IMG 20230904 WA0001

ಮಧುಗಿರಿ‌- ಕ್ಷೀರ ಭಾಗ್ಯ ದಶಮಾನೋತ್ಸವ ಕಾರ್ಯಕ್ರಮ ಕ್ಕೆ ಸಿದ್ದತೆ….!

DISTRICT NEWS ತುಮಕೂರು

*ಕ್ಷೀರ ಭಾಗ್ಯ ದಶಮಾನೋತ್ಸವ ಕಾರ್ಯಕ್ರಮದ ಸ್ಥಳ ಪರಿಶೀಲನೆ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಜಿ ಪರಮೇಶ್ವರ್ ಸಹಕಾರಿ ಸಚಿವ ಕೆ ಎನ್ ರಾಜಣ್ಣ ನವರು

ಮಧುಗಿರಿ. ಕರ್ನಾಟಕ ಹಾಲು ಒಕ್ಕೂಟ ಮಹಾಮಂಡಳಿ ವತಿಯಿಂದ ನಡೆಯುವ ಕ್ಷೀರ ಭಾಗ್ಯ ದಶಮಾನೋತ್ಸವ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ರಾಜ್ಯ ಸರ್ಕಾರದ ಜನಪ್ರಿಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಇಂದು ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಸಮಾರಂಭ ಕಾರ್ಯಕ್ರಮದ ರೂಪೋಷಗಳನ್ನು ವೀಕ್ಷಿಸಿದ ಕರ್ನಾಟಕ ಸರ್ಕಾರದ ಗೃಹ ಮಂತ್ರಿಗಳು ಹಾಗೂ ಜಿಲ್ಲಾ ಸಚಿವರಾದ ಡಾಕ್ಟರ್ ಜಿ ಪರಮೇಶ್ವರ್ ಅವರು ಹಾಗೂ ಸಹಕಾರ ಸಚಿವರಾದ ಕೆ ಎನ್.ರಾಜಣ್ಣನವರು ಜೊತೆಯಲ್ಲಿ ಸ್ಥಳ ಪರಿಶೀಲನೆ ಮಾಡಿ. ನಂತರ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಪಾವಗಡ ತಾಲೂಕಿನ ಶಾಸಕರಾದ ವೆಂಕಟೇಶ್ .ವಿಧಾನ ಪರಿಷತ್ತಿನ ಸದಸ್ಯರಾದ ಆರ್ ರಾಜೇಂದ್ರ ಅವರು .ಕೆಎಂಎಫ್ ನ. ಅಧ್ಯಕ್ಷರಾದ ಭೀಮ ನಾಯಕ್. ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಂ ಸಿ ವೇಣುಗೋಪಾಲ್ ರವರು .ಜಿಲ್ಲಾಧಿಕಾರಿಗಳಾದ ಕೆ ಶ್ರೀನಿವಾಸ್. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಜಿ ಪ್ರಭು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಾಹುಲ್ ಕುಮಾರ್ ಶಹಪುರ್. ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಮುಖಂಡರು ಉಪಸ್ಥಿತರಿದ್ದರು.

ವರದಿ. ಲಕ್ಷ್ಮಿಪತಿ ದೊಡ್ಡ ಯ ಲ್ಕೂರು.