IMG 20220925 WA0046

ಪಾವಗಡ:ಸಾಲ ಮರುಪಾವತಿ ಮಾಡಿದ ರೈತರಿಗೆ ಸನ್ಮಾನ…!

DISTRICT NEWS ತುಮಕೂರು

ಸಾಲ ಮರುಪಾವತಿ ಮಾಡಿದ ರೈತರಿಗೆ ಸನ್ಮಾನ.

ಪಾವಗಡ.. ಪಟ್ಟಣದ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ( PLD)ಸರ್ವ ಸದಸ್ಯರು ಮಹಾ ವಾರ್ಷಿಕ ಸಭೆಯನ್ನು ಭಾನುವಾರ ಹಮ್ಮಿಕೊಳ್ಳಲಾಯಿತು.

ರೈತರು ಬ್ಯಾಂಕಿನಿಂದ ಪಡೆದ ಸಾಲವನ್ನು ಸರಿಯಾದ ಸಮಯಕ್ಕೆ ಮರುಪಾವತಿ ಮಾಡುವುದರಿಂದ ಅನೇಕ ರೈತರಿಗೆ ಸಹಾಯವಾಗುತ್ತದೆ ಎಂದು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನ ಅಧ್ಯಕ್ಷ ಎನ್.ಆರ್ ಅಶ್ವತ್ಥ್ ತಿಳಿಸಿದರು

IMG 20220925 WA0029

. ರೈತರಿಗೆ ಹೊಸ ಸಾಲ, ಬ್ಯಾಂಕಿನ ಅಭಿವೃದ್ಧಿ ಬಗ್ಗೆ, ಸಭೆಯಲ್ಲಿ ಚರ್ಚಿಸಲಾಯಿತು. 2021-2022ನೇ ಸಾಲಿನಲ್ಲಿ ಬ್ಯಾಂಕಿನ ರಾಜ್ಯಾಧ್ಯಕ್ಷ ಕೃಷ್ಣಕುಮಾರ್ ,ಶಾಸಕ ವೆಂಕಟರಮಣಪ್ಪ ಹಾಗೂ ಎಲ್ಲಾ ನಿರ್ದೇಶಕರ ಸಹಕಾರದಿಂದ ರೈತರಿಗೆ ಮೂರು ಕೋಟಿ ಸಾಲ ನೀಡಲಾಗಿದೆ ಎಂದರು.

IMG 20220925 WA0047

ಕಾರ್ಯಕ್ರಮದಲ್ಲಿ ಬ್ಯಾಂಕಿನಲ್ಲಿ ಸಾಲ ಪಡೆದು ಶೀಘ್ರವಾಗಿ ಮರುಪಾವತಿ ಮಾಡಿದ ರೈತರಿಗೆ ಉತ್ತಮ ರೈತರೆಂದು ಸನ್ಮಾನ ಮಾಡಿದರು. ಕಾರ್ಯಕ್ರಮದಲ್ಲಿ ತಾಳೆ ಮರದ ಹಳ್ಳಿ ನರಸಿಂಹಯ್ಯ, ನಾಗೇಂದ್ರಪ್ಪ, ಚೆನ್ನ ಮಲ್ಲಪ್ಪ, ಮಾಜಿ ಶಾಸಕ ತಿಮ್ಮರಾಯಪ್ಪ, ಗಂಗಾಧರ್ ನಾಯ್ಡು ಹಾಜರಿದ್ದರು.ಬ್ಯಾಂಕಿನ‌ ಸದಸ್ಯರು ಭಾಗವಹಿಸಿದ್ದರು.

ವರದಿ; ಶ್ರೀನಿವಾಸಲು ಎ