IMG 20220618 WA0001

ಪಾವಗಡ:ಕೆಂಚಮ್ಮನಹಳ್ಳಿ ಗೇಟ್ ಬಳಿ ರಸ್ತೆ ಅಪಘಾತ..!

DISTRICT NEWS ತುಮಕೂರು

ಕೆಂಚಮ್ಮನಹಳ್ಳಿ ಗೇಟ್ ಬಳಿ ರಸ್ತೆ ಅಪಘಾತ………..

ಪಾವಗಡ. ಕಾರು ಮತ್ತು ಎರಡು ದ್ವಿಚಕ್ರ ವಾಹನದ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ. ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮೃತಪಟ್ಟಿದ್ದು. ಟಿ.ವಿ.ಎಸ್ ನಲ್ಲಿ ಬರುತ್ತಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡ ಹಿನ್ನೆಲೆ ತಕ್ಷಣ ಸ್ಥಳೀಯರ ಸಹಾಯದೊಂದಿಗೆ ಸರ್ಕಾರಿ ಆಸ್ಪತ್ರೆಗೆ ಸೇರಿಸಿದ ಘಟನೆ ತಾಲೂಕಿನ ಕೆಂಚಮ್ಮನಹಳ್ಳಿ ಗೇಟ್ ಬಳಿ ಶನಿವಾರ ನಡೆದಿದೆ. ಮೃತರು ನೀಲಮ್ಮನ ಹಳ್ಳಿಯ ಶ್ರೀನಿವಾಸ್ (65) ಸೀನಪ್ಪ (57) ಎಂದು ತಿಳಿದುಬಂದಿದೆ. ನಾರಾಯಣ ನಾಯ್ಕ ಮತ್ತು ನರಸಿಂಹಪ್ಪ ರವರಿಗೆ ತೀವ್ರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ದೊಡ್ಡಳ್ಳಿ ಕಡೆಯಿಂದ ಪಾವಗಡ ಪಟ್ಟಣದ ಕಡೆಗೆ ಬರುತ್ತಿದ್ದಾಗ ಕಾರ್ ಟಿವಿಎಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು. ಮತ್ತು ಮತ್ತೊಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದಿದ್ದು. ಟಿವಿಎಸ್ ನಲ್ಲಿದ್ದ ಇಬ್ಬರು ಪ್ರಯಾಣಿಕರಿಗೂ ತೀವ್ರ ಗಾಯಗಳಾಗಿದ್ದು. ಮತ್ತೊಂದು ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಸ್ಥಳಕ್ಕೆ ಪಾವಗಡ ಠಾಣೆಯ ಪೊಲೀಸರು ಬಂದು ಸ್ಥಳ ಪರಿಶೀಲನೆ ಮಾಡಿ. ಕೇಸ್ ದಾಖಲಿಸಿಕೊಂಡಿದ್ದಾರೆ.

ವರದಿ: ಶ್ರೀನಿವಾಸಲು ಎ