IMG 20200723 215643

ಕೊರೋನಾ; ಭ್ರಷ್ಟಾಚಾರ ಆರೋಪಕ್ಕೆ ಲೆಕ್ಕ ಕೊಟ್ಟ ಸರ್ಕಾರ…!

STATE POLATICAL

ಕೊರೋನಾ; ಭ್ರಷ್ಟಾಚಾರ ಆರೋಪಕ್ಕೆ ಲೆಕ್ಕ ಕೊಟ್ಟ  ಸರ್ಕಾರ.

ಖರೀದಿಯಲ್ಲಿ ಅವ್ಯವಹಾರ ನಡೆದಿಲ್ಲ ಎನ್ನುತ್ತಿರುವ ಸರ್ಕಾರ…!

ಪ್ರತಿಪಕ್ಷ ಕಾಂಗ್ರಸ್ ಟೀಕೆಗೆ ಉತ್ತರಿಸಿದ ಪಂಚ ಸಚಿವರು.

*ಕಾಂಗ್ರೆಸ್ ಪಕ್ಷ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದೆ, ಐತಿಹಾಸಿಕ ಪ್ರಮಾದ ಎಸಗಿರುವ ಕಾಂಗ್ರೆಸ್ ಕೊರೋನ ಸಂಕಷ್ಟದ ಸಂದರ್ಭದಲ್ಲಿ ಸುಳ್ಳು ಆಪಾದನೆಗಳನ್ನು ಮಾಡಿ ತಮ್ಮ ರಾಜಕೀಯ ಬೇಳೆ ಬೇಯಿಸಲು ಪ್ರಯತ್ನಿಸುತ್ತಿದೆ – ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್*

ಬೆಂಗಳೂರು – ಜುಲೈ 23, 2020*: ಕೊರೋನದಂತಹ ಸಂಕಷ್ಟದ ಸಂದರ್ಭದಲ್ಲಿ ಇಡೀ ವಿಶ್ವವೇ ಒಂದಾಗಿ ಹೋರಾಡುತ್ತಿರುವಾಗ ಸುಳ್ಳು ಆಪಾದನೆ ಮಾಡಿ ತಮ್ಮ ರಾಜಕೀಯ ದುರುದ್ದೇಶಕ್ಕೆ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕಾಂಗ್ರೆಸ್ ನ ಆಪಾದನೆಗಳಿಗೆ ತಿರುಗೇಟು ನೀಡಿದ್ದಾರೆ. ಯಾವುದೇ ರಚನಾತ್ಮಕ ವಿರೋಧ ಪಕ್ಷಗಳು ಈ ಸಂದರ್ಭದಲ್ಲಿ ಇಂತಹ ಸುಳ್ಳು ಆಪಾದನೆ ಮಾಡುವುದಿಲ್ಲ, ಕಾಂಗ್ರೆಸ್ ಪಕ್ಷ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

*ಸಚಿವರ ಜಂಟಿ ಸುದ್ದಿಗೋಷ್ಠಿಯ ಮುಖ್ಯಾಂಶಗಳು*

• ಕಾಂಗ್ರೆಸ್ ತಮ್ಮ ತಟ್ಟೆಯಲ್ಲಿ ಹೆಗ್ಗಣ ಇಟ್ಟುಕೊಂಡು ಇನ್ನೊಬ್ಬರ ತಟ್ಟೆಯಲ್ಲಿ ನೊಣ ಹುಡುಕಲು ಹೊರಟಿದ್ದಾರೆ.

• ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆಗಳಲ್ಲಿ ಹಗರಣ ನಡೆದಿದೆ ಎನ್ನುವುದು ಸಂಪೂರ್ಣ ಸುಳ್ಳು. ರಾಜ್ಯದ ಜನತೆ ಯಾವತ್ತೂ ನಿಮ್ಮನ್ನು ಕ್ಷಮಿಸುವುದಿಲ್ಲ.

