IMG 20220613 WA0038

ಪಾವಗಡ:ಗುಬ್ಬಿ ಶಾಸಕ ಶ್ರೀನಿವಾಸ್ ರಾಜೀನಾಮೆಗೆ ಒತ್ತಾಯ…!

DISTRICT NEWS ತುಮಕೂರು

ಗುಬ್ಬಿ ಶಾಸಕ ಶ್ರೀನಿವಾಸ್ ರಾಜೀನಾಮೆಗೆ ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಬಲರಾಮರೆಡ್ಡಿ ಒತ್ತಾಯ.

ಪಾವಗಡ…. ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬಗ್ಗೆ ಅವಹೇಳನಕಾರಿ ರೀತಿಯಲ್ಲಿ ಮಾತನಾಡಿದ ಗುಬ್ಬಿ ಶಾಸಕ ಶ್ರೀನಿವಾಸ್ ರವರಿಗೆ ಪಕ್ಷದಲ್ಲಿ ಉಳಿಯಲು ಯಾವುದೇ ಯೋಗ್ಯತೆ ಇಲ್ಲ ಎಂದು, ಪಟ್ಟಣದಲ್ಲಿ ಸೋಮವಾರ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಅವರು ಮಾತನಾಡಿದರು.

ಜೆಡಿಎಸ್ ವರಿಷ್ಟರಾದ ಹೆಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಕೆಟ್ಟ ಪದ ಬಳಸಿ ಏಕವಚನದಲ್ಲಿ ಮಾತನಾಡಿರುವ ಶ್ರೀನಿವಾಸ್ ಅವರ ವರ್ತನೆ ಅವರಿಗೆ ಶೋಭೆ ತರುವಂತದ್ದಲ್ಲ. ಒಬ್ಬ ಶಾಸಕ ಹೀಗೆ ನಡೆದುಕೊಳ್ಳುವುದು ಒಳ್ಳೆಯದಲ್ಲ. ಈ ಕೂಡಲೆ ಅವರು ಶಾಸಕ ಸ್ಥಾನ, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿದರು.

IMG 20220613 WA0037

ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ, 4 ಬಾರಿ ಶಾಸಕರಾಗಿ, 1 ಬಾರಿ ಸಚಿವರಾಗಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಶ್ರೀನಿವಾಸ್ ಪಕ್ಷದ ಪ್ರಮುಖರ ಬಗ್ಗೆ ಅನಾಗರೀಕರಂತೆ ಮಾತನಾಡಿರುವುದು ಖಂಡನೀಯ. ಜವಬ್ಧಾರಿ ಸ್ಥಾನದಲ್ಲಿರುವವರು ಸಾಮಾನ್ಯ ಜನರೊಟ್ಟಿಗೆ ಮಾತನಾಡಬೇಕಾದರೂ ಎಚ್ಚರಿಕೆಯಿಂದ ಮಾತನಾಡಬೇಕು. ಈ ಕೂಡಲೆ ಕ್ಷಮೆ ಯಾಚಿಸಿ ಪಕ್ಷದ ವರಿಷ್ಟರು ತೆಗೆದುಕೊಳ್ಳುವ ತೀರ್ಮಾನಕ್ಕೆ ಇವರು ಬದ್ಧರಾಗಿರಬೇಕು ಎಂದರು.

ಜೆಡಿಎಸ್ ರಾಜ್ಯ ಉಪಾಧ್ಯಕ್ಷ ತಿಮ್ಮಾರೆಡ್ಡಿ, ಕಾರ್ಯಾಧ್ಯಕ್ಷ ಎನ್.ಎ. ಈರಣ್ಣ, ಗೌರವಾಧ್ಯಕ್ಷ ರಾಜಶೇಖರಪ್ಪ ಮಾತನಾಡಿದರು.
ಪುರಸಭೆ ಮಾಜಿ ಸದಸ್ಯ ನಾಗೇಂದ್ರ ಮುಖಂಡ ಮಣಿ, ರಾಮಾಂಜಿನಪ್ಪ, ಗಂಗಾಧರನಾಯ್ಡು, ಮಂಜುನಾಥ್ ಉಪಸ್ಥಿತರಿದ್ದರು.

ವರದಿ: ಶ್ರೀನಿವಾಸಲು ಎ