IMG 20220106 WA0010

ವಿಧಾನಪರಿಷತ್‍ನ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ…

POLATICAL STATE

ವಿಧಾನಪರಿಷತ್‍ನ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು, ಜನವರಿ 06, (ಕರ್ನಾಟಕ ವಾರ್ತೆ):

ಇತ್ತೀಚಿಗೆ ನಡೆದ ರಾಜ್ಯ ವಿಧಾನಪರಿಷತ್ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾದ 25 ಸದಸ್ಯರಲ್ಲಿ ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ ಸರಳ ಸಮಾರಂಭದಲ್ಲಿ 20 ಸದಸ್ಯರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಭಾಪತಿ ಬಸವರಾಜ ಹೊರಟ್ಟಿ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ವಿವಿದ ಕಾರಣಗಳಿಂದಾಗಿ 5 ಸದಸ್ಯರು ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಗೈರಾಗಿದ್ದರು. ಸಮಾರಂಭದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸೇರಿದಂತೆ ಅನೇಕ ಸಚಿವರು ಹಾಗೂ ಶಾಸಕರು ಉಪಸ್ಥಿತರಿದ್ದರು.

IMG 20220106 WA0011

ನೂತನ ಸದಸ್ಯರುಗಳಾದ ಬಿ.ಜಿ.ಪಾಟೀಲ್, ಲಖನ್ ಜಾರಕಿಹೊಳಿ, ಗಣಪತಿ ಉಳ್ವೇಕರ್, ಸಲೀಂ ಅಹ್ಮದ್ ಹಾಗೂ ಎಂ.ಕೆ.ಪ್ರಾಣೇಶ್ ಅವರುಗಳು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಪ್ರದೀಪ ಶೆಟ್ಟರ್, ಕೆ.ಎಸ್.ನವೀನ್, ಅರುಣ್ ಡಿ.ಎಸ್, ದಿನೇಶ್ ಗೂಳಿಗೌಡ, ಎಚ್.ಎಸ್. ಗೋಪಿನಾಥ್ ಹಾಗೂ ಡಾ.ಡಿ.ತಿಮ್ಮಯ್ಯ ಅವರು ಭಗವಂತನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಚನ್ನರಾಜ ಹಟ್ಟಿಹೊಳಿ ಅವರು ವೀರಭದ್ರೇಶ್ವರ ಮತ್ತು ಬಸವೇಶ್ವರ, ಶರಣಗೌಡ ಪಾಟೀಲ ಬಯ್ಯಾಪುರ ಭಗವಂತ ಮತ್ತು ತಂದೆ-ತಾಯಿ, ಕೋಟ ಶ್ರೀನಿವಾಸ ಪೂಜಾರಿ ಅವರು ಭಗವಂತ ಮತ್ತು ವಿ.ಎಸ್.ಆಚಾರ್ಯ, ರಾಘವೇಂದ್ರ ರಾಜಣ್ಣ ಅವರು ಭಗವಂತ ಮತ್ತು ರೈತರು ಹಾಗೂ ಸಿ.ಎನ್. ಮಂಜೇಗೌಡ ಅವರು ತಾಯಿ ಚಾಮುಂಡೇಶ್ವರಿ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ನೂತನವಾಗಿ ಆಯ್ಕೆಯಾದ ಸದಸ್ಯರುಗಳ ಕುಟುಂಬದ ಸದಸ್ಯರು, ಅಭಿಮಾನಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.