IMG 20220823 WA0014

ಆನೇಕಲ್:ಗೌರಿ ಗಣೇಶ ಹಬ್ಬದ ಪ್ರಯುಕ್ತ ಶಾಂತಿ ಸಭೆ…!

DISTRICT NEWS ತುಮಕೂರು

ಆನೇಕಲ್: ಪೊಲೀಸ್ ಠಾಣೆಯಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್ ಎಸ್.ಎಂ ಚಂದ್ರಪ್ಪ ಅವರು ಶಾಂತಿ ಸಭೆಯಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಠಾಣಾ ವ್ಯಾಪ್ತಿಗೆ ಸೇರಿದ ಗ್ರಾಮಗಳ ಮುಖ್ಯಸ್ಥರುಗಳೊಂದಿಗೆ ಪೋಲಿಸ್ ಠಾಣೆಯಲ್ಲಿ ಮಂಗಳವಾರ ಶಾಂತಿ ಸಭೆ ನಡೆಸಲಾಯಿತು.

IMG 20220823 WA0016


ಸರ್ಕಲ್ ಇನ್‌ಸ್ಪೆಕ್ಟರ್ ಎಸ್.ಎಂ ಚಂದ್ರಪ್ಪ ಮಾತನಾಡಿ, ‘ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡಬಾರದು. ಗಣೇಶೋತ್ಸವಕ್ಕೆ ಹಣವನ್ನು ವಸೂಲಿ ಮಾಡಬಾರದು. ಒತ್ತಾಯಪೂರ್ವಕವಾಗಿ ವಸೂಲಿ ಮಾಡಲು ಬಂದಲ್ಲಿ ಠಾಣೆಗೆ ತಿಳಿಸಬೇಕು ಎಂದು ಮನವಿ ಮಾಡಿದರು.
ಗಣೇಶ ಮೂರ್ತಿ ಪ್ರತಿಷ್ಠಾಪಿಸುವಾಗ ಆನೇಕಲ್ ಪುರಸಭೆ ಹಾಗೂ ಗ್ರಾಮ ಪಂಚಾಯಿತಿ ಹಾಗೂ ಪೊಲಿಸ್ ಠಾಣೆಯ ಅನುಮತಿ ಪಡೆದುಕೊಳ್ಳಬೇಕು. ಸೌಂಡ್ ಸಿಸ್ಟಂ , ಧ್ವನಿ ವರ್ಧಕ ಬಳಕೆಗೆ ಪೊಲೀಸರಿಂದ ಮತ್ತು ವಿದ್ಯುತ್ ದೀಪ ಬಳಸಲು ಕಡ್ಡಾಯವಾಗಿ ಬೆಸ್ಕಾಂನಿಂದ ಅನುಮತಿ ಪಡೆದುಕೊಳ್ಳಬೇಕು ಎಂದು ಹೇಳಿದರು.
ಯಾವ ಗ್ರಾಮದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡುತ್ತಾರೋ ಅ ವಿಷಯವನ್ನು ಅಯಾ ಬೀಟ್ ಪೊಲೀಸ್ ಸಿಬ್ಬಂದಿಗೆ ತಿಳಿಸಬೇಕು ಎಂದು ತಿಳಿಸಿದರು. ಗಣಪತಿ ವಿಸರ್ಜನಾ ಸಮಯದಲ್ಲಿ ಎಚ್ಚರಿಕೆಯಿಂದ ಗಣೇಶ ವಿಸರ್ಜನೆಯನ್ನು ಮಾಡಬೇಕು ಎಂದು ಹೇಳಿದರು.:

ವರದಿ ಹರೀಶ್ ಗುರುಮೂರ್ತಿ ಆನೇಕಲ್