IMG 20221025 WA0001

ಮಧುಗಿರಿ: ಶೈಕ್ಷಣಿಕ ಜಿಲ್ಲೆಯ ಅಖಿಲ್ ದೇವರಾಜ್ ರಾಜ್ಯ ಮಟ್ಟಕ್ಕೆ ಆಯ್ಕೆ…!

DISTRICT NEWS ಬೆಂಗಳೂರು

ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಕ್ರೀಡಾಕೂಟದಲ್ಲಿ 1500 ಮೀಟರ್ ಓಟದಲ್ಲಿ ಭಾಗವಹಿಸಿದ ವಿದ್ಯಾರ್ಥಿ ಅಖಿಲ್ ದೇವರಾಜ್ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ.ಆಯ್ಕೆ

ಮಧುಗಿರಿ. ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಶಿರಾ ತಾಲ್ಲೂಕಿನಲ್ಲಿ ನಡೆದ ಜಿಲ್ಲಾ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಐ.ಡಿ.ಹಳ್ಳಿ ಹೋಬಳಿ ಬ್ರಹ್ಮಸಮುದ್ರ ಸುವರ್ಣಮುಖಿ ಪ್ರೌಢಶಾಲೆಯಲ್ಲಿ ಎಂಟನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಅಖಿಲ್ ದೇವರಾಜ್ ಎಂಬ ವಿದ್ಯಾರ್ಥಿಯು ಇತ್ತೀಚೆಗೆ ನಡೆದ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಕ್ರೀಡಾಕೂಟದಲ್ಲಿ 1500 ಮೀಟರ್ ಓಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾನೆ.

ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ಅಖಿಲ್ ದೇವರಾಜ್ ನನ್ನು ಸುವರ್ಣಮುಖಿ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿಯ ಕಾರ್ಯದರ್ಶಿಯಾದ ಆರ್ ಕೆ ಧ್ರುವ ಕುಮಾರ್ ಹಾಗೂ ಗ್ರೇಡ್ ಒನ್ ಜಿಲ್ಲಾಧ್ಯಕ್ಷ ದೊಡ್ಡ ಯರಗಾಮಯ್ಯ.
ಮಧುಗಿರಿ ಶೈಕ್ಷಣಿಕ ದೈಹಿಕ ಜಿಲ್ಲಾಧ್ಯಕ್ಷ ಹಾಗೂ ಶಿಕ್ಷಕರಾದ ಗುರುರಾಜು ಆಡಳಿತ ಮಂಡಳಿಯ ವತಿಯಿಂದ ವಿದ್ಯಾರ್ಥಿಯ ಸಾಧನೆಗೆ ಅಭಿನಂದಿಸಿದ್ದಾರೆ.

ವರದಿ. ಲಕ್ಷ್ಮಿಪತಿ ದೊಡ್ಡ ಯಲ್ಕೂರು