e swathu

ಇ-ಸ್ವತ್ತು ತಂತ್ರಾಂಶ ತಾತ್ಕಾಲಿಕವಾಗಿ ಸ್ಥಗಿತ…!

Genaral STATE
ಇ-ಸ್ವತ್ತು ತಂತ್ರಾಂಶ ತಾತ್ಕಾಲಿಕವಾಗಿ ಸ್ಥಗಿತ
ಬೆಂಗಳೂರು, ಆಗಸ್ಟ್ 30 (ಕರ್ನಾಟಕ ವಾರ್ತೆ):  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಆಸ್ತಿಗಳನ್ನು ಇ-ಸ್ವತ್ತು ಜಯಮೂಲಕ ವಿಭಜನೆ  (Sub division)  ಮಾಡಲು ಅವಕಾಶ ನೀಡಲಾಗಿದ್ದು, ಪ್ರಸ್ತುತ ಇ-ಸ್ವತ್ತು ತಂತ್ರಾಂಶದಲ್ಲಿ ತಾಂತ್ರಿಕ ನಿರ್ವಹಣೆಯನ್ನು ಕೈಗೊಳ್ಳುವ ಸಲುವಾಗಿ ಇ-ಸ್ವತ್ತು ತಂತ್ರಾಂಶದಲ್ಲಿ ಆಸ್ತಿ ವಿಭಜಿಸುವ ಪ್ರಕ್ರಿಯೆಯನ್ನು ಸೆಪ್ಟೆಂಬರ್ 01 ರಿಂದ 07ರವರೆಗೆ ಒಟ್ಟು 7 ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಯ ಇ-ಆಡಳಿತ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.