IMG 20220310 WA0011

ಪಾವಗಡ: ಪಟಾಕಿ ಸಿಡಿಸಿ ಬಿಜೆಪಿ ಕಾರ್ಯಕರ್ತರ ಸಂಭ್ರಮ….!

DISTRICT NEWS ತುಮಕೂರು

ಪಟಾಕಿ ಸಿಡಿಸಿ ಕಾರ್ಯಕರ್ತರ ಸಂಭ್ರಮ

ವೈ.ಎನ್. ಹೊಸಕೋಟೆ: ಉತ್ತರ ಪ್ರದೇಶ, ಗೋವಾ, ಮಣಿಪುರ, ಉತ್ತರಾಖಂಡ ಸೇರಿದಂತೆ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಗುರುವಾರ ಪ್ರಕಟವಾಗಿ ಬಿಜೆಪಿ ಬಹುಮತ ಗಳಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ತನ್ನ ಅಭ್ಯರ್ಥಿಗಳನ್ನು ಗೆಲ್ಲಿಸಿ ಕೊಳ್ಳವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಈ ಹಿನ್ನೆಲೆಯಲ್ಲಿ ವೈ.ಎನ್.ಹೊಸಕೋಟೆ ಬಿಜೆಪಿ ಕಾರ್ಯಕರ್ತರು ಗ್ರಾಮದ ಮಹಾತ್ಮ ಗಾಂಧೀಜಿ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡ ಟಿ.ಉಮೇಶ್ ಕೇಂದ್ರದಲ್ಲಿ ಪ್ರಧಾನಮಂತ್ರಿ ಮೋದಿಯವರ ಸರ್ಕಾರ ಮತ್ತು ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥರ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಜನತೆ ಬಿಜೆಪಿ ಪಕ್ಷಕ್ಕೆ ಬಹುಮತ ನೀಡಿದ್ದಾರೆ. ಈ ಗೆಲುವಿನಿಂದ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಗಿದೆ. ಮುಂದಿನ ಚುನಾವಣೆಗಳಲ್ಲಿ ಪಕ್ಷಕ್ಕಾಗಿ ಉತ್ಸುಕತೆಯಿಂದ ಕೆಲಸ ಮಾಡಲು ಸಹಕಾರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಬಿ.ಹೊಸಹಳ್ಳಿ ನಾಗರಾಜು, ಸದಾನಂದ, ಉಮಾಮಹೇಶ್, ತಿಪ್ಪೇಸ್ವಾಮಿ, ಕಿಶೋರ್, ಸಾಯಿಕುಮಾರ್, ಮದಕರಿನಾಯಕ, ನರಸಿಂಹಮೂರ್ತಿ, ಕಿಷ್ಟಪ್ಪ, ಕೆ. ಬಿ. ಮಂಜುನಾಥ, ಬೊಮ್ಮಲಿಂಗ, ಶಿವಣ್ಣ, ಪ್ರಕಾಶ ಇದ್ದರು.

ವರದಿ: ಸತೀಶ್