20221023 081021

Karnataka:ವಿಧಾನಸಭೆಯ ಉಪಸಭಾಧ್ಯಕ್ಷ ಆನಂದ್ ಚಂದ್ರಶೇಖರ್ ಮಾಮಿನಿ ನಿಧನ…

Genaral STATE

ವಿಧಾನಸಭೆಯ ಉಪಸಭಾಧ್ಯಕ್ಷ ಆನಂದ್ ಚಂದ್ರಶೇಖರ್ ಮಾಮಿನಿ ನಿಧನ…

ಬೆಂಗಳೂರು, ಆ.23- ಕರ್ನಾಟಕ ವಿಧಾನಸಭೆಯ ಉಪ ಸಭಾಧ್ಯಕ್ಷ ಆನಂದ್ ಚಂದ್ರಶೇಖರ್ ಮಾಮಿನಿ ಅವರ ಹಠಾತ್ ನಿಧನ ವಾಗಿದೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿ ಯಾಗದೆ ಶನಿವಾರ‌ ನಿಧನ ಹೊಂದಿದ್ದಾರೆ.

ಉಪಸಭಾಪತಿಯಾಗಿದ್ದ ವೇಳೆ ಅವರು ಕಲಾಪದಲ್ಲಿ ಸದನವನ್ನು ನಿರ್ವಾಹಿಸುತ್ತಿದ್ದ ರೀತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಅವರ ದಿಢೀರ್ ಸಾವು ಕರ್ನಾಟಕದ ಸಂಸದೀಯ ವ್ಯವಸ್ಥೆಗೆ ತುಂಬಾಲಾರದ ನಷ್ಟವಾಗಿದೆ


IMG 20221023 WA0036

ಬಿಜೆಪಿಯ ಶಿಸ್ತಿನ ಸಿಪಾಯಿಯಾಗಿದ್ದರು. ಯಾವುದೇ ಹುದ್ದೆ ನೀಡಿದರೂ ಅದನ್ನು ಸಮರ್ಪಕವಾಗಿ ನಿರ್ವಾಹಣೆ ಮಾಡುತ್ತಿದ್ದ ಒಬ್ಬ ಸಜ್ಜನ ರಾಜಕಾರಣಿಯಾಗಿದ್ದರು.

ಬೆಳಗಾವಿ ಜಿಲ್ಲೆಯ ಸವದತ್ತಿ ವಿಧಾನಸಭೆ ಕ್ಷೇತ್ರದಿಂದ ಸತತ ಮೂರು ಬಾರಿ ಗೆದ್ದು ಶಾಸಕರಾಗಿದ್ದ ಅವರು, ಓರ್ವ ಮಾದರಿ ಜನಪ್ರತಿನಿಧಿಯಾಗಿ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. .

ಕೇವಲ ರಾಜಕೀಯ ಕ್ಷೇತ್ರವಲ್ಲದೆ,ಆನಂದ್ ಮಾಮಿನಿ ಅವರು ಅನೇಕ ಸಮಾಜ ಸೇವೆಯಲ್ಲೂ ಗುರುತಿಸಿಕೊಂಡಿದ್ದರು. 2000 ರಿಂದ ಸವದತ್ತಿಯ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಮತ್ತು ಶ್ರೀ ಕಾಡಶಿದ್ದೇಶವ್ರ ಉಚಿತ ಪ್ರಸಾದ ನಿಲಯ, ಶ್ರೀ ಚಂದ್ರಮ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಸವದತ್ತಿ ಅಧ್ಯಕ್ಷರಾದ್ದರು.
2000 ರಿಂದ 2002ರ ವರೆಗೆ ಪ್ರಾಥಮಿಕ ಸರಕಾರಿ ಕೃಷಿ ಮತ್ತು ಅಭಿವೃದ್ಧಿ ಬ್ಯಾಂಕ್, ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ, ಯಲ್ಲಮ್ಮನಗುಡ್ಡ ಮತ್ತು ಶ್ರೀ ರೇಣುಕಾ ಯಲ್ಲಮ್ಮ ಎಜುಕೇಶನ್ ಸೊಸೈಟಿ, ಸೌದತ್ತಿಯ ಸದಸ್ಯರಾಗಿ‌ ಕಾರ್ಯನಿರ್ವಹಿಸಿದ್ದು, ಅವರ ವ್ಯಕ್ತಿತ್ವಕ್ಕೆ ಹಿಡಿದ ಕೈ ಗನ್ನಡಿ ಎನ್ನಾಗಿದೆ

