IMG 20220509 WA0035

ಜಿಲ್ಲಾಪಂಚಾಯತ್ ಸಿಇಓ ಸಭೆ :ಬಜೆಟ್ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಸಹಿಸುವುದಿಲ್ಲ

Genaral STATE

ಬಜೆಟ್ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಸಹಿಸುವುದಿಲ್ಲ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಟ್ಟೆಚ್ಚರ

ನೀವೆಲ್ಲರೂ ನನ್ನ ಕಣ್ಗಾವಲಿನಲ್ಲಿದ್ದೀರಿ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು, ಮೇ 09:
ನನ್ನ ಸರ್ಕಾರ ಬಜೆಟ್ ಘೋಷಿತ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ವಿಳಂಬ ಧೋರಣೆ ಸಹಿಸುವುದಿಲ್ಲ. ನೀವೆಲ್ಲರೂ ನನ್ನ( ರಡಾರ್) ಕಣ್ಗಾವಲಿನಲ್ಲಿ ಇದ್ದೀರಿ. ನಿಮ್ಮೆಲ್ಲರನ್ನು ನಾನು ಗಮನಿಸುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಅವರು ಇಂದು ಬೆಂಗಳೂರಿನಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣ ಅಧಿಕಾರಿಗಳ ಸಭೆಯಲ್ಲಿ ಸಿಇಒಗಳನ್ನು ಉದ್ದೇಶಿಸಿ ಮಾತನಾಡಿದರು.

ನೀವೆಲ್ಲರೂ ಯುವಕರಿದ್ದೀರಿ. ಒಳ್ಳೆಯ ಕೆಲಸ ಮಾಡಲು ದೇವರು ನಿಮಗೆ ಇದೊಂದು ಅವಕಾಶ ನೀಡಿದ್ದಾನೆ. ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ. ಬಡವರ, ದೀನ ದಲಿತರ ಪರವಾದ ಕೆಲಸಗಳನ್ನು ಮಾಡಿ. ನವ ಭಾರತಕ್ಕಾಗಿ ನವ ಕರ್ನಾಟಕ ನಿರ್ಮಾಣದಲ್ಲಿ ನಿಮ್ಮ ಕೊಡುಗೆಯನ್ನು ನೀಡಿ. ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡೋಣ. ನಾನು ನಿಮ್ಮ ಜೊತೆ ಇದ್ದೇನೆ. ಆದರೆ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಮತ್ತು ಭ್ರಷ್ಟಾಚಾರವನ್ನು ಎಂದೂ ಸಹಿಸುವುದಿಲ್ಲ. ಅದಕ್ಕೆ ಅವಕಾಶವನ್ನೂ ಮಾಡಿಕೊಡುವುದಿಲ್ಲ. ಈ ಮಾತುಗಳನ್ನು ನೀವು ಸ್ಪಷ್ಟವಾಗಿ ನೆನಪಿನಲ್ಲಿಟ್ಟುಕೊಂಡು ಕೆಲಸ ಮಾಡಿ ಎಂದು ಸಿಎಂ ಸೂಚನೆ ನೀಡಿದರು.

ವ್ಯವಸ್ಥೆ ಮೇಲಿನ ವಿಶ್ವಾಸವನ್ನು ಪುನರ್ ಸ್ಥಾಪಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದರು.

ಶಾಲಾ ಮಕ್ಕಳಿಗೆ, ಮಹಿಳಾ ಸಬಲೀಕರಣ, ಸ್ತ್ರೀಶಕ್ತಿ ಸಂಘಗಳಿಗೆ ವಿಶೇಷ ಕಾರ್ಯಕ್ರಮ ಇವೆಲ್ಲ ಪ್ರಮುಖ ಕಾರ್ಯಕ್ರಮಗಳು. ಸಾರ್ವಜನಿಕರಿಗೆ ಒಳಿತು ಮಾಡುವ ನಿರ್ಧಾರಗಳನ್ನು ಧೈರ್ಯವಾಗಿ ತೆಗೆದುಕೊಳ್ಳಿ. ವ್ಯವಸ್ಥೆ ಮೇಲಿನ ವಿಶ್ವಾಸವನ್ನು ಪುನರ್ ಸ್ಥಾಪಿಸೋಣ. ನಿಮ್ಮ ಕಾರ್ಯವೈಖರಿಯನ್ನು ಗಮನಿಸಲಾಗುತ್ತದೆ. ಸಾರ್ವಜನಿಕರು ತರುವ ಅರ್ಜಿಗಳಿಗೆ ಪರಿಹಾರ ಕೊಡುವ ಕೆಲಸವಾಗಬೇಕು. ನಿಮ್ಮ ಕಾರ್ಯದಲ್ಲಿ ನಿಖರತೆ ಇರಲಿ. ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಸೂಚಿಸಿದರು.

IMG 20220509 WA0038

ಸಭೆಯ ಮುಖ್ಯಾಂಶಗಳು:

  1. ವರ್ಷದ ಮೊದಲನೇ ತ್ರೈಮಾಸಿಕದಲ್ಲಿ ಸಭೆ. ಅಧಿಕಾರದ ವಿಕೇಂದ್ರೀಕರಣವಾಗಿ 3 ದಶಕಗಳ ಮೇಲಾಗಿದೆ. ಅದರ ಲಾಭವನ್ನು ಒಮ್ಮೆ ಹಿಂದುರಿಗಿ ನೋಡಬೇಕಾಗಿದೆ‌. ಕೇಂದ್ರೀಕೃತವಾದ ಆಡಳಿತ ಮಾಡಿದರೆ ಜನರಿಗೆ ಆಡಳಿತದ ಲಾಭ, ಸರ್ಕಾರದ ಕಾರ್ಯಕ್ರಮಗಳು ಮುಟ್ಟುವುದಿಲ್ಲ ಎಂದು ನಾವೆಲ್ಲರೂ ಒಪ್ಪಿಕೊಂಡಿದ್ದೇವೆ. ಜನರಿಂದ ಜನರಿಗೋಸ್ಕರ ಆಡಳಿತವಾಗಬೇಕು. ಅಧಿಕಾರದ ಸುತ್ತಲೂ ಜನ ಓಡಾಡಬಾರದು. ಜನರ ಸುತ್ತಲೂ ಅಭಿವೃದ್ಧಿಯಾಗಬೇಕು ಎನ್ನುವ ಕಲ್ಪನೆ.
  2. ಬಡವರ ಪರವಾಗಿ ಕೆಲಸ ಮಾಡಲು ಧೈರ್ಯವಾಗಿ ನಿರ್ಣಾಯಕ ಕ್ರಮಗಳನ್ನು ತೆಗೆದುಕೊಳ್ಳಲು ಹಿಂಜರಿಯಬಾರದು. ಎಲ್ಲಾ ಜಿ,ಪಂ ಸಿಇಒ ಗಳು ಸ್ವತಂತ್ರವಾಗಿ ಕೆಲಸ ಮಾಡಬೇಕು. ಕೆಳಹಂತದ ಅಧಿಕಾರಿಗಳ ಮೇಲೆ ನಿಯಂತ್ರಣವೂ ಇರಬೇಕು. ತಪ್ಪಾದರೆ ಕೇಳುವ ನೈತಿಕತೆ ಇರಬೇಕು. ಲಿಂಕ್ ಡಾಕ್ಯುಮೆಂಟ್ ತೆಗೆದು ನೋಡಬೇಕು. ಜಿಲ್ಲಾ ಪಂಚಾಯತ್ ಸ್ವತಂತ್ರ ಸರ್ಕಾರವಿದ್ದಂತೆ.
  3. ಸಿಇಓಗಳು ತಮ್ಮ ಹಂತದಲ್ಲಿ ನಿರ್ಧಾರ ತೆಗೆದುಕೊಳ್ಳಬೇಕು. ತಮ್ಮ ಅಧಿಕಾರದ ಮಹತ್ವವನ್ನು ಅರಿತು ಸ್ವತಂತ್ರವಾಗಿ ಕಾರ್ಯನಿರ್ವಹಿಸಬೇಕು.
  4. ಪಿಡಿಒಗಳನ್ನು ಶಿಸ್ತಿನಲ್ಲಿಡಬೇಕು. ಸ್ಥಳಗಳಿಗೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಬೇಕು. ನಿಮ್ಮ ಪಾತ್ರ, ಕರ್ತವ್ಯ ಹಾಗೂ ಅಧಿಕಾರದ ಬಗ್ಗೆ ಸ್ಪಷ್ಟತೆ ಇರಬೇಕು. ಸರ್ಕಾರದ ಆಯವ್ಯಯದ ಬಹುತೇಕ ಕಾರ್ಯಕ್ರಮಗಳನ್ನು ಜಿಲ್ಲಾ ಪಂಚಾಯತ್ ಸಿಇಒಗಳು ಅನುಷ್ಠಾನ ಮಾಡುತ್ತಾರೆ.
  5. ಬಜೆಟ್ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ರೋಡ್ ಮ್ಯಾಪ್ ಮಾಡಿಕೊಳ್ಳಬೇಕು. ಸಿಇಓಗಳು ಜಿಲ್ಲೆಯ ಸಿಎಸ್ (ಮುಖ್ಯ ಕಾರ್ಯದರ್ಶಿಗಳು)ಗಳಂತೆ ಕಾರ್ಯ ನಿರ್ವಹಿಸಬೇಕು.
  6. ಜಿಲ್ಲೆಗಳಲ್ಲಿ ಮನೆ ನಿರ್ಮಾಣ, ಫಲಾನುಭವಿಗಳ ಆಯ್ಕೆ ಶೀಘ್ರವಾಗಿ ಮುಗಿಸಬೇಕು. ಪಡಿತರ ಚೀಟಿ ವಿತರಣೆ, ಶಾಲಾ ಕೊಠಡಿಗಳು, ಆಸ್ಪತ್ರೆಗಳ ವಸ್ತುಸ್ಥಿತಿ ಬಗ್ಗೆ ವರದಿ ನೀಡಬೇಕು.
