IMG 20211019 WA0037

ಭಜರಂಗದಳದ ಸಂಚಾಲಕರ ಮೇಲೆ ಹಲ್ಲೆ….!

DISTRICT NEWS ತುಮಕೂರು

ಭಜರಂಗದಳದ ಸಂಚಾಲಕರ ಮೇಲೆ ಹಲ್ಲೆ….!

ತುಮಕೂರು:  ಭಜರಂಗದಳದ ಸಂಚಾಲಕರಾದ ಮಂಜು ಭಾರ್ಗವ ಅವರ ಮೇಲೆ ಹಲ್ಲೆ ನಡೆದಿದೆ. ಮಂಜು ಭಾರ್ಗವ್ ಅವರು ಸತತ ಮೂರು ತಿಂಗಳಿಂದ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದುದನ್ನು ತಡೆದಿದ್ದರುಆದ್ದರಿಂದ ಈ ದಿನ ಮಂಜು ಭಾರ್ಗವ್ ಹಾಗೂ ಕಾರ್ಯಕರ್ತನಾದ ಕಿರಣ್ ಮೇಲೆ ಅಪರಿಚಿತ ದುಷ್ಕರ್ಮಿಗಳು ಕಾರು ಅಡ್ಡಗಟ್ಟಿ ರಾಡ್ ನಿಂದ ಹಲ್ಲೆ ಮಾಡಿ ಪರಾರಿಯಾಗಿರುತ್ತಾರೆ. ನಂತರ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ

.ವಿಷಯ ತಿಳಿದ ಭಜರಂಗದಳದ ಕಾರ್ಯಕರ್ತರು ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕಂದು ಆಕ್ರೋಶ ವ್ಯಕ್ತಪಡಿಸಿದರು.

ಸಾಮಾಜಿಕ ಮಾಧ್ಯಮದ ಮೂಲಕ ಹಲವಾರು ಜನರು ಈ ಕೃತ್ಯವನ್ನು ಖಂಡಿಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ ಹಾಗೂ ಮುಂದಿನ ದಿನಗಳಲ್ಲಿ ಇಂತಹ ಸಂಗತಿಗಳು ನಡೆಯದಂತೆ ಪೊಲೀಸ್ ಇಲಾಖೆಯು ಸೂಕ್ತ ಕ್ರಮಕೈಗೊಳ್ಳಬೇಕೆಂದು ತಿಳಿಸಿದ್ದಾರೆ