IMG 20220814 WA0026

ಮಧುಗಿರಿ:ರಾಷ್ಟ್ರಗೀತೆಯನ್ನು ಹಾಡುವುದರ ಮೂಲಕ ಪಾದಯಾತ್ರೆಗೆ ಚಾಲನೆ…!

DISTRICT NEWS ತುಮಕೂರು

ಮಧುಗಿರಿ ಬ್ಲಾಕ್ ಕಾಂಗ್ರೆಸ್ ವತಿಯಿಂದ 75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ರಾಷ್ಟ್ರಗೀತೆಯನ್ನು ಹಾಡುವುದರ ಮೂಲಕ ಪಾದಯಾತ್ರೆಗೆ ಚಾಲನೆ.

ಮಧುಗಿರಿ : 75 ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವದ ಅಂಗವಾಗಿ
ತಾಲೂಕು ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಟಿ.ಬಿ.ಜಯಚಂದ್ರ , ಮಾಜಿ ಶಾಸಕ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ ಎನ್ ರಾಜಣ್ಣ ಮತ್ತು ವಿಧಾನ ಪರಿಷತ್ ಸದಸ್ಯ ಆರ್ ರಾಜೇಂದ್ರ ಇವರ ನೇತೃತ್ವದಲ್ಲಿ ದೊಡ್ಡೇರಿಯ ವಿ ಎಸ್ ಎಸ್ ಎನ್ ಆವರಣದಲ್ಲಿ ದ್ವಜರೋಹಣ ಮಾಡಿ ರಾಷ್ಟ್ರ ಗೀತೆಯನ್ನು ಹಾಡುವುದರ ಮೂಲಕ ಪಾದಯಾತ್ರೆಗೆ ಚಾಲನೆ ನೀಡಲಾಯಿತು.

ಮಾಜಿ ಶಾಸಕ ಕೆ.ಎನ್.ರಾಜಣ್ಣ ಹಾಗೂ ಕಾರ್ಯಕರ್ತರು ದೊಡ್ಡೇರಿ ಗ್ರಾಮದ ಶ್ರೀ ಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ
ಪೂಜೆ ಸಲ್ಲಿಸಿ ಪಾದಯಾತ್ರೆ ಪ್ರಾರಂಭಿಸಿದರು.

ಪಾದಯಾತ್ರೆಯಲ್ಲಿ ಮಹಿಳೆಯರು ಕಳಸ ಹೊತ್ತು ಸಾಗಿದರು ಜತೆಯಲ್ಲಿ ರಾಷ್ಟ್ರ ನಾಯಕರ ವೇಷಭೂಷಣಗಳನ್ನು ಧರಿಸಿದ್ದ ಮಕ್ಕಳು ಕಂಡು ಬಂದರು ಹಾಗೂ ವಿವಿಧ ಕಲಾ ತಂಡಗಳು ಭಾಗವಹಿಸಿದ್ದು ಪಾದಯಾತ್ರೆಯಲ್ಲಿ ಭಾಗವಹಿಸಿದ್ದವರಿಗೆ ನೀರು, ಬಾಳೆಹಣ್ಣು,ಪಾನಕ ಗಳನ್ನು ವಿತರಿಸಲಾಯಿತು.

ದಂಡಿನ ದಿಬ್ಬ , ಕೈಮರ, ದಬ್ಬೇಗಟ್ಟ, ಡಿ.ವಿ ಹಳ್ಳಿ, ಸಿದ್ದಾಪುರ ಮಾರ್ಗವಾಗಿ ಮಧುಗಿರಿ ಪಟ್ಟಣದ ದಂಡೂರ್ ಬಾಗಿಲು ಮೂಲಕ ಪುರಸಭೆಯ ಮುಂಭಾಗದ ರಸ್ತೆಯಲ್ಲಿ ಪಾದಯಾತ್ರೆ ಕೊನೆಗೊಂಡಿತು.

ತಾಲ್ಲೂಕು ಕಾಂಗ್ರೆಸ್ ಎಲ್ಲಾ ಮುಖಂಡರುಗಳು ಹಾಗೂ ಪಕ್ಷದ ಪದಾಧಿಕಾರಿಗಳು,ಸೇರಿದಂತೆ ಸಾವಿರಾರು ಕಾರ್ಯಕರ್ತರುಗಳು ಭಾಗವಹಿಸಿದ್ದರು.

ವರದಿ.
ಲಕ್ಷ್ಮಿಪತಿ ದೊಡ್ಡ ಎಲ್ಕೂರು