IMG 20230304 WA0055

ಕಾಂಗ್ರೆಸ್ : ಭ್ರಷ್ಟ ಜನತಾ ಪಕ್ಷ ಎಂದು ಮರು ನಾಮಕರಣ ಮಾಡಿಕೊಳ್ಳಬೇಕು…!

POLATICAL STATE

ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ವಿರುದ್ಧದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರ ಮಾತುಗಳು:

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ:

ಬಿಜೆಪಿ ತನ್ನ ಹೆಸರನ್ನು ಬದಲಿಸಿಕೊಳ್ಳಬೇಕು. ಅರು ಭಾರತೀಯ ಜನತಾ ಪಕ್ಷದಿಂದ, ಭ್ರಷ್ಟ ಜನತಾ ಪಕ್ಷ ಎಂದು ಮರುನಾಮಕರಣ ಮಾಡಿಕೊಳ್ಳಬೇಕು. ಬೊಮ್ಮಾಯಿ ಅವರ ಸರ್ಕಾರವನ್ನು ಭ್ರಷ್ಟಾಸುರ ಬೊಮ್ಮಾಯಿ ಸರ್ಕಾರ ಎಂದು ಕರೆಯಬೇಕು.ಈ ರಾಜ್ಯದಲ್ಲಿ ಯಾವ ರೀತಿಯಲ್ಲಿ ಬಿಜೆಪಿ ಹಾಗೂ ಬೊಮ್ಮಾಯಿ ಸರ್ಕಾರ ರಾಜ್ಯವನ್ನು ಲೂಟಿ ಮಾಡುತ್ತಿದೆ ಎಂದರೆ ಜನರ ಸರ್ಕಾರವನ್ನು ಸಂಪೂರ್ಣವಾಗಿ ಲೂಟಿ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ದಾಶದಲ್ಲೇ ಭ್ರಷ್ಟಾಚಾರದ ಮಾದರಿಯನ್ನು ನೀಡಿದೆ.
ಈ ಸರ್ಕಾರ 40% ಸರ್ಕಾರ ಎಂದು, ಮುಖ್ಯಮಂತ್ರಿಯನ್ನು ಪೇಸಿಎಂ ಎಂದು ಕರೆಯುತ್ತಾರೆ. ಈ ಮಾತನ್ನು ನಾವು ಮಾತ್ರ ಹೇಳುತ್ತಿಲ್ಲ. ರಾಜ್ಯ ಗುತ್ತಿಗೆದಾರರ ಸಂಘ ಪ್ರಧಾನಿಗೆ ಪತ್ರ ಬರೆದು ಈ ಸರ್ಕಾರದಲ್ಲಿ ಕಮಿಷನ್ ನೀಡದೇ ಏನು ನಡೆಯುವುದಿಲ್ಲ ಎಂದು ಹೇಳಿದ್ದಾರೆ. ಈ ಬಿಜೆಪಿ ಸರ್ಕಾರ ಕೇವಲ ಲಂಚದ ಸಿದ್ಧಾಂತವನ್ನು ಹೊಂದಿದೆ. ಗುತ್ತಿಗೆದಾರ ಸಂತೋಷ್ ಪಾಟೀಲ್ ಬಿಜೆಪಿ ಕಾರ್ಯಕರ್ತನಾದರೂ ಆತ ತಾನು ಮಾಡಿದ ಕೆಲಸಕ್ಕೆ ಬಿಲ್ ಕೇಳಿದಾಗ 40% ಲಂಚ ಕೇಳಿದರು. ಅದನ್ನು ನೀಡಲಾಗದೆ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾನು, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸಂತೋಷ್ ಪಾಟೀಲ್ ಅವರ ಮನೆಗೆ ಹೋದಾಗ ಅವರು ಬಿಜೆಪಿ ಸದಸ್ಯನಾಗಿ ಬೂತ್ ಮಟ್ಟದಲ್ಲಿ ಕೆಲಸ ಮಾಡಿದ್ದವನಿಂದಲೇ ಬಿಜೆಪಿ ಸರ್ಕಾರ ಲಂಚ ಕೇಳಿ ಅವರ ಪ್ರಾಣ ಬಲಿ ಪಡೆದಿದೆ ಎಂದು ಹೇಳಿದರು.

