IMG 20210912 WA0007

ಬೆಂಗಳೂರು ಆರೋಗ್ಯ ಸೇವೆಗಳಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ…!

Genaral STATE

*ಬೆಂಗಳೂರು ಆರೋಗ್ಯ ಸೇವೆಗಳಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಬೆಂಗಳೂರು, ಸೆಪ್ಟೆಂಬರ್ 12:
ಆರೋಗ್ಯ ಸೇವೆಗಳಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ108 ಆರೋಗ್ಯ ಕವಚ ತುರ್ತು ವೈದ್ಯಕೀಯ ಸೇವೆಗೆ ನೂತನವಾಗಿ 120 ನೂತನ ಆಂಬ್ಯುಲೆನ್ಸ್ ಗಳ ನ್ನು ಲೋಕಾರ್ಪಣೆ ಮಾಡಿ ಮಾತನಾಡುತ್ತಿದ್ದರು.

ಬೆಂಗಳೂರು ಆರೋಗ್ಯ ಸೇವೆಗಳು ಸಂಪೂರ್ಣವಾಗಿ ಒಂದು ಪ್ರಾಧಿಕಾರದಡಿಗೆ ಬರಬೇಕು. ಬರುವ ದಿನಗಳಲ್ಲಿ ಇದನ್ನು ಕಾರ್ಯಗತಗೊಳಿಸುವುದಾಗಿ ಮುಖ್ಯಮಂತ್ರಿ ಗಳು ತಿಳಿಸಿದರು.

ಆರೋಗ್ಯಕ್ಕೆ ಜೀವನಾಡಿ ಆಂಬ್ಯುಲೆನ್ಸ್ , ಆರೋಗ್ಯ ಯಾವಾಗ ಕೆಡುತ್ತದೆ ಎಂದು ತಿಳಿಯೋದು ಕಷ್ಟ. ಆರೋಗ್ಯ ಕೈಕೊಟ್ಟ ಸಂದರ್ಭದಲ್ಲಿ ಆಂಬ್ಯುಲೆನ್ಸ್ ಪ್ರಮುಖ ಪಾತ್ರ ವಹಿಸುತ್ತದೆ.

ಇವು ಕೇವಲ ರೋಗಿಗಳ ಸಾಗಾಣಿಕೆಯ ವಾಹನವಾಗದೆ ತುರ್ತು ಚಿಕಿತ್ಸೆ ಕೊಟ್ಟು, ಕರೆ ಮಾಡಿದ ಕೆಲವೇ ನಿಮಿಷದಲ್ಲಿ ತಲುಪಿ, ರೋಗಿಗಳನ್ನು ಆಸ್ಪತ್ರೆಗೆ ಸೇರಿಸುವ ವಾಹನಗಳಾಗಬೇಕು. 108 ಆಂಬ್ಯುಲೆನ್ಸ್ ಗ್ರಾಮೀಣ ಭಾಗಗಳಲ್ಲಿ ಬಹಳ ಉಪಯುಕ್ತವಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

IMG 20210912 WA0006

108 ಆರೋಗ್ಯ ಸಮಸ್ಯೆಗಳಿಗೆ ಆಂಬ್ಯುಲೆನ್ಸ್ ವರದಾನವಾಗಿದೆ. ಈ ಸೇವೆಯು ವಿಸ್ತರಣೆಯಾಗಬೇಕು. ಆರೋಗ್ಯ ಕ್ಷೇತ್ರದಲ್ಲಿ ಸಮಸ್ಯೆ ನಿವಾರಣೆಗೆ ಜನಕಾಳಜಿಯಿಂದ ಶ್ರಮಿಸುತ್ತಿದ್ದಾರೆ ಎಂದರು.

