IMG 20220124 WA0014

ಬಸವಣ್ಣನ ಕಾಲದ ಅನುಭವ ಮಂಟಪವನ್ನೇ ಮರುಸೃಷ್ಟಿ….!

Genaral STATE

ಬೆಂಗಳೂರು ಜ 24 :- ಬಸವಕಲ್ಯಾಣ ದಲ್ಲಿ ನಿರ್ಮಾಣವಾಗಲಿರುವ ಅನುಭವ ಮಂಟಪದಲ್ಲಿ ಬಸವಣ್ಣನ ಕಾಲದ ಅನುಭವ ಮಂಟಪವನ್ನೇ ಮರುಸೃಷ್ಟಿ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಬಸವಕಲ್ಯಾಣದಲ್ಲಿ ನಿರ್ಮಿಸಲಾಗುತ್ತಿರುವ ಅನುಭವ ಮಂಟಪದ ಪ್ರಗತಿ ಕುರಿತು ಸಭೆ ನಡೆಸಿದರು.

ಅನುಭವ ಮಂಟಪದ ಪ್ರಾತ್ಯಕ್ಷಿಕೆಯನ್ನು ಸಿಎಂ ವೀಕ್ಷಣೆ ಮಾಡಿದರು.

ಬಸವಣ್ಣನವರ ಕಾಲದಲ್ಲಿ ಅನುಭವ ಮಂಟಪವು ಸದಾ ಚಟುವಟಿಕೆಯಿಂದ ಕೂಡಿದ್ದು, ವಿಚಾರ ಮಂಥನ ನಡೆಯುತ್ತಿತ್ತು. ಪ್ರಸ್ತುತ ನಿರ್ಮಿಸುತ್ತಿರುವ ಅನುಭವ ಮಂಟಪದಲ್ಲಿಯೂ ನಿರಂತರ ಚಟುವಟಿಕೆಗಳನ್ನು ನಡೆಸಲು ಪೂರಕವಾಗಿ ಸುಸಜ್ಜಿತ ಸಭಾಂಗಣಗಳು ಮತ್ತು ಇತರ ಮೂಲಸೌಕರ್ಯಗಳನ್ನು ಸೃಷ್ಟಿಸುವಂತೆ ಸೂಚನೆ ನೀಡಿದರು.

IMG 20220124 WA0016

ಇದಲ್ಲದೆ ಮಕ್ಕಳಿಗೆ ಹಿಂದಿನ ಅನುಭವ ಮಂಟಪ ಹೇಗಿತ್ತು ಎಂಬ ಅರಿವು ಮೂಡಿಸುವ ರೀತಿಯಲ್ಲಿ ಇದನ್ನು ನಿರ್ಮಿಸಬೇಕು. ಜೊತೆಗೆ ಸುಸಜ್ಜಿತವಾದ ಡಿಜಿಟಲ್ ಲೈಬ್ರರಿ, ಹಾಲೋಗ್ರಾಫಿಕ್ ಪ್ರದರ್ಶನ ಮೊದಲಾದ ವ್ಯವಸ್ಥೆಗಳನ್ನು ರೂಪಿಸುವ ಮೂಲಕ ಅನುಭವ ಮಂಟಪದ ಅನುಭವ ಜನರಿಗೆ ಆಗುವಂತೆ ಮಾಡಬೇಕು. ಕನಿಷ್ಠ ೨೦೦ ಜನ ಕುಳಿತುಕೊಳ್ಳುವ ಎರಡು ಸಭಾಂಗಣ ನಿರ್ಮಾಣ ಮಾಡಿ ಎಂದು ಸೂಚಿಸಿದರು.

ದಿನದ ೨೪ ಗಂಟೆ ಕಾಲ ವಿದ್ಯುತ್ ಪೂರೈಕೆ ಇರುವಂತೆ ನೋಡಿಕೊಳ್ಳಿ. ಕಟ್ಟಡದ ಗುಣಮಟ್ಟ ಉತ್ಕೃಷ್ಟ ವಾಗಿ ಇರಲಿ. ಅನುಭವ ಮಂಟಪದ ಸುರಕ್ಷತೆ ಮತ್ತು ನಿರ್ವಹಣೆ ಬಗ್ಗೆ ಆದ್ಯತೆ ನೀಡುವಂತೆ ಹಾಗೂ ಯೋಜನೆಯ ಭಾಗವಾಗಿ ಪರಿಗಣಿಸುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ಸಚಿವ ಪ್ರಭು ಚವ್ಹಾಣ, ಮಾಜಿ ಶಾಸಕ‌ ಬಸವರಾಜ ಪಾಟೀಲ್ ಸೇಡಂ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ ಮತ್ತು ಇತರರು ಉಪಸ್ಥಿತರಿದ್ದರು.