದ 15 ನೇ ಹಣಕಾಸು ಆಯೋಗದ ಶಿಫಾರಸಿನಂತೆ ಬೆಂಗಳೂರು ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಮನವಿ ಮಾಡಿದರು.