2008 ರಲ್ಲಿ ಬಿಜೆಪಿ ಪಕ್ಷದಿಂದ ಮೊದಲ ಬಾರಿಗೆ ಸವದತ್ತಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದರು. 2013-2018 ರಲ್ಲಿ ಎರಡನೇ ಬಾರಿಗೆ ಬಿಜೆಪಿಯಿಂದ ವಿಧಾನಸಭೆಗೆ ಸ್ಪರ್ಧಿಸಿ ಜಯಗಳಿಸಿ, 2018 ರಲ್ಲಿ ಮೂರನೇ ಬಾರಿಗೆ ಹ್ಯಾಟ್ರಿಕ್​ ವಿಜಯ ಸಾಧಿಸಿದರು. ಪ್ರಸ್ತುತ ಬಿಜೆಪಿ ಸರ್ಕಾರದಲ್ಲಿ ವಿಧಾನಸಭಾ ಡೆಪ್ಯುಟಿ ಸ್ಪೀಕರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಆನಂದ ಚಂದ್ರಶೇಖರ ಮಾಮನಿ ನಿಧನ ಕ್ಕೆ ಗಣ್ಯರ ಸಂತಾಪಗಳು :

IMG 20221023 WA0004

ಡಾ.ಮುರುಗೇಶ್ ನಿರಾಣಿ- ಸಚಿವರ ಸಂತಾಪ.

ಆನಂದ ಚಂದ್ರಶೇಖರ ಮಾಮನಿ ಅವರು ನಿಧನರಾದ ವಿಷಯ ತಿಳಿದು ಅತೀವ ದುಃಖವಾಗಿದೆ‌. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಿ, ಈ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ಕರುಣಿಸಲಿ ಎಂದು ನಿರಾಣಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಸಂತಾಪ ಸೂಚಿಸಿದ್ದಾರೆ.

ಚಂದ್ರಶೇಖರ ಮಾಮನಿಯವರ ನಿಧನಕ್ಕೆ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಶೋಕ .

ಕರ್ನಾಟಕ ವಿಧಾನ ಸಭೆಯ ಉಪಾಧ್ಯಕ್ಷರೂ ನಮ್ಮ ಪಕ್ಷದ ಶಾಸಕರೂ ಆದ ಶ್ರೀ ಆನಂದ ಚಂದ್ರಶೇಖರ್ ಮಾಮನಿ ಅವರ ನಿಧನದ ಸುದ್ದಿ ತಿಳಿದು, ಅಪಾರ ದುಃಖ ವಾಗಿದೆ.

ಪಕ್ಷದ ಸಕ್ರಿಯ ನಾಯಕರೂ, ನಮ್ಮೆಲ್ಲರಿಗೆ ಮಾರ್ಗದರ್ಶಕರೂ ಆಗಿದ್ದ, ಶ್ರೀ ಮಾಮನಿಯವರ, ಆತ್ಮಕ್ಕೆ ಚಿರಶಾಂತಿ ಇರಲಿ, ಕುಟುಂಬ ವರ್ಗಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು, ಭಗವಂತ ನೀಡಲಿ, ಎಂದು ಪ್ರಾರ್ಥಿಸುತ್ತೇನೆ.

ಆನಂದ ಮಾಮನಿ ಅವರ ನಿಧನ ಆಘಾತಕರ: ನಳಿನ್‍ಕುಮಾರ್ ಕಟೀಲ್ ಸಂತಾಪ:
ಬೆಂಗಳೂರು: ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿಗೆ ಭದ್ರ ಬುನಾದಿ ಹಾಕಿದವರಲ್ಲಿ ಮುಂಚೂಣಿಯಲ್ಲಿದ್ದ ಮುಖಂಡ ಹಾಗೂ ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ಅವರ ಅಕಾಲಿಕ ನಿಧನ ತೀವ್ರ ಆಘಾತವನ್ನುಂಟು ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಸಂತಾಪ ಸೂಚಿಸಿದ್ದಾರೆ.

IMG 20221023 WA0038



(