IMG 20210922 WA0057

ಅನಂತಕುಮಾರ್ ಅವರ ಸೇವಾಗುಣ ಎಲ್ಲರಿಗೂ ಪ್ರೇರಣೆ…!

Genaral STATE

*ಅನಂತಕುಮಾರ್ ಅವರ ಸೇವಾಗುಣ ಎಲ್ಲರಿಗೂ ಪ್ರೇರಣೆ: ಬಸವರಾಜ ಬೊಮ್ಮಾಯಿ*
ಬೆಂಗಳೂರು, ಸೆಪ್ಟೆಂಬರ್ 22: ಅನಂತಕುಮಾರ್ ಅವರ ಜೀವನ ಹಾಗೂ ಸೇವಾಗುಣ ಎಲ್ಲರಿಗೂ ಪ್ರೇರಣೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅದಮ್ಯ ಚೇತನ, ಅನಂತಕುಮಾರ ಪ್ರತಿಷ್ಠಾನ ಆಯೋಜಿಸಿದ್ದ ಕೇಂದ್ರದ ಮಾಜಿ ಸಚಿವ ದಿವಂಗತ ಎಚ್ ಎನ್ ಅನಂತಕುಮಾರ್ ಅವರ 62ನೆ ಜನ್ಮ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಡಿಯೋ ಸಂವಾದದ ಮೂಲಕ ಭಾಗವಹಿಸಿ ಅವರು ಮಾತನಾಡಿದರು.

ಅನಂತಕುಮಾರ್ ಅವರದು ಚೈತನ್ಯಶೀಲ, ಪ್ರೇರಣಾದಾಯಕ ವ್ಯಕ್ತಿತ್ವ. ಕಾಲೇಜು ದಿನಗಳಿಂದಲೂ ಸಂಘಟನಾ ಚತುರರಾಗಿ ವೈಚಾರಿಕವಾಗಿ ಸ್ಪಷ್ಟತೆಯನ್ನು ಹೊಂದಿದ್ದರು. ಕೇಂದ್ರಸರ್ಕಾರದ ದಿಟ್ಟ ನಿರ್ಧಾರಗಳಾದ ಸಂವಿಧಾನದ
370 ನೆ ವಿಧಿ ರದ್ದು, ಜಿಎಸ್‌ಟಿ ಮಸೂದೆ ಕರಡು ರಚಿಸುವುದರಲ್ಲಿ ದೊಡ್ಡ ಪಾತ್ರ ವಹಿಸಿದ್ದಾರೆ ಎಂದರು.
ಅದಮ್ಯ ಚೇತನ ಸೇವಾ ಸಂಸ್ಥೆ, ಮಧ್ಯಾಹ್ನದ ಊಟ ಹಾಗೂ ಶಾಲಾ ಮಕ್ಕಳಿಗೆ ಆಹಾರ ಸುರಕ್ಷತೆ ನೀಡುವ ಸಾರ್ಥಕ ಕಾರ್ಯ ಮಾಡುತ್ತಿದ್ದು, ರಾಜಸ್ತಾನ, ಕರ್ನಾಟಕ ಹಾಗೂ ಇತರ ರಾಜ್ಯಗಳಲ್ಲಿ ಸಂಸ್ಥೆ ಬೆಳೆದು ನಿಂತಿದೆ. ‘ಲಕ್ಷಾಂತರ ಮಕ್ಕಳಿದ್ದಾರೆ ಅವರು ನನ್ನ ಮಕ್ಕಳು. ಅವರಿಗೆ ಆಹಾರವನ್ನು ಕೊಡುವುದು ನನ್ನ ಕೆಲಸ’ ಎಂಬ ಅನಂತಕುಮಾರ್ ಅವರ ನುಡಿಗಳನ್ನು ಮುಖ್ಯಮಂತ್ರಿಗಳು ಸ್ಮರಿಸಿದರು. ಸಸ್ಯಾಗ್ರಹ ಕಾರ್ಯಕ್ರಮದಿಂದ ಬೆಂಗಳೂರು ನಗರದಲ್ಲಿ ಸಸಿಗಳನ್ನು ನೆಡುವ ಮುಖಾಂತರ ಒಂದು ಆಂದೋಲನ ರೂಪಿಸಿದರು ಎಂದರು.

