IMG 20211210 WA0045

ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಗೆ ಹೆಚ್ಚು ಸ್ಥಾನ….!

POLATICAL STATE

 

ಕನಕಪುರ:ಮೇಕೆದಾಟು ಅಣೆಕಟ್ಟೆ ಅನುಷ್ಠಾನಕ್ಕೆ ಆಗ್ರಹಿಸಿ ಪಾದಯಾತ್ರೆ ವಿಚಾರ ಸಂಬಂಧ ಕಾವೇರಿ ಜಲಾನಯನ ಪ್ರದೇಶ ಹಾಗೂ ಬೆಂಗಳೂರಿನ ಕಾಂಗ್ರೆಸ್ ಮುಖಂಡರ ಸಭೆಯನ್ನು ಡಿ. 13 ರಂದು ಸಂಜೆ ಬೆಂಗಳೂರಿನಲ್ಲಿ ಕರೆಯಲಾಗಿದೆ.

ಶಾಸಕರನ್ನು ಹೊರತುಪಡಿಸಿ ಪಕ್ಷದ ಮುಖಂಡರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ವಿಧಾನಸಭೆ ಚುನಾವಣೆ ಪರಾಜಿತ ಅಭ್ಯರ್ಥಿಗಳು, ಸಮನ್ವಯಕಾರರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ಮುಖಂಡರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಪಾದಯಾತ್ರೆ ಯಲ್ಲಿ ಭಾಗವಹಿಸುವವರು ಆನ್ ಲೈನ್ ನಲ್ಲಿ ತಮ್ಮ ಫೋಟೋ ಸಮೇತ ಹೆಸರು ನೋಂದಣಿ ಮಾಡಿಸಬೇಕು. ಒಂದು ದಿನ, ಎರಡು ದಿನ, ಮೂರು ದಿನದಿಂದ ಪಾದಯಾತ್ರೆ ಮುಗಿಯುವವರೆಗೂ ಎಷ್ಟು ದಿನ ಬೇಕಾದರೂ ಅವರು ಪಾದಯಾತ್ರೆಯಲ್ಲಿ ಭಾಗವಹಿಸಬಹುದು. ಒಂದು ದಿನ ನಡೆಯುವವರಿಗೆ ಒಂದು, ಎರಡು ದಿನ ನಡೆಯುವವರಿಗೆ ಬೇರೆ, ಹತ್ತು ದಿನ ನಡೆಯುವವರಿಗೆ ಬೇರೆ – ಹೀಗೆ ಪಾದಯಾತ್ರೆಯಲ್ಲಿ ಭಾಗವಹಿಸುವವರಿಗೆ ಪಕ್ಷದಿಂದ ಸರ್ಟಿಫಿಕೇಟ್ ನೀಡಲಾಗುವುದು.

ಕಾವೇರಿ ಜಲಾನಯನ ಪ್ರದೇಶ ರೈತರು ಹಾಗೂ ಬೆಂಗಳೂರು ಜನರ ಹಿತದೃಷ್ಟಿಯಿಂದ ಈ ಪಾದಯಾತ್ರೆ ಹಮ್ಮಿಕೊಳ್ಳಲಾಗುತ್ತಿದೆ.

*ಕಾಂಗ್ರೆಸ್ ಗೆ ಹೆಚ್ಚು ಸ್ಥಾನ*

ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಒಗ್ಗಟ್ಟು ಪ್ರದರ್ಶಿಸಿದೆ. ನಾವು ನಿರೀಕ್ಷೆ ಮಾಡಿದ್ದಕ್ಕಿಂಥ ಹೆಚ್ಚಿನ ಸೀಟುಗಳನ್ನು ರಾಜ್ಯದಲ್ಲಿ ಗೆಲ್ಲಲಿದ್ದೇವೆ. ಹಿಂದಿನ ಚುನಾವಣೆಯಲ್ಲಿ ಕಳೆದುಕೊಂಡಿದ್ದ ಸೀಟುಗಳನ್ನೂ ಗೆಲ್ಲುವ ಸೂಚನೆ, ಸಾಧ್ಯತೆಗಳಿವೆ.

ಯಡಿಯೂರಪ್ಪನವರು ಹತಾಶರಾಗಿ ಜೆಡಿಎಸ್ ಬೆಂಬಲ ಯಾಚಿಸುತ್ತಿದ್ದಾರೆ. ಬಿಜೆಪಿ ರಾಜ್ಯದಲ್ಲಿ ತನ್ನ ಶಕ್ತಿ ಕಳೆದುಕೊಂಡಿರುವುದಕ್ಕೆ ಇದು ಸಾಕ್ಷಿ.

ಅವರು ಬೆಂಬಲ ಕೇಳಬಾರದು ಅಂತ ಅಲ್ಲ. ಅದು ಅವರ ಹಕ್ಕು. ನಾವೂ ಪಕ್ಷಾತೀತವಾಗಿ ಬೆಂಬಲ ಕೇಳಿದ್ದೇವೆ. ಬಿಜೆಪಿ, ಜೆಡಿಎಸ್, ಪಕ್ಷೇತರರು ಎಲ್ಲರೂ ಕಾಂಗ್ರೆಸ್ ಬೆಂಬಲಿಸಿ ಎಂದಿದ್ದೇವೆ. ಆದರೆ ಯಡಿಯೂರಪ್ಪನವರು ಕಾಂಗ್ರೆಸ್ ಪಕ್ಷವನ್ನು ಧೂಳೀಪಟ ಮಾಡುತ್ತೇವೆ, 15 ವರ್ಷ ವಿರೋಧ ಪಕ್ಷದಲ್ಲೇ ಕೂರಿಸುತ್ತೇವೆ ಎಂದೆಲ್ಲ ಹೇಳಿದ್ದಾರೆ. ಹಾಗೆ ಹೇಳಿದವರು ಹೋಗಿ ಜೆಡಿಎಸ್ ಬೆಂಬಲ ಕೇಳಿದ್ದಾರೆ. ಇದು ಬಿಜೆಪಿ ದುಸ್ಥಿತಿ ಮತ್ತು ಶಕ್ತಿ ಕುಂದಿರುವುದನ್ನು ತೋರಿಸುತ್ತದೆ.

ಕಾಂಗ್ರೆಸ್ ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ. ಸರಕಾರದ ಯಂತ್ರ ದುರುಪಯೋಗ ಆಗಿರೋದ್ರಿಂದ ಒಂದೆರಡು ಕಡೆ ಹೆಚ್ಚು-ಕಮ್ಮಿ ಆಗಬಹುದು. ಆದರೂ ಕಾಂಗ್ರೆಸ್ಸಿಗೆ ಹೆಚ್ಚು ಸ್ಥಾನಗಳು ಬರಲಿವೆ.