IMG 20230304 WA0052

ನಾಲ್ಕು ದಿನಗಳ ಹಿಂದೆ ರಾಜ್ಯಕ್ಕೆ ಬಂದಿದ್ದ ಮೋದಿ ಅವರು ಬೆಳಗಾವಿಗೆ ಭೇಟಿ ನೀಡಿದ್ದರು. ಆದರೆ ಸಂತೋಷ್ ಪಾಟೀಲ್ ನಿವಾಸಕ್ಕೆ ಭೇಟಿ ನೀಡಲಿಲ್ಲ. ಬಿಜೆಪಿ ತನ್ನದೇ ಕಾರ್ಯಕರ್ತನನ್ನು ಬಿಡಲಿಲ್ಲ, ಇನ್ನು ಬೇರೆಯವರನ್ನು ಬಿಡುತ್ತಾರಾ? ಇನ್ನು ಬೆಂಗಳೂರಿನ ಗುತ್ತಿಗೆದಾರ ಪ್ರಶಾಂತ್, ತುಮಕೂರಿನಲ್ಲಿ ಗುತ್ತಿಗೆದಾರ ರಾಜೇಂದ್ರ ಅವರು ಲಂಚ ನೀಡಲಾಗದೇ ಪ್ರಾಣ ಬಿಟ್ಟಿದ್ದು, ಈ 40% ಸರ್ಕಾರದ ಬಗ್ಗೆ ಈ ಪರಿವಾರದವರನ್ನು ಕೇಳಬೇಕು.

ಬೊಮ್ಮಾಯಿ ಅವರೇ, ಕಟೀಲ್ ಅವರೇ, ನಡ್ಡಾ ಅವರೇ, ಅಮಿತ್ ಶಾ ಅವರೇ, ನಿಮ್ಮ ಧನದಾಹ ಯಾವಾಗ ನೀಗಲಿದೆ? ಎಂದು ಹೇಳಿ ಬೆಂಗಳೂರಿನ ಜನರೆಲ್ಲಾ ಸೇರಿ ಆ ಹಣವನ್ನು ಸೇರಿಸಿ ನೀಡುತ್ತೇವೆ. ನೀವು ಸಂತೋಷ್ ಪಾಟೀಲ್, ಪ್ರಶಾಂತ್, ರಾಜೇಂದ್ರ ಅವರನ್ನು ಅವರ ಕುಟುಂಬದವರಿಗೆ ವಾಪಸ್ ನೀಡಿ. 40% ಕಮಿಷನ್ ಬಗ್ಗೆ ತಿಳಿಯಬೇಕಾದರೆ ಶಾಲಾ ಒಕ್ಕೂಟ ರೂಪ್ಸಾ ಸಂಸ್ಥೆಯನ್ನು ಕೇಳಿ. ಪ್ರಧಾನಮಂತ್ರಿಗಳು ರಾಜ್ಯಕ್ಕೆ 8 ಬಾರಿ ಆಗಮಿಸಿದ್ದು, ಇದುವರೆಗೂ ಕೆಂಪಣ್ಣ ಅವರ ಪತ್ರಕ್ಕೆ ಉತ್ತರ ನೀಡಿಲ್ಲ. ಈ ಸರ್ಕಾರದ ಕಮಿಷನ್ ಬಗ್ಗೆ ಮಠಾಧೀಶರು 30% ಕಮಿಷನ್ ನೀಡಬೇಕು. ಕೆಂಪಣ್ಣ ಅವರು ತುಮಕೂರಿನ ಬಿಜೆಪಿ ಶಾಸಕರ ಅಕ್ರಮದ ಬಗ್ಗೆ ಆಡಿಯೋ ದಾಖಲೆ ಬಿಡುಗಡೆ ಮಾಡಿದರು. 90 ಲಕ್ಷದ ಲಂಚ ಪಡೆದ ಬಗ್ಗೆ ಮಾಹಿತಿ ನೀಡಿದರು. ಅವರ ವಿರುದ್ಧ ಯಾವ ಕ್ರಮ ಕೈಗೊಂಡರು? ಈ ಸರ್ಕಾರದ 8 ಸಚಿವರ ವಿರುದ್ಧ ದಾಖಲೆ ಇವೆ ಎಂದರು. ಆದರೆ ಈ ಸರ್ಕಾರ ಅವರು ಯಾರು ಎಂದು ಸರ್ಕಾರ ಕೇಳಿದೆಯಾ? ಇಲ್ಲ. ಎಲ್ಲರೂ ಸೇರಿ ರಾಜ್ಯ ಲೂಟಿ ಮಾಡುತ್ತಿದ್ದಾರೆ.

ಅಮಿತ್ ಶಾ ಹಾಗೂ ಬೊಮ್ಮಾಯಿ ಅವರು ಭ್ರಷ್ಟಾಚಾರದ ಆರೋಪದ ಬಗ್ಗೆ ಸಾಕ್ಷಿ ಕೇಳುತ್ತಿದ್ದಿರಿ. ನಿಮ್ಮ ಸರ್ಕಾರ ಮೈಸೂರು ಸ್ಯಾಂಡಲ್ ,ಸೋಪಿನ ಚಂದನದ ಸುವಾಸನೆಯಲ್ಲೂ ನೀವು ಭ್ರಷ್ಟಾಚಾರದ ದುರ್ಗಂದವನ್ನು ಹರಡಿದ್ದೀರಿ. ನಿಮಗೆ ನಾಚಿಕೆಯಾಗಬೇಕು. ಅವರ ಪುತ್ರ 40 ಲಕ್ಷ ಹಣದೊಂದಿಗೆ ಸಿಕ್ಕಿಬಿದ್ದಿದ್ದರೆ, ಬಿಜೆಪಿ ನಾಯಕರು ಮಕ್ಕಳಿಂದ ತಪ್ಪಾಗಿದೆ ಎಂದು ಹೇಳುತ್ತಿದ್ದಾರೆ. ಅವರ ಕಚೇರಿಯಿಂದ 1.20 ಕೋಟಿ, ಮನೆಯಲ್ಲಿ 6 ಕೋಟಿ ಹಣದ ಕಂತೆಗಳು ಸಿಕ್ಕರೂ ಸಣ್ಣ ತಪ್ಪಾಗಿದೆ ಎಂದಿದ್ದಾರೆ. ಅವರ ಮನೆಯಲ್ಲಿ ಸಿಕ್ಕಿರುವ ಹಣ ಅವರದಲ್ಲ, ಬಿಜೆಪಿ ಹಾಗೂ ಅದರ ನಾಯಕರು ರಾಜ್ಯದ ಜನರಿಂದ ಲೂಟಿ ಮಾಡುತ್ತಿರುವ ಹಣವಾಗಿದೆ.

ಬಿಜೆಪಿ ಸರ್ಕಾರದ ಅಕ್ರಮದ ಬಗ್ಗೆ, ಬಿಜೆಪಿಯ ಯತ್ನಾಳ್ ಅವರು ಮುಖ್ಯಮಂತ್ರಿ ಕುರ್ಚಿ 2500 ಕೋಟಿಗೆ ಮಾರಾಟವಾಗಿದೆ ಎಂದರು. ಯತ್ನಾಳ್ ಅವರು ಸುಳ್ಳು ಹೇಳಿದ್ದರೆ ಅವರನ್ನು ಪಕ್ಷದಿಂದ ಕಿತ್ತುಹಾಕಿಲ್ಲ ಯಾಕೆ? ಅವರು ಸತ್ಯ ಹೇಳಿದ್ದರೆ ಬೊಮ್ಮಾಯಿ ಅವರು ಎಷ್ಟು ಹಣ ಕೊಟ್ಟು ಸಿಎಂ ಆಗಿದ್ದಾರೆ ಹೇಳಬೇಕು. ಬಿಜೆಪಿ ನಾಯಕರ ಪುತ್ರರು ಸಿಕ್ಕಿಬಿದ್ದಿರುವುದು ಇದೇ ಮೊದಲಲ್ಲ. ಈ ರಾಜ್ಯದಲ್ಲಿ ಈ ಹಿಂದೆ ವಿಜಯೇಂದ್ರ ಟ್ಯಾಕ್ಸ್ ಹೆಚ್ಚು ಜನಪ್ರಿಯವಾಗಿತ್ತು. ಬಿಜೆಪಿಯ ಈ ಹಿಂದಿನ ಸಿಎಂ ಅವರ ಪುತ್ರರಿಗೆ ಗುತ್ತಿಗೆದಾರರು ಲಂಚ ನೀಡಬೇಕಿತ್ತು. ಆ ಮೂಲಕ ಬಿಜೆಪಿ ನಾಯಕರ ಪುತ್ರರ ಅಕ್ರಮಗಳು ಹೆಚ್ಚಾಗಿವೆ.

IMG 20230304 WA0049

ಸರ್ಕಲ್ ಇನ್ಸ್ ಪೆಕ್ಟರ್ ನಂದೀಶ್ ಅವರ ಸಾವಿನ ಪ್ರಕರಣದ ಸಮಯದಲ್ಲಿ ಬಿಜೆಪಿ ಮಂತ್ರಿಗಳೇ ಲಂಚ ನೀಡಿ ಪೋಸ್ಟಿಂಗ್ ಪಡೆದಿರುವ ಬಗ್ಗೆ ಮಾತನಾಡಿದ್ದಾರೆ. ಇವರು ಟೆಂಡರ್ ಮಾರುತ್ತಾರೆ, ಶಾಲೆಗಳ ಅನುದಾನ, ಮಂಠಗಳಿಗೆ ನೀಡುವ ಅನುದಾನ, ವರ್ಗಾವಣೆ, ಪೋಸ್ಟಿಂಗ್ ನಲ್ಲಿ ಲೂಟಿ ಮಾಡುತ್ತಾರೆ. ಅಲ್ಲದೆ ರಾಜ್ಯದ ಯುವಕರ ಭವಿಷ್ಯವನ್ನು ಮಾರುತ್ತಾರೆ. ಪಿಎಶ್ಐ ನೇಮಕಾತಿ ಅಕ್ರಮ ಮಾಡಿದರು. ಆಗಿನ ಗೃಹಮಂತ್ರಿ, ಮುಖ್ಯಮಂತ್ರಿಗಳ ವಿಚಾರಣೆ ನಡೆದಿಲ್ಲ ಯಾಕೆ? ಸಹಾಯಕ ಪ್ರಧ್ಯಾಪಕ ಹುದ್ದೆಯನ್ನು ಬಿಜೆಪಿ ಸರ್ಕಾರ ಮಾರಾಟ ಮಾಡಿಲ್ಲವೇ? ಜೆಇಇ ಹುದ್ದೆ, ಸಹಾಯಕ ರಿಜಿಸ್ಚ್ರಾರ್, ಜಿಲ್ಲಾ ಸಹಕಾರಿ ಬ್ಯಾಂಕ್ ಹುದ್ದೆಗಳನ್ನು ಮಾರಾಟ ಮಾಡಿಲ್ಲವೇ? ಇವರು ಪ್ರತಿಯೊಂದರಲ್ಲೂ ಹಣ ಲೂಟಿ ಮಾಡುತ್ತಾ ರಾಜ್ಯವನ್ನು ಮಾರಾಟ ಮಾಡುತ್ತಿದ್ದಾರೆ. ಇಂದು ಬಿಜೆಪಿಯ ಭ್ರಷ್ಟಾಚಾರದಿಂದ ರಾಜ್ಯವನ್ನು ಮುಕ್ತಿ ಮಾಡುವ ಸಮಯ ಬಂದಿದೆ. ನಾವೆಲ್ಲರೂ ಇಂದು ಸೇರಿ ಕೇವಲ ಸರ್ಕಾರ ಬದಲಿಸಿದರೆ ವ್ಯವಸ್ಥೆ ಬದಲಾಗುವುದಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ಎಲ್ಲ ಅಕ್ರಮಗಳ ಬಗ್ಗೆ ತನಿಖೆ ಮಾಡಿಸಿ ತಪ್ಪಿತಸ್ಥರನ್ನು ಜೈಲಿಗೆ ಕಳುಹಿಸುವ ಸಂಕಲ್ಪ ಮಾಡಬೇಕು.

ಈ ಅಕ್ರಮದಲ್ಲಿ ಯಾರೇ ತಪ್ಪಿತಸ್ಥರಾದರೂ ಅವರ ವಿರುದ್ಧ ತನಿಖೆ ಮಾಡಿ ಅವರಿಗೆ ಶಿಕ್ಷೆ ನೀಡಿಸಲಾಗುವುದು. ರಾಜ್ಯದ ಯುವಕರ ಭವಿಷ್ಯ ನಾಶವಾಗಲು ಬಿಡಬಾರದು. ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಅವರ ಸರ್ಕಾರ ಬರ್ಕಾಸ್ಥ್ ಆಗುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ:

ರಾಜ್ಯ ಸರ್ಕಾರದ ವಿರುದ್ಧದ ಎಲ್ಲಾ ಭ್ರಷ್ಟಾಚಾರದ ಆರೋಪಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ದಾಖಲೆ ಕೇಳುತ್ತಾರೆ, ಆದರೆ ನಮ್ಮ ಸರ್ಕಾರದ ಅವಧಿಯಲ್ಲಿ ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಮಾಡಿಕೊಂಡಾಗ ಜಾರ್ಜ್‌ ಅವರು ತಪ್ಪು ಮಾಡದಿದ್ದರೂ ರಾಜೀನಾಮೆ ನೀಡಿದ್ದರು, ನಾನು ಜಾರ್ಜ್‌ ಅವರಿಗೆ ನೀವು ರಾಜೀನಾಮೆ ಕೊಡುವುದು ಬೇಡ ಎಂದು ಹೇಳಿದ್ದೆ, ಆದರೂ ಅವರು ನೈತಿಕತೆ ಆಧಾರದಲ್ಲಿ ರಾಜೀನಾಮೆ ನೀಡಿದ್ದರು. ದೇವೇಗೌಡರು ನಮ್ಮ ವಿರುದ್ಧ ಒಂದಂಕಿ ಲಾಟರಿ ಆರೋಪ ಮಾಡಿದಾಗ ಕೂಡಲೇ ಪತ್ರಿಕಾಗೋಷ್ಠಿ ಕರೆದು ಅದನ್ನು ಸಿಬಿಐ ಗೆ ವಹಿಸಿದ್ದೆ, ಪರೇಶ್‌ ಮೇಸ್ತಾ ಎಂಬ ಯುವಕ ಕಾಲುಜಾರಿ ಬಿದ್ದು ಸತ್ತಾಗ ಅದನ್ನು ಕೊಲೆ ಎಂದು ದೊಂಬಿ, ಗಲಾಟೆ ಎಬ್ಬಿಸಿದರು, ಅದನ್ನು ಕೂಡ ಸಿಬಿಐ ತನಿಖೆಗೆ ವಹಿಸಿದ್ದೆ, ಈ ಯಾವುದೇ ಪ್ರಕರಣದಲ್ಲಿ ನಾವು ಬಿಜೆಪಿಯವರಿಂದ ದಾಖಲೆ ಕೇಳಿಲ್ಲ, ನಮ್ಮ ಸರ್ಕಾರದ ಅವಧಿಯಲ್ಲಿ ಒಟ್ಟು 8 ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಿದ್ದೆ, ಇಂದು ಆ ಎಲ್ಲಾ ಪ್ರಕರಣಗಳಲ್ಲಿ ಸಿಬಿಐ ಬಿ ರಿಪೋರ್ಟ್‌ ನೀಡಿದೆ. ನಮ್ಮ ಮೇಲಿನ ಎಲ್ಲಾ ಆರೋಪಗಳು ಸುಳ್ಳು ಎಂದು ಸಾಬೀತಾಗಿದೆ. ಈ ಬಸವರಾಜ ಬೊಮ್ಮಾಯಿಗೆ ಮಾನ ಮರ್ಯಾದಿ ಇದೆಯಾ? ಅಧಿಕಾರಕ್ಕೆ ಅಂಟಿಕೊಂಡು ಕೂತಿದ್ದಾರೆ. ಒಂದನ್ನಾದರೂ ತನಿಖೆ ಮಾಡಿಸಿದ್ರಾ?

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಸೇರಿಕೊಂಡು ಮಂತ್ರಿಗಳು, ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು ಇಂತಿಷ್ಟು ಲಂಚ ಕಲೆಕ್ಷನ್ ಮಾಡಿಕೊಡಬೇಕು ಎಂದು ನಿಗದಿ ಮಾಡಿದ್ದಾರೆ. ಅವರಿಗೆ ಈ ಬಾರಿ ಜಾತಿ, ಧರ್ಮಗಳ ಆಧಾರದಲ್ಲಿ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂಬುದು ಅರಿವಾಗಿದೆ. ಮುಂದಿನ ಚುನಾವಣೆಯಲ್ಲಿ ಪ್ರತೀ ವಿಧಾನಸಭಾ ಕ್ಷೇತ್ರದಲ್ಲಿ ಗೆಲ್ಲಲು ಕನಿಷ್ಠ 100 ಕೋಟಿ ಖರ್ಚು ಮಾಡಿದರೂ ಆಶ್ಚರ್ಯ ಇಲ್ಲ. ಬೊಮ್ಮಾಯಿಗೆ ಮಾನ ಮರ್ಯಾದಿ ಇದ್ದರೆ ಮಾಡಾಳ್‌ ವಿರೂಪಾಕ್ಷಪ್ಪನನ್ನು ಈ ಕೂಡಲೇ ಬಂಧಿಸಬೇಕು ಮತ್ತು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ನಿಮ್ಮ ಭ್ರಷ್ಟಾಚಾರಕ್ಕೆ ಇದಕ್ಕಿಂತ ದಾಖಲೆ ಬೇರೆ ಬೇಕಾ?

IMG 20230304 WA0053

8 ಕೋಟಿಗೂ ಅಧಿಕ ಮೊತ್ತದ ಹಣ, ಆಭರಣಗಳನ್ನು ಲೋಕಾಯುಕ್ತದವರು ಮಾಡಾಳ್‌ ವಿರೂಪಾಕ್ಷಪ್ಪ ಅವರ ಮನೆಯಿಂದ ಸೀಜ್‌ ಮಾಡಿದ್ದಾರೆ. ನನ್ನ ಪ್ರಕಾರ ಬೊಮ್ಮಾಯಿ ಈಗಾಗಲೇ ರಾಜೀನಾಮೆ ಕೊಟ್ಟುಬಿಡಬೇಕಿತ್ತು. ಸಿದ್ದರಾಮಯ್ಯ ಅವರ ಸರ್ಕಾರ ಎಐಸಿಸಿಗೆ ಎಟಿಎಂ ಆಗಿತ್ತು ಎಂದು ಅಮಿತ್‌ ಶಾ ಅವರು ನಿನ್ನೆ ಆರೋಪ ಮಾಡಿದ್ದಾರೆ, ಇದಕ್ಕೇನು ಹೇಳ್ತೀರಿ ಶಾ? ಗಡಿಪಾರಾಗಿದ್ದ, ಜೈಲಿಗೆ ಹೋಗಿದ್ದ ಶಾ ಅವರಿಂದ ಪಾಠ ಕಲಿಯಬೇಕ ನಾವು? ದೇಶದ ದುರಂತ ನೋಡ್ರೀ.

ಮರ್‌ ಜಾ ಮೋದಿ ಎಂದು ಕಾಂಗ್ರೆಸ್‌ ನವರು ಹೇಳುತ್ತಾರೆ ಎಂದು ಮೋದಿ ಅವರು ಜನರ ಸಿಂಪತಿ ಗಳಿಸಲು ನಾಟಕ ಮಾಡುತ್ತಿದ್ದಾರೆ. ನಿಮ್ಮ ಬಳಿ ಇಂಟಲಿಜೆನ್ಸ್‌ ಇದೆ, ರಾ ಇದೆ, ಹೀಗೆ ಕೂಗಿದವರನ್ನು ಜೈಲಿಗೆ ಹಾಕೋದಲ್ವಾ ಮೋದಿಜಿ? ಇನ್ನು ಯಾಕೆ ಸುಮ್ಮನಿದ್ದೀರಿ? ಮೋದಿ ಅವರಿಗೆ ಯಡಿಯೂರಪ್ಪ ಅವರ ಮೇಲೆ ನಿಜವಾಗಿ ಕಾಳಜಿ ಇಲ್ಲ. ಅವರ ಮೇಲೆ ಇದ್ದಕ್ಕಿದ್ದಂತೆ ಸಿಂಪತಿ ಬಂದಂತೆ ನಾಟಕ ಮಾಡುತ್ತಿದ್ದಾರೆ. ಯಡಿಯೂರಪ್ಪ ಅವರು ಕೇಂದ್ರ ನಾಯಕರು ಕೇಳಿದಷ್ಟು ದುಡ್ಡು ಕಳಿಸುತ್ತಿರಲಿಲ್ಲ ಎಂದು ಕಾಣುತ್ತೆ ಅದಕ್ಕೆ ಅವರನ್ನು ಅಧಿಕಾರದಿಂದ ಇಳಿಸಿ, ಆರ್‌,ಎಸ್‌,ಎಸ್‌ ನ ಕೈಗೊಂಬೆಯಂತೆ ಕೆಲಸ ಮಾಡುವ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಮಾಡಿದ್ದಾರೆ. ಪಾಪ ಯಡಿಯೂರಪ್ಪ ಅವರು ಕಣ್ಣೀರು ಹಾಕುತ್ತಾ ಅಧಿಕಾರದಿಂದ ಇಳಿಯುವ ಹಾಗೆ ಮಾಡಿದ್ರಲ್ಲ ಮೋದಿಜಿ, ಈಗ ಓಟಿಗಾಗಿ ಅವರ ಕೈ ಹಿಡಿದುಕೊಂಡು ಹೊಗಳುತ್ತೀರ?

“ಸಾಕಪ್ಪ ಸಾಕು 40% ಸರ್ಕಾರ” ಎಂದು ಇಂದು ಜನ ಹೇಳುತ್ತಿದ್ದಾರೆ. ಸಾರ್ವಜನಿಕ ಸಭೆಗಳಲ್ಲಿ 40% ಕಮಿಷನ್‌ ಹಗರಣದ ಬಗ್ಗೆ ಮಾತನಾಡಿ ಸರ್‌ ಎಂದು ಜನರೇ ಕೇಳುತ್ತಿದ್ದಾರೆ. ಗುತ್ತಿಗೆದಾರರ ಸಂಘದ ಅಧ್ಯಕ್ಷರು, ರುಪ್ಸಾ ಅಧ್ಯಕ್ಷರು ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಪತ್ರ ಬರೆದ ಉದಾಹರಣೆ ಹಿಂದೆ ಇದೆಯಾ? ಮಠಗಳಿಗೆ ನೀಡುವ ಅನುದಾನಕ್ಕೂ ಲಂಚ ಕೊಡಬೇಕು ಎಂದು ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ. ಇಷ್ಟೊಂದು ಲಜ್ಜೆಗೆಟ್ಟು ಲಂಚ ತಿನ್ನುವ ಸರ್ಕಾರವನ್ನು ನಾನು ನೋಡಿಯೇ ಇರಲಿಲ್ಲ.

ಅದಕ್ಕೆ ನಿನ್ನೆ ಬೆಳಗಾವಿಯಲ್ಲಿ ಕೂಡಲೇ ಚುನಾವಣೆ ಘೋಷಣೆ ಮಾಡುವಂತೆ ಮನವಿ ಮಾಡಿದ್ದೆ, ಚುನಾವಣಾ ನೀತಿ ಸಂಹಿತೆ ಘೋಷಣೆ ಆದರೆ ಇವರು ಲಂಚ ಹೊಡೆಯುವುದಾದರೂ ನಿಲ್ಲುತ್ತೆ, ಗುತ್ತಿಗೆದಾರರ ಸುಲಿಗೆ ನಿಲ್ಲುತ್ತೆ. ನೂರಕ್ಕೆ ನೂರು ಮುಂದೆ ನಾವು ಅಧಿಕಾರಕ್ಕೆ ಬರುತ್ತೇವೆ, ನಾವು ಅಧಿಕಾರಕ್ಕೆ ಬಂದ ತಕ್ಷಣ ಕೊನೆಯ 6 ತಿಂಗಳಿಂದ ಟೆಂಡರ್‌ ನೀಡಿರುವ ಕಾಮಗಾರಿಗಳನ್ನು ಪುನರ್‌ ಪರಿಶೀಲನೆಗೆ ಒಳಪಡಿಸುತ್ತೇವೆ. ಯಾವುದೇ ಗುತ್ತಿಗೆದಾರರು ಈಗ ಲಂಚ ನೀಡಿ ಗುತ್ತಿಗೆ ಕೆಲಸ ಹಿಡಿಯಬೇಡಿ, ಕಾರಣ ನಾವು ಬಂದ ಮೇಲೆ ಆ ಎಲ್ಲಾ ಕಾಮಗಾರಿಗಳನ್ನು ರದ್ದು ಮಾಡುತ್ತೇವೆ.