IMG 20230405 WA0071

JD (S) :ಪಂಚರತ್ನ ಜಾರಿಗೆ ಜನರಿಗೆ ತೆರಿಗೆ ಹಾಕಲ್ಲ, ನಯಾಪೈಸೆ ಸಾಲ ಮಾಡಲ್ಲ…!

POLATICAL STATE

ಪಂಚರತ್ನ ಜಾರಿಗೆ ಜನರಿಗೆ ತೆರಿಗೆ ಹಾಕಲ್ಲ, ನಯಾಪೈಸೆ ಸಾಲ ಮಾಡಲ್ಲ ಎಂದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು ಅಭಿವೃದ್ಧಿಗೆ ಪಂಚರತ್ನ ಯೋಜನೆಗಳೇ ಸಂಜೀವಿನಿ

ಗಾಂಧೀನಗರ, ಚಾಮರಾಜಪೇಟೆಯಲ್ಲಿ ಪಂಚರತ್ನ ರಥಯಾತ್ರೆ

ಬೆಂಗಳೂರು: ಪಂಚರತ್ನ ಯೋಜನೆಗಳನ್ನು ಜಾರಿ ತರಲು ನಾನು ಒಂದು ಪೈಸೆ ತೆರಿಗೆ ಹಾಕುವುದಿಲ್ಲ ಹಾಗೂ ಒಂದು ರೂಪಾಯಿ ಸಾಲ ತರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟವಾಗಿ ಹೇಳಿದರು.

ರಾಜಧಾನಿ ಬೆಂಗಳೂರಿನಲ್ಲಿ ಬಡತನ ನಿವಾರಿಸುವ ನಿಟ್ಟಿನಲ್ಲಿ ನಾನು ರೂಪಿಸಿರುವ ಪಂಚರತ್ನ ಯೋಜನೆಗಳು ಸಂಜೀವಿನಿಯಾಗಿ ಕೆಲಸ ಮಾಡುತ್ತವೆ ಎಂದು ಅವರು ಹೇಳಿದರು.

ಬುಧವಾರ ಸಂಜೆ ಚಾಮರಾಜಪೇಟೆಯಲ್ಲಿ ಪಂಚರತ್ನ ರಥಯಾತ್ರೆ ನಡೆಸುವ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಜಾಗತಿಕವಾಗಿ ಹೆಸರು ಮಾಡಿರುವ ಮಹಾನಗರದಲ್ಲಿ ಬಡತನ ಇನ್ನೂ ತಾಂಡವವಾಡುತ್ತಿರುವುದು ಅತ್ಯಂತ ನೋವಿನ ಸಂಗತಿ. ಈ ಬಡತನಕ್ಕೆ ಪರಿಹಾರ ಪಂಚರತ್ನಗಳಲ್ಲಿ ಇದೆ ಎಂದರು.

IMG 20230405 WA0083

ಒಂದು ಸಲ ಅವಕಾಶ ಕೊಡಿ:

ಒಂದು ಬಾರಿ ನನಗೆ ಅವಕಾಶ ಕೊಡಿ, ನಾನು ಇನ್ನೂ ಇಪ್ಪತ್ತೈದು ವರ್ಷ ಅಧಿಕಾರ ಕೊಡಿ ಎಂದು ಕೇಳುವುದಿಲ್ಲ. ಅಮೃತಕಾಲ ತರುತ್ತೇವೆ ಎಂದು ಬಿಜೆಪಿಯವರು ಹೇಳುತ್ತಾರೆ, ಯಾರಿಗೆ ಅವರು ಅಮೃತಕಾಲ ತರುತ್ತಾರೆ ಅವರು ಎಂದು ಕೇಳಿದ ಅವರು; ಈವರೆಗೆ ಅಧಿಕಾರದಲ್ಲಿದ್ದ ಅಲ್ಪ ಸಮಯದಲ್ಲಿ ಕೊಟ್ಟ ಭರವಸೆಗಳನ್ನು ಈಡೇರಿಸಿದ್ದೇನೆ. ಪಂಚರತ್ನ ಯೋಜನೆಗಳ ಜಾರಿ ನನ್ನ ಜೀವಿತಾವಧಿಯ ಕನಸು. ಈ ಯೋಜನೆಗಳು ಜಾರಿಗೆ ಬಂದರೆ ಎಲ್ಲರ ಬದುಕು ಹಸನಾಗುತ್ತದೆ ಎಂದು ಅವರು ಒತ್ತಿ ಹೇಳಿದರು.

ಪಂಚರತ್ನ ಯೋಜನೆಗಳು ಜಾತಿ ಧರ್ಮ ಮೀರಿದ ಉದಾತ್ತ ಕಾರ್ಯಕ್ರಮಗಳು. ನಿತ್ಯ ಬೆಳಗಾದರೆ ನನ್ನ ಮನೆಯ ಹತ್ತಿರ ಬರುವ ಜನರ ನೋವನ್ನು ಕಂಡು ರೂಪಿಸಿದ ಕಾರ್ಯಕ್ರಮ. ಈ ಯೋಜನೆಗಳು ಜಾರಿಯಾದರೆ ಕರ್ನಾಟಕ ಸರ್ಗ ಸದೃಶ ರಾಜ್ಯವಾಗುತ್ತದೆ ಎಂದು ಮಾಧ್ಯಮಗಳೇ ಬರೆದಿವೆ. ದಯಮಾಡಿ ಒಮ್ಮೆ ಅವಕಾಶ ಕೋಡಿ ಎಂದು ಕುಮಾರಸ್ವಾಮಿ ಅವರು ಮನವಿ ಮಾಡಿಕೊಂಡರು.

ಎಲ್ ಕೆಜಿಯಿಂದ ದ್ವಿತೀಯ ಪಿಯುಸಿ ವರೆಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ಉಚಿತ ಶಿಕ್ಷಣ, ಮಾರಣಾಂತಿಕ ಕ್ಯಾನ್ಸರ್, ಬೋನ್ ಮ್ಯಾರೋ, ಹೃದ್ರೋಗ ಸೇರಿದಂತೆ ಸರ್ವ ಕಾಯಿಲೆಗಳಿಗೂ ಉಚಿತ ಚಿಕಿತ್ಸೆ, ಐದು ಲಕ್ಷ ರೂಪಾಯಿ ಮೊತ್ತದ ಉಚಿತ ಮನೆ, ಪ್ರತಿಯೊಬ್ಬರಿಗೂ ಆರ್ಥಿಕ ಶಕ್ತಿ ತುಂಬುವ ರೀತಿಯಲ್ಲಿ ಉದ್ಯೋಗ ಸೇರಿದಂತೆ ಅನೇಕ ಕಾರ್ಯಕ್ರಮಗಳು ಪಂಚರತ್ನ ಯೋಜನೆಗಳಲ್ಲಿ ಇವೆ ಎಂದು ಅವರು ಹೇಳಿದರು.

ಅಡುಗೆ ಅನಿಲ ಸಿಲಿಂಡರ್ ಗೆ 50% ಸಬ್ಸಿಡಿ:

ಕೇಂದ್ರ ಸರಕಾರ ಉಜ್ವಲ ಯೋಜನೆ ಜಾರಿಗೆ ತಂದು ಅಡುಗೆ ಅನಿಲ ಸಿಲಿಂಡರ್ ಉಚಿತ ಎಂದು ಹೇಳಿತು. ಆದರೆ, ಈಗ 1150 ರೂಪಾಯಿಗೆ ಸಿಲಿಂಡರ್ ಮಾರುತ್ತಿದೆ. ಜೆಡಿಎಸ್ ಸರಕಾರ ಅಧಿಕಾರಕ್ಕೆ ಬಂದರೆ ಸಿಲಿಂಡರ್ ಒಂದಕ್ಕೆ 50% ಸಬ್ಸಿಡಿ ಕೊಡುತ್ತೇವೆ ಎಂದು ಅವರು ಘೋಷಣೆ ಮಾಡಿದರು.

ಅಲ್ಲದೆ, 60 ವರ್ಷ ಮೀರಿದ ಹಿರಿಯರಿಗೆ ಮಾಸಿಕ 5000 ರೂಪಾಯಿ, ವಿಧವೆಯರು ವಿಕಲಚೇತನರಿಗೆ ಮಾಸಿಕ 2500 ರೂಪಾಯಿ ಕೊಡಲಾಗುವುದು. ಆಟೋ ಚಾಲಕರಿಗೆ ಮಾಸಿಕ 2000 ರೂಪಾಯಿ ಸಹಾಯಧನ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿಗಳು ಘೋಷಣೆ ಮಾಡಿದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬುಧವಾರ ನಗರದ ಗಾಂಧೀನಗರ ಹಾಗೂ ಚಾಮರಾಜಪೇಟೆ ಕ್ಷೇತ್ರಗಳಲ್ಲಿ ರಥಯಾತ್ರೆ ನಡೆಸಿದರು.

ಸಂಜೆ ಚಾಮರಾಜಪೇಟೆಯಲ್ಲಿ ರಥಯಾತ್ರೆ ನಡೆಸಿದ ಕುಮಾರಸ್ವಾಮಿ ಅವರು; ಕಾಟನ್ ಪೇಟೆಯಲ್ಲಿರುವ ಸಿಸಿಬಿ ಕಚೇರಿ ರಸ್ತೆಯಿಂದ ರಥಯಾತ್ರೆ ಆರಂಭ ಮಾಡಿದರು. ಕ್ಷೇತ್ರದ ಮುಖಂಡರಾದ ಇಮ್ರಾನ್ ಪಾಷಾ ಮತ್ತು ಗೋವಿಂದರಾಜು ಜತೆಗೂಡಿ ಮತಯಾಚನೆ ಮಾಡಿದರು.

ಗಾಂಧಿನಗರದಲ್ಲಿ ರಥಯಾತ್ರೆ:

ಬೆಳಗ್ಗೆಯೇ ಗಾಂಧೀನಗರ ಕ್ಷೇತ್ರದಲ್ಲಿ ಹಲವಾರು ಪ್ರದೇಶಗಳಲ್ಲಿ ಯಾತ್ರೆ ನಡೆಸಿದ ಮಾಜಿ ಮುಖ್ಯಮಂತ್ರಿಗಳು; ಮಾಗಡಿ ರಸ್ತೆ, ಓಕಳಿಪುರ, ಶ್ರೀರಾಮಪುರ ಮುಂತಾದ ಕಡೆ ಸಂಚರಿಸಿ ಮತಯಾಚನೆ ನಡೆಸಿದರು. ಗಾಂಧೀನಗರ ಕ್ಷೇತ್ರದ ಅಭ್ಯರ್ಥಿ ಗಾಂಧೀನಗರ ನಾರಾಯಣಸ್ವಾಮಿ ಅವರು ಮಾಜಿ ಮುಖ್ಯಮಂತ್ರಿಗಳ ಜತೆಯಲ್ಲಿದ್ದರು.