IMG 20211018 WA0017

ಪಾವಗಡ: ವೈದ್ಯರ ನಿರ್ಲಕ್ಷದಿಂದಾಗಿ ಬಾಣಂತಿ ಮೃತಿ….!

DISTRICT NEWS ತುಮಕೂರು

ವೈದ್ಯರ ನಿರ್ಲಕ್ಷದಿಂದಾಗಿ ಬಾಣಂತಿ ಮೃತಿ….!

ಪಾವಗಡ ಪಟ್ಟಣದ ಮಾತೃಶ್ರೀ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಇಂದು ರಾಜವಂತಿ ಗ್ರಾಮದ ರಾಜೇಂದ್ರ ಎಂಬುವವರ ಧರ್ಮಪತ್ನಿ ಹೇಮಲತ ಎಂಬುವವರು ಮಾತೃಶ್ರೀ ಆಸ್ಪತ್ರೆಯ ಡಾಕ್ಟರ್ ಜಗದೀಶ್ ಅವರ ಬಳಿ ಸುಮಾರು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದು. ಹೇಮಲತಾ ಎಂಬುವವರು ಎರಡನೇ ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು ನಾರ್ಮಲ್ ಹೆರಿಗೆಯ ನಂತರ ಮಗುವಿಗೆ ಜನ್ಮ ನೀಡಿದ ತಾಯಿ ಮರಣ ಹೊಂದಿರುತ್ತಾರೆ.ಡಾಕ್ಟರ್ ಜಗದೀಶ್ ರವರ ನಿರ್ಲಕ್ಷದಿಂದಾಗಿ ಮಹಿಳೆಯು ಸಾವನ್ನಪ್ಪಿದ್ದಾಳೆ ಎಂದು ಮಹಿಳೆಯ ಸಂಬಂಧಿಕರು ಆಸ್ಪತ್ರೆಯ ಚೇರ್ ,ಟೇಬಲ್ ಧ್ವಂಸ ಮಾಡುವುದರ ಮೂಲಕ ಆಕ್ರೋಶವನ್ನು ವ್ಯಕ್ತಪಡಿಸಿದರು.

ಪಾವಗಡ ಟೌನಿನ ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲಾ ಸವಲತ್ತುಗಳಿದ್ದರೂ ಜನರು ಖಾಸಗಿ ಆಸ್ಪತ್ರೆಗಳಿಗೆ ಮೊರೆ ಹೋಗುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಇರುವ ನಿರ್ಲಕ್ಷ್ಯ ಹಾಗೂ ಖಾಸಗಿ ಆಸ್ಪತ್ರೆಗಳ ಬಗ್ಗೆ ಇರುವ ಒಲವುಗಳು ಕಡಿಮೆಯಾದಾಗ ಮಾತ್ರ ಸಾವುಗಳ ಸಂಖ್ಯೆ ಕಡಿಮೆಯಾಗಬಹುದು.

ಈ ಕೂಡಲೇ ಸಂಬಂಧಪಟ್ಟಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜನರು ಸಾಮಾಜಿಕ ಮಾಧ್ಯಮದ ಮುಖಾಂತರ ಜನರುಆಕ್ರೋಶ ವ್ಯಕ್ತಪಡಿಸಿದ್ದಾರೆ