IMG 20230614 WA0023

ಪಾವಗಡ: ರೈತರು ಜಮೀನು ನೀಡಿದರೆ ಸೋಲಾರ್ ಪಾರ್ಕ್ ವಿಸ್ತರಣೆ….!

DISTRICT NEWS Genaral STATE ತುಮಕೂರು

Áವಗಡ ಸೋಲಾರ್ ಪಾರ್ಕ್‍ಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಇಂದನ ಸಚಿವ ಜಾರ್ಜ್ ಭೇಟಿ

ತುಮಕೂರು(ಕ.ವಾ.) ಜೂ.14: ಜಿಲ್ಲೆಯ ಪಾವಗಡ ತಾಲ್ಲೂಕು ತಿರುಮಣಿಯಲ್ಲಿರುವ ಏಷ್ಯಾದ ಅತಿದೊಡ್ಡ ಸೋಲಾರ್ ಪಾರ್ಕ್‍ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಿರುಮಣಿಯಲ್ಲಿರುವ ಕರ್ನಾಟಕ ಸೌರಶಕ್ತಿ ಅಭಿವೃದ್ಧಿ ನಿಗಮದ ಕಚೇರಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಸಚಿವರುಗಳು, ಇಲಾಖೆ ವತಿಯಿಂದ ನೀಡಿದ ಪ್ರಾತ್ಯಕ್ಷಿಕೆ ವೀಕ್ಷಿಸಿದರು. ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೋಲಾರ್ ಪಾರ್ಕ್‍ನಲ್ಲಿ ವಿದ್ಯುತ್ ಉತ್ಪಾದನೆ, ರೈತರ ಜಮೀನಿನ ಬಾಡಿಗೆ ಪಾವತಿ ಸೇರಿದಂತೆ ಎಲ್ಲ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿದರು.


ನಂತರ ನೆರೆದಿದ್ದ ರೈತರನ್ನು ಉದ್ದೇಶಿಸಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ತಾವು ಇಂಧನ ಸಚಿವರಾಗಿದ್ದಾಗ ಈ ಭಾಗದ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಮೀನು ಖರೀದಿ ಮಾಡದೆ ಉತ್ತಮ ಬೆಲೆಯನ್ನು ನಿಗಧಿ ಮಾಡಿ ಬಾಡಿಗೆ ರೂಪದಲ್ಲಿ ಜಮೀನನ್ನು ಪಡೆದು ಏಷ್ಯಾದಲ್ಲೇ ಅತಿ ದೊಡ್ಡ ಸೋಲಾರ್ ಪಾರ್ಕ್ ನಿರ್ಮಾಣ ಮಾಡಲಾಯಿತು. ಸೌರಶಕ್ತಿ ವಿದ್ಯುತ್ ಕೇಂದ್ರದಲ್ಲಿ 2400 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವ ಮೂಲಕ ದೇಶದಲ್ಲಿ ಪ್ರಥಮ ಸ್ಥಾನ ಪಡೆದಿದೆ ಎಂದು ಹರ್ಷ ವ್ಯಕ್ತಪಡಿಸಿದರು.

DSC 4221


ಪ್ರತೀ ತಿಂಗಳು ಜಮೀನಿನ ಮಾಲೀಕರಾಗಿರುವ ರೈತರ ಖಾತೆಗೆ ಬಾಡಿಗೆ ಹಣ ಜಮೆಯಾಗುತ್ತಿದೆ. ಎಲ್ಲ ಪಾರ್ಕ್‍ಗಳನ್ನು ಚೆನ್ನಾಗಿ ನಿರ್ವಹಣೆ ಮಾಡಲಾಗುತ್ತಿದೆ. ಸುಮಾರು ನಾಲ್ಕೈದು ಸಾವಿರ ಜನ ಉದ್ಯೋಗ ಮಾಡುತ್ತಿದ್ದಾರೆ ಎಂದು ತಿಳಿಸಿದರು.


ರೈತರ ಜಮೀನಿನಲ್ಲಿ ಸೌರಶಕ್ತಿ ಅಳವಡಿಸಿದ್ದರೂ ಕೂಡಾ ರೈತರ ಜಮೀನು ಅವರ ಪಹಣಿ, ಖಾತೆ ಅವರ ಹೆಸರಲ್ಲೇ ಇರುತ್ತದೆ. ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಸಹ ಪಡೆಯಬಹುದು ಎಂದರು.
ಸೋಲಾರ್ ಪಾರ್ಕ್ ಅನ್ನು ಸರಿಯಾಗಿ ನಿರ್ವಹಣೆ ಮಾಡುತ್ತಿದ್ದಾರೆ. ರೈತರಿಗೆ ಸರಿಯಾದ ರೀತಿಯಲ್ಲಿ ಭೂ ದಾಖಲೆಗಳನ್ನು ಕಂದಾಯ ಅಧಿಕಾರಿಗಳು ಮಾಡಿಕೊಟ್ಟಿದ್ದಾರೆ. ಇಲ್ಲಿರುವ ವಾಸ್ತವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಉಳಿಮೆಗೆ ಯೋಗ್ಯವಿಲ್ಲದ ಇನ್ನೂ 10 ಸಾವಿರ ಎಕರೆ ಜಮೀನನ್ನು ರೈತರು ಸೋಲಾರ್ ಪ್ಲಾಂಟ್‍ಗೆ ನೀಡಿದರೆ ಮತ್ತಷ್ಟು ಸೌರ ವಿದ್ಯುತ್ ಉತ್ಪಾದನೆ ಮಾಡಲು ಸಾಧ್ಯವಾಗುತ್ತದೆ. ಪಾವಗಡ ತಾಲ್ಲೂಕಿಗೆ ಕುಡಿಯುವ ನೀರಿನ ಯೋಜನೆಯ ಕಾಮಗಾರಿಯು ಶೇಕಡಾ 90ರಷ್ಟು ಮುಗಿದಿದೆ ಎಂದರು.
ಸೋಲಾರ್ ಪಾರ್ಕ್‍ಗೆ ಜಮೀನು ನೀಡಿರುವ ರೈತರಿಗೆ ಎಕರೆಗೆ ವಾರ್ಷಿಕ 25 ಸಾವಿರ ರೂ. ಬಾಡಿಗೆ ನೀಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಇದನ್ನು ಜಾಸ್ತಿ ಮಾಡಬಹುದಾಗಿದೆ. ಈ ಬಾಡಿಗೆ ಆಧಾರದ ಮೇಲೆ ಸಾಲ ಸಹ ಪಡೆಯಬಹುದಾಗಿದೆ ಎಂದು ಅವರು ಹೇಳಿದರು.
ಪಾವಗಡ ಸೋಲಾರ್ ಪಾರ್ಕ್ ನವೀಕರಿಸಬಹುದಾದ ಇಂಧನ ಮತ್ತು ಸುಸ್ಥಿರ ಅಭಿವೃದ್ಧಿಗೆ ಕರ್ನಾಟಕದ ಬದ್ಧತೆಗೆ ಸಾಕ್ಷಿಯಾಗಿದೆ. ರಾಜ್ಯದ ಆರ್ಥಿಕ ಬೆಳವಣಿಗೆಗೆ ಪೂರಕವಾಗಿರುವ ಅತಿದೊಡ್ಡ ಸೋಲಾರ್ ಪಾರ್ಕ್, ಶುದ್ಧ- ಹಸಿರು ಇಂಧನ ಮೂಲಗಳನ್ನು ಬಳಸಿಕೊಳ್ಳುವಲ್ಲಿ ಸಾಕ್ಷಿಯಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದರು.

DSC 4261


ಹವಾಮಾನ ಬದಲಾವಣೆಯ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಮತ್ತು ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡುವ ಜತೆಗೆ, ಮುಂದಿನ ಪೀಳಿಗೆಗೆ ಸುಸ್ಥಿರ ಭವಿಷ್ಯವನ್ನು ಖಚಿತಪಡಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಇಂಧನ ಸಚಿವ ಕೆ.ಜೆ. ಜಾರ್ಜ್ ಮಾತನಾಡಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರೈತರ ಮಗನಾಗಿರುವುದಕ್ಕೆ ಈ ಭಾಗದ ರೈತರ ಜಮೀನನ್ನು ಸ್ವಾಧೀನಪಡಿಸಿಕೊಳ್ಳದೆ ಬಾಡಿಗೆ ರೂಪದಲ್ಲಿ ಶಾಶ್ವತವಾಗಿ ಆದಾಯ ಬರುವಂತೆ ಮಾಡಿದ್ದಾರೆ. ನಿಜಕ್ಕೂ ಅವರ ಈ ದೂರದೃಷ್ಟಿಯುಳ್ಳ ಆಲೋಚನೆ ಎಲ್ಲರಿಗೂ ಮಾದರಿಯಾಗಿದೆ ಎಂದರು.


ಮುಂಬರುವ ದಿನಗಳಲ್ಲಿ ಸೋಲಾರ್ ಪಾರ್ಕ್‍ಗಳ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಲಾಗುವುದು. ರಾಜ್ಯದ ಹಲವು ಕಡೆ ಸೋಲಾರ್ ಪಾರ್ಕ್ ಸ್ಥಾಪಿಸುವ ಚಿಂತನೆಯನ್ನು ಹೊಂದಲಾಗಿದೆ ಎಂದು ಹೇಳಿದರು.
ಮತ್ತೆ ಈ ಭಾಗದಲ್ಲೂ ರೈತರು ಜಮೀನನ್ನು ನೀಡಲು ಮುಂದೆ ಬಂದರೆ ಮತ್ತಷ್ಟು ಸೋಲಾರ್ ಪಾರ್ಕ್‍ಗಳನ್ನು ನಿರ್ಮಾಣ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.
ಈ ಸೋಲಾರ್ ಪಾರ್ಕ್‍ನಲ್ಲಿ 2 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಸದ್ಯಕ್ಕೆ ಯಾವುದೇ ರೀತಿಯ ಸಮಸ್ಯೆ ಇಲ್ಲದಂತೆ ಈ ಸೋಲಾರ್ ಪಾರ್ಕ್‍ನಲ್ಲಿ ಕಾರ್ಯನಿರ್ವಹಣೆಯಾಗುತ್ತಿದೆ ಎಂದರು.
ಪಾವಗಡ ಸೋಲಾರ್ ಪಾರ್ಕ್ ಸ್ವಚ್ಛ ಮತ್ತು ಸುಸ್ಥಿರ ಇಂಧನ ಪರಿಹಾರಗಳಿಗೆ ನಮ್ಮ ಬದ್ಧತೆಯ ಕುರುಹಾಗಿದೆ. ಸರ್ಕಾರ ಮತ್ತು ನವೀಕರಿಸಬಹುದಾದ ಇಂಧನ ಉದ್ಯಮದ ನಡುವಿನ ಬಾಂಧವ್ಯ ಉತ್ತಮ ಪಡಿಸುವ ಜತೆಗೆ ಹೂಡಿಕೆ, ಸಹಯೋಗವನ್ನು ಉತ್ತೇಜಿಸಲು ಹೆಚ್ಚಿನ ಒತ್ತು ನೀಡಲಾಗುತ್ತದೆ. ಮುಖ್ಯವಾಗಿ ಉದ್ಯೋಗ ಸೃಷ್ಟಿಗೆ ಹೊಸ ಮಾರ್ಗಗಳನ್ನು ಅನ್ವೇಷಿಸುವುದು ನಮ್ಮ ಗುರಿ ಎಂದು ವಿವರಿಸಿದರು.

DSC 4003


ಶುದ್ಧ ಇಂಧನ ಉತ್ಪಾದನೆಗೆ ರಾಷ್ಟ್ರ ಹಾಕಿಕೊಂಡಿರುವ ಗುರಿಗೆ ನಮ್ಮ ಸೋಲಾರ್ ಪಾರ್ಕ್ ಈಗಾಗಲೇ ದೊಡ್ಡ ಕೊಡುಗೆ ನೀಡಿದೆ. ಅದರ ಅತ್ಯಾಧುನಿಕ ದ್ಯುತಿವಿದ್ಯುಜ್ಜನಕ ಫಲಕಗಳು, ಅತ್ಯಾಧುನಿಕ ತಂತ್ರಜ್ಞಾನ, ಸುಧಾರಿತ ವಿದ್ಯುತ್ ಸಂಗ್ರಹ ವ್ಯವಸ್ಥೆ ಮತ್ತು ಸಮರ್ಥ ಗ್ರಿಡ್ ಏಕೀಕರಣದೊಂದಿಗೆ ಸೋಲಾರ್ ಪಾರ್ಕ್ ವರ್ಷಕ್ಕೆ 4.5 ಶತಕೋಟಿ ಸೌರ ವಿದ್ಯುತ್ ಉತ್ಪಾದಿಸುವ ಸಾಮಥ್ರ್ಯವನ್ನು ಹೊಂದಿದೆ. ಆ ಮೂಲಕ ವಾರ್ಷಿಕ 3.6 ಮಿಲಿಯನ್ ಟನ್‍ಗಳಷ್ಟು ಅಔ2 ಹೊರಸೂಸುವಿಕೆಯನ್ನು ತಗ್ಗಿಸಲು ನೆರವಾಗುತ್ತಿದೆ. ನವೀಕರಿಸಬಹುದಾದ ಇಂಧನ ಮೂಲಗಳು ನಮ್ಮ ಪರಿಸರ ಮತ್ತು ಆರ್ಥಿಕತೆಯ ಮೇಲೆ ಬೀರಬಹುದಾದ ಪ್ರಭಾವವನ್ನು ಈ ಅಂಕಿ-ಅಂಶಗಳೇ ಸಾರಿ ಹೇಳುತ್ತವೆ ಎಂದರು.


ಈ ಸಂದರ್ಭದಲ್ಲಿ ಶಾಸಕ ಹೆಚ್.ವಿ. ವೆಂಕಟೇಶ್, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್‍ಕುಮಾರ್ ಪಾಂಡೆ, ಇಂಧನ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಗೌರವ ಗುಪ್ತ, ಪ್ರಭಾರ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ, ಕೆಪಿಟಿಸಿಎಲ್‍ನ ಗೋವಿಂದಪ್ಪ, ಬೆಸ್ಕಾಂನ ಲೋಕೇಶ್, ಉಪವಿಭಾಗಾಧಿಕಾರಿ ರಿಷಿ ಆನಂದ್, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಲಿಮಿಟೆಡ್(ಏಖಇಆಐ)ನ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ, ಕರ್ನಾಟಕ ಸೌರಶಕ್ತಿ ಅಭಿವೃದ್ಧಿ ನಿಗಮ ನಿಯಮಿತ(ಏSPಅಆಐ)ದ ಪ್ರತಿನಿಧಿಗಳು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ ಮತ್ತಿತರರು ಭಾಗವಹಿಸಿದ್ದರು.
ಪಾವಗಡ ಸೋಲಾರ್ ಪಾರ್ಕ್ ಬಗ್ಗೆ
ಭಾರತ ಸರ್ಕಾರದ “ಸೋಲಾರ್ ಪಾರ್ಕ್ ಅಭಿವೃದ್ಧಿ ಮತ್ತು ಅಲ್ಟ್ರಾ-ಮೆಗಾ ಸೌರ ವಿದ್ಯುತ್ ಯೋಜನೆ” ಅಡಿ 2050 ಮೆ.ವ್ಯಾ. ಪಾರ್ಕ್ ಅನ್ನು 2014ರಲ್ಲಿ ಅಭಿವೃದ್ಧಿಪಡಿಸಲಾಗಿದೆ. ಈ ಪಾರ್ಕ್ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ನಾಗಲಮಡಿಕೆಯ ಹೋಬಳಿಯ ತಿರುಮಣಿ, ರಾಯಚೆರ್ಲು, ಬಲ್ಲಸಮುದ್ರ, ವಲ್ಲೂರು ಮತ್ತು ಕ್ಯಾತಗಾನಚೆರ್ಲು- 5 ಗ್ರಾಮಗಳ ಸುಮಾರು 13,000 ಎಕರೆ ಭೂ ಪ್ರದೇಶದಲ್ಲಿ ಹರಡಿಕೊಂಡಿದೆ.

DSC 4141


ಏSPಆಅಐ-ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಲಿಮಿಟೆಡ್ (ಏಖಇಆಐ) ಮತ್ತು ಸೋಲಾರ್ ಎನರ್ಜಿ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (SಇಅI)ನ ಜಂಟಿ ಉದ್ಯಮ. ಸೌರ ವಿದ್ಯುತ್ ಪಾರ್ಕ್‍ನ ಬ್ಯಾಲೆನ್ಸ್ ಆಫ್ ಸಿಸ್ಟಮ್ ಅನ್ನು ಕರ್ನಾಟಕ ಸೋಲಾರ್ ಪವರ್ ಡೆವಲಪ್‍ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ (ಕೆಎಸ್‍ಪಿಡಿಸಿಎಲ್) ಸೌರ ಪಾರ್ಕ್‍ನ ಅಭಿವೃದ್ಧಿಯ “ಪ್ಲಗ್ ಮತ್ತು ಪ್ಲೇ” ವಿಧಾನದ ಖಾತ್ರಿಗಾಗಿ ಯೋಜನೆಯನ್ನು ಅಭಿವೃದ್ಧಿಪಡಿಸಿದೆ.
ಸಂಪೂರ್ಣ ಸೋಲಾರ್ ಪಾರ್ಕ್ ಅನ್ನು 40 ಬ್ಲಾಕ್‍ಗಳಾಗಿ ವಿಂಗಡಿಸಲಾಗಿದೆ, ಪ್ರತಿಯೊಂದು ಬ್ಲಾಕ್ 50 ಮೆ.ವ್ಯಾ. ಸಾಮರ್ಥದ್ದಾಗಿದೆ. ಓಖಿPಅ, SಇಅI, ಮತ್ತು ಏಖಇಆಐ ಗಳಿಗೆ ಕ್ರಮವಾಗಿ 12 ಬ್ಲಾಕ್‍ಗಳು (ಒಟ್ಟು 600 ಒW), 4 ಬ್ಲಾಕ್‍ಗಳು (ಒಟ್ಟು 200 ಒW), ಮತ್ತು 24 ಬ್ಲಾಕ್‍ಗಳು (ಒಟ್ಟು 1200 ಒW) ಸುಂಕ ಆಧಾರಿತ ಸ್ಪರ್ಧಾತ್ಮಕ ಬಿಡ್ಡಿಂಗ್ (2×10ಒW) ಅಡಿಯಲ್ಲಿ ಸೌರ ಪ್ರಾಜೆಕ್ಟ್ ಡೆವಲಪರ್‍ಗಳ ಆಯ್ಕೆಗಾಗಿ +2×15ಒW ಅನ್ನು ಏಖಇಆಐ ನಿಂದ ಇPಅ ಮೋಡ್‍ನಲ್ಲಿ ಅಭಿವೃದ್ಧಿಪಡಿಸಲಾಗಿದೆ. ಈ ಬ್ಲಾಕ್‍ಗಳಿಂದ ಸೌರ ವಿದ್ಯುತ್ ಸಂಗ್ರಹಕ್ಕೆ, ಏSPಆಅಐ ಎಂಟು ಆಂತರಿಕ ಪೂಲಿಂಗ್ ಸ್ಟೇಷನ್‍ಗಳನ್ನು ಮತ್ತು ಬಾಹ್ಯ ವಿದ್ಯುತ್ ಸ್ಥಳಾಂತರಿಸುವ ವ್ಯವಸ್ಥೆಗೆ ಸಂಪರ್ಕಿಸಲು ಸಂಬಂಧಿತ ಪ್ರಸರಣ ಮಾರ್ಗಗಳನ್ನು ಅಭಿವೃದ್ಧಿಪಡಿಸಿದೆ. PಔWಇಖಉಖIಆ ಇದನ್ನು ಅಭಿವೃದ್ಧಿಪಡಿಸಿದೆ.