IMG 20220919 WA0010

ಕೊರಟಗೆರೆ:ಡಾ.ವಿಷ್ಣುವರ್ಧನ್ ರವರ 72 ನೇ ಜಯಂತೋತ್ಸವ ಆಚರಣೆ..!

DISTRICT NEWS ತುಮಕೂರು

*ಅಭಿಮಾನಿಗಳಿಂದ ಅಭಿನಯ ಭಾರ್ಗವ,ಸಾಹಸ ಸಿಂಹ ಡಾ.ವಿಷ್ಣುವರ್ಧನ್ ರವರ 72 ನೇ ಜಯಂತೋತ್ಸವ ಆಚರಣೆ…*

ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಜಟ್ಟಿ ಅಗ್ರಹಾರ ಗ್ರಾಮದಲ್ಲಿ ಡಾ. ವಿಷ್ಣುವರ್ಧನ್ ರವರ ಹುಟ್ಟುಹಬ್ಬವನ್ನು ಕೇಕ್ ಕಟ್ ಮಾಡುವುದರ ಮೂಲಕ ಆಚರಿಸಲಾಯಿತು.

ಸಾಹಸ ಸಿಂಹ, ಅಭಿನಯ ಭಾರ್ಗವ, ಕೋಟಿಗೊಬ್ಬ ಹೀಗೆ ನಾನಾ ಬಿರುದುಗಳಿಂದ ಜನಪ್ರಿಯತೆ ಪಡೆದಿರುವ ಡಾ.ವಿಷ್ಣುವರ್ಧನ್ ಅವರ ಜನ್ಮದಿನವನ್ನು ಅಭಿಮಾನಿಗಳಿಂದ ಆಚರಿಸಲಾಯಿತು.

ವಿಷ್ಣುವರ್ಧನ್ ದೈಹಿಕವಾಗಿ ಇಲ್ಲದಿದ್ದರೂ ಅಭಿಮಾನಿಗಳ ಮನದಲ್ಲಿ ಇನ್ನು ಜೀವಂತ.

ವಿಷ್ಣು ನೆನಪಲ್ಲೇ ಅಭಿಮಾನಿಗಳು ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ.

ಅನೇಕ ಸಾಮಾಜಿಕ ಸೇವೆಗಳ ಮೂಲಕ ವಿಷ್ಣುದಾದಾ ಅವರನ್ನು ನೆನೆಯುತ್ತಾ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ.

ರಾಜ್ಯದಾದ್ಯಂತ ಅಭಿಮಾನಿಗಳು ಹಬ್ಬವಂತೆ ಆಚರಿಸುತ್ತಿದ್ದು, ಇದೆ ರೀತಿ ಕೊರಟಗೆರೆ ತಾಲೂಕಿನ ಸಿ ಎನ್ ದುರ್ಗಾ ಹೋಬಳಿಯ ಜಟ್ಟಿ ಅಗ್ರಹಾರ ಗ್ರಾಮದಲ್ಲಿಯು ಸಹ ವಿಜೃಂಭಣೆಯಿಂದ ಆಚರಿಸಲಾಯಿತು.

ವರದಿ :
ದೇವರಾಜ್ ಕೆ ಎನ್
ಕೊರಟಗೆರೆ.