IMG 20211101 WA0053

ಪಾವಗಡ: ಸರಳವಾಗಿ ರಾಜ್ಯೋತ್ಸವ ಆಚರಣೆ…!

DISTRICT NEWS ತುಮಕೂರು

ಸರಳ ರಾಜ್ಯೋತ್ಸವ ಆಚರಣೆ
ವೈ.ಎನ್.ಹೊಸಕೋಟೆ: ಗ್ರಾಮಪಂಚಾಯಿತಿ ಅಧ್ಯಕ್ಷೆ ಪದ್ಮಕ್ಕ ಓಬಳೇಶ್ ರವರು 66ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಸೋಮವಾರದಂದು ಗ್ರಾಮಪಂಚಾಯಿತಿ ಆವರಣದಲ್ಲಿ ಭುವನೇಶ್ವರಿ ತಾಯಿಗೆ ಪೂಜೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಕನ್ನಡ ಪ್ರತಿಜ್ಞಾವಿಧಿಯನ್ನು ಗ್ರಾ.ಪಂ ಸದಸ್ಯರು ಮತ್ತು ಸಿಬ್ಬಂದಿ ವರ್ಗ ಸ್ವೀಕರಿಸಿದರು.
ಪ್ರತಿವರ್ಷದಂತೆ ಈ ವರ್ಷವು ಗ್ರಾಮದ ಕನ್ನಡ ಕಲಾ ಮತ್ತು ಸಾಂಸ್ಕೃತಿಕ ಮಂಡಲಿಯ ವತಿಯಿಂದ ಗಾಂಧಿ ವೃತ್ತದಲ್ಲಿ ಕನ್ನಡ ದ್ವಜಾರೋಹಣ ಹಮ್ಮಿಕೊಳ್ಳಲಾಗಿತ್ತು, ಗ್ರಾ.ಪಂ ಅಧ್ಯಕ್ಷೆ ಪದ್ಮಕ್ಕಓಬಳೇಶ್ ಧ್ವಜಾರೋಹಣ ನಡೆಸಿದರು. ಗ್ರಾ.ಪಂ ಸದಸ್ಯರು, ಮಂಡಲಿಯ ಸದಸ್ಯರು, ಮುಖ್ಯಶಿಕ್ಷಕರು ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದ್ದರು.