IMG 20211111 WA0048

ಬಿಟ್ ಕಾಯಿನ್ ವಿಚಾರದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ನಿಷ್ಠೆ, ದಿಟ್ಟತನದಿಂದ ಕೆಲಸ ಮಾಡಿ ಬೊಮ್ಮಾಯಿ ನಾಯಕತ್ವಕ್ಕೆ ಮೋದಿ ಸಮರ್ಥನೆ….!

Genaral National - ಕನ್ನಡ STATE

ಬಸವರಾಜ ಬೊಮ್ಮಾಯಿಗೆ ಮೋದಿ ಅಭಯ

ಬಿಟ್ ಕಾಯಿನ್ ವಿಚಾರದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ

ನಿಷ್ಠೆ, ದಿಟ್ಟತನದಿಂದ ಕೆಲಸ ಮಾಡಿ

ಬೊಮ್ಮಾಯಿ ನಾಯಕತ್ವಕ್ಕೆ ಮೋದಿ ಸಮರ್ಥನೆ ಮಾತು

ನವದೆಹಲಿ:ಬಿಟ್-ಕಾಯಿನ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಯ ನೀಡಿದ್ದಾರೆ. ಬಿಟ್ ಕಾಯಿನ್ ವಿಚಾರವಾಗಿ ತಲೆಕೆಡಿಸಿಕೊಳ್ಳದೆ ಜನಪರ ಕೆಲಸ ಮಾಡಿ ಎಂದು ಹೇಳುವ ಮೂಲಕ ಬೊಮ್ಮಾಯಿ ಅವರ ನಾಯಕತ್ವವನ್ನು ಸಮರ್ಥಿಸಿದ್ದಾರೆ.

ನವದೆಹಲಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ನೂರು ದಿನಗಳ ಆಡಳಿತದ ಕುರಿತು ಚರ್ಚೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಟ್ ಕಾಯಿನ್ ವಿಚಾರವಾಗಿ ಪ್ರಧಾನಿಗಳು ಹೆಚ್ಚು ಮಾತನಾಡಲು ಇಷ್ಟ ಪಡಲಿಲ್ಲ . ಆದರೆ ನಾನೇ ಪ್ರಧಾನಿಗಳಿಗೆ ಈ ವಿಚಾರ ತಿಳಿಸಿದೆ. ಆಗ ಅವರು ಬಿಟ್ ಕಾಯಿನ್ ವಿಚಾರದ ಬಗ್ಗೆ ತಲೆಕೆಡಿಸಿಕೊಳ್ಳದೆ ಜನಪರ ಕೆಲಸ ಮಾಡಿ. ನಿಷ್ಠೆ ದಿಟ್ಟತನದಿಂದ ಜನಪರ ಕೆಲಸ ಮಾಡಿ. ಆಗ ಎಲ್ಲವೂ ಸರಿಹೋಗುತ್ತದೆ. ಸೋಲು ಗೆಲುವು ಇದ್ದೇ ಇರುತ್ತದೆ. ಆ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳಬೇಡಿ ಎಂದು ತಮಗೆ ಹೇಳಿರುವುದಾಗಿ ತಿಳಿಸಿದರು.

ಇದರೊಂದಿಗೆ ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಬೊಮ್ಮಾಯಿ ಅವರ ನಾಯಕತ್ವವನ್ನು ಸಮರ್ಥಿಸಿದ್ದಾರೆ.

ಮೋದಿಯವರನ್ನು ನವದೆಹಲಿಯಲ್ಲಿ ಭೇಟಿ ಮಾಡಿದ ಮುಖ್ಯಮಂತ್ರಿಗಳು
ಮೋದಿಯವರನ್ನು ನವದೆಹಲಿಯಲ್ಲಿ ಭೇಟಿ ಮಾಡಿದ ಮುಖ್ಯಮಂತ್ರಿಗಳು

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರನ್ನು ನಾನು ಭೇಟಿ ಮಾಡಿದ್ದೆ. ಇತ್ತೀಚೆಗೆ ಕೋರ್ ಕಮಿಟಿ ಸಭೆಯಲ್ಲಿ ನಡೆದಂತಹ ವಿಷಯಗಳ ಕುರಿತು ವಿವರಗಳನ್ನು ಅವರಿಗೆ ನೀಡಿದೆ ಎಂದು ಬೊಮ್ಮಾಯಿ ಹೇಳಿದರು.

ವಿಧಾನಪರಿಷತ್ ಚುನಾವಣೆಗೆ 25 ಜನ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಿದೆ. ಈ ಪ್ರಕ್ರಿಯೆಯನ್ನು ತುರ್ತಾಗಿ ಮುಗಿಸಬೇಕೆಂದು ಮನವಿ ಮಾಡಿಕೊಂಡೆ. ಇದರಿಂದ ಚುನಾವಣೆಗೆ ತಯಾರಿ ಮಾಡಿಕೊಳ್ಳಲು ಅನುಕೂಲವಾಗುತ್ತದೆ ಎಂದು ವಿವರಿಸಿದ್ದೇನೆ.

ರಾಜ್ಯದಲ್ಲಿ ಬಿಜೆಪಿ ನಾಯಕರ ನಾಲ್ಕು ತಂಡಗಳ ಪ್ರವಾಸದ ಕುರಿತು ಅವರು ಮಾಹಿತಿ ಪಡೆದಿದ್ದಾರೆ. ನಾವು ಉತ್ತರಪ್ರದೇಶ ಚುನಾವಣೆಯಲ್ಲಿ ತಲ್ಲೀನರಾಗಿ ದೇವೆ. ಆದರೂ ಕೂಡ ಕರ್ನಾಟಕ ನಮ್ಮ ಪಾಲಿಗೆ ಮಹತ್ವದ ರಾಜ್ಯ. ಹಾಗಾಗಿ ಒಂದು ದಿನ ಬಿಡುವು ಮಾಡಿಕೊಂಡು ಕರ್ನಾಟಕಕ್ಕೆ ಬರುತ್ತೇನೆ. ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಪದಾಧಿಕಾರಿಗಳ ಜೊತೆ ಸಭೆ ನಡೆಸುತ್ತೇನೆ ಎಂದು ಅವರು ತಿಳಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ನಾನು ಭೇಟಿ ಮಾಡಿದ್ದೆ. ಅವರ ಜೊತೆ ಹೆಚ್ಚು ಹೊತ್ತು ಚರ್ಚೆ ಮಾಡಲು ಸಾಧ್ಯವಾಗಲಿಲ್ಲ. ಹೆಚ್ವು ಹೊತ್ತು ಚರ್ಚೆ ನಡೆದಿಲ್ಲ. ಬಿಟ್ ಕಾಯಿನ್ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಆ ಬಗ್ಗೆ ಅವರಿಗೆ ಸಾಕಷ್ಟು ಮಾಹಿತಿ ಇರುತ್ತದೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.