20220610 213415

JD(S) : ವಿಶ್ರಾಂತಿ ಯತ್ತ ದಳಪತಿ….!

POLATICAL STATE

ವೈದ್ಯರ ಸಲಹೆ ಮೇರೆಗೆ ವಾರದ ಕಾಲ ಹೆಚ್ಡಿಕೆ ವಿಶ್ರಾಂತಿ

ಸಾರ್ವಜನಿಕ ಭೇಟಿ ಇಲ್ಲ: ಸಹಕರಿಸುವಂತೆ ಜನತೆಗೆ ಮನವಿ ಮಾಡಿದ ಮಾಜಿ ಮುಖ್ಯಮಂತ್ರಿಗಳು


ಬೆಂಗಳೂರು: ವೈದ್ಯರ ಸಲಹೆ ಮೇರೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒಂದು ವಾರದ ಕಾಲ ವಿಶ್ರಾಂತಿ ತೆಗೆದುಕೊಳ್ಳಲಿದ್ದಾರೆ.

ಈ ಬಗ್ಗೆ ಇಂದು ಸಂಜೆ ಹೇಳಿಕೆ ಬಿಡುಗಡೆ ಮಾಡಿರುವ ಮುಖ್ಯಮಂತ್ರಿಗಳು; ಕನಿಷ್ಟ ಒಂದು ವಾರವಾದರೂ ಯಾರನ್ನು ಭೇಟಿ ಮಾಡುವುದು ಅಥವಾ ಹೆಚ್ಚು ಮಾತನಾಡುವುದು ಮಾಡಬಾರದು ಎಂದು ವೈದ್ಯರು ಸಲಹೆ ಮಾಡಿದ್ದು, ಈ ಕಾರಣಕ್ಕೆ ವಿಶ್ರಾಂತಿ ಪಡೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ನಾನು ಸಾರ್ವಜನಿಕರ ಭೇಟಿಗೆ ಲಭ್ಯ ಇರುವುದಿಲ್ಲ. ಹೀಗಾಗಿ ಬಿಡದಿ ತೋಟಕ್ಕೆ ಅಥವಾ ಪಕ್ಷದ ಕಚೇರಿಗೆ ನನ್ನ ಭೇಟಿಗೆ ಯಾರೂ ಬರಬಾರದಾಗಿ ಮನವಿ ಮಾಡುತ್ತೇನೆ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಸಾರ್ವಜನಿಕರು ಅನ್ಯತಾ ಭಾವಿಸಬಾರದು. ವಾರದ ನಂತರ ಎಂದಿನಂತೆ ಎಲ್ಲರನ್ನೂ ಭೇಟಿ ಮಾಡುತ್ತೇನೆ ಹಾಗೂ ಪಕ್ಷದ ಚಟುವಟಿಕೆಗಳಲ್ಲಿ ಭಾಗಿಯಾಗುತ್ತೇನೆ. ದಯಮಾಡಿ ಸಾರ್ವಜನಿಕರು ಸಹಕರಿಸಬೇಕು ಎಂದು ಮಾಜಿ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.