  7. ಆಯಾ ವರ್ಷದ ಕ್ರಿಯಾ ಯೋಜನೆಗಳು ಅದೇ ವರ್ಷದಲ್ಲಿ ಅನುಷ್ಠಾನವಾಗುವುದಿಲ್ಲ. ಅನುಷ್ಠಾನ ಅವಧಿ 10 ತಿಂಗಳೊಳಗೆ ಆಗಬೇಕು ಕಾಲಮಿತಿಯೊಳಗೆ ಕಾರ್ಯಕ್ರಮಗಳ ಅನುಷ್ಠಾನವಾಗಬೇಕೆಂಬ ಧ್ಯೇಯವಿರಬೇಕು. ಯೋಜನೆಯ ಅನುಷ್ಠಾನದ ಎಲ್ಲ ಹಂತಗಳ ಬಗ್ಗೆ ಗಮನಹರಿಸಬೇಕು.
  8. ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ ಇಲಾಖೆಯ ಯೋಜನೆಗಳೇ ಗ್ರಾಮೀಣ ಪ್ರದೇಶದಲ್ಲಿ ಅಭಿವೃದ್ಧಿ ನಿರ್ಭರವಾಗಿದೆ. ಇವುಗಳ ಶೀಘ್ರ ಅನುಷ್ಠಾನಕ್ಕೆ ಗಮನಹರಿಸಬೇಕು.
  9. ಗ್ರಾಮಪಂಚಾಯತಿಗಳ ಪರಿಶೀಲನೆ ನಡೆಸಬೇಕು. ಪಿಡಿಓ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳನ್ನು ಹದ್ದುಬಸ್ತಿನಲ್ಲಿಡಬೇಕು. ಕಚೇರಿಗಳಿಗೆ ಸೀಮಿತವಾಗದೇ ಸ್ಥಳಗಳಿಗೆ ತೆರಳಿ ಪರಿಶೀಲನೆಗಳನ್ನು ಮಾಡಬೇಕು.
  10. ರಾಯಚೂರಿನಲ್ಲಿ ಇಷ್ಟು ವರ್ಷಗಳ ಕಾರ್ಯಕ್ರಮಗಳ ಹೊರತಾಗಿಯೂ ಅನೀಮಿಯಾ ಪ್ರಮಾಣದಲ್ಲಿ ಹೆಚ್ಚಳವಿದೆ.
  11. ಅಪೌಷ್ಟಿಕತೆ ನಿವಾರಣೆಗೆ ಆರೋಗ್ಯ ಇಲಾಖೆಯ ಸಮನ್ವಯದೊಂದಿಗೆ ಕಾರ್ಯಕ್ರಮಗಳನ್ನು ರೂಪಿಸಿ
  12. ಎಸ್ ಸಿ ಎಸ್ ಟಿ, ಹಿಂದುಳಿದ ವರ್ಗದ ಯೋಜನೆಗಳು ನಿಗದಿತ ಅವಧಿಯಲ್ಲಿ ಮುಗಿಯಲೇಬೇಕು. ತಳಹಂತದ ಜನರ ಬದುಕನ್ನು ಬದಲಿಸುವ ಇಂತಹ ಯೋಜನೆಗಳ ಅನುಷ್ಠಾನದ ಬಗ್ಗೆ ಸೂಕ್ಷ್ಮತೆಯಿಂದ ಕಾರ್ಯನಿರ್ವಹಿಸಬೇಕು.
  13. ಸಮಾಜ ಕಲ್ಯಾಣ ಕಾರ್ಯಕ್ರಮಗಳು, ಎಸ್ ಸಿ ಎಸ್ ಟಿ, ಹಿಂದುಳಿದ ವರ್ಗದ ಅಭಿವೃದ್ಧಿ ಕಾರ್ಯಕ್ರಮಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆರೋಗ್ಯ, ಅಪೌಷ್ಟಿಕತೆ ನಿವಾರಣೆ ಬಗ್ಗೆ ಆದ್ಯತೆ ನೀಡಿ ಕಾರ್ಯನಿರ್ವಹಿಸಬೇಕು.
  14. ಜಿಲ್ಲೆಗಳಲ್ಲಿ ಇರುವ ಅಪೌಷ್ಟಿಕತೆಯ ಮಟ್ಟ , ಎಂಎಂಆರ್, ಐಎಂಆರ್ ಗಳ ಸುಧಾರಣೆಗೆ ಕ್ರಮ ತೆಗೆದುಕೊಳ್ಳಬೇಕು. ರಾಜ್ಯದ ಸರಾಸರಿ ಪೌಷ್ಟಿಕತೆಯ ಮಟ್ಟವನ್ನು ತಲುಪಲು ಸಿಇಓಗಳು ಶ್ರಮಿಸಬೇಕು.
  15. ಜಿಲ್ಲೆಗಳಲ್ಲಿ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಬೇಕು. ಮಕ್ಕಳಲ್ಲಿ ಅಪೌಷ್ಟಿಕತೆ, ಕುಂಠಿತ ಬೆಳವಣಿಗೆಗಳ ಬಗ್ಗೆ ಗಮನಹರಿಸಿ ಇವುಗಳನ್ನು ಅಭಿವೃದ್ಧಿಗೊಳಿಸಲು ಶಾಲೆಗಳಲ್ಲಿ ಆರೋಗ್ಯ ಶಿಬಿರ,ಆಸ್ಪತ್ರೆಗಳ ಸಹಕಾರ ಪಡೆದು ಕಾರ್ಯಕ್ರಮಗಳನ್ನು ಮಾಡಬೇಕು.
