IMG 20221223 WA0025

ಮಧುಗಿರಿ ‌:ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆ…!

DISTRICT NEWS ತುಮಕೂರು

. ಕೆ .ಗೋಪಾಲಯ್ಯ ಅವರನ್ನು ಮಧುಗಿರಿ ತಾಲೂಕಿನ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆ ……….*

ಮಧುಗಿರಿ ತಾಲೂಕಿನಲ್ಲಿ ಸುಮಾರು ವರ್ಷಗಳಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾಗಿ ಎಂ.ಎಸ್ ಮಲ್ಲಿಕಾರ್ಜುನಯ್ಯ ದಿವಂಗತ ಎಸ್ ಆರ್ ರಾಜಗೋಪಾಲ್ ರವರು ಅಧ್ಯಕ್ಷರುಗಳಾಗಿ ದಕ್ಷ ಪ್ರಾಮಾಣಿಕವಾಗಿ ಪಕ್ಷಕ್ಕೆ ದುಡಿದುಕೊಂಡು ಪಕ್ಷ ಸಂಘಟನೆಯಲ್ಲಿ ಸದಾ ಕಾಲ ದುಡಿದುಕೊಂಡು ಬಂದು ಹಲವಾರು ಚುನಾವಣೆಗಳನ್ನು ಎದುರಿಸಿ ಮತ್ತು ಕಾಂಗ್ರೆಸ್ ಪಕ್ಷ ಸ್ಥಳೀಯ ಸಂಸ್ಥೆಗಳಲ್ಲಿ ಎಂಎಲ್ಸಿ ಹಾಗೂ ಚುನಾವಣೆಗಳಲ್ಲಿ ಸಾಕಷ್ಟು ಕೆಲಸಗಳನ್ನು ಮಾಡಿಕೊಂಡು ಬಂದಿರುತ್ತಾರೆ.

ಆದ ಕಾರಣ ಎಸ್ ಆರ್ ರಾಜಗೋಪಾಲ್ ರವರು ನಿಧನದ ನಂತರ. ಮಧುಗಿರಿ ತಾಲೂಕಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾಗಿ ಪ್ರಾಮಾಣಿಕವಾಗಿ ಪಕ್ಷಕ್ಕೆ ದುಡಿದು ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷವನ್ನು ಮುಂಚೂಣಿಯಲ್ಲಿ ಕೊಂಡೊಯ್ಯುತ್ತಾರೆ ಎಂಬ ವಿಶ್ವಾಸವನ್ನು ಇಟ್ಟು. ಕೆ.ಪಿ.ಸಿ.ಸಿ.ಯ ಉಪಾಧ್ಯಕ್ಷರು ತುಮಕೂರು ಜಿಲ್ಲಾ ಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಕೆಎನ್ ರಾಜಣ್ಣನವರು ಕೆ ಗೋಪಾಲಯ್ಯರವರನ್ನು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಲು ಸಹಕರಿಸಿರುತ್ತಾರೆ.
ಮುಂದಿನ ದಿನಗಳಲ್ಲಿ ಬರುವಂತಹ ಚುನಾವಣೆಯಲ್ಲಿ ನಮ್ಮ ಜನಾಂಗದ ಹಾಗೂ ಪಕ್ಷದ ಕಾರ್ಯಕರ್ತರ ಜೊತೆಗೂಡಿ ಅವರನ್ನು ಅತಿಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಲು ನಾವು ಕಂಕಣಭದ್ರವರಾಗಿ ಪಕ್ಷವನ್ನು ಕಟ್ಟಲು ಮತ್ತು ಅವರಿಗಾಗಿ ಹಗಲಿರಲು ದುಡಿದು ಏನು ಈ ಒಂದು ದೊಡ್ಡ ಜವಾಬ್ದಾರಿಯನ್ನು ನನ್ನ ಹೆಗಲಿಗೆ ಹಾಕಿದ್ದಾರೆ ಅದನ್ನು ಕಾಯ ವಾಚ ನಿಷ್ಠೆಯಿಂದ ಪ್ರಾಮಾಣಿಕನಾಗಿ ಕರ್ತವ್ಯ ನಿರ್ವಹಿಸುತ್ತೇನೆ ಹಾಗೂ ನನ್ನನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಿರುವುದು ತುಂಬಾ ಸಂತೋಷವಾಗಿದೆ ಅವರಿಗೆ ನನ್ನ ವೈಯಕ್ತಿಕವಾಗಿ ಹಾಗೂ ನನ್ನ ಜನಾಂಗದ ಪರವಾಗಿ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

ಮತ್ತೋರ್ವ ಕೊಡಿಗೇನಹಳ್ಳಿ ಹೋಬಳಿಯ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಮಂಜುಳಾ ಆದಿ ನಾರಾಯಣ ರೆಡ್ಡಿ. ಪತಿಯಾದ ಆದಿ ನಾರಾಯಣ ರೆಡ್ಡಿ ರವರನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ ಇವರು ಕೂಡ ಪಕ್ಷಕ್ಕೆ ನಿಷ್ಠಾವಂತ ಕಾರ್ಯಕರ್ತನಾಗಿ ದುಡಿದುಕೊಂಡು ಬಂದಿರುತ್ತಾರೆ ಇವರ ಸೇವೆಯನ್ನು ಗುರುತಿಸಿ ಮಾಜಿ ಶಾಸಕರು ತುಮಕೂರು ಜಿಲ್ಲಾ ಡಿಸಿಸಿ ಬ್ಯಾಂಕ್ ನ ಅಧ್ಯಕ್ಷರಾದ ಕೆ.ಎನ್ ರಾಜಣ್ಣನವರ ಆಶೀರ್ವಾದದೊಂದಿಗೆ ನನ್ನನ್ನು ಆಯ್ಕೆ ಮಾಡಲಾಗಿದೆ ಅವರಿಗೆ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಹಾಗೂ ಮಧುಗಿರಿ ತಾಲೂಕಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಗಳಾಗಿ ಆಯ್ಕೆಯಾಗಲು ಸಹಕರಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿಯ ಅಧ್ಯಕ್ಷರಾದ ಡಿ.ಕೆ .ಶಿವಕುಮಾರ್ ಅವರಿಗೂ ಜಿಲ್ಲಾ ಕಾಂಗ್ರೆಸ್ಸಿನ ನೂತನ ಅಧ್ಯಕ್ಷರಾದ ಚಂದ್ರಶೇಖರ ಗೌಡ ರವರಿಗೂವಿಧಾನ ಪರಿಷತ್ ಸದಸ್ಯರಾದ ಆರ್ ರಾಜೇಂದ್ರ ರವರಿಗೂ ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲಾ ಕಾರ್ಯಕರ್ತರಿಗೂ ವೈಯಕ್ತಿಕವಾಗಿ ಈ ಸಂದರ್ಭದಲ್ಲಿ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಎಂದರು.

ವರದಿ .ಲಕ್ಷ್ಮಿಪತಿ ದೊಡ್ಡ ಯ ಲ್ಕೂರು