IMG 20230728 WA0025

AAP: ಬ್ರ್ಯಾಂಡ್ ಬೆಂಗಳೂರಿನ ಬ್ರ್ಯಾಂಡೆಡ್ ಭ್ರಷ್ಟಾಚಾರ…!

POLATICAL STATE

*ಬ್ರ್ಯಾಂಡ್ ಬೆಂಗಳೂರಿನ ಬ್ರ್ಯಾಂಡೆಡ್ ಭ್ರಷ್ಟಾಚಾರ*

ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಬಿಬಿಎಂಪಿ ಕೇಂದ್ರ ಕಚೇರಿಯ ಆವರಣದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ “ಬೆಂಗಳೂರು ನಗರ ಆರೋಗ್ಯ, ಸ್ವಚ್ಛತೆಯನ್ನು ಕಾಪಾಡುತ್ತಿರುವ ಪೌರಕಾರ್ಮಿಕರ ವೇತನದಲ್ಲಿನ 500 ಕೋಟಿ ರೂ. ಗಳಿಗೂ ಹೆಚ್ಚಿನ ಮೊತ್ತದ ಇ ಎಸ್ ಐ ಮತ್ತು ಪಿಎಫ್ ಹಣವನ್ನು ಕಳೆದ 5 ವರ್ಷಗಳಿಂದ ಭರಿಸದೆ ಬಾಕಿ ಉಳಿಸಿಕೊಂಡಿದ್ದು ಇವರುಗಳ ಭವಿಷ್ಯ ಹಾಗೂ ಆರೋಗ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ಬಿಬಿಎಂಪಿ ಹಾಗೂ ಕಸ ವಿಲೇವಾರಿ ಗುತ್ತಿಗೆದಾರರುಗಳು ಇವರುಗಳ ಬದುಕಿನಲ್ಲಿ ಸಂಚಕಾರವನ್ನು ತರುತ್ತಿದ್ದಾರೆ, ಇದೊಂದು ಆತಂಕಕಾರಿಯಾದಂತಹ ಬೆಳವಣಿಗೆ. ಬ್ರ್ಯಾಂಡ್ ಬೆಂಗಳೂರನ್ನು ಮಾಡಲು ಹೊರಟಿರುವ ಉಪಮುಖ್ಯಮಂತ್ರಿಗಳು, ಮೊದಲು ಪೌರಕಾರ್ಮಿಕರ ಮೂಲ ಸಮಸ್ಯೆಗಳನ್ನು ಬಗೆಹರಿಸಲಿ ” ಎಂದು ದಾಖಲೆಗಳ ಸಮೇತ ಬಹಿರಂಗ ಪಡಿಸಿದರು.

” ಬಿಬಿಎಂಪಿಯಲ್ಲಿ ಕಸ ನಿರ್ವಹಣೆಗೆ ಮಾತ್ರ ಪೌರಕಾರ್ಮಿಕರ ಸಂಖ್ಯೆ ಒಟ್ಟು 32,000.
ಆಶ್ಚರ್ಯಕರ ಸಂಗತಿ ಎಂದರೆ 700 ಪೌರಕಾರ್ಮಿಕರು ಮಾತ್ರ ಖಾಯಂ ಹೊಂದಿದ್ದಾರೆ.
16,000 ಪೌರ ಕಾರ್ಮಿಕರಿಗೆ ಪಾಲಿಕೆಯು ನೇರ ವೇತನವನ್ನು ಮಾತ್ರ ನೀಡುತ್ತಿದೆ.
16,000 ಕಾರ್ಮಿಕರು ಗುತ್ತಿಗೆ ಏಜೆನ್ಸಿಗಳ ಅಡಿಯಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ.
ಪೌರಕಾರ್ಮಿಕರಿಗೆ ಸದಾ ಮೂರು ತಿಂಗಳ ಸಂಬಳ ಸದಾ ಬಾಕಿ ಉಳಿದಿರುತ್ತದೆ. ಬಿಬಿಎಂಪಿಯು ತನ್ನ ಕಾರ್ಮಿಕರ ಭವಿಷ್ಯದ ಹಾಗೂ ಆರೋಗ್ಯದಂತಹ ಅತಿ ಮುಖ್ಯ ವಿಚಾರದಲ್ಲಿ ಗುತ್ತಿಗೆದಾರರುಗಳೊಂದಿಗೆ ಒಳ ಒಪ್ಪಂದ ಮಾಡಿಕೊಂಡು ಈ ಈ ರೀತಿಯ ನೂರಾರು ಕೋಟಿ ಅವ್ಯವಹಾರಗಳನ್ನು ಅನೇಕ ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ ” ಎಂದು ಮುಖ್ಯಮಂತ್ರಿ ಚಂದ್ರು ದಾಖಲೆಗಳ ಸಮೇತ ಮಾಹಿತಿ ನೀಡಿದರು.

ಪಶ್ಚಿಮ ವಲಯದ ಗುತ್ತಿಗೆದಾರರ ಪಟ್ಟಿಯನ್ನು ಬಿಡುಗಡೆ ಮಾಡಿ ಮಾತನಾಡಿದ ಮುಖ್ಯಮಂತ್ರಿ ಚಂದ್ರು ,

ಶ್ರೀ ಭುವನೇಶ್ವರಿ ಎಂಟರ್ಪ್ರೈಸಸ್

ಹಠಾರಿ ಸೆಕ್ಯೂರಿಟಿ ಸರ್ವಿಸಸ್

ನೋವೇಲಿ, ಸೆಕ್ಯೂರಿಟಿ ಸರ್ವಿಸಸ್

ಡೈರೆಕ್ಟ್ ವೆಲ್ ಸೆಕ್ಯೂರಿಟಿ ಸರ್ವಿಸಸ್

ಡಿಟೆಕ್ಟ್ ವೆಲ್ ಸೆಕ್ಯೂರಿಟಿ ಸರ್ವಿಸಸ್

ಕುಮಾರ್. ಸಿ

” ಇನ್ನುಳಿದ ವಲಯಗಳ ಗುತ್ತಿಗೆದಾರರುಗಳು ಇಎಸ್ಐ ಪಿಎಫ್ ಕಟ್ಟಿರುವ ದಾಖಲೆಗಳನ್ನು ಲೆಕ್ಕಪರಿಶೋಧನೆಗೆ ಸಲ್ಲಿಸೇ ಇಲ್ಲ. ಬಿಬಿಎಂಪಿಯು ಸಹ ಇವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ”

” ಲಭ್ಯ ಮಾಹಿತಿಯ ಪ್ರಕಾರ ಆರ್ ಆರ್ ನಗರ ವಲಯದಲ್ಲಿ ಮಾತ್ರವೇ 2018/ 19 ನೇ ಸಾಲಿನ ಲೆಕ್ಕ ಪರಿಶೋಧನಾ ವರದಿಯ ಪ್ರಕಾರ 14 ವಾರ್ಡ್‌ಗಳ ಪೈಕಿ ಕೇವಲ 9 ವಾರ್ಡ್ ಗಳಲ್ಲಿ ಆಯ್ದ ಕೆಲವೇ ತಿಂಗಳುಗಳು ಮಾತ್ರ ಇಎಸ್ಐ /ಪಿಎಫ್ ಅನ್ನು ಪಾವತಿ ಮಾಡಿದ್ದಾರೆ.
7 ಕೋಟಿಯ 14 ಲಕ್ಷದ 31,668 ರೂಗಳನ್ನು ಬಾಕಿ ಉಳಿಸಿಕೊಂಡಿದ್ದಾರೆ.
ಈ ವಲಯ ಒಂದರಲ್ಲೇ 18636 ಪೌರಕಾರ್ಮಿಕರುi ಇದ್ದಾರೆಂದು ಲೆಕ್ಕ ನೀಡಿರುವುದು ತೀರ ಅವಾಸ್ತವ ಸಂಗತಿ. ಈ ಸಂಖ್ಯೆಯಲ್ಲಿಯೇ ಭ್ರಷ್ಟಾಚಾರ ನಡೆದಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಈ ಬೃಹತ್ ಹಗರಣದ ಹಿಂದೆ ಬಲಾಢ್ಯ ರಾಜಕಾರಣಿಗಳು ಮತ್ತು ಅಧಿಕಾರಿಗಳ ನೇರ ಕೈವಾಡವಿದೆ. ತನಿಖೆಯ ಮೂಲಕವೇ ಇದು ಹೊರಬೀಳಲು ಸಾಧ್ಯ ” ಎಂದು ಮುಖ್ಯಮಂತ್ರಿ ಚಂದ್ರು ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಟಿ. ನಾಗಣ್ಣ ಮಾತನಾಡುತ್ತಾ ,
” ಘನ ತ್ರಾಜ್ಯ ನಿರ್ವಹಣಾ ವಿಭಾಗದಲ್ಲಿ ಅಲ್ಲಿನ ಕಾರ್ಮಿಕರಿಗೆ ಪಾಲಿಕೆಯಿಂದ ನೇರ ವೇತನ ಪಾವತಿ ಇದುವರೆಗೂ ಆಗಿಲ್ಲ. ಗುತ್ತಿಗೆದಾರರು ಕಟ್ಟಡ ಕಾರ್ಮಿಕರ ಸೆಸ್ ಅನ್ನು ಸಹ ಕಟ್ಟಿಲ್ಲ. ಇದರಿಂದಲೇ ಬಿಬಿಎಂಪಿ ಹಾಗೂ ಗುತ್ತಿಗೆದಾರರ ನಡುವಿನ ಅಕ್ರಮ ಒಳ ಒಪ್ಪಂದದ ಸುಳಿವು ಸಿಗುತ್ತದೆ. ಈ ವಿಭಾಗದ ಕಾರ್ಮಿಕರು ಬಹುದಿನಗಳಿಂದ ಈ ಬೇಡಿಕೆಯನ್ನು ಸಲ್ಲಿಸುತ್ತಿದ್ದಾರೆ.
ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯು ಸಹ ಯಾವೊಂದು ನೋಟಿಸ್ ಅನ್ನು ಸಹ ಇದುವರೆಗೂ ಬಿಬಿಎಂಪಿ ಹಾಗೂ ಅಲ್ಲಿನ ಗುತ್ತಿಗೆದಾರರಿಗೆ ನೀಡದಿರುವುದು ಗಮನಿಸಿದರೆ ಕಾರ್ಮಿಕ ಇಲಾಖೆಯು ಕಾರ್ಮಿಕ ರಕ್ಷಣೆಗಾಗಿ ಇದೆಯೋ ಅಥವಾ ಗುತ್ತಿಗೆದಾರರ ರಕ್ಷಣೆಗೆ ಇದೆಯೋ ಎಂಬ ಅನುಮಾನ ಮೂಡುತ್ತದೆ ” ಎಂದು ಸುದ್ದಿಗಾರರಿಗೆ ತಿಳಿಸಿದರು.

” ಪೌರ ಕಾರ್ಮಿಕರ ರಕ್ತವನ್ನು ಮಾರಿಕೊಂಡು ಬಿಬಿಎಂಪಿ ಹಾಗೂ ಅಲ್ಲಿನ ಗುತ್ತಿಗೆದಾರರು ಬಿ ಎಂ ಡಬ್ಲ್ಯೂ ಆಡಿ ಮರ್ಸಿಡಿಸ್ ಕಾರ್ ಗಳಲ್ಲಿ ಐಷಾರಾಮಿ ಜೀವನ ನಡೆಸುತ್ತಿರುವುದು ದುರ್ದೈವದ ಸಂಗತಿ ” ಎಂದು ಬಿ.ಟಿ.ನಾಗಣ್ಣ ತಿಳಿಸಿದರು.

ರಾಜ್ಯ ಉಪಾಧ್ಯಕ್ಷ ಹಾಗೂ ಬೆಂಗಳೂರು ನಗರ ಉಸ್ತುವಾರಿ ಮೋಹನ್ ದಾಸರಿ ಮಾತನಾಡುತ್ತ ,
ಈ ಎಲ್ಲಾ ಗುತ್ತಿಗೆದಾರರುಗಳ ಬಿಲ್ ಪಾವತಿಯನ್ನು ತಡೆಹಿಡಿಯಬೇಕು. ಕೂಡಲೇ ಪೌರಕಾರ್ಮಿಕರುಗಳ ಭವಿಷ್ಯ ಹಾಗೂ ಆರೋಗ್ಯ ನಿಧಿಯನ್ನು ಧರಿಸಬೇಕು ಹಾಗೂ ಆರೋಪಿಗಳ ವಿರುದ್ಧ ಇಎಸ್ಐ ಕಾಯ್ದೆಯ ಸೆಕ್ಷನ್ 85 (A) ಪ್ರಕಾರ ಕೂಡಲೇ ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು. ಸರ್ಕಾರ ಶೀಘ್ರವಾಗಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಪೌರಕಾರ್ಮಿಕರ ಸಂಘಟನೆಗಳ ಜೊತೆಗೂಡಿ ಬೃಹತ್ ಪ್ರತಿಭಟನೆಗೆ ಇಳಿಯಬೇಕಾಗುತ್ತದೆ ” ಎಂದು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಉಪಾಧ್ಯಕ್ಷ ಸುರೇಶ್ ರಾಥೋಡ್, ಡಾಕ್ಟರ್ ಸತೀಶ್ ಕುಮಾರ್, ಜಗದೀಶ್ ಚಂದ್ರ, ಮೃತ್ಯುಂಜಯ, ವಿಶ್ವನಾಥ್, ಕುಶಲ ಸ್ವಾಮಿ, ಉಷಾ ಮೋಹನ್ , ಸುಷ್ಮಾ ವೀರ್ ಸೇರಿದಂತೆ ಅನೇಕ ನಾಯಕರುಗಳು ಭಾಗವಹಿಸಿದ್ದರು.