  16. ಇಂದಿನಿಂದ ಬದಲಾವಣೆಯಾಗಬೇಕು. ಬದಲಾವಣೆ ಎಲ್ಲರಿಂದಲೂ ಆಗಬೇಕು. ಜನಕ್ಕೆ ಈ ವ್ಯವಸ್ಥೆಯ ಮೇಲೆ ವಿಶ್ವಾಸ ಮೂಡುವಂತೆ ಕೆಲಸ ಮಾಡಬೇಕು. ಸಾಮಾಜಿಕ ಮತ್ತು ಅಭಿವೃದ್ಧಿಯ ಹೊಣೆಗಾರಿಕೆ ಇದೆ.
  17. 100 ಪಶು ಚಿಕಿತ್ಸಾಲಯ, 70 ಗೋಶಾಲೆ ನಿರ್ಮಾಣ, ಪುಣ್ಯಕೋಟಿ ದತ್ತು ಯೋಜನೆ, ಕರಾವಳಿಯಲ್ಲಿ ಸಮುದ್ರದಾಳದಲ್ಲಿ ಮೀನುಗಾರಿಕೆ, ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿ ಶಿಕ್ಷಣ, ಆರೋಗ್ಯ , ಅಪೌಷ್ಟಿಕತೆ ನಿವಾರಣೆಗೆ ಎಸ್.ಡಿ ಪಿಯಲ್ಲಿ , ಕೆಕೆಆರ್ ಡಿಬಿ ಮೂಲಕ ಅನುದಾನ ಒದಗಿಸಿದೆ.
  18. ಸುಮಾರು 7000 ಶಾಲಾ ಕೊಠಡಿಗಳ ನಿರ್ಮಾಣ ಸರ್ಕಾರದ ಬೃಹತ್ ಕಾರ್ಯಕ್ರಮವಾಗಿದ್ದು, ಸೂಕ್ತ ರೀತಿಯಲ್ಲಿ ಆಯ್ಕೆ ಮತ್ತು ಅನುಷ್ಠಾನ ಆಗಬೇಕು. ಈ ಕುರಿತು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗುವುದು.
  19. 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವುದು, ಸಮಾಜ ಕಲ್ಯಾಣ ಇಲಾಖೆಯಡಿ 100 ವಸತಿ ನಿಲಯಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ 50 ವಸತಿ ನಿಲಯಗಳ ನಿರ್ಮಾಣ ಆದ್ಯತೆ ಮೇರೆಗೆ ಕೈಗೊಳ್ಳುವುದು.
  20. ನಗರಗಳಲ್ಲಿ ನಮ್ಮ ಕ್ಲಿನಿಕ್ ಅನುಷ್ಠಾನ, ಮುಖ್ಯಮಂತ್ರಿ ವಿದ್ಯಾರ್ಥಿ ಮಾಗದರ್ಶಿನಿ ವೆಬ್ ಸೈಟ್ ಕುರಿತು ಬಡಮಕ್ಕಳಿಗೆ ಮಾರ್ಗದರ್ಶನ ನೀಡಿ.
  21. ಮುಖ್ಯಮಂತ್ರಿ ಆರೋಗ್ಯ ವಾಹಿನಿ ಬೀದರ್, ಹಾವೇರಿ, ಚಾಮರಾಜನಗರ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನ ಮಾಡಲಾಗುತ್ತಿದ್ದು, ಸಿಇಓಗಳು ಗಮನ ಹರಿಸಬೇಕು.
  22. ಪೌಷ್ಟಿಕ ಕರ್ನಾಟಕ ಅಭಿಯಾನಕ್ಕೆ ಎಸ್ ಡಿ ಪಿ ಹಾಗೂ ಕೆಕೆಆರ್ ಡಿಬಿಯಡಿ ವಿಶೇಷ ಅನುದಾನ ಬಿಡುಗಡೆಯಾಗುತ್ತಿದ್ದು, ತೀವ್ರ ಹಾಗೂ ಸಾಧಾರಣ ಅಪೌಷ್ಟಿಕತೆ ಇರುವ ಜಿಲ್ಲೆಗಳಿಗೆ ಒಂದೇ ರೀತಿಯ ಆಹಾರ ನೀಡುವುದು.
  23. ಗ್ರಾಮ ಒನ್ ಕೇಂದ್ರಗಳ ಸ್ಥಾಪನೆಗೆ ವಿಶೇಷ ಗಮನ ಹರಿಸುವುದು. ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಸ್ಥಾಪಿಸಬೇಕು. ಗ್ರಾಮ ಒನ್ ಜನೋಪಯೋಗಿ ಕಾರ್ಯಕ್ರಮವಾಗಿದ್ದು ಯಶಸ್ವಿಗೊಳಿಸಬೇಕು. ಇದರಿಂದ ಮೇಲಿನ ಹಂತದಲ್ಲಿ ಅರ್ಜಿಗಳ ಹೊರೆ ಕಡಿಮೆಯಾಗುತ್ತದೆ. ಜಲ ಜೀವನ್ ಮಿಷನ್ ಯೋಜನೆ:
  24. ಜಲ ಜೀವನ್ ಮಿಷನ್ ಯೋಜನೆ 2023ರೊಳಗೆ ಪೂರ್ಣಗೊಳಿಸುವ ಗುರಿ ಇದೆ. ಭಾರತ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ಮಹತ್ವಾಕಾಂಕ್ಷಿ ಯೋಜನೆಗಳಿಗೆ ಆದ್ಯತೆ ನೀಡುವುದು. ಮುಖ್ಯ ಇಂಜಿನಿಯರ್ಗಳ ಬಳಿ ಬಾಕಿ ಇರುವ ಎಲ್ಲಾ ಕಡತಗಳು ಒಂದು ವಾರದೊಳಗೆ ವಿಲೇವಾರಿಯಾಗಬೇಕು.
  25. ಪ್ರಧಾನ ಮಂತ್ರಿಗಳ ಕನಸಿನ ಯೋಜನೆಯಾದ ಜಲ್ ಜೀವನ್ ಮಿಷನ್ ಅನುಷ್ಠಾನದಿಂದ ಜನರಿಗೆ ಒಳಿತಾಗಬೇಕು. ಯಾವುದೇ ಹಂತದಲ್ಲಿ ಅದಕ್ಷತೆಯನ್ನು ಸಹಿಸುವುದಿಲ್ಲ. ಇಂಜಿನಿಯರಿಂಗ್ ವಿಭಾಗದವರು ಸರಿಯಾಗಿ ಕಾರ್ಯನಿರ್ವಹಿಸಬೇಕು. ಕೆಲಸಗಳನ್ನು ಸುಗಮವಾಗಿಸಲು ಮತ್ತೊಬ್ಬ ಅಭಿಯಂತರರನ್ನು ನೇಮಿಸಲು ಸೂಚಿಸಿದರು.
  26. ಜಲಜೀವನ್ ಮಿಷನ್ ಯೋಜನೆಯ ಬ್ಯಾಚ್ 1 ಕಾಮಗಾರಿ ಒಂದು ತಿಂಗಳೊಳಗೆ ಮುಗಿಯಬೇಕು.
  27. ಉಡುಪಿ, ದಾವಣಗೆರೆ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಯೋಜನೆಯ ಅನುಷ್ಠಾನ ಚುರುಕುಗೊಳಿಸಬೇಕು.
  28. ಈ ಯೋಜನೆಯಲ್ಲಿ ಗುಣಮಟ್ಟದ ಸಮಸ್ಯೆಗಳನ್ನು ನಿವಾರಿಸಬೇಕು. ಜೂನ್ 15 ರಂದು ಬ್ಯಾಚ್ -1 ಕಾಮಗಾರಿಗಳ ಬಗ್ಗೆ ಪರಿಶೀಲನೆ ಹಾಗೂ ಜೂನ್ 30 ರಂದು ಬ್ಯಾಚ್ 2 ರ ಕಾಮಗಾರಿಗಳ ಬಗ್ಗೆ ಪರಿಶೀಲಿಸಲು ಹಾಗೂ ಪ್ರತಿ ಮಾಹೆ ಪ್ರಗತಿ ಪರಿಶೀಲಿಸಿ ವರದಿ ಸಲ್ಲಿಸುವಂತೆ ಸೂಚಿಸಿದರು. ಜಲಜೀವನ್ ಮಿಷನ್ ಕಾರ್ಯಕ್ರಮಗಳನ್ನು ಮಾರ್ಚ್ ಅಂತ್ಯದೊಳಗೆ 80 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕವನ್ನು ಒದಗಿಸುವ ಗುರಿ ನೀಡಿದರು. ಟೆಂಡರ್ಗಳನ್ನು ತುರ್ತಾಗಿ ಅಂತಿಮಗೊಳಿಸಲು ಹಾಗೂ ಏವರ್ ಹೆಡ್ ಟ್ಯಾಂಕುಗಳ ಮರುವಿನ್ಯಾಸ ಮಾಡುವಂತೆ ಸೂಚಿಸಿದರು.
  29. ಜಲಜೀವನ್ ಮಿಷನ್ ಯೋಜನೆ ಮೂಲಕ ಜನರಿಗೆ ಸೌಲಭ್ಯ ದೊರಕಬೇಕು. ದೂರುಗಳಿಗೆ ಅವಕಾಶ ನೀಡಬಾರದು ಎಂದು ಸೂಚಿಸಿದರು.
  30. ಪ್ರವಾಹದಿಂದಾಗಿ ನಿರ್ಮಿಸಲಾಗಿರುವ ಪುನರ್ವಸತಿ ಗ್ರಾಮಗಳಲ್ಲಿ ಎಲ್ಲ ಮೂಲಸೌಕರ್ಯಗಳನ್ನು ಒದಗಿಸಿ ಜನರನ್ನು ಸ್ಥಳಾಂತರಗೊಳ್ಳಲು ಮನವೊಲಿಸಬೇಕು.