IMG 20210922 WA0055
*ಸಾಧನಿಕಗೆ ಸಾವು ಅಂತ್ಯವಲ್ಲ. ಸಾವಿನ ನಂತರವೂ ಅವರು ಬದುಕುತ್ತಾರೆ*
ವಿವೇಕಾನಂದರು ಹೇಳಿದಂತೆ ಸಾಧನಿಕಗೆ ಸಾವು ಅಂತ್ಯವಲ್ಲ. ಸಾವಿನ ನಂತರವೂ ಅವರು ಬದುಕುತ್ತಾರೆ. ಅನಂತಕುಮಾರ್ ಅವರ ಸೇವಾ ಜೀವನ , ಅವರ ಸೇವಾ ಗುಣ ಮತ್ತು ಅವರ ಸಂಬಂಧಗಳೆಲ್ಲವೂ ಸೇವೆಯಿಂದ ಕೂಡಿದೆ. ರಾಜಕಾರಣಿಗೆ ಕೇವಲ ರಾಜಕಾರಣ, ಸರ್ಕಾರದ ಕೆಲಸದ ಜೊತೆಗೆ ಜನಪರ ಕೆಲಸ ಮಾಡಿದರೆ ಅವರೆಂದೂ ನಿವೃತ್ತಿ ಆಗುವುದಿಲ್ಲ ಅಥವಾ ಬಳಲುವುದೂ ಇಲ್ಲ. ಆ ಕೆಲಸವನ್ನು ಅನಂತಕುಮಾರ್ ಮಾಡಿದ್ದಾರೆ. ರಾಷ್ಟಮಟ್ಟದಲ್ಲಿ ವಾಜಪೇಯಿಯವರ ನೇತೃತ್ವದಲ್ಲಿ ಭೂಮಿಯಿಂದ ಆಕಾಶದವರೆಗೂ ಅವರ ಸೇವೆ ಇದೆ. ಬೇವುಲೇಪಿತ ಯೂರಿಯಾ, ಕಡಿಮೆ ಬೆಲೆಯಲ್ಲಿ ಗೊಬ್ಬರ , ಜನೌಷಧ ಕೇಂದ್ರ ಹೀಗೆ ಅನೇಕ ಕಾರ್ಯಕ್ರಮಗಳನ್ನು ದೇಶದ ಜನರಿಗೆ ನೀಡಿದ್ದಾರೆ.
ಸದಾ ಕಾಲ ಪ್ರರಣೆ ನೀಡುವ ಅನಂತಕುಮಾರ್ ಅವರು ಹಾಕಿಕೊಟ್ಟ ಸೇವಾ ಗುಣದ ಮಾರ್ಗದಲ್ಲಿ ನಡೆಯುವ ಮೂಲಕ ಅವರಿಗೆ ಗೌರವವನ್ನು ಸಲ್ಲಿಸಬೇಕು . ಜನಸೇವೆಯ ಹಾದಿಯಲ್ಲಿಯೇ ಶ್ರೀಮತಿ ತೇಜಸ್ವಿನಿ ಅನಂತಕುಮಾರ್ ಅವರು ನಡೆಯುತ್ತಿದ್ದಾರೆ. ಅದಮ್ಯ ಚೇತನ ಅನಂತಕುಮಾರ್ ಸೇವಾ ಪ್ರತಿಷ್ಠಾನದ ಸಮಾಜಮುಖಿ ಕಾರ್ಯಕ್ರಮಕ್ಕೆ ಸರ್ಕಾರದ ಬೆಂಬಲ ಸದಾ ಇರಲಿದೆ ಎಂದರು.

ಈ ಸಂದರ್ಭದಲ್ಲಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ವಿ. ಸೋಮಣ್ಣ, ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್, ತೇಜಸ್ವಿನಿ ಅನಂತಕುಮಾರ್ ಮತ್ತಿತರರು ಉಪಸ್ಥಿತರಿದ್ದರು.