IMG 20220530 WA0032

ಕಾಂಗ್ರೆಸ್: ರಾಜ್ಯ ಸಭೆ ಅಭ್ಯರ್ಥಿಯಾಗಿ ಜೈರಾಂ ರಮೇಶ್  ನಾಮಪತ್ರ ಸಲ್ಲಿಕೆ….!

POLATICAL STATE


ರಾಜ್ಯಸಭೆಗೆ ಭಾರತೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಜೈರಾಂ ರಮೇಶ್  ನಾಮಪತ್ರ ಸಲ್ಲಿಕೆ

ಬೆಂಗಳೂರು, ಮೇ 30 (ಕರ್ನಾಟಕ ವಾರ್ತೆ) :

ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಭಾರತೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಜೈರಾಂ ರಮೇಶ್ ಅವರು ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಉಪಸ್ಥಿತರಿದ್ದರು.

ಎರಡನೆ ಪ್ರತಿ ಸಲ್ಲಿಸುವ ಸಮಯದಲ್ಲಿ ಕೇಂದ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಸಚಿವ ಹೆಚ್.ಕೆ.ಪಾಟೀಲ್ ಉಪಸ್ಥಿತರಿದ್ದರು.

ಮೂರನೇ ಪ್ರತಿ ಸಲ್ಲಿಸುವ ಸಂದರ್ಭದಲ್ಲಿ ಮಾಜಿ ಸಚಿವರಾದ ಆರ್.ವಿ.ದೇಶಪಾಂಡೆ ಹಾಗೂ ಯು.ಟಿ.ಖಾದರ್ ಅವರು ಉಪಸ್ಥಿತರಿದ್ದರು.