• ವಿರೋಧಪಕ್ಷದ ನಾಯಕರಾದ ಸಿದ್ದರಾಮಯ್ಯನವರಿಗೆ ಇದು ಶೋಭೆ ತರುವುದಿಲ್ಲ. 13-14 ಆಯವ್ಯಯ ಮಂಡಿಸಿರುವ ಸಿದ್ದರಾಮಯ್ಯನವರಿಗೆ ಪ್ರಸ್ತಾವನೆಗೂ, ಖರ್ಚಿಗೂ ಅನುಮೋದನೆಗೂ ವ್ಯತ್ಯಾಸ ತಿಳಿದಿದೆ ಎಂದು ಭಾವಿಸುತ್ತೇನೆ.

• ವೈದ್ಯಕೀಯ ಶಿಕ್ಷಣ ಇಲಾಖೆಗೆ 800 ಕೋಟಿ ರೂಗಳ ಇಲಾಖೆ ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ಬಂದಿದೆ. ಅದಕ್ಕೆ ಅನುಮೋದನೆ ಇನ್ನೂ ದೊರೆತಿಲ್ಲ.

• ಸರ್ಕಾರ ಡ್ರ್ಯಾಗರ್ ಕಂಪನಿಯ ವೆಂಟಿಲೇಟರ್ ಖರೀದಿಸಿದೆ. ಅದು ವಿಶ್ವದಲ್ಲೇ ಅತ್ಯುತ್ತಮ ಬ್ರಾಂಡ್. ನಿಮ್ಮ ಮನೆಯಲ್ಲೇ ವೈದ್ಯರಿದ್ದಾರೆ. ಬೇರೆ ತನಿಖೆಯ ಅಗತ್ಯವಿಲ್ಲ ಅವರನ್ನೇ ಕೇಳಿದರೂ ಗೊತ್ತಾಗುತ್ತದೆ.

• ಕೊರೋನ ನೆಪವಾಗಿಟ್ಟುಕೊಂಡು ಕಾಂಗ್ರೆಸ್ ಪುನಶ್ಚೇತನ ಮಾಡುತ್ತೇವೆ ಅಂತ ಉದ್ದೇಶ ಇದ್ದರೆ ಅದು ನಿಮ್ಮ ಭ್ರಮೆ. ಜನ ಎಲ್ಲಾ ಗಮನಿಸುತ್ತಿದ್ದಾರೆ. ನಿಮ್ಮನ್ನು ಕ್ಷಮಿಸುವುದಿಲ್ಲ.

• ಕಳೆದ 120 ದಿನಗಳಿಂದ ಯಾವ ರಜೆಯನ್ನೂ ತೆಗೆದುಕೊಳ್ಳದೆ, ಮನೆಯಲ್ಲಿ ಕೊರೋನ ಇದ್ದರೂ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವ ಸರ್ಕಾರವನ್ನು ಈ ರೀತಿ ಟೀಕಿಸುವುದು ಸರಿಯಲ್ಲ.

• ಮಾನ್ಯ ಮುಖ್ಯಮಂತ್ರಿಗಳು ಈ ವಯಸ್ಸಿನಲ್ಲೂ ಅತ್ಯಂತ ಸಕ್ರಿಯವಾಗಿ ಹಗಲಿರುಳು ಕೆಲಸ ಮಾಡುತ್ತಿದ್ದಾರೆ. ವಿರೋಧ ಪಕ್ಷದವರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯಬೇಕೆಂದು ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ.

• ಇಂತಹ ಸಮಯದಲ್ಲಿ ಕೊರೋನ ನಿಯಂತ್ರಣಕ್ಕೆ ಸಹಕರಿಸುವುದನ್ನು ಬಿಟ್ಟು ಈ ರೀತಿಯ ಸುಳ್ಳು ಆಪಾದನೆ ಮಾಡಿದರೆ ಜನ ಕ್ಷಮಿಸುವುದಿಲ್ಲ.