ಕೋವಿಡ್ ನಮ್ಮ ಕಣ್ಣು ತೆರೆಸಿದೆ. ಆರೋಗ್ಯ ಮೂಲಭೂತ ಸೌಕರ್ಯಗಳನ್ನು ನೀಡಲು ನಾವು 70 ವರ್ಷ ಕಾಳಜಿ ಮಾಡಿಲ್ಲ. ರೋಗಿಗಳ ಸಂಖ್ಯೆಗೆ ಅನುಗುಣವಾಗಿ ಹಾಸಿಗೆಗಳು ಇಲ್ಲ. ಹೈದರಾಬಾದ್ ಕರ್ನಾಟಕ ಭಾಗದಲ್ಲಿ 10,000 ರೋಗಿಗಳಿಗೆ ಒಂದು ಬೆಡ್ ಇರುವ ವ್ಯವಸ್ಥೆ ಇದೆ. ರೋಗಿಗಳು ಮತ್ತು ವೈದ್ಯರ ಅನುಪಾತ ಹೆಚ್ಚಾಗಬೇಕು. ಪ್ರಾದೇಶಿಕ ಅಸಮಾನತೆ ಇದೆ. ಕೋವಿಡ್ 1 ಮತ್ತು 2 ನೇ ಅಲೆಯನ್ನು ಯಶಸ್ವಿಯಾಗಿ ಎದುರಿಸಿದ್ದೇವೆ. ಅದು ಸುಲಭವೇನಲ್ಲ.
ಕೋವಿಡ್ ಎದುರಿಸಿ ಸಮರ್ಥವಾಗಿ ನಿರ್ವಹಿಸಲಾಗುತ್ತಿದೆ. ಇದಕ್ಕಾಗಿ ಪೊಲೀಸ್, ವೈದ್ಯರು, ಪೌರಕಾರ್ಮಿಕರು ಹಗಲಿರುಳು ಕೆಲಸ ಮಾಡಿದ್ದಾರೆ ಎಂದು ಶ್ಲಾಘಿಸಿದರು.

ವೈದ್ಯರು ದೇವರ ಪ್ರತಿನಿಧಿಗಳು. 108 ಕ್ಕೆ ಜಿ.ಪಿ.ಎಸ್ ಅಳವಡಿಸಿ. ಲ್ಯಾನ್ ವ್ಯವಸ್ಥೆ ಕಲ್ಪಿಸಿದಲ್ಲಿ , ಸುಲಭವಾಗಿ ಸಂಪರ್ಕ ಸಾಧಿಸಲು ಅನುಕೂಲವಾಗುತ್ತದೆ. ಜೀವ ಉಳಿಸುವ ಎಲ್ಲಾ ಪರಿಕರಗಳನ್ನು ವಾಹನದಲ್ಲಿ ವ್ಯವಸ್ಥೆ ಮಾಡಬೇಕು ಎಂದರು.

ಮುಂದಿನ ದಿನಗಳಲ್ಲಿ ಆರೋಗ್ಯ ಮೂಲಸೌಕರ್ಯಗಳು ಹೆಚ್ಚಲಿವೆ. ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಕ್ರಮ ಕೈಗೊಳ್ಳಲು ಅಧಿಕಾಗಳಿಗೆ ಸೂಚಿಸಲಾಗಿದೆ. ವಿಶೇಷವಾಗಿ ಯಾಗದಿರಿ, ರಾಯಚೂರು, ಕಲಬುರಗಿ ಜಿಲ್ಲೆಗಳಲ್ಲಿ ಹೆಚ್ಚಿದೆ. ಇದೊಂದು ಪಿಡುಗು.ವಿಶ್ವದಲ್ಲಿ ಅತಿ ಹೆಚ್ಚು ಪೌಷ್ಟಿಕ ಆಹಾರದ ಕೊರತೆಯಿಂದ ಮಕ್ಕಳಿಗೆ ಅಂಧತ್ವ ಭಾರತ ದೇಶದಲ್ಲಿ ಉಂಟಾಗುತ್ತಿದೆ. ಕಟ್ಟ ಕಡೆಯ ವ್ಯಕ್ತಿಗೆ ಆರೋಗ್ಯ ಸಮಸ್ಯೆ ನಿವಾರಿಸಲು ಪ್ರಯತ್ನ ಮಾಡಬೇಕು. ಆರೋಗ್ಯ ಸೇವೆಗಳಲ್ಲಿ ಆಮೂಲಾಗ್ರ ಬದಲಾವಣೆ ತರಬೇಕು. ಸಮುದಾಯದ ಆರೋಗ್ಯಕ್ಕೆ ಹೆಚ್ಚು ಆದ್ಯತೆ ನೀಡಬೇಕು ಎಂದರು.

