EfDoywFU4AAqDFV

ಆಸ್ಪತ್ರೆಯಿಂದ ಯಡಿಯೂರಪ್ಪ ಬಿಡುಗಡೆ…!

STATE Genaral

ಬೆಂಗಳೂರು :  ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆಸ್ಪತ್ರೆಯಿಂದ  ಬಿಡುಗಡೆ  ಆಗಿದ್ದಾರೆ. ಕೊರೋನಾ ಸೋಂಕು ದೃಡ ಪಟ್ಟ ಬಳಿಕ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.

ಇಂದು ಸಂಜೆ 4 ಗಂಟೆಗೆ ಯಡಿಯೂರಪ್ಪ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು. ಆಸ್ಪತ್ರೆ ಸಿಬ್ಬಂದಿಗಳು ಹೂಗುಚ್ಛ ನೀಡಿ  ಮುಖ್ಯಮಂತ್ರಿ ಗಳನ್ನು   ಬೀಳ್ಕೊಟ್ಟರು.

EfDoywGU0AA ALT

ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದೇನೆ. ನಿಮ್ಮೆಲ್ಲರ ಶುಭಹಾರೈಕೆಗಳಿಂದ ಗುಣಮುಖನಾಗಿದ್ದೇನೆ. ವೈದ್ಯರ ಸಲಹೆಯಂತೆ ಇನ್ನು ಕೆಲವು ದಿನ ಮನೆಯಲ್ಲೇ ಕ್ವಾರಂಟೈನ್ ನಲ್ಲಿ ಇರಲಿದ್ದೇನೆ. ಆತ್ಮವಿಶ್ವಾಸ, ವೈದ್ಯಕೀಯ ಚಿಕಿತ್ಸೆಗಳಿಂದ ಕೊರೋನಾ ಗೆಲ್ಲಬಹುದು. ಆತಂಕ ಬೇಡ, ಮುನ್ನೆಚ್ಚರಿಕೆ ಇರಲಿ.

ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ

EfDoywHU8AIoAdM

 

ಆಗಸ್ಟ್‌  2ರ ಭಾನುವಾರ ರಾತ್ರಿ ಯಡಿಯೂರಪ್ಪ ಅವರಿಗೆ  ಕೊರೋನಾ  ಸೋಂಕು ತಗುಲಿರುವುದು ಖಚಿತವಾಗಿತ್ತು. ಬಳಿಕ ಅವರನ್ನು ವೈದ್ಯರ ಸಲಹೆಯಂತೆ  ಮಣಿಪಾಲ್   ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. 9 ದಿನದಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.