ಮಹಾತ್ಮಾ ಗಾಂಧಿ ನರೇಗಾ ಯೋಜನೆ :

  1. ಈ ಯೋಜನೆಯಡಿ ಕಾರ್ಮಿಕರಿಗೆ ವೇತನ ಪಾವತಿಯಲ್ಲಿ ತಡವಾಗಬಾರದು. ಸಾಮಾಗ್ರಿಗಳ ಶೀಘ್ರ ಪಾವತಿಗೆ ಕೇಂದ್ರ ಸರ್ಕಾರದೊಂದಿಗೆ ಸಂಯೋಜಿಸಬೇಕು.
  2. ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಕಾಂಪೌಂಡ್ ಗೋಡೆ, ಅಂಗನವಾಡಿಗಳ ನಿರ್ಮಾಣಗಳಿಗೆ ಒತ್ತು ನೀಡಬೇಕು.
  3. ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆಗೆ ಕೇಂದ್ರ ಸಚಿವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು
  4. ಏಪ್ರಿಲ್ ಮಾಹೆಯÀಲ್ಲಿ ಯೋಜನೆಯಡಿ ಶೂನ್ಯ ಮಾನವ ದಿನಗಳನ್ನು ಸೃಜನೆ ಮಾಡಿರುವ ಜಿಲ್ಲೆಗಳಲ್ಲಿ ಗ್ರಾಮ ಪಂಚಾಯತಿಗಳಿಗೆ ಸಿ.ಇ.ಒಗಳು ಭೇಟಿ ನೀಡಬೇಕು.
  5. ಯೋಜನೆಯಡಿ ಕೈಗೊಂಡಿರುವ ಆಸ್ತಿಗಳ ಜಿಯೋ ಟ್ಯಾಗಿಂಗ್ ಆಗಿಲ್ಲದ ಜಿಲ್ಲೆಗಳಲ್ಲಿ ಕೂಡಲೇ ಕ್ರಮ ಕೈಗೊಳ್ಳುವುದು.
  6. ಮೂರು ವರ್ಷಗಳ ಹಿಂದೆ ಸಾಮಾಗ್ರಿಗಳ ಬಿಲ್ಲುಗಳಾಗುವುದು ವಿಳಂಬವಾಗಿ ಬಾಕಿ ಉಳಿದುಕೊಂಡು ಬಂದಿವೆ. ಈ ಕುರಿತು ಕ್ರಮ ವಹಿಸಬೇಕು
  7. ಪಿಡಿಒ ಹಾಗೂ ಅವರ ಕೆಳಗಿನ ಹಂತದ ಅಧಿಕಾರಿಗಳಿಗೆ ರಾಷ್ಟ್ರೀಯ ಮೊಬೈಲ್ ಮೇಲ್ಚಿಚಾರಣಾ ವ್ಯವಸ್ಥೆ (ಎನ್.ಎಂ.ಎಂ.ಎಸ್) ತಂತ್ರಜ್ಞಾನದ ಕುರಿತು ತಜ್ಞರಿಂದ ಕಾರ್ಯಾಗಾರ ಏರ್ಪಡಿಸುವುದು.
  8. ಸಾಮಾಜಿಕ ಪರಿಶೋಧನೆ ವಸೂಲಾತಿಯಡಿ ವರದಿ ಮಾಡಲಾಗಿರುವ ಪ್ರಕರಣಗಳ ಪೈಕಿ ದುರುಪಯೋಗವಾಗಿರುವ ಒಟ್ಟು 761 ಕೋಟಿ ರೂ.ಗಳ ಪೈಕಿ 15.54ಕೋಟಿ ರೂ.ಗಳನ್ನು ವಸೂಲಾತಿ ಮಾಡಲಾಗಿದೆ. ಕೇಂದರ ಸರ್ಕಾರವೂ ಇದಕ್ಕೆ ಹೆಚಿನ ಮಹತ್ವ ನೀಡಿದೆ. ಸಾರ್ವಜಿಕರಿಂದಲೇ ಆಗುವ ಸಾಮಾಜಿಕ ಪರಿಶೋಧನೆಯು ಅನುದಾನ ಮತ್ತು ಕಾಮಗಾರಿಗಳ ಗುಣಮಟ್ಟದಲ್ಲಿ ದುರ್ಬಳಕೆಯಾಗುವುದನ್ನು ತಡೆಯುವ ಸಾಧನವಾಗಿದೆ. ಈ ಬಗ್ಗೆ ಗಂಭೀರವಾಗಿ ಪರಿಗಣಿಸಲು ಸೂಚನೆ.