ಆರೋಗ್ಯ ಸೇವೆಯನ್ನು ಪ್ರಾಮಾಣಿಕವಾಗಿ ಮಾಡಬೇಕು,ಇದರಲ್ಲಿ ಆಲಸ್ಯ ಬೇಜವಾಬ್ದಾರಿ ಇರಬಾರದು. ವೈದ್ಯಕೀಯ‌ ಕೆಲಸ ದೇವರು ಮೆಚ್ಚುವ ಕೆಲಸ. ಕರ್ನಾಟಕ ಆರೋಗ್ಯ ಕರ್ನಾಟಕವಾಗಲಿ ಎಂದು ಮುಖ್ಯಮಂತ್ರಿಗಳು ಆಶಿಸಿದರು.

ಸಚಿವರಾದ ಡಾ: ಕೆ.ಸುಧಾಕರ್, ಎಸ್.ಟಿ.ಸೋಮಶೇಖರ್, ಬಿ.ಎ.ಬಸವರಾಜ,ಬಿ.ಶ್ರೀರಾಮುಲು, ಮುನಿರತ್ನ, ಬಿ.ಡಿ.ಎ.ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಸಂಸದ ಪಿ.ಸಿ.ಮೋಹನ್ ಮತ್ತಿತರರು ಉಪಸ್ಥಿತರಿದ್ದರು.

 

*ಆರೋಗ್ಯ ಕವಚ ಸೇವೆಯಡಿ 120 ಆಂಬ್ಯುಲೆನ್ಸ್ ಸೇರ್ಪಡೆ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಲೋಕಾರ್ಪಣೆ*

*ಆಸ್ಪತ್ರೆ ಮ್ಯಾಪಿಂಗ್, ಜಿಪಿಎಸ್ ತಂತ್ರಜ್ಞಾನದ ಮೂಲಕ ಆಂಬ್ಯುಲೆನ್ಸ್ ಸೇವೆಗೆ ಆಧುನಿಕ ಸ್ಪರ್ಶ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್*

IMG 20210912 WA0003

ಈ ಸಂದರ್ಭದಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಆರೋಗ್ಯ ಕವಚ ಯೋಜನೆಯಡಿ 710 ಆಂಬ್ಯುಲೆನ್ಸ್ ಕಾರ್ಯನಿರ್ವಹಿಸುತ್ತಿದ್ದು ಅದರಲ್ಲಿ 155 ಅಡ್ವಾನ್ಸ್ಡ್ ಲೈಫ್ ಸಪೋರ್ಟ್ (ALS) ಅಂಬುಲನ್ಸ್ ಆಗಿವೆ ಎಂದು ಹೇಳಿದರು. ಇಂದು ಲೋಕಾರ್ಪಣೆಗೊಂಡಿರುವ 120 ಆಂಬ್ಯುಲೆನ್ಸ್ ಗಳು ಅಡ್ವಾನ್ಸ್ಡ್ ಲೈಫ್ ಸಪೋರ್ಟ್ (ALS) ಅಂಬುಲನ್ಸ್ ಆಗಿವೆ ಎಂದು ತಿಳಿಸಿದರು.

ಆಂಬ್ಯುಲೆನ್ಸ್ ಸೇವೆ ಆರೋಗ್ಯ ಸೇವೆಯ ಪ್ರಮುಖ ಅಂಗವಾಗಿದ್ದು ತುರ್ತುಪರಿಸ್ಥಿತಿಗಲ್ಲಿ ಜೀವ ಉಳಿಸಲು ನಿರ್ಣಾಯಕ ಪಾತ್ರ ವಹಿಸುತ್ತವೆ. ಹೃದ್ರೋಗ, ಸ್ಟ್ರೋಕ್ ಮುಂತಾದ ಸಂದರ್ಭಗಳಲ್ಲಿ ಗೋಲ್ಡನ್ ಅವರ್ ಎಂದು ಕರೆಯಲ್ಪಡುವ ಸಮಯ ನಿರ್ಣಾಯಕವಾಗಿದ್ದು ಆಂಬ್ಯುಲೆನ್ಸ್ ಸೇವೆಯ ಜಾಲ ವಿಸ್ತರಿಸಿ ಗುಣಮಟ್ಟ ಹೆಚ್ಚಿಸಲು ಹೊಸ ಕಾಯಕಲ್ಪ ನೀಡಲಾಗಿವುದು ಎಂದರು.

