IMG 20211228 WA0018

AAP: ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ….!

POLATICAL STATE


ಭ್ರಷ್ಟಾಚಾರ ಖಂಡಿಸಿ ಎಎಪಿ ಪ್ರತಿಭಟನೆ: ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ

ಸಮಾಜ ಕಲ್ಯಾಣ ಇಲಾಖೆಯಲ್ಲಿನ ಭ್ರಷ್ಟಾಚಾರ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಆಮ್‌ ಆದ್ಮಿ ಪಾರ್ಟಿ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ಮಾಡಿದ ಘಟನೆ ಮಂಗಳವಾರ ನಡೆದಿದೆ.

ಒಟ್ಟು ಮೂರು ಕೋಟಿ ರೂ. ಮೊತ್ತದ ಆರು ಕಾಮಗರಿಗಳ ಗುತ್ತಿಗೆ ರದ್ದುಪಡಿಸಿ, ಅವುಗಳನ್ನು ಕೆಆರ್‌ಐಡಿಎಲ್‌ಗೆ ನೀಡಿರುವುದರ ಹಿಂದೆ ಭಾರೀ ಭ್ರಷ್ಟಾಚಾರವಿದೆ ಎಂದು ಆರೋಪಿಸಿ ತಿಪ್ಪಸಂದ್ರ ಮುಖ್ಯರಸ್ತೆಯ ಮಹಾದ್ವಾರದ ಬಳಿ ಆಮ್‌ ಆದ್ಮಿ ಪಾರ್ಟಿ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಪ್ರತಿಭಟನಾನಿರತರನ್ನು ಬಂಧಿಸಿ ಪೊಲೀಸ್‌ ಠಾಣೆಗೆ ಕರೆದೊಯ್ಯುವಾಗ, ಠಾಣೆಯ ಎದುರೇ ಬಿಜೆಪಿ ಕಾರ್ಯಕರ್ತರು ಗೂಂಡಾಗಿರಿ ಮಾಡಿದ್ದಾರೆ.

ಇದರಿಂದ ಎರಡೂ ಪಕ್ಷಗಳ ಕಾರ್ಯಕರ್ತರ ಮಧ್ಯೆ ಗುಂಪುಘರ್ಷಣೆ ನಡೆದಿದೆ. ಆಮ್‌ ಆದ್ಮಿ ಪಾರ್ಟಿಯ ಕಾರ್ಯಕರ್ತರು ಹಾಗೂ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ಮಾಡಿ, ಮಾಧ್ಯಮದವರ ಕ್ಯಾಮೆರಾಗಳನ್ನು ಕಿತ್ತುಕೊಂಡಿದ್ದಾರೆ. ಪ್ರತಿಭಟನೆಗೆ ಸಂಬಂಧಿಸಿ ಎಎಪಿ ಮುಖಂಡರಾದ ಮೋಹನ್‌ ದಾಸರಿ, ಆನಂದ್‌ ವಾಸುದೇವನ್‌, ಜಗದೀಶ್‌ ವಿ ಸದಂ, ವಿನ್ಸೆಂಟ್‌ ಮತ್ತಿತರರನ್ನು ಪೊಲೀಸರನ್ನು ಬಂಧಿಸಿದ್ದಾರೆ.