ಘನ ತ್ಯಾಜ್ಯ ನಿರ್ವಹಣೆ:

  1. ಬೂದು ನೀರು ನಿರ್ವಹಣೆಗಾಗಿ ವೈಯಕ್ತಿಕ ಮತ್ತು ಸಮುದಾಯದ ಇಂಗುಗುಂಡಿಗಳನ್ನು ನಿರ್ಮಿಸಲು ಮಾರ್ಗಸೂಚಿಗಳನ್ನು ಸಿದ್ಧಪಡಿಸಿ. 2 ಕಿ.ಮೀ ಹರಿಯುವ ನೀರು ತನ್ನಷ್ಟಕ್ಕೆ ಆಕ್ಸಿಡೇಷನ್ ಆಗುತ್ತದೆ. ನೀರಿನ ಆಕ್ಸಿಡೇಷನ್ ಬಹಳ ಮುಖ್ಯ.
  2. ಸಾಮಾನ್ಯ ಯೋಜನೆಯಲ್ಲಿ ಇಲ್ಲದ ಯೋಜನೆಗಳನ್ನು ಎಂ.ಎನ್. ನರೇಗಾ ಯೋಜನೆಯಡಿ ಕೈಗೊಳ್ಳಿ. ಎಲ್ಲಾ ಗ್ರಾಮಗಳಲ್ಲಿ ಚರಂಡಿಗಳಿಗೆ ಅನುದಾನ ಲಭ್ಯವಿಲ್ಲದಿದ್ದಲ್ಲಿ ನರೇಗಾ ಯೋಜನೆಯಡಿ ಕೈಗೊಳ್ಳಿ. ಮಹಿಳೆಯರು ಮತ್ತು ಮಕ್ಕಳ ಆರೋಗ್ಯದ ದೃಷಿಯಿಂದ ಈ ಕ್ರಮಗಳು ಅತಿ ಮುಖ್ಯ. ಆರೋಗ್ಯ, ಘನ ತ್ಯಾಜ್ಯ ನಿರ್ವಹಣೆ ಹಾಗೂ ಚರಂಡಿಗಳ ನಿರ್ವಹಣೆಗೆ ಆದ್ಯತೆ ನೀಡುವುದು

ಅಮೃತ ಗ್ರಾಮ ಪಂಚಾಯತಿ ಯೋಜನೆ:

  1. ಜೂನ್ 30 ರೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸುವುದು. ಘನತ್ಯಾಜ್ಯ ನಿರ್ವಹಣೆಯಿಂದ ಹಿಡಿದು ಗ್ರಂಥಾಲಯದವರೆಗೆ ನಗರ ಪ್ರದೇಶದಲ್ಲಿರುವ ಎಲ್ಲಾ ಸೌಲಭ್ಯಗಳು ಯೋಜನೆಯಡಿ ಬರುವ 750 ಗ್ರಾಮಗಳಲ್ಲಿ ದೊರಕಬೇಕು.
  2. ಎಲ್ಲಾ ಗ್ರಾಮಗಳಲ್ಲಿಯೂ ಬೀದಿ ದೀಪಗಳನ್ನು ಅಳವಡಿಸಲು ಇಂಧನ ಇಲಾಖೆಯ ಸಹಕಾರ ಪಡೆಯುವುದು.
  3. ಹಂತ-2ರಲ್ಲಿ ಗ್ರಾಮ ಪಂಚಾಯತಿಗಳ ಆಯ್ಕೆ ಪ್ರಕ್ರಿಯೆಯನ್ನು ಮೇ-31ರೊಳಗೆ ಪೂರ್ಣಗೊಳಿಸುವುದು.

ಕೆರೆಗಳ ಸಮಗ್ರ ಅಭಿವೃದ್ಧಿ:

  1. ಪ್ರಧಾನಿಮಂತ್ರಿಗಳ ಅಮೃತ ಸರೋವರ್ ಯೋಜನೆಯಡಿ ಪ್ರತಿ ಜಿಲ್ಲೆಯ 75 ಕೆರೆಗಳನ್ನು ಪುನಶ್ಚೇತನಗೊಳಿಸಲು ಅವಕಾಶವಿದೆ. ಇವುಗಳನ್ನು ಆದ್ಯತ ಮೇರೆಗೆ ಕೈಗೊಳ್ಳುವುದುದು.

2.ಇ-ಬೆಳಕು ಪ್ರಮುಖ ಕಾರ್ಯಕ್ರಮವಾಗಿದ್ದು, ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು.

  1. 15ನೇ ಹಣಕಾಸು ಆಯೋಗ (ಜಿಲ್ಲಾ ಪಂಚಾಯಿತಿ) ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು.
  2. ಕೆಲಸ ಪೂರ್ಣಗೊಳಿಸಿ ಬಿಲ್ ಕ್ಲೇಮು ಮಾಡಬೇಕು. ಇಲ್ಲವಾದರೆ ಆರ್ಥಿಕ ಪ್ರಗತಿ ಆಗಿಲ್ಲವೆಂದೇ ಪರಿಗಣಿಸಲಾಗುವುದು.
  3. 14ನೇ ಹಣಕಾಸು ಆಯೋಗದಡಿ ಖರ್ಚಾಗಡೆ ಬಾಕಿ ಉಳಿದಿರುವ ಅನುದಾನವನ್ನು ಕುಡಿಯುವ ನೀರು, ಶಾಲಾ ಕಟ್ಟಡ, ಅಂಗನವಾಡಿ ನಿರ್ಮಾಣಗಳಿಗೆ ಅನುದಾನವನ್ನು ಬಳಸಿಕೊಂಡು ವೆಚ್ಚ ಮಾಡುವುದು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ:

  1. ಗರ್ಭಿಣಿಯರಿಗೆ ಎಎನ್ ಸಿ ತಪಾಸಣೆ ಕಾರ್ಯಕ್ರಮ ಶೇ.100 ಪ್ರಗತಿ ಆಗಬೇಕು. ಕಾರ್ಯಕ್ರಮದ ಪ್ರಗತಿಯ ಕುರಿತು ತಿಂಗಳಿಗೊಮ್ಮೆ ಸಿಇಓಗಳು ಪ್ರಗತಿಪರಿಶೀಲನೆ ಮಾಡಬೇಕು.
  2. ಸಿಸೇರಿಯನ್ ಶಸ್ತ್ರ ಚಿಕಿತ್ಸೆ ದರಕ್ಕೆ ಸಂಬಂಧಿಸಿದಂತೆ ಯಾವ ಜಿಲ್ಲೆಗಳಲ್ಲಿ ಸಿಸೇರಿಯನ್ ಪ್ರಮಾಣ ಹೆಚ್ಚಿದ್ದಲ್ಲಿ ಆರೋಗ್ಯ ಇಲಾಖೆಯಿಂದ ಪರಿಶೀಲಿಸುವುದು.
  3. ಲಕ್ಷ್ಯ, ಕಾಯಕಲ್ಪ, ರಾಷ್ಟ್ರೀಯ ಗುಣಮಟ್ಟ ಖಾತ್ರಿ ಯೋಜನೆ ಕಾರ್ಯಕ್ರಮಗಳನ್ನು ಅಳವಡಿಸಿಕೊಂಡು ಪ್ರಮಾಣಪತ್ರ ಆಸ್ಪತ್ರೆಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮಕೈಗೊಳ್ಳಬೇಕು.
  4. ಶಿಶು ಮರಣ ಪ್ರಮಾಣ ರಾಜ್ಯದ ಸರಾಸರಿ ಶೇ. 23 ರಷ್ಟಿದೆ. ಎಂಎಂಆರ್, ಐಎಂಆರ್ ಪರಿಶೋಧನೆಯನ್ನು ಸಿಇಓ ಹಾಗೂ ಜಿಲ್ಲಾಧಿಕಾರಿಗಳು ಕೈಗೊಳ್ಳುವುದು. ಈ ವಿಷಯವನ್ನು ಖುದ್ದಾಗಿ ಪರಿಶೀಲಿಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಸಿಎಂ ಡ್ಯಾಶ ಬೋರ್ಡ್ ನಲ್ಲಿ ಅಳವಡಿಸಲು ಸೂಚನೆ ನೀಡಿದರು.

ಆಯುಷ್ಮಾನ್ ಭಾರತ

  1. ಅಸಾಂಕ್ರಾಮಿಕ ರೋಗ ಕಾರ್ಯಕ್ರಮದಡಿ ನೋಂದಣಿ ಕಾರ್ಯಕ್ರಮವನ್ನು ಅಭಿಯಾನ ಮಾದರಿಯಲ್ಲಿ ಕೈಗೊಳ್ಳುವುದು.
  2. ಆಸ್ಪತ್ರೆಗಳಲ್ಲಿ ವೈದ್ಯರ ಹಾಜರಾತಿ ಬಗ್ಗೆ ಕಠಿಮ ಕ್ರಮ ಕೈಗೊಳ್ಳಬೇಕು.
  3. ಜಿಲ್ಲಾವಾರು ಆರೋಗ್ಯ ಕ್ಷೇಮ ಕೇಂದ್ರದ ಕಾಮಗಾರಿಯು ಪ್ರಧಾನ ಮಂತ್ರಿ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಅನುಷ್ಠಾನಕ್ಕೆ ಕ್ರಮ ವಹಿಸುವುದು.

ವಸತಿ:

  1. ಗ್ರಾಮೀಣ ಪ್ರದೇಶದಲ್ಲಿ ಮನೆಗಳ ನಿರ್ಮಾಣದ ಗುರಿ, ಫಲಾನುಭಿವಗಳ ಆಯ್ಕೆಗೆ ಗಡುವು ನೀಡುವುದು. ಈ ವರ್ಷದಲ್ಲಿಯೇ ಅನುಷ್ಠಾನವಾಗಬೇಕು.
  2. ಫಲಾನುಭವಿಗಳ ಆಯ್ಕೆ ಪಟ್ಟಿ ಮೂರುಹಂತದಲ್ಲಿ ಪರಿಶೀಲನೆಯಾಗುವ ಅಗತ್ಯವಿಲ್ಲ. ಗ್ರಾಮ ಪಂಚಾಯಿತಿಯಿಂದ ತಾಲ್ಲೂಕು ಪಂಚಾಯಿತಿಗೆ ಆಯ್ಕೆ ಪಟ್ಟಿ ಬಂದ ನಂತರ ರಾಜೀವ್ ಗಾಂಧಿ ವಸತಿ ನಿಗಮಕ್ಕೆ ನೇರವಾಗಿ ಹೋಗಬೇಕೆಂದು ಸೂಚಿಸಿದರು.