2008ರಲ್ಲಿ ಅಂದಿನ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಹಾಗೂ ಅಂದಿನ ಆರೋಗ್ಯ ಸಚಿವ ಶ್ರೀರಾಮುಲು ಅವರ ಅವಧಿಯಲ್ಲಿ ಆರಂಭವಾದ ಆರೋಗ್ಯ ಕವಚ ಸೇವೆಗೆ ಆಧುನಿಕ ಸ್ಪರ್ಶ ನೀಡಲಾಗುವುದು.

ಆಸ್ಪತ್ರೆಗಳ ಮ್ಯಾಪಿಂಗ್, ಜಿಪಿಎಸ್ ತಂತ್ರಜ್ಞಾನ ಅಳವಡಿಸಿಕೊಂಡರೆ ವ್ಯಕ್ತಿ ಕರೆ ಮಾಡಿದ 10-15 ನಿಮಿಷದಲ್ಲಿ ಆಂಬ್ಯುಲೆನ್ಸ್ ತಲುಪಿ, ಸಮೀಪದ ಆಸ್ಪತ್ರೆಯನ್ನೂ ಗುರುತಿಸಬಹುದು. ಈಗ ನಗರ ಪ್ರದೇಶದಲ್ಲಿ 30-45 ನಿಮಿಷ ಹಾಗೂ ಗ್ರಾಮೀಣ ಭಾಗದಲ್ಲಿ 45 ನಿಮಿಷಕ್ಕಿಂತ ಹೆಚ್ಚು ಸಮಯ ಬೇಕಾಗಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ವೇಗವಾಗಿ ಸೇವೆ ದೊರಕುವಂತೆ ಸುಧಾರಣೆ ತರಲಾಗುವುದು. ಈ ನಿಟ್ಟಿನಲ್ಲಿ ಈಗಾಗಲೇ ನೂತನ ಟೆಂಡರ್ ಕರೆದಿದ್ದು ಆದಷ್ಟು ಶೀಘ್ರದಲ್ಲಿ ಆರೋಗ್ಯ ಕವಚ ಸೇವೆಯನ್ನು ಇನ್ನಷ್ಟು ಸುಗಮಗೊಳಿಸಲಾಗುವುದು. ಪ್ರಸ್ತುತ 1 ಲಕ್ಷ ಜನಸಂಖ್ಯೆಗೆ ಒಂದು ಆಂಬ್ಯುಲೆನ್ಸ್ ಲಭ್ಯವಿದ್ದು, ಮುಂದಿನ ದಿನಗಳಲ್ಲಿ 40-50 ಸಾವಿರ ಜನಸಂಖ್ಯೆಗೆ ಒಂದು ಆಂಬ್ಯುಲೆನ್ಸ್ ಲಭ್ಯತೆ ಕಲ್ಪಿಸಲಾಗುವುದು, ಎಂದರು.

ಅಂಬುಲನ್ಸ್ ಚಾಲಕರು ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿ, ಉತ್ಕೃಷ್ಟ ಸೇವೆ ನೆಧ್ವ ನಿಟ್ಟಿನಲ್ಲಿ ಅವರಿಗೆ ಹೆಚ್ಚಿನ ತರಬೇತಿ ನೀಡಲಾಗುವುದು ಎಂದರು.

*5 ಕೋಟಿ ಲಸಿಕೆಯತ್ತ ರಾಜ್ಯ ದಾಪುಗಾಲು*

ರಾಜ್ಯದಲ್ಲಿ ದಿನಕ್ಕೆ ಸರಾಸರಿ 3.8 ಲಕ್ಷ ಡೋಸ್ ಲಸಿಎಕ್ ನೀಡಲಾಗುತ್ತಿದ್ದು ಇದು ಇಡೀ ರಷ್ಯಾ ದೇಶದಲ್ಲಿ ನೀಡುತ್ತಿರುವ ಲಸಿಕೆಗಿಂತ ಹೆಚ್ಚಾಗಿದೆ. ಕರ್ನಾಟಕ 5 ಕೋಟಿ ಡೋಸ್ ಲಸಿಕೆ ವಿತರಣೆ ಪೂರೈಸುವತ್ತ ದಾಪುಗಾಲು ಇಡುತ್ತಿದ್ದು ಶೀಘ್ರವೇ ಈ ಮೈಲಿಗಲ್ಲು ತಲುಪಲಿದೆ, ಎಂದರು.