IMG 20230725 WA0020

ಮಧುಗಿರಿ : ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ..!

DISTRICT NEWS ತುಮಕೂರು

*ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ*

ಮಧುಗಿರಿ. ಐ. ಡಿ .ಹಳ್ಳಿ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಹಕಾರ ಸಚಿವರಾದ ಕೆ ಎನ್ ರಾಜಣ್ಣನವರು ವಿದ್ಯಾಭ್ಯಾಸ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಉತ್ತಮ ರೀತಿಯಲ್ಲಿವಿದ್ಯಾಭ್ಯಾಸ ಮಾಡಲು ತೊಂದರೆಯಾಗದಂತೆ . ನೋಟ್ ಪುಸ್ತಕ ವಿತರಿಸಿ ಎಂದರು. ವಿದ್ಯಾರ್ಥಿಗಳು ಉನ್ನತ ಮಟ್ಟದ ವಿದ್ಯಾಭ್ಯಾಸ ಮಾಡಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಆದಾಗ ತಂದೆ ತಾಯಿಗಳಿಗೆ ಮತ್ತು ಗುರುಗಳಿಗೆ ಒಳ್ಳೆಯ ಹೆಸರು ಗಳಿಸಲಿ ಎಂದು ಆಶಿಸುತ್ತೇನೆ.

ಈಗಾಗಲೇ ನೋಟ್ ಪುಸ್ತಕಗಳನ್ನು ಐ.ಡಿ.ಹಳ್ಳಿ ಗ್ರಾಮ ಪಂಚಾಯಿತಿಗೆ ತಲುಪಿಸಿರುತ್ತಾರೆ

ಅವರ ಆದೇಶದಂತೆ ಇಂದು ಐ.ಡಿ.ಹಳ್ಳಿ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ವನ್ನು ಹಮ್ಮಿಕೊಂಡು ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ನೂತನವಾಗಿಆಯ್ಕೆಯಾಗಿರುವ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಭಾಗ್ಯಮ್ಮ ಕೋಂ ಸದಾಶಿವ ರೆಡ್ಡಿ ಹಾಗೂ ಉಪಾಧ್ಯಕ್ಷರಾದ ಲಕ್ಷ್ಮಮ್ಮ ಅಂಜಿನಪ್ಪ ಅಧ್ಯಕ್ಷರಾದ ನರಸಿಂಹ ರೆಡ್ಡಿ ಸರ್ಕಾರಿ ಪ್ರೌಢಶಾಲೆಯ ಉಪ ಪ್ರಾಂಶುಪಾಲರಾದ ಮಲ್ಲಿಕಾರ್ಜುನ್ ನಾಯಕ್ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಲಕ್ಷ್ಮಿಪತಿ. ಪಂಚಾಯತಿ ಕಾರ್ಯದರ್ಶಿಯಾದ ಆದಿ ನರಸಿಂಹಲು. ಗ್ರಾಮ ಪಂಚಾಯತಿ ಸದಸ್ಯರುಗಳಾದ ಜಿಲಾನ್. ಸುಜಾತ. ನರಸಿಂಹಮೂರ್ತಿ. ದೈಹಿಕ ಶಿಕ್ಷಕರಾದ ಪ್ರಶಾಂತ್ ಬಿರಾದಾರ್ ಹಾಗೂ ಶಾಲಾ ವಿದ್ಯಾರ್ಥಿಗಳು ಇನ್ನೂ ಮುಂತಾದವರುಹಾಜರಿದ್ದು ಕಾರ್ಯಕ್ರಮ ವನ್ನುಯಶಸ್ವಿಯಾಗಿ ನಡೆಸಿಕೊಟ್ಟರು.

ವರದಿ. ಲಕ್ಷ್ಮಿಪತಿ ದೊಡ್ಡ ಯ ಲ